ಹೆಮ್ಮಾಡಿ(ಆ,15): ಮೊಗವೀರ ಯುವ ಸಂಘಟನೆಯ [ರಿ.] ಉಡುಪಿ ಜಿಲ್ಲೆ ಹೆಮ್ಮಾಡಿ ಘಟಕ ಹಾಗೂ ಜಿ.ಶಂಕರ್ ಫ್ಯಾಮಿಲಿ ಟ್ರಸ್ಟ್ (ರಿ.), ಉಡುಪಿ, ಅಂಬಲಪಾಡಿ ಇವರ ಸಂಯುಕ್ತ ಆಶ್ರಯದಲ್ಲಿ 79ನೇ ಸ್ವಾತಂತ್ರೋತ್ಸವದ ಪ್ರಯುಕ್ತ ಹಮ್ಮಿಕೊಂಡ “ಸೈನಿಕರಿಗೊಂದು ಗೌರವಾರ್ಪಣೆ” ಕಾರ್ಯಕ್ರಮದ ಹಿನ್ನೆಲೆಯಲ್ಲಿ ಕೇಂದ್ರೀಯ ಮೀಸಲು ಪೊಲೀಸ್ ಪಡೆಯ ನಿವ್ರತ್ತ ಯೋಧ ಶ್ರೀ ಮೋಹನದಾಸ ಶೆಟ್ಟಿ ದಂಪತಿಗಳನ್ನು ಅವರ ಸ್ವಗ್ರಹದಲ್ಲಿ ಅಗಸ್ಟ್ 15 ರಂದು ಸನ್ಮಾನಿಸಿ ಗೌರವಿಸಲಾಯಿತು.

ಮೊಗವೀರ ಯುವ ಸಂಘಟನೆ (ರಿ.),ಉಡುಪಿ ಜಿಲ್ಲೆ, ಹೆಮ್ಮಾಡಿ ಘಟಕದ ಅಧ್ಯಕ್ಷರಾದ ದಿನೇಶ್ ಕಾಂಚನ್ ಬಾಳಿಕೆರೆ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು.ಹಿರಿಯರಾದ ಡಾ.ಅತುಲ್ ಕುಮಾರ್ ಶೆಟ್ಟಿ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡುತ್ತಾ ಮೊಗವೀರ ಯುವ ಸಂಘಟನೆ (ರಿ.), ಹೆಮ್ಮಾಡಿ ಘಟಕದ ಕಾರ್ಯವೈಖರಿಯನ್ನು ಶ್ಲಾಘಿಸಿದರು.

ಚಿತ್ತೂರು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶ್ರೀ ರವಿರಾಜ ಶೆಟ್ಟಿ, ಹೆಮ್ಮಾಡಿ ಘಟಕದ ಗೌರವಾಧ್ಯಕ್ಷರಾದ ಲೋಹಿತಾಶ್ವ ಆರ್. ಕುಂದರ್, ಮಾಜಿ ಅಧ್ಯಕ್ಷರಾದ ಶ್ರೀ ರಾಘವೇಂದ್ರ ನೆಂಪು,ಚಿತ್ತೂರು ಪಂಚಾಯತ್ ಸದಸ್ಯರಾದ ಚಂದ್ರ ಶೆಟ್ಟಿ, ಶ್ರೀ ರಘುರಾಮಶೆಟ್ಟಿ ಚಿತ್ತೂರು, ನಾರಾಯಣ ಶೆಟ್ಟಿ , ಹೆಮ್ಮಾಡಿ ಘಟಕದ ಕಾರ್ಯದರ್ಶಿಯಾದ ಜಗದೀಶ ನೆಂಪು, ಕಟ್ ಬೆಲ್ತೂರು ಗ್ರಾಮ ಪಂಚಾಯತ್ ನ ಮಾಜಿ ಅಧ್ಯಕ್ಷರಾದ ನಾಗರಾಜ ಪುತ್ರನ್, ಸ್ತ್ರೀಶಕ್ತಿ ಬಗ್ವಾಡಿ ಹೋಬಳಿ ಇದರ ಅಧ್ಯಕ್ಷರಾದ ಶ್ಯಾಮಲಾ ಜಿ. ಚಂದನ್ ಹಾಗೂ ಮೊಗವೀರ ಯುವ ಸಂಘಟನೆ (ರಿ.),ಹೆಮ್ಮಾಡಿ ಘಟಕದ ಪದಾಧಿಕಾರಿಗಳು ಮತ್ತು ನೆಂಪು ಫ್ರೆಂಡ್ಸ್ ಸದಸ್ಯರು ಉಪಸ್ಥಿತರಿದ್ದರು.
ಹೆಮ್ಮಾಡಿ ಘಟಕದ ಉಪಾಧ್ಯಕ್ಷರಾದ ಶ್ರೀ ಪ್ರವೀಣ್ ಮೊಗವೀರ ಗಂಗೊಳ್ಳಿ ಕಾರ್ಯಕ್ರಮವನ್ನು ನಿರೂಪಿಸಿ ವಂದಿಸಿದರು.










