ಕೆರಾಡಿ(ಸೆ,17): ವರಸಿದ್ಧಿ ವಿನಾಯಕ ಪದವಿ ಪೂರ್ವ ಕಾಲೇಜು ಕೆರಾಡಿ ಇದರ ದ್ವಿತೀಯ ಪಿ ಯು ಸಿ ವಿಜ್ಞಾನ ವಿಭಾಗದ ವಿದ್ಯಾರ್ಥಿಗಳಿಗೆ ವೃತ್ತಿಪರ ಕೋರ್ಸ್ ಗಳಾದ ವೈದ್ಯಕೀಯ ಮತ್ತು ಇಂಜಿನಿಯರಿಂಗ್ ಶಿಕ್ಷಣದ ಪ್ರವೇಶ ಪರೀಕ್ಷೆಗಳಾದ NEET, CET, ಮತ್ತು JEE ಎದುರಿಸಿ ಯಶಸ್ವಿಯಾಗಲು ಪೂರ್ವ ತಯಾರಿಯ ಕುರಿತು ಒಂದು ದಿನದ ಮಾಹಿತಿ ಕಾರ್ಯಾಗಾರ ದಿನಾಂಕ ಸಪ್ಟೆಂಬರ್ 13 ರಂದು ನಡೆಯಿತುಸಂಪನ್ಮೂಲ ವ್ಯಕ್ತಿ ಎಮ್.ಎಸ್ ರಾಮಚಂದ್ರ ಐಐಟಿ ರೂರ್ಕೆ ರವರು ವಿದ್ಯಾರ್ಥಿಗಳಿಗೆ ಸಮಗ್ರ ಮಾಹಿತಿಯನ್ನು ನೀಡಿದರು.
ಕಾಲೇಜಿನ ಸಂಚಾಲಕರಾದ ಶ್ರೀ ಕೆರಾಡಿ ಚಂದ್ರಶೇಖರ ಶೆಟ್ಟಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದು, ಪ್ರಾಂಶುಪಾಲರಾದ ಶ್ರೀ ಪ್ರಸಾದ್ ಕುಮಾರ್ ಆರ್ ಪ್ರಾಸ್ತವಿಕ ಮಾತುಗಳನ್ನಾಡಿದರು. ಉಪನ್ಯಾಸಕಿಯರಾದ ಶ್ವೇತಾ ಕಾರ್ಯಕ್ರಮ ನಿರೂಪಿಸಿ, ಚೈತ್ರ ವಂದಿಸಿದರು.