ಕುಂದಾಪುರ (ಎ.16): ಪ್ರಾಚ್ಯ ವಸ್ತುಗಳು ಪೂರ್ವಜರ ಸಂಪ್ರದಾಯದ ಪ್ರತೀಕ ಅವುಗಳನ್ನು ಉಳಿಸುವ ಮತ್ತು ಪರಿಚಯಿಸುವಲ್ಲಿ ವಿದ್ಯಾರ್ಥಿಗಳ ಪ್ರಯತ್ನ ಶ್ಲಾಘನೀಯ ಎಂದು ಉದಯವಾಣಿ ದಿನಪತ್ರಿಕೆಯ ಉಪಮುಖ್ಯ ವರದಿಗಾರ ಶ್ರೀ ಲಕ್ಷ್ಮಿ ಮಚ್ಚಿನ ಹೇಳಿದರು.
ಇವರು ಇಲ್ಲಿನ ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿ ಕ್ಷೇಮಪಾಲನಾ ಸಮಿತಿ ಆಯೋಜಿಸಿದ ಪ್ರಾಚ್ಯ ವಸ್ತುಗಳ ಪ್ರದರ್ಶನದ ಮುಖ್ಯ ಅತಿಥಿಯಾಗಿ ಮಾತನಾಡಿದರು.
ಇನ್ನೋರ್ವ ಮುಖ್ಯ ಅತಿಥಿ ಪತ್ರಕರ್ತ ಶ್ರೀಕಾಂತ್ ಹೆಮ್ಮಾಡಿ ಮಾತನಾಡಿ, ಪ್ರಾಚ್ಯ ವಸ್ತುಗಳೊಂದಿಗೆ ಬೆಸೆದುಕೊಂಡಾಗ ಮಾನವೀಯ ಸಂಬAಧಗಳನ್ನು ವಿದ್ಯಾರ್ಥಿಗಳು ಅರಿಯುವಂತಾಗಬೇಕು. ಜಾಗತೀಕರಣದ ಸಂದರ್ಭದಲ್ಲಿ ಪಾರಂಪರಿಕ ವಸ್ತುಗಳನ್ನು ಕಾಪಾಡುವುದು ಯುವಜನತೆಯ ಕರ್ತವ್ಯ ಎಂದರು.
ಕಾಲೇಜಿನ ಪ್ರಾಂಶುಪಾಲರಾದ ಪ್ರೊ| ಕೆ. ಉಮೇಶ್ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಉಪ-ಪ್ರಾಂಶುಪಾಲರಾದ ಡಾ| ಚೇತನ್ ಶೆಟ್ಟಿ ಕೋವಾಡಿ, ಆಡಳಿತ ನಿಕಾಯಕರು ಹಾಗೂ ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ಶ್ರೀ ರಕ್ಷಿತ್ ರಾವ್ ಗುಜ್ಜಾಡಿ, ಶ್ರೀಮತಿ ರೇಷ್ಮಾ ಶೆಟ್ಟಿ ಉಪಸ್ಥಿತರಿದ್ದರು.
ವಿದ್ಯಾರ್ಥಿಗಳಾದ ವೈಷ್ಣವಿ ಎಂ.ಎಸ್. ಸ್ವಾಗತಿಸಿ, ದೀಕ್ಷಾ ಶೆಟ್ಟಿ ವಂದಿಸಿ, ನಿಖಿತಾ ಕಾರ್ಯಕ್ರಮ ನಿರೂಪಿಸಿದರು.