ಕುಂದಾಪುರ (ಏಪ್ರಿಲ್ 24): ಇಲ್ಲಿನ ಡಾ| ಬಿ .ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ಘಟಕ 1 ಮತ್ತು 2ರ ಆಶ್ರಯದಲ್ಲಿ ಅರಿವು-ಅರಿವು ಮುಖ್ಯ ಶೀರ್ಷಿಕೆಯಡಿಯಲ್ಲಿ ಎಚ್.ಐ.ವಿ./ಏಡ್ಸ್ ಕುರಿತು ಜಾಗೃತಿ ಕಾರ್ಯಕ್ರಮವನ್ನು ವಿದ್ಯಾರ್ಥಿಗಳಿಗೆ ಅರಿವು ಮೂಡಿಸುವ ನಿಟ್ಟಿನಲ್ಲಿ ಕಾಲೇಜಿನ ಮೂಕಾಂಬಿಕಾ ಸಭಾಂಗಣದಲ್ಲಿ ಆಯೋಜಿಸಲಾಯಿತು.
ಸಂಪನ್ಮೂಲ ವ್ಯಕ್ತಿ ಉಡುಪಿ ಜಿಲ್ಲಾ ಏಡ್ಸ್ ನಿಯಂತ್ರಣ ಮತ್ತು ತಡೆಗಟ್ಟುವ ಘಟಕದ ಮೇಲ್ವಿಚಾರಕರಾದ ಶ್ರೀ ಮಹಾಬಲೇಶ್ವರ್ ಅವರು ಮಾತನಾಡಿ, ಎಚ್.ಐ.ವಿ./ಏಡ್ಸ್ ಕೇವಲ ಆರೋಗ್ಯ ಸಮಸ್ಯೆಯಲ್ಲ, ಇದು ಒಂದು ಸಾಮಾಜಿಕವಾಗಿ ಪ್ರಭಾವ ಬೀರುವ ವಿಷಯ. ಈ ಬಗ್ಗೆ ಜನರಲ್ಲಿ ಇನ್ನೂ ಅಜ್ಞಾನ, ತಪ್ಪು ಕಲ್ಪನೆಗಳು ಹಾಗೂ ಭಯವಿದೆ. ಅದನ್ನು ನಿವಾರಿಸಲು ಜಾಗೃತಿ ಮತ್ತು ಸಹಾನುಭೂತಿ ಅಗತ್ಯ ಎಂದು ವಿವರಿಸಿದರು.
ಇದೇ ಸಂದರ್ಭ ಅವರು ಎಚ್.ಐ.ವಿ./ಏಡ್ಸ್ ಹರಡುವ ಮಾರ್ಗ, ಸೋಂಕಿನಿAದ ತಪ್ಪಿಸಿಕೊಳ್ಳುವ ಮಾರ್ಗಗಳು, ಚಿಕಿತ್ಸೆಯ ಲಭ್ಯತೆ ಹಾಗೂ ಸರ್ಕಾರದ ವಿವಿಧ ಸೌಲಭ್ಯಗಳ ಕುರಿತು ವಿದ್ಯಾರ್ಥಿಗಳಿಗೆ ಮಾಹಿತಿಯನ್ನು ನೀಡಿದರು.
ಸಂಸ್ಥೆಯ ಪ್ರಾಂಶುಪಾಲರಾದ ಪ್ರೊ| ಕೆ. ಉಮೇಶ್ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಉಪ-ಪ್ರಾಂಶುಪಾಲ ಡಾ| ಚೇತನ್ ಶೆಟ್ಟಿ ಕೋವಾಡಿ ಸ್ವಾಗತಿಸಿ, ಪ್ರಸ್ತಾಪಿಸಿದರು. ಎನ್.ಎಸ್.ಎಸ್ ಸ್ವಯಂಸೇವಕಿ ಶ್ರೇಯಾ ಅತಿಥಿಗಳನ್ನು ಪರಿಚಯಿಸಿದರು. ಎನ್.ಎಸ್.ಎಸ್ ಘಟಕ 2ರ ಕಾರ್ಯಕ್ರಮಾಧಿಕಾರಿ ದೀಪಾ ಪೂಜಾರಿ ವಂದಿಸಿದರು. ಎನ್ .ಎಸ್.ಎಸ್ ಸ್ವಯಂ ಸೇವಕಿ ಪೃಥ್ವಿ ಕಾರ್ಯಕ್ರಮ ನಿರೂಪಿಸಿ, ಶ್ರೀಶಾಂತ್ ಪ್ರಾರ್ಥಿಸಿದರು.