ಹೆಮ್ಮಾಡಿ (ಸೆ. 05): ಮೊಗವೀರ ಯುವ ಸಂಘಟನೆ (ರಿ.), ಉಡುಪಿ ಜಿಲ್ಲೆ ಹೆಮ್ಮಾಡಿ ಘಟಕ ಇವರ ನೇತೃತ್ವದಲ್ಲಿ ಜಿ. ಶಂಕರ್ ಫ್ಯಾಮಿಲಿ ಟ್ರಸ್ಟ್ (ರಿ.),ಅಂಬಲಪಾಡಿ,ಉಡುಪಿ ಇವರ ಸಹಯೋಗದೊಂದಿಗೆ ಶಿಕ್ಷಕ ದಿನಾಚರಣೆ ಪ್ರಯುಕ್ತ ಜನತಾ ಸಮೂಹ ಶಿಕ್ಷಣ ಸಂಸ್ಥೆಯ ಅಧ್ಯಕ್ಷರು ಹಾಗೂ ಶೈಕ್ಷಣಿಕ ಕ್ಷೇತ್ರದಲ್ಲಿ ವಿಶೇಷ ಸಾಧನೆಗೈದ ಶ್ರೀ ಗಣೇಶ್ ಮೊಗವೀರ ಇವರನ್ನು ಸನ್ಮಾನಿಸಲಾಯಿತು.

ಈ ಸಂದರ್ಭದಲ್ಲಿ ಮೊಗವೀರ ಮಹಾಜನ ಸೇವಾ ಸಂಘ (ರಿ.), ಬಗ್ವಾಡಿ ಹೋಬಳಿ, ಕುಂದಾಪುರ ಶಾಖೆಯ ಅಧ್ಯಕ್ಷರಾದ ಶ್ರೀ ಉದಯಕುಮಾರ್ ಹಟ್ಟಿಯಂಗಡಿ, ಮಾಜಿ ಅಧ್ಯಕ್ಷರಾದ ಎಂ. ಎಂ ಸುವರ್ಣ, ಕಾರ್ಯದರ್ಶಿ ಪ್ರಭಾಕರ ಸೇನಾಪುರ, ಬಿ ಆರ್ ನಾಯ್ಕ್ ,ಹೆಮ್ಮಾಡಿ ಘಟಕದ ಅಧ್ಯಕ್ಷರಾದ ದಿನೇಶ್ ಕಾಂಚನ್ ಬಾಳಿಕೆರೆ ಗೌರವಾಧ್ಯಕ್ಷ ಲೋಹಿತಾಶ್ವ ಆರ್ ಕುಂದರ್, ಕಾರ್ಯದರ್ಶಿ ಜಗದೀಶ ನೆಂಪು, ಮಾಜಿ ಅಧ್ಯಕ್ಷ ರಾಘವೇಂದ್ರ ನೆಂಪು,ಸಾಂಸ್ಕೃತಿಕ ಕಾರ್ಯದರ್ಶಿ ಜಯಂತ್ ಕುಂದರ್, ಜನಾರ್ದನ ಮೊಗವೀರ ತೊಪ್ಲ, ಗಣೇಶ್ ಕಾಂಚನ್, ರಾಘವೇಂದ್ರ ಚಂದನ್ ಹಾಗೂ ಸ್ತ್ರೀಶಕ್ತಿ ಬಗ್ವಾಡಿ ಹೋಬಳಿ ಇದರ ಅಧ್ಯಕ್ಷರಾದ ಶ್ಯಾಮಲ ಜಿ. ಚಂದನ್, ಸುಮತಿ ಉದಯ್ ಹಟ್ಟಿಯಂಗಡಿ,ಸುಮತಿ ಬಿ. ಮೊಗವೀರ, ಬೇಬಿ ಜಿ ನಾಯ್ಕ್ ಉಪಸ್ಥಿತರಿದ್ದರು.

ಘಟಕದ ಉಪಾಧ್ಯಕ್ಷರಾದ ಪ್ರವೀಣ್ ಮೊಗವೀರ್ ಗಂಗೊಳ್ಳಿ ನಿರೂಪಿಸಿದರು. ಕಾಲೇಜಿನ ಭೋಧಕ, ಭೋಧಕೇತರ ವೃಂದ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.












