ಶಿರ್ವ(ಜೂ, 11): ಸಂತ ಮೇರಿ ಕಾಲೇಜು ಶಿರ್ವ ಇದರ ರೋವರ್ಸ & ರೇಂಜರ್ಸ್ ಘಟಕದ ವತಿಯಿಂದ ಕಾಲೇಜಿನ ರೋವರ್ಸ & ರೇಂಜರ್ಸ್ ಗಳಿಗೆ ಒಂದು ದಿನದ ಪುನಶ್ಚೇತನಾ ಶಿಬಿರವನ್ನು ಕಾಲೇಜಿನಲ್ಲಿ ಹಮ್ಮಿಕೊಳ್ಳಲಾಯಿತು.
ಶಿಬಿರಕ್ಕೆ ಮುಖ್ಯ ಅತಿಥಿಯಾಗಿ ಸಹಾಯಕ ರಾಜ್ಯ ಸಂಘಟನಾ ಆಯುಕ್ತರಾದ ಶ್ರೀಮತಿ ಸುಮನ ಶೇಖರ್ ಆಗಮಿಸಿ, ಕಾಲೇಜಿನಲ್ಲಿ ರೋವರ್ಸ & ರೇಂಜರ್ಸ್ ಮಹತ್ವ ಹಾಗೂ ರೋವರ್ಸ & ರೇಂಜರ್ಸ್ ಗಳಿಗೆ ತಮ್ಮ ಕೌಶಲ್ಯಗಳನ್ನು ಅಭಿವೃದ್ಧಿ ಪಡಿಸಲು ಬೇಕಾದ ಮಾರ್ಗದರ್ಶನ ನೀಡಿದರು. ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ ಶ್ರೀ. ವಿತೇಶ್ ಕಾಂಚನ್, ರೋವರ್ಸ & ರೇಂಜರ್ಸ್ ಗಳಿಗೆ ವಿವಿಧ ಪರೀಕ್ಷೆಗಳನ್ನು ಎದುರಿಸಲು ಅಗತ್ಯವಾದ ಮಾಹಿತಿಯನ್ನು ನೀಡಿ, ನಿಪುಣ್, ರಾಜ್ಯಪುರಸ್ಕಾರ ಹಾಗೂ ರಾಷ್ಟçಪತಿ ಪ್ರಶಸ್ತಿಯನ್ನು ಪಡೆಯಲು ಅಗತ್ಯವಾದ ವಿಷಯಗಳನ್ನು ಕಲಿಸಿದರು.

ಶಿಬಿರದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲರಾದ ಡಾ. ಹೆರಾಲ್ಡ್ ಮೋನಿಸ್ ವಹಿಸಿ ರೋವರ್ಸ & ರೇಂಜರ್ಸ್ ಗೆ ಶುಭ ಹಾರೈಸಿದರು. ಕಾಲೇಜಿನ ರೋವರ್ ಸ್ಕೌಟ್ ಲೀಡರ್ ಶ್ರೀ. ಪ್ರಕಾಶ್ ಶಿಬಿರವನ್ನು ಆಯೋಜಿಸಿದರು. ರೇಂಜರ್ ಲೀಡರ್ ಶ್ರೀಮತಿ ಸಂಗೀತಾ, ರೋವರ್ ನಾಯಕ ಡ್ಯಾರಿಲ್, ರೇಂಜರ್ ನಾಯಕಿ ರಾಫಿದ ಹಾಗೂ ಕಾಲೇಜಿನ ಎಲ್ಲಾ ರೋವರ್ಸ & ರೇಂಜರ್ಸ್ ಶಿಬಿರದಲ್ಲಿ ಉಪಸ್ಥಿತರಿದ್ದರು.












