ಉಡುಪಿ ( ಆ ,28): ಮೂಡಬಿದಿರೆಯ ಆಳ್ವಾಸ್ ಪಿಯು ಕಾಲೇಜಿನ ಕೆ.ಅಮರನಾಥ ಶೆಟ್ಟಿ ವೇದಿಕೆಯಲ್ಲಿ ಐಡಿಯಲ್ ಪ್ಲೇ ಅಬಾಕಸ್ ಇಂಡಿಯಾ ಪ್ರೈವೇಟ್ ಲಿಮಿಟೆಡ್ ವತಿಯಿಂದ ನಡೆದ 20ನೇ ರಾಜ್ಯ ಮಟ್ಟದ ಅಬಾಕಸ್ ಮತ್ತು ಮೆಂಟಲ್ ಅರಿಥ್ಮೆಟಿಕ್ – 2025 ಸ್ಪರ್ಧೆಯಲ್ಲಿ ಜಯಶ್ರೀ ಮತ್ತು ಸದಾನಂದ ಆಚಾರ್ಯ ತಲ್ಲೂರು ಇವರ ಪುತ್ರ, ಜಯರಾಣಿ ಆಂಗ್ಲ ಮಾದ್ಯಮ ಶಾಲೆ ತಲ್ಲೂರು ಇಲ್ಲಿನ 4 ನೇ ತರಗತಿ ವಿದ್ಯಾರ್ಥಿ ಸದ್ವಿನ್ ಎಸ್ ಆಚಾರ್ಯ ತಲ್ಲೂರು ಇವರು ಪ್ರಥಮ ಸ್ಥಾನ ಪಡೆದಿರುತ್ತಾರೆ. ಈ ಸ್ಪರ್ಧೆಯಲ್ಲಿ ರಾಜ್ಯದ ವಿವಿಧ ಜಿಲ್ಲೆಯಿಂದ ಸುಮಾರು 2000 ವಿದ್ಯಾರ್ಥಿಗಳು ಭಾಗವಹಿಸಿದ್ದರು.

ಇವರಿಗೆ ಕುಂದಾಪುರ ಸೆಂಟರ್ ನ ಮಖ್ಯಸ್ಥ ಪ್ರಸನ್ನ ಕೆ. ಬಿ., ಬೋಧಕಿ ಶ್ರೀಮತಿ ಮಹಾಲಕ್ಷ್ಮಿ ಮತ್ತು ದೀಪಾ ರವರು ತರಬೇತಿ ನೀಡಿರುತ್ತಾರೆ.











