ಕುಂದಾಪುರ (ಜು, 02): ಡಾl ಬಿ ಬಿ ಹೆಗ್ಡೆ ಕಾಲೇಜಿನ ವ್ಯವಹಾರ ಆಡಳಿತ ವಿಭಾಗದ ವತಿಯಿಂದ ಅಂತಿಮ ಬಿ ಬಿ ಎ ವಿದ್ಯಾರ್ಥಿಗಳಿಗೆ ಆನ್ಲೈನ್ ಮೂಲಕ ಆದಾಯತೆರಿಗೆ ಪಾವತಿ ಕುರಿತು ಅರಿವು ಕಾರ್ಯಕ್ರಮ ಇತ್ತೀಚೆಗೆ ಹಮ್ಮಿಕೊಳ್ಳಲಾಯಿತು. ಸಿ. ಎ ಆನಂದ್ ತೀರ್ಥ ಉಡುಪಿ ಇವರು ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿ ವಿದ್ಯಾರ್ಥಿಗಳಿಗೆ ಆನ್ಲೈನ್ ಮೂಲಕ ಆದಾಯ ತೆರಿಗೆ ಪಾವತಿ ಮಾಡುವಾಗ ಅನುಸರಿಸ ಬೇಕಾದ ಕ್ರಮಗಳ ಬಗ್ಗೆ ತಿಳಿಸಿದರು. ಈ ಸಂಧರ್ಭದಲ್ಲಿ ಕಾಲೇಜಿನ […]
Author: KundaVahini Editor
ಯುವ ಬಂಟರ ಸಂಘದ ವತಿಯಿಂದ ಆರ್ಥಿಕ ನೆರವು
ಕುಂದಾಪುರ(ಜು 02): ಕುಂದಾಪುರ ತಾಲೂಕು ಯುವ ಬಂಟರ ಸಂಘದ ವತಿಯಿಂದ ಆರೋಗ್ಯ ಭಾಗ್ಯ ಯೋಜನೆಯಡಿ ಬ್ರಹ್ಮಾವರ ತಾಲೂಕಿನ ಶಿರೂರು ಮಂದಾರ್ತಿ ನಿವಾಸಿಯಾದ ಶ್ರೀ ನಿತೇಶ್ ಶೆಟ್ಟಿ ಅವರ ಅನಾರೋಗ್ಯ ನಿಮಿತ್ತ ವೈದ್ಯಕೀಯ ಚಿಕಿತ್ಸೆಗಾಗಿ ಸಂಘದ ವತಿಯಿಂದ 10000 ರೂಪಾಯಿಯನ್ನು ಹಾಗೂ ಶಿವಮೊಗ್ಗದ ದಿನೇಶ್ ಶೆಟ್ಟಿ ಅವರ ಚಿಕಿತ್ಸೆಗೆ 10000 ರೂಪಾಯಿಯನ್ನು ಸಂಘದ ಆಡಳಿತ ಕಚೇರಿಯಲ್ಲಿ ಅಧ್ಯಕ್ಷರಾದ ಡಾ. ಅಂಪಾರು ನಿತ್ಯಾನಂದ ಶೆಟ್ಟಿ ಚಕ್ ಮೂಲಕ ಹಸ್ತಾಂತರಿಸಿದರು. ಈ ಸಂದರ್ಭದಲ್ಲಿ ಸಂಘದ […]
ಕಲರ್ಸ್ನಲ್ಲಿ ಹೊಸ ಧಾರಾವಾಹಿ ‘ನನ್ನ ದೇವ್ರು’ಜುಲೈ 8ರಿಂದ ನಿತ್ಯ ಸಂಜೆ 6:30ಕ್ಕೆ ಪ್ರಸಾರ ಅಶ್ವಿನಿ ನಕ್ಷತ್ರ ಖ್ಯಾತಿಯ ಮಯೂರಿ ಮರಳಿ ಕಿರುತೆರೆಗೆ
ಕೌಟುಂಬಿಕ ಮೌಲ್ಯಗಳನ್ನು ಬಿಂಬಿಸುವ ಸದಭಿರುಚಿಯ ಧಾರಾವಾಹಿಗಳಿಗೆ ಹೆಸರಾದ ಕಲರ್ಸ್ ಕನ್ನಡ ಇದೀಗ ‘ನನ್ನ ದೇವ್ರು’ ಎಂಬ ಹೊಸ ಕತೆಯನ್ನು ಹೊತ್ತು ತಂದಿದೆ. ಜುಲೈ 82024 ರಿಂದ ಪ್ರಸಾರ ಆರಂಭಿಸಲಿರುವ ಈ ಹೊಸ ಧಾರಾವಾಹಿಯನ್ನು ನೀವು ಸೋಮವಾರದಿಂದ ಶುಕ್ರವಾರದ ತನಕ ಪ್ರತಿ ಸಂಜೆ 6.30 ಕ್ಕೆ ವೀಕ್ಷಿಸಬಹುದು. ‘ನನ್ನ ದೇವ್ರು’ ಧಾರಾವಾಹಿಯ ವಿಶೇಷವೆಂದರೆ “ಅಶ್ವಿನಿ ನಕ್ಷತ್ರ’ದಿಂದ ಮನೆಮಾತಾಗಿದ್ದ ಮಯೂರಿ ಮತ್ತೆ ಕಿರುತೆರೆಗೆ ಮರಳಿರುವುದು. ಈ ಧಾರಾವಾಹಿಯಲ್ಲಿ ಮಯೂರಿಯದು ಸಣ್ಣ ಊರಿನ ಬಡ […]
ಲಯನ್ಸ್ ಕ್ಲಬ್ ಕುಂದಾಪುರ ಕೋಸ್ಟಲ್ ವತಿಯಿಂದ ರಾಷ್ಟ್ರೀಯ ವೈದ್ಯರ ದಿನಾಚರಣೆ
ಕುಂದಾಪುರ(ಜು 01): ಅಂತಾರಾಷ್ಟ್ರೀಯ ವೈದ್ಯರ ದಿನಾಚರಣೆಯ ಪ್ರಯುಕ್ತ ಲಯನ್ಸ್ ಕ್ಲಬ್ ಕುಂದಾಪುರ ಕೋಸ್ಟಲ್ಅಮಾಸೆಬೈಲು ಪರಿಸರದಲ್ಲಿ ತೇಜಸ್ವಿನಿ ಕ್ಲಿನಿಕ್ ಮೂಲಕ ರಸ್ತೆ, ವಾಹನ, ಪೋನ್ ಸೌಲಭ್ಯಗಳಿಲ್ಲದ ಕಾಲದಲ್ಲಿ ರಾತ್ರಿ-ಹಗಲು ಎನ್ನದೆ ಸಾವಿರಾರು ಬಾಣಂತಿಯರ, ಮಕ್ಕಳ, ರೋಗಿಗಳ ಪ್ರಾಣ ಉಳಿಸಿ ಇಂದಿಗೂ ಅದೇ ಪರಿಸರದಲ್ಲಿ ನಿರಂತರವಾಗಿ ಸೇವೆ ಸಲ್ಲಿಸುತ್ತಿರುವ ವೈದ್ಯರಾದ ಡಾ. ಮಂದಾರ ಶೆಟ್ಟಿಯವರನ್ನು ಲಯನ್ಸ್ ಕ್ಲಬ್ ಕುಂದಾಪುರ ಕೋಸ್ಟಲ್ ವತಿಯಿಂದ ಸನ್ಮಾನಿಸಲಾಯಿತು. ಸನ್ಮಾನ ಸ್ವೀಕರಿಸಿ ಮಾತನಾಡಿದ ಡಾ. ಮಂದಾರ ಶೆಟ್ಟಿಯವರು ಕಷ್ಟವಾದರೂ […]
ಶ್ರೀ ಮೂಕಾಂಬಿಕಾ ದೇವಳದ ಸ್ವತಂತ್ರ ಪಿ ಯು ಕಾಲೇಜು : ಸಾಧಕ ವಿದ್ಯಾರ್ಥಿಗಳಿಗೆ ಸನ್ಮಾನ
ಕೊಲ್ಲೂರು(ಜು,4): ಇಲ್ಲಿನ ಶ್ರೀ ಮೂಕಾಂಬಿಕಾ ದೇವಳದ ಸ್ವತಂತ್ರ ಪದವಿಪೂರ್ವ ಕಾಲೇಜಿನಲ್ಲಿ 2023-24 ನೆ ಶೈಕ್ಷಣಿಕ ಸಾಲಿನಲ್ಲಿ ವಿಶಿಷ್ಟ ಶ್ರೇಣಿಯಲ್ಲಿ ತೇರ್ಗಡೆ ಹೊಂದಿದ 51 ಸಾಧಕ ವಿದ್ಯಾರ್ಥಿಗಳನ್ನು ಸನ್ಮಾನಿಸಿ ಗೌರವಿಸಲಾಯಿತು. ಎಲ್ಲಾ ವಿದ್ಯಾರ್ಥಿಗಳಿಗೆ ಸಂಸ್ಥೆಯ ಹಿಂದಿನ ವಿದ್ಯಾರ್ಥಿ ಸಿಎ ಸುದೀಪ್ ಶೆಟ್ಟಿ ಯವರು ಕೊಡಮಾಡಿದ ಬೆಳ್ಳಿಯ ನಾಣ್ಯವನ್ನು ಉಡುಗೊರೆಯಾಗಿ ನೀಡಲಾಯಿತು. ಸಂಸ್ಥೆಯ ಪ್ರಾಂಶುಪಾಲ ಗೋಪಾಲಕೃಷ್ಣ ಜಿಕೆ ಯವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಕುಂದಾಪುರದ ಡಾ. ಬಿ.ಬಿ ಹೆಗ್ಡೆ ಪ್ರಥಮ […]
ವಿ.ಕೆ.ಆರ್. ಆಂಗ್ಲ ಮಾಧ್ಯಮ ಶಾಲೆ ಕುಂದಾಪುರ : ವಿದ್ಯಾರ್ಥಿನಿ ಅನ್ವಿತಾ ಎನ್.ಸಿ.ಸಿ. ಗ್ರೂಪಿಂಗ್ ಫೈಯರ್ನಲ್ಲಿ ಪ್ರಥಮ ಸ್ಥಾನ
ಕುಂದಾಪುರ( ಜು,02): ಕುಂದಾಪುರ ಎಜ್ಯುಕೇಶನ್ ಸೊಸೈಟಿ (ರಿ.) ಪ್ರವರ್ತಿತ ಎಚ್. ಎಮ್. ಎಮ್. ಮತ್ತು ವಿ. ಕೆ. ಆರ್. ಆಚಾರ್ಯ ಸ್ಮಾರಕ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯ 9ನೇ ತರಗತಿ ಎನ್ಸಿಸಿ ಕೆಡೆಟ್ ಅನ್ವಿತಾ ಇತ್ತೀಚೆಗೆ ಶಿವಮೊಗ್ಗದಲ್ಲಿ ನಡೆದ ಟಿಎಸ್ಸಿ-2 ಕ್ಯಾಂಪ್ನ ಗ್ರೂಪಿಂಗ್ ಫೈಯರ್ನಲ್ಲಿ ಪ್ರಥಮ ಸ್ಥಾನ ಪಡೆದು ಆಯ್ಕೆಯಾದ ಉಡುಪಿ ಜಿಲ್ಲೆಯ ಏಕಮಾತ್ರ ಜೂನಿಯರ್ ಕೆಡೆಟ್ ಆಗಿದ್ದಾರೆ. ಇವರು ಬಳ್ಕೂರಿನ ಅಮಿತ್ ಕುಮಾರ್ ಮತ್ತು ಶರಾವತಿ ದಂಪತಿಯ ಪುತ್ರಿ.
ಸ .ಹಿ .ಪ್ರಾ .ಶಾಲೆ ಮೊಳಹಳ್ಳಿ : ಒಂದನೇ ತರಗತಿಗೆ ಆಂಗ್ಲ ಮಾಧ್ಯಮ ತರಗತಿ ಉದ್ಘಾಟನೆ
ಮೊಳಹಳ್ಳಿ (ಜು,02): ಇಂದಿನ ಆಧುನಿಕ ಜಗತ್ತಿಗೆ ಮುಕ್ತವಾಗಿ ತೆರೆದುಕೊಳ್ಳಲು ಇಂಗ್ಲಿಷ್ ಭಾಷೆಯ ಸಂವಹನ ಅಗತ್ಯವಾಗಿದ್ದು, ಇಂಗ್ಲಿಷ್ ಮಾಧ್ಯಮದ ಶಿಕ್ಷಣದಿಂದ ಗ್ರಾಮೀಣ ಪ್ರದೇಶದ ಮಕ್ಕಳಲ್ಲಿ ಆತ್ಮವಿಶ್ವಾಸ ಮೂಡುತ್ತದೆ ಎಂದು ತೋಟಗಾರಿಕೆ ಇಲಾಖೆಯ ನಿವೃತ್ತ ನಿರ್ದೇಶಕರಾದ ಶ್ರೀ ಜಯಶೀಲಶೆಟ್ಟಿ ಎಚ್ ಹೇಳಿದರು. ಅವರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆ, ಮೊಳಹಳ್ಳಿಯಲ್ಲಿ ಒಂದನೇ ತರಗತಿಗೆ ಇಂಗ್ಲಿಷ್ ಮಾಧ್ಯಮ ಶಿಕ್ಷಣ ಪ್ರಾರಂಭೋತ್ಸವದ ಕಾರ್ಯಕ್ರಮದಲ್ಲಿ ದೀಪ ಬೆಳಗಿಸುವುದರ ಮೂಲಕ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಶಾಲೆಯ ಹಳೆ ವಿದ್ಯಾರ್ಥಿ […]
ಕುಂದಾಪುರ : ಯುವ ಬಂಟರ ಸಂಘದ ವತಿಯಿಂದ ಆರ್ಥಿಕ ನೆರವು
ಕುಂದಾಪುರ (ಜೂ,28): ಕುಂದಾಪುರ ತಾಲೂಕು ಯುವ ಬಂಟರ ಸಂಘದ ವತಿಯಿಂದ ಆರೋಗ್ಯ ಭಾಗ್ಯ ಯೋಜನೆಯಡಿ ಕುಂದಾಪುರ ತಾಲೂಕಿನ ಕಂಡ್ಲೂರು ಸಮೀಪದ ಕಾವ್ರಾಡಿ ನಿವಾಸಿಯಾದ ಶ್ರೀ ದೇವೇಂದ್ರ ಶೇಟ್ ಅವರ ಅನಾರೋಗ್ಯ ನಿಮಿತ್ತ ವೈದ್ಯಕೀಯ ಚಿಕಿತ್ಸೆಗಾಗಿ ಸಂಘದ ವತಿಯಿಂದ 10000 ರೂಪಾಯಿಯನ್ನು ಸಂಘದ ಅಧ್ಯಕ್ಷರಾದ ಡಾ. ಅಂಪಾರು ನಿತ್ಯಾನಂದ ಶೆಟ್ಟಿ ಚಕ್ ಮೂಲಕ ಹಸ್ತಾಂತರಿಸಿದರು. ಈ ಸಂದರ್ಭದಲ್ಲಿ ಸಂಘದ ಸಂಘಟನಾ ಕಾರ್ಯದರ್ಶಿ ಶ್ರೀ ಸುಕುಮಾರ್ ಶೆಟ್ಟಿ ಹೇರಿಕುದ್ರು ಹಾಗೂ ಸಂಘದ ಸದಸ್ಯರಾದ […]
ಕ್ರಿಯೇಟಿವ್ ಪಿ ಯು ಕಾಲೇಜಿನ ವಾಣಿಜ್ಯ ವಿದ್ಯಾರ್ಥಿಗಳಿಗಾಗಿ ಸಿ.ಎ, ಸಿ.ಎಸ್.ಇ.ಇ.ಟಿ ಮಾಹಿತಿ ಕಾರ್ಯಗಾರ
ಕಾರ್ಕಳ(ಜು ,02):ಇಲ್ಲಿನ ಕ್ರಿಯೇಟಿವ್ ಪಿಯು ಕಾಲೇಜಿನ ವಾಣಿಜ್ಯ ವಿದ್ಯಾರ್ಥಿಗಳಿಗಾಗಿ ಸಿ.ಎ ಫೌಂಡೇಶನ್, ಸಿ.ಎಸ್.ಇ.ಇ.ಟಿ ಮಾಹಿತಿ ಕಾರ್ಯಗಾರವನ್ನು ಜೂನ್ 20 ರಿಂದ 28 ರ ತನಕ ಹಮ್ಮಿಕೊಳ್ಳಲಾಗಿತ್ತು. ಸಿ.ಎ ಕಾರ್ಯಗಾರದಲ್ಲಿ ಮುಖ್ಯ ಸಂಪನ್ಮೂಲ ವ್ಯಕ್ತಿಗಳಾಗಿ CA. ಪ್ರದೀಪ್ ಜೋಗಿ ಆಗಮಿಸಿ, ಪ್ರಸ್ತುತ ವಿದ್ಯಮಾನದಲ್ಲಿ ಚಾರ್ಟರ್ಡ್ ಅಕೌಂಟ್ ಕೋರ್ಸ್ ಗೆ ರಾಷ್ಟ್ರೀಯ ಹಾಗೂ ಅಂತರಾಷ್ಟ್ರೀಯ ಮಟ್ಟದಲ್ಲಿ ವಿಫುಲ ಅವಕಾಶಗಳಿದ್ದು ವಿದ್ಯಾರ್ಥಿಗಳು ಕಾಲೇಜುನಲ್ಲಿ ಒದಗಿಸುವ ಈ ಕೋರ್ಸ್ ನ್ನು ಸದುಪಯೋಗ ಪಡಿಸಿಕೊಳ್ಳಬೇಕೆಂದರು. ಸಿ.ಎಸ್.ಇ.ಇ.ಟಿ ಬಗ್ಗೆ […]
ಮೊಗವೀರ ಯುವ ಸಂಘಟನೆ(ರಿ.), ಕುಂದಾಪುರ ಘಟಕ: ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ಐಡಿ ಕಾರ್ಡ್ ವಿತರಣೆ
ಕುಂದಾಪುರ(ಜು,02): ಇಲ್ಲಿನ ಸಂಗಮ ಬಳಿ ಇರುವ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ 45 ವಿದ್ಯಾರ್ಥಿಗಳಿಗೆ ಉಚಿತ ಐಡಿ ಕಾರ್ಡ್ ನ್ನು ಮೊಗವೀರ ಯುವ ಸಂಘಟನೆ (ರಿ,), ಉಡುಪಿ ಜಿಲ್ಲೆ ಕುಂದಾಪುರ ಘಟಕದ ವತಿಯಿಂದ ನೀಡಲಾಯಿತು. ಈ ಸಂದರ್ಭದಲ್ಲಿ ಕುಂದಾಪುರ ಘಟಕ ಅಧ್ಯಕ್ಷರಾದ ಚಂದ್ರಹಾಸ್ ಕೋಣಿ,ಮಾಜಿ ಅಧ್ಯಕ್ಷರಾದ. ರಮೇಶ್ ಟಿ ಟಿ. ,ಘಟಕದ ಹಾಲಿ ಕೋಶಾಧಿಕಾರಿ ಹಾಗೂ ನಿಯೋಜಿತ ಕಾರ್ಯದರ್ಶಿ ಮಾಧವ ಕುಂದಾಪುರ.,ನಿಯೋಜಿತ ಕೋಶಾಧಿಕಾರಿ.ವಿಜಯ ವಿಠ್ಠಲವಾಡಿ.,ಜೊತೆ ಸಾಂಸ್ಕೃತಿಕ ಕಾರ್ಯದರ್ಶಿ ಸುರೇಂದ್ರ ಬರೆಕಟ್ಟು […]