ಕುಂದಾಪುರ:( ಆ,11): ಕುಂದಾಪುರ ಎಜ್ಯುಕೇಶನ್ ಸೊಸೈಟಿ (ರಿ.) ಪ್ರವರ್ತಿತ ಎಚ್. ಎಮ್. ಎಮ್. ಆಂಗ್ಲ ಮಾಧ್ಯಮ ಪ್ರಾಥಮಿಕ ಮತ್ತು ವಿ. ಕೆ. ಆರ್. ಆಚಾರ್ಯ ಸ್ಮಾರಕ ಆಂಗ್ಲ ಪ್ರೌಢ ಶಾಲೆಯ 10ನೇ ತರಗತಿ ವಿದ್ಯಾರ್ಥಿ ಆದಿತ್ಯ ಅಜಯ್, ಮೈಸೂರು ವಿಭಾಗೀಯ ಮಟ್ಟದ 17ರ ವಯೋಮಾನದ ಬಾಲಕರ ಹಾರ್ಡ್ ಬಾಲ್ ಕ್ರಿಕೆಟ್ ಪಂದ್ಯಾಟದಲ್ಲಿ ಉಡುಪಿ ಜಿಲ್ಲಾ ತಂಡವನ್ನು ಪ್ರತಿನಿಧಿಸಿ, ದ್ವಿತೀಯ ಸ್ಥಾನವನ್ನು ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿರುತ್ತಾನೆ.
ಸಂಸ್ಥೆಯ ಪ್ರಾಂಶುಪಾಲೆ ಡಾ. ಚಿಂತನಾ ರಾಜೇಶ್ರವರ ಮಾರ್ಗದರ್ಶನ ಮತ್ತು ದೈಹಿಕ ಶಿಕ್ಷಣ ಶಿಕ್ಷಕರಾದ ರಾಜೇಂದ್ರ ಶೆಟ್ಟಿ, ನಾಗೇಶ್ ಪ್ರಭು ಮತ್ತು ವೀರೇಂದ್ರ ನಾಯಕ್ರವರಿಂದ ಪ್ರೇರಣೆ ಮತ್ತು ತರಬೇತಿಯನ್ನು ಪಡೆದಿರುತ್ತಾನೆ. ಕೊಲ್ಲೂರಿನ ಅಜಯ್ ಕುಮಾರ್ ವಿ. ಎನ್. ಮತ್ತು ಅನುಪಮಾ ಶಾಜಿ ದಂಪತಿಯ ಪುತ್ರನಾದ ಈತನನ್ನು ಸಂಸ್ಥೆಯ ಎಲ್ಲಾ ವಿಭಾಗದ ಮುಖ್ಯಸ್ಥರು ಅಭಿನಂದಿಸಿದರು.