ಗೋಪಾಡಿ(ಜೂ,11): ಗೋಪಾಡಿ ಪಡು ಶಾಲೆಗೆಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷರಾದ ಸುರೇಂದ್ರ ಕಾಂಚನ್ ಅವರ ಮನವಿಯ ಮೇರೆಗೆ ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಪಡುಗೋಪಾಡಿ ಶಾಲಾ ವಿದ್ಯಾರ್ಥಿಗಳಿಗೆ ಮತ್ತು ಅಂಗನವಾಡಿ ಮಕ್ಕಳಿಗೆ ಅಗತ್ಯ ವಸ್ತುವಾದ ಬಟ್ಟಲು ಮತ್ತು ಲೋಟವನ್ನು ಹೋಟೆಲ್ ಉಡುಪಿ ರೆಸ್ಟೋರೆಂಟ್ ಕೊಲ್ಲಾಪುರ ಶಿರೋಲಿ ಉದ್ಯಮಿಯಾದ ಶ್ರೀಮತಿ ಸುನಿತಾ ಪ್ರಕಾಶ್ ಕೋಟೇಶ್ವರ ಮೇಪು ಇವರು ವಿತರಿಸಿದರು.
ಈ ಸಂಧರ್ಭದಲ್ಲಿ ಶಾಲಾ ಮುಖ್ಯೋಪಾಧ್ಯಾಯರಾದ ಶ್ರೀನಿವಾಸ ಶೆಟ್ಟಿ, ಗೋಪಾಡಿ ಪಂಚಾಯತ್ ಅಧ್ಯಕ್ಷರಾದ ಶ್ರೀಮತಿ ಸರೋಜ ಪೂಜಾರಿ, ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷರಾದ ಸುರೇಂದ್ರ ಸಂಗಮ್, ಶಿಕ್ಷಕರಾದ ಮಾಲತಿ ನಾಯ್ಕ್, ಕವಿತಾ, ಅಂಗನವಾಡಿ ಸಹಾಯಕಿ ಸವಿತಾ ಮತ್ತು ಶಾಲಾ ಸಿಬ್ಬಂದಿಗಳು ಉಪಸ್ಥಿತರಿದ್ದರು.












