ಕುಂದಾಪುರ (ಜು.24): ದಿನನಿತ್ಯದ ಪ್ರಾರ್ಥನೆ, ವ್ಯಾಯಾಮ, ಗುಣಮಟ್ಟದ ಆಹಾರ ಪದ್ಧತಿ ಹಾಗೂ ಒತ್ತಡ ನಿರ್ವಹಣೆ ಇಂತಹ ಆರೋಗ್ಯಕರ ಅಭ್ಯಾಸಗಳಿಂದ ಮಾತ್ರ ಉತ್ತಮ ಆರೋಗ್ಯವನ್ನು ಪಡೆಯಲು ಸಾಧ್ಯ ಎಂದು ಕುಂದಾಪುರದ ಇಶಾನಿ ಮೆಡಿಕಲ್ ಸೆಂಟರ್ನ ವೈದ್ಯಾಧಿಕಾರಿ ಡಾ| ಸೋನಿ ಡಿಕೋಸ್ಟ ಹೇಳಿದರು.

ಅವರು ಇಲ್ಲಿನ ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಪ್ರಥಮ ವರ್ಷದ ಪದವಿ ವಿದ್ಯಾರ್ಥಿಗಳಿಗೆ ಕಾಲೇಜಿನ ಐಕ್ಯೂಎಸಿ ಘಟಕ ಹಮ್ಮಿಕೊಂಡ ‘ಪ್ರೇರಣಾ’ ಶಿಬಿರದಲ್ಲಿ ‘ಉತ್ತಮ ಆರೋಗ್ಯ’ ವಿಷಯದ ಕುರಿತು ಮಾತನಾಡಿದರು.

ಕಾಲೇಜಿನ ಪ್ರಾಂಶುಪಾಲರಾದ ಪ್ರೊ| ಕೆ. ಉಮೇಶ್ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಉಪ-ಪ್ರಾಂಶುಪಾಲರಾದ ಡಾ| ಚೇತನ್ ಶೆಟ್ಟಿ ಕೋವಾಡಿ, ಐಕ್ಯೂಎಸಿ ಸಂಯೋಜಕಿ ಹಾಗೂ ಇಂಗ್ಲೀಷ್ ವಿಭಾಗದ ಮುಖ್ಯಸ್ಥೆ ಶ್ರೀಮತಿ ದೀಪಿಕಾ ಜಿ., ಆಡಳಿತ ನಿಕಾಯಕರು ಹಾಗೂ ವಿದ್ಯಾರ್ಥಿ ಕ್ಷೇಮಪಾಲನಾ ಅಧಿಕಾರಿ ಶ್ರೀ ರಕ್ಷಿತ್ ರಾವ್ ಗುಜ್ಜಾಡಿ, ಕಾರ್ಯಕ್ರಮದ ಸಂಯೋಜಕ ಹಾಗೂ ವಾಣಿಜ್ಯ ವಿಭಾಗದ ಸಹಾಯಕ ಪ್ರಾಧ್ಯಾಪಕ ಶ್ರೀ ಯೋಗೀಶ್ ಶ್ಯಾನುಭೋಗ್, ಬೋಧಕ-ಬೋಧಕೇತರ ವರ್ಗದವರು ಉಪಸ್ಥಿತರಿದ್ದರು.
ಕಾರ್ಯಕ್ರಮದ ಸಂಯೋಜಕಿ ಹಾಗೂ ವಾಣಿಜ್ಯ ವಿಭಾಗದ ಸಹಾಯಕ ಪ್ರಾಧ್ಯಾಪಕಿ ಶ್ರೀಮತಿ ಜೋಸ್ಲಿನ್ ಆರ್. ಅಲ್ಮೇಡಾ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.











