ಶಿರ್ವ (ಮಾ. 25) : ಗ್ರಾಮೀಣ ಪ್ರದೇಶದಲ್ಲಿ ಉತ್ತಮ ಗುಣಮಟ್ಟದ ಶಿಕ್ಷಣವನ್ನು ನೀಡುತ್ತಿರುವ ಸಂಸ್ಥೆ, ಶಿರ್ವ ಸಂತ ಮೇರಿ ಕಾಲೇಜಿನ ವಿದ್ಯಾರ್ಥಿ ಸತ್ಯ ಸುಬ್ರಹ್ಮಣ್ಯ ವಿ.ಎಸ್. ರವರು ಮಂಗಳೂರು ವಿಶ್ವವಿದ್ಯಾನಿಲಯ 2020 ರ ಸಪ್ಟೆಂಬರ್ನಲ್ಲಿ ನಡೆಸಿದ ಪದವಿ ಪರೀಕ್ಷೆಯಲ್ಲಿ ಗಣಕ ವಿಜ್ಞಾನ ವಿಭಾಗ ಬಿ.ಸಿ.ಎ. ದಲ್ಲಿ ನಾಲ್ಕನೇ ರ್ಯಾಂಕ್ ಪಡೆದಿದ್ದಾರೆ.

ಕಾಸರಗೋಡಿನ ಶ್ರೀ. ವೆಂಕಟೇಶ್ವರ ಭಟ್ ಮತ್ತು ಶ್ರೀಮತಿ ಗೌರಿ ಅವರ ಪುತ್ರರಾದ ಇವರು ಶೇಕಡಾ 95.72% ಅಂಕಗಳೊಂದಿಗೆ ನಾಲ್ಕನೇ ರ್ಯಾಂಕ್ ಗಳಿಸಿದ್ದಾರೆ. ಕಾಲೇಜಿನ ಅಧ್ಯಕ್ಷರು ಮತ್ತು ಸರ್ವ ಸದಸ್ಯರು, ಪ್ರಾಚಾರ್ಯರು, ಪ್ರಾಧ್ಯಾಪಕರು ಮತ್ತು ಆಡಳಿತಾತ್ಮಕ ಸಿಬ್ಬಂದಿಗಳು, ರಕ್ಷಕ ಶಿಕ್ಷಕ ಸಂಘ, ಹಳೆ ವಿದ್ಯಾರ್ಥಿ ಸಂಘ ಹಾಗೂ ವಿದ್ಯಾರ್ಥಿ ವೃಂದ ಅಭಿನಂದಿಸಿದ್ದಾರೆ.











