ಕುಂದಾಪುರ (ಜ.19):ವಿ ಒನ್ ಅಕ್ವಾಸೆಂಟರ್ ಕಾರ್ಕಳವತಿಯಿಂದ ಯುವ, ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಈಜುಕೊಳದಲ್ಲಿ ನಡೆದ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾಮಟ್ಟದ ಈಜು ಸ್ಪರ್ಧೆಯಲ್ಲಿ ಮುಲ್ಲಕಾಡು ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕ ನಾಗರಾಜ ಖಾರ್ವಿ ಎರಡು ಚಿನ್ನದ ಪದಕ ವಿಜೇತರಾಗಿದ್ದಾರೆ.
ಮಂಗಳೂರು ಈಜುಗಾರರ ಸಮುದ್ರ ತಂಡದ ಸಕ್ರಿಯ ಸದಸ್ಯರಾಗಿರುವ ಅವರು 50 ಮೀ. ಬ್ಯಾಕ್’ ಸ್ಟೋಕ್ನಲ್ಲಿ ಪ್ರಥಮ ಮತ್ತು 50 ಮೀ. ಬ್ರೆಸ್ಟ್ ಸ್ಪೋಕ್ನಲ್ಲಿ ಪ್ರಥಮ ಸ್ಥಾನ ಪಡೆದು ಈ ಸಾಧನೆ ಮಾಡಿದ್ದಾರೆ. ಅವರಿಗೆ ರೇಷ್ಮೆ ಇಲಾಖೆಯ ನಿವೃತ್ತ ಇನ್ಸ್ಪೆಕ್ಟರ್ ಬಿ.ಕೆ. ನಾಯ್ಕ ಅವರು ತರಬೇತಿ ನೀಡಿದ್ದಾರೆ.
ಇವರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕಂಚುಗೋಡು, ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಗುಜ್ಜಾಡಿ ಹಾಗೂ ಸರಸ್ವತಿ ಪ್ರೌಢಶಾಲೆ ಗಂಗೊಳ್ಳಿಯ ಹಳೆವಿದ್ಯಾರ್ಥಿ.