ಕುಂದಾಪುರ (ಮೇ ,28 ): ಡಾ. ಬಿ.ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ 2022-23 ನೇ ಸಾಲಿನ ಪ್ರತಿಭಾ ಪ್ರದರ್ಶನ ಸಂಭ್ರಮ ಮೇ27 ರಂದು ಕುಂದಾಪುರದ ಆರ್.ಎನ್. ಶೆಟ್ಟಿ ಕಲ್ಯಾಣ ಭವನದಲ್ಲಿ ಸಂಪನ್ನಗೊಂಡಿತು.
ಕಾಲೇಜಿನ ಅಂತರ್ ತರಗತಿ ಪ್ರತಿಭಾ ಪ್ರದರ್ಶನ ಸ್ಪರ್ಧೆಯಲ್ಲಿ 16 ತಂಡಗಳು ಭಾಗವಹಿಸಿದ್ದವು. ಬಹಳ ವೈಶಿಷ್ಟ್ಯಪೂರ್ಣವಾಗಿ ಕಾರ್ಯಕ್ರಮವು ಮೂಡಿ ಬಂದಿತು. ಕಾಲೇಜಿನ ಪ್ರಾಂಶುಪಾಲ ಪ್ರೊ.ಕೆ.ಉಮೇಶ್ ಶೆಟ್ಟಿ ಕೊತ್ತಾಡಿಯವರು ಸಮಾರೋಪ ಸಮಾರಂಭ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.
ತಿರ್ಪುಗಾರರಾಗಿ ಆಗಮಿಸಿದ ಕುಂದಾಪುರ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಕನ್ನಡ ಉಪನ್ಯಾಸಕರಾದ ಶ್ರೀ ಉದಯ ಕುಮಾರ್ ಶೆಟ್ಟಿ ,ಜನತಾ ಪಿ. ಯು ಕಾಲೇಜಿನ ಕನ್ನಡ ಉಪನ್ಯಾಸಕರಾದ ಶ್ರೀ ಉದಯ ನಾಯ್ಕ್ ಹಾಗೂ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಆಲೂರು ಶಿಕ್ಷಕಿ ನಾಗರತ್ನ ಹೆರ್ಳೆ ಮಾತನಾಡಿ ವಿದ್ಯಾರ್ಥಿಗಳ ಪ್ರತಿಭೆಯನ್ನು ಪ್ರಶಂಶಿಸಿ ಭಾಗವಹಿಸಿದ ಎಲ್ಲಾ ತಂಡಗಳಿಗೆ ಶುಭಹಾರೈಸಿದರು.
ಕಾರ್ಯಕ್ರಮದ ಸಂಯೋಜಕರಾದ ವಿದ್ಯಾರ್ಥಿ ಕ್ಷೇಮಪಾಲನ ಅಧಿಕಾರಿಯಾದ ರಕ್ಷಿತ್ ರಾವ್ ಗುಜ್ಜಾಡಿ , ಪ್ರಾಧ್ಯಾಪಕರಾದ ಶ್ರೀಮತಿ ರೇವತಿ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಸ್ಪರ್ಧೆಯಲ್ಲಿ ಪ್ರಥಮ ಸ್ಥಾನವನ್ನು ಅಂತಿಮ ಬಿ.ಕಾಂ ಸಿ ವಿಭಾಗ ,ದ್ವಿತೀಯ ಸ್ಥಾನವನ್ನು ಅಂತಿಮ ಬಿ.ಕಾಂ ಬಿ .ವಿಭಾಗ, ತ್ರತೀಯ ಸ್ಥಾನವನ್ನು ಬಿಬಿಎ ವಿಭಾಗ ಪಡೆಯಿತು. ಉತ್ತಮ ಸಮೂಹ ಪ್ರದರ್ಶನ ಪ್ರಶಸ್ತಿಯನ್ನು ಪ್ರಥಮ ಬಿ.ಕಾಂ ಎ ವಿಭಾಗ ಹಾಗೂ ಉತ್ತಮ ನಿರೂಪಕ ಪ್ರಶಸ್ತಿಯನ್ನು ದ್ವಿತೀಯ ಬಿಕಾಂ ಬಿ ವಿಭಾಗದ ಪ್ರಿಯಾಂಕಾ ,ಉತ್ತಮ ವೈಯಕ್ತಿಕ ಪ್ರತಿಭೆ ದ್ವಿತೀಯ ಬಿಕಾಂ ಎ ವಿಭಾಗದ ಸ್ವಾತಿ ಪಡೆದುಕೊಂಡರು .
ಕಾಲೇಜಿನ ಉಪಪ್ರಾಂಶುಪಾಲ ಚೇತನ್ ಶೆಟ್ಟಿ ಕೊವಾಡಿ ಸ್ವಾಗತಿಸಿದರು. ಹಿಂದಿ ವಿಭಾಗದ ಮುಖ್ಯಸ್ಥರಾದ ಡಾ. ದೀಪಾ ತಿರ್ಪುಗಾರರನ್ನು ಪರಿಚಯಿಸಿದರು. ಇಂಗ್ಲೀಷ್ ವಿಭಾಗದ ಪ್ರಾಧ್ಯಾಪಕರಾದ ಮೋನಿಕಾ ಡಿ’ಸೌಜಾ ವಿಜೇತರ ಪಟ್ಟಿಯನ್ನು ವಾಚಿಸಿದರು. ವಿದ್ಯಾರ್ಥಿ ಕ್ಷೇಮಪಾಲನ ಅಧಿಕಾರಿಯಾದ ರಕ್ಷಿತ್ ರಾವ್ ಗುಜ್ಜಾಡಿ ವಂದಿಸಿದರು. ಕನ್ನಡ ಪ್ರಾಧ್ಯಾಪಕರಾದ ಶ್ರೀಮತಿ ಪ್ರವೀಣಾ ಮಹಾಬಲ ಪೂಜಾರಿ ನಿರೂಪಣೆಗೈದರು.