ಕುಂದಾಪುರ( ಏ, 09): ಸರಳ ಜೀವನದ ಸೂತ್ರವೇ ಜೀವನ ಮೌಲ್ಯ. ತಾವು ಸರಳವಾಗಿ ಬದುಕುವ ಮೂಲಕ ಇನ್ನೊಬ್ಬರಿಗೆ ನೆರವಾಗಬೇಕು. ಇದು ಜೀವನಕ್ಕೆ ಸಂತೃಪ್ತಿ ನೀಡುತ್ತದೆ ಎಂದು ಉಡುಪಿಯ ಸಮಾಜ ಸೇವಕ ವಿಶು ಶೆಟ್ಟಿ ಅಂಬಲಪಾಡಿ ಹೇಳಿದರು.
ಇವರು ಇಲ್ಲಿನ ಡಾ. ಬಿ.ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿ ಕ್ಷೇಮಪಾಲನಾ ಸಮಿತಿ ಆಯೋಜಿಸಿದ ಜೀವನ ಮೌಲ್ಯ ಮಾಲಿಕೆ 4ರ ಸಂಪನ್ಮೂಲ ವ್ಯಕ್ತಿಯಾಗಿ ಮಾತನಾಡಿದರು.
ಈ ಸಂದರ್ಭ ಕಾಲೇಜಿನ ಗವರ್ನಿಂಗ್ ಕೌನ್ಸಿಲ್ ಸದಸ್ಯ ಆನಗಳ್ಳಿ ಶ್ರೀ ಕರುಣಾಕರ್ ಹೆಗ್ಡೆ ಮಾತನಾಡಿ, ಸಮಾಜ ಸೇವೆಯನ್ನು ಬದುಕಿನ ಆಶಯವಾಗಿಸಿಕೊಂಡ ವಿಶು ಶೆಟ್ಟಿಯವರ ಬದುಕು ವಿದ್ಯಾರ್ಥಿಗಳಿಗೆ ಆದರ್ಶವಾಗಬೇಕು ಎಂದರು.
ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ಕೆ. ಉಮೇಶ್ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಆಡಳಿತ ನಿಕಾಯಕರು ಹಾಗೂ ವಿದ್ಯಾರ್ಥಿ ಕ್ಷೇಮ ಪಾಲನಾ ಅಧಿಕಾರಿ ಶ್ರೀ ರಕ್ಷಿತ್ ರಾವ್ ಗುಜ್ಜಾಡಿ ಪ್ರಸ್ತಾವಿಸಿದರು. ಉಪ-ಪ್ರಾಂಶುಪಾಲರಾದ ಡಾ. ಚೇತನ್ ಶೆಟ್ಟಿ ಕೋವಾಡಿ, ವಿದ್ಯಾರ್ಥಿ ಕ್ಷೇಮ ಪಾಲನಾಧಿಕಾರಿ ಶ್ರೀಮತಿ ರೇಷ್ಮಾ ಶೆಟ್ಟಿ ಉಪಸ್ಥಿತರಿದ್ದರು. ವಿದ್ಯಾರ್ಥಿಗಳಾದ ರಕ್ಷಿತ್ ಸ್ವಾಗತಿಸಿ, ಕಾರ್ತಿಕ್ ಅತಿಥಿಗಳನ್ನು ಪರಿಚಯಿಸಿ, ಪ್ರದೀಪ್ ವಂದಿಸಿ, ಮಿತಿಲೇಶ್ ನಿರೂಪಿಸಿದರು.