ಶಿರ್ವ(ಸೆ,18) : ಪ್ರತಿಯೊಂದು ಕ್ಷೇತ್ರದಲ್ಲಿ ಕಂಪ್ಯೂಟರ್ ಬಳಕೆ ಹೆಚ್ಚುತ್ತಿರುವ ಕಾರಣ ಕಂಪ್ಯೂಟರ್ ಕಲಿಕೆಯ ಅವಶ್ಯಕತೆ ಇಂದು ಅಗತ್ಯವಾಗಿದೆ .ತಂತ್ರಜ್ಞಾನ ಯುಗದಲ್ಲಿ ವಿದ್ಯಾರ್ಥಿಗಳು ತಮ್ಮಲ್ಲಿರುವ ಕೌಶಲ್ಯಗಳನ್ನು ವೃದ್ಧಿಸಿಕೊಳ್ಳಲು ಕಂಪ್ಯೂಟರ್ ಗಳನ್ನು ಹೆಚ್ಚಾಗಿ ಬಳಸಿಕೊಂಡು ಸಮಾಜಕ್ಕೆ ಬೇಕಾಗುವ ತಂತ್ರಜ್ಞಾನವನ್ನು ರೂಪಿಸಿ,ಸಂಶೋಧನಾ ಮನಸ್ಥಿತಿ ಬೆಳೆಸಿಕೊಂಡು ಉತ್ತಮ ಉದ್ಯೋಗ ಪಡೆದುಕೊಳ್ಳಬೇಕೆಂದು ಶಿರ್ವ ಸಂತ ಮೇರಿ ಮಹಾವಿದ್ಯಾಲಯದ ಪ್ರಾಂಶುಪಾಲರಾದ ಡಾ| ಹೆರಾಲ್ಡ್ ಐವನ್ ಮೋನಿಸ್ ರವರು ಹೇಳಿದರು.

ಅವರು ಕಾಲೇಜಿನ ಗಣಕ ವಿಜ್ಞಾನ ವಿಭಾಗ ಮತ್ತು ಐಟಿ ಕ್ಲಬ್ ಸಂಯುಕ್ತವಾಗಿ ಏರ್ಪಡಿಸಿದ್ದ ಐಟಿ ಸ್ಪರ್ಧೆಗಳ ವಿಜೇತರಿಗೆ ಬಹುಮಾನ ವಿತರಿಸಿ ಮಾತನಾಡಿದರು.ಕಾಲೇಜಿನ ಗಣಕ ವಿಜ್ಞಾನ ವಿಭಾಗದ ಮುಖ್ಯಸ್ಥ ಹಾಗೂ ಐಟಿ ಕ್ಲಬ್ ಡೈರೆಕ್ಟರ ಲೆಫ್ಟಿನೆಂಟ್ ಕೆ ಪ್ರವೀಣ್ ಕುಮಾರ್ ರವರು ಪ್ರಾಸ್ತಾವಿಕವಾಗಿ ಮಾತನಾಡಿದರು.

ಇದೇ ಸಂದರ್ಭದಲ್ಲಿ ಕಾಲೇಜಿನ ಗಣಕ ವಿಜ್ಞಾನ ವಿಭಾಗದ ಐಟಿ ಕ್ಲಬ್ ವತಿಯಿಂದ ಬಿಸಿಎ ವಿದ್ಯಾರ್ಥಿಗಳಿಗೆ ಸೆಪ್ಟೆಂಬರ್ 14ರಿಂದ 18 ರವರೆಗೆ ವಿವಿಧ ಐಟಿ ಸ್ಪರ್ಧೆಗಳನ್ನು ಆಯೋಜಿಸಲಾಯಿತು.

ಸ್ಪರ್ಧೆಯಲ್ಲಿ ಭಾಗವಹಿಸಿ ವಿಜೇತ ವಿದ್ಯಾರ್ಥಿಗಳಾದ ಪ್ರಿಯಾಂಕಾ,ಸುರೇಖಾ, ಲಿಖಿತಾ ಶೆಟ್ಟಿ, ಕ್ರಿಪಾ, ಶ್ರುತಿ, ಪ್ರಜ್ವಲ್, ಸನತ್ ಕುಮಾರ್ ಶೆಟ್ಟಿ, ಪ್ರೀತಿಕಾ, ದೀಕ್ಷಾ, ಸಾತ್ವಿಕ್ , ತರುಣ್ ರಮೇಶ್ ಶೆಟ್ಟಿ, ದೀಕ್ಷಿತ್, ಅಪೇಕ್ಷ, ಚಾಯ ಕರ್ಕೆರ, ಹಾರ್ದಿಕ ಸಾಲಿಯಾನ್, ಡೆನ್ಸನ್ ಬ್ರೈನ್ ನಜರೆತ್, ರಿಯಾನ್ ರಿಷಿ ಅಲ್ಫೋನ್ಸೋ, ನಿವೇದಿತಾ ನಿಖಿಲ್ ಪೂಜಾರಿ, ಬಂಗೇರ ತುಷಾರ್ ರಾಜೇಶ್, ಸುಕೇಶ್ ಪೂಜಾರಿ, ಡೊನಾಲ್ಡ್ ಅಶ್ವಿನ್ ಡಿಸೋಜ, ಶೆಟ್ಟಿ ಸಾಯಿರಾಮ್ ಜಯರಾಮ್ ಇವರಿಗೆ ಪ್ರಮಾಣ ಪತ್ರದ ಜೊತೆಗೆ ಬಹುಮಾನಗಳನ್ನು ನೀಡಲಾಯಿತು.
ಇದೇ ಸಂದರ್ಭದಲ್ಲಿ ವಿವಿಧ ಕ್ಯಾಂಪಸ್ ಪ್ಲೇಸ್ಮೆಂಟ್ ನಲ್ಲಿ ಭಾಗವಹಿಸಿ ಆಯ್ಕೆಯಾದ ಮೇಘ ಕುಲಾಲ್, ಮಹಿಮಾ ಭಟ್, ಲಿಖಿತಾ ಶೆಟ್ಟಿ,ಡಿಲ್ಸನ್ ನಿಜಾರ್,ರಿಯಾನ್ ರಿಷಿ ಅಲ್ಫೋನ್ಸೋ,ಭಟ್ ರಾಮದಾಸ ಸತೀಶ್, ಪ್ರಜ್ವಲ್ ಬಿಸಿಎ ವಿದ್ಯಾರ್ಥಿಗಳನ್ನು ಅಭಿನಂದಿಸಲಾಯಿತು.
ಈ ಕಾರ್ಯಕ್ರಮದಲ್ಲಿ ಉಪನ್ಯಾಸಕರಾದ ದಿವ್ಯ ಶ್ರೀ, ಸುಷ್ಮಾ,ಪ್ರಕಾಶ್, ಕಾಲೇಜಿನ ವಿದ್ಯಾರ್ಥಿಗಳು, ಶಿಕ್ಷಕ-ಶಿಕ್ಷಕೇತರ ವೃಂದದವರು ಉಪಸ್ಥಿತರಿದ್ದರು.
ಶ್ರೀ ಚೆನ್ನ ಬಸವಯ್ಯ ಬಹುಮಾನ ಪಟ್ಟಿಯನ್ನು ವಾಚಿಸಿದರು. ವಿದ್ಯಾರ್ಥಿ ನಾಯಕರಾದ ದಾಕ್ಷಾಯಿಣಿ,ಭಟ್ ರಾಮದಾಸ ಸತೀಶ್, ಡಿಲ್ಸನ್ ನಿಜಾರ್, ಪ್ರತೀಕ್ ಪೂಜಾರಿ, ವಿಜ್ಞೇಶ್, ಅಭಿಷೇಕ್, ಮಹಿಮಾ, ರಿಯಾನ್ ರಿಷಿ ಅಲ್ಫೋನ್ಸೋ ಸ್ಪರ್ಧೆಯನ್ನು ನಡೆಸಲು ಸಹಕರಿಸಿದ್ದರು.
ಕು. ಶೃತಿ ಸಿ ಪುಜಾರಿ ಸ್ವಾಗತಿಸಿ,ಕು.ಸಿಯಾನಾ ಬಾನು ವಂದಿಸಿದರು. ಕು. ಕ್ರಿಪಾ. ಬಿ. ಆಚಾರ್ಯ ಕಾರ್ಯಕ್ರಮ ನಿರೂಪಿಸಿದರು.










