ಕುತ್ಯಾರು(ನ,22): ಇಲ್ಲಿನ ಸೂರ್ಯ ಚೈತನ್ಯ ಹೈಸ್ಕೂಲ್ ಆಶ್ರಯದಲ್ಲಿ ನವೆಂಬರ್ 26 ರಂದು ಕನ್ನಡ ಜಾನಪದ ಪರಿಷತ್ ಉಡುಪಿ ಇದರ ಜಿಲ್ಲಾಧ್ಯಕ್ಷರು ಹಾಗೂ ಖ್ಯಾತ ಜನಪದ ಗಾಯಕರಾದ ಡಾ.ಗಣೇಶ್ ಗಂಗೊಳ್ಳಿ ಯವರಿಗೆ ಸನ್ಮಾನ ಕಾರ್ಯಕ್ರಮ ಆಯೋಜಿಸಲಾಗಿದೆ.

ಕನ್ನಡ ಜಾನಪದ ಕೋಗಿಲೆ ಬಿರುದಾಂಕಿತ ಡಾ.ಗಣೇಶ್ ಗಂಗೊಳ್ಳಿಯವರು ಕನ್ನಡ ನಾಡಿನ ಜನಪದ ಸಂಸ್ಕೃತಿ, ಕಲೆ ಮತ್ತು ಸಾಹಿತ್ಯ ಪರಂಪರೆಯನ್ನು ಉಳಿಸಿ ಬೆಳೆಸಿನಲ್ಲಿ ವಿಶಿಷ್ಟ ಕೊಡುಗೆಯನ್ನು ನೀಡುತ್ತಿರುವ ಕಲಾಸಾಧಕ. ಕರ್ನಾಟಕ ಜನಪದ ಸಾಹಿತ್ಯ ಸೇವೆಗಾಗಿ ಅವರಿಗೆ ಗೌರವ ಡಾಕ್ಟರೇಟ್ ಪದವಿ ಪ್ರದಾನವಾಗಿದೆ.


ಈ ಸಮಾರಂಭದ ಅಧ್ಯಕ್ಷತೆಯನ್ನು ಸೂರ್ಯ ಚೈತನ್ಯ ಶಾಲಾ ಆಡಳಿತ ಮಂಡಳಿ ಅಧ್ಯಕ್ಷ ವಿದ್ವಾನ್ ಶಂಭುದಾಸ ಗೂರೂಜಿ ವಹಿಸಲಿದ್ದು, ಮುಖ್ಯ ಅತಿಥಿಗಳಾಗಿ ಕಾಪು ತಾಲೂಕು ಕ.ಸಾ.ಪ, ಪೂರ್ವಾಧ್ಯಕ್ಷ ಶ್ರೀ ಪುಂಡಲೀಕ ಮರಾಠೆ, ಮುದರಂಗಡಿ ಸರಕಾರಿ ಪ.ಪೂ. ಕಾಲೇಜಿನ ರಾಜ್ಯಶಾಸ್ತ್ರ ಉಪನ್ಯಾಸಕ ಶ್ರೀ ಭಾಸ್ಕರ ವೈ.ಜಿ ಪಾಲ್ಗೊಳ್ಳಲಿದ್ದಾರೆ.

ಕಾರ್ಯಕ್ರಮದಲ್ಲಿ ಡಾ. ಗಣೇಶ್ ಗಂಗೊಳ್ಳಿಯವರಿಂದ ‘ಗೀತಗಾಯನ’ ಸಂಗೀತ ಕಾರ್ಯಕ್ರಮ ಜರುಗಲಿದೆ. ಪ್ರಾಂಶುಪಾಲ ಗುರುದತ್ತ ಸೋಮಯಾಜಿ, ಶಿಕ್ಷಕವೃಂದ ಮತ್ತು ಪೋಷಕರು, ವಿದ್ಯಾರ್ಥಿಗಳಿಂದ ಕಾರ್ಯಕ್ರಮ ಆಯೋಜನೆಗೊಳ್ಳಲಿದೆ.









