ಕಾರ್ಕಳ(ಮೇ,16): ಇನ್ಸ್ಟಿಟ್ಯೂಟ್ ಆಫ್ ಕಂಪೆನಿ ಸೆಕ್ರೆಟರಿ ಆಫ್ ಇಂಡಿಯಾ ರವರು ಮೇ 4, 2024 ರಲ್ಲಿ ನಡೆಸಿದ CSEET ಅರ್ಹತಾ ಪರೀಕ್ಷೆಯಲ್ಲಿ ಕಾರ್ಕಳದ ಕ್ರಿಯೇಟಿವ್ ಪ.ಪೂ ಕಾಲೇಜಿನ ವಿದ್ಯಾರ್ಥಿಗಳಾದ ಭಕ್ತಿ ಕಾಮತ್, ಸಾನ್ವಿ ರಾವ್, ಶೆಟ್ಟಿ ತ್ರಿಶಾ ವಿಠ್ಠಲ್, ಹೃತಿಕ್,ಜೀವನ್ ಗೌಡ, ಆಶೆಲ್,ಕೀರ್ತಿ ಪಾಟ್ಕರ್, ಅನ್ವಿತ, ಭವಿಷ್ಯ ಶೆಟ್ಟಿ, ರಾಹುಲ್, ಅನನ್ಯ ಜೈನ್, ಪ್ರತ್ವೀಕ್, ಪ್ರಥಮ್,A.S ಚಿನ್ಮಯ, ಪ್ರಜ್ವಲ್ ರಾವ್, ಸುಖಿ ಸುಭಾಶ್, ಶ್ರೇಯಾ, ವಿನಯ್ ಪ್ರಶಾಂತ್, ಸುಪ್ರೀತ್ ಹೆಗ್ಡೆ, […]
Author: KundaVahini Editor
ಬಿ. ಬಿ. ಹೆಗ್ಡೆ ಕಾಲೇಜು, ಕುಂದಾಪುರ: ಪ್ರಾಚ್ಯ ವಸ್ತುಗಳ ಪ್ರದರ್ಶನ
ಕುಂದಾಪುರ (ಎ. 12): ಪ್ರಾಚ್ಯ ವಸ್ತುಗಳ ಪರಿಚಯ ಮತ್ತು ಅವುಗಳ ಉಪಯೋಗದ ಕುರಿತು ವಿದ್ಯಾರ್ಥಿಗಳು ತಿಳಿದುಕೊಳ್ಳುವ ಮೂಲಕ ಪ್ರಾಚೀನ ವಸ್ತುಗಳನ್ನು ಸಂಗ್ರಹಿಸುವ ಹವ್ಯಾಸವನ್ನು ವಿದ್ಯಾರ್ಥಿಗಳು ಬೆಳೆಸಿಕೊಳ್ಳಬೇಕು ಎಂದು ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನಲ್ಲಿ ಆಯೋಜಿಸಿದ ಪ್ರಾಚ್ಯ ವಸ್ತು ಸಂಗ್ರಹ ಸ್ಪರ್ಧೆಯನ್ನು ಉದ್ದೇಶಿಸಿ ಕಾಲೇಜಿನ ಪ್ರಾಂಶುಪಾಲರಾದ ಪ್ರೊ| ಕೆ. ಉಮೇಶ್ ಶೆಟ್ಟಿ ಹೇಳಿದರು. ಈ ಸಂದರ್ಭ ತೀರ್ಪುಗಾರರಾಗಿ ಆಗಮಿಸಿದ ಪತ್ರಕರ್ತ ಮಂಜುನಾಥ ಕಾಮತ್ ಹಾಗೂ ಶ್ರೀಮತಿ ನಿಮಿತಾ […]
ಬಿ. ಬಿ. ಹೆಗ್ಡೆ ಕಾಲೇಜು: ಬಾರ್ಕ್ಲೇಸ್ ಉದ್ಯೋಗ ಮತ್ತು ಸಂದರ್ಶನ ಕೌಶಲ್ಯಗಳು
ಕುಂದಾಪುರ (ಮೇ 13): ಇಲ್ಲಿನ ಪ್ರತಿಷ್ಠಿತ ಡಾ| ಬಿ.ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ವೃತ್ತಿ ಮಾರ್ಗದರ್ಶನ ವಿಭಾಗವು ಬಾರ್ಕ್ಲೇಸ್ ಬ್ಯಾಂಕ್ ಪಿಎಲ್ಸಿ ಇದರ ಸಹಯೋಗದೊಂದಿಗೆ ಹಮ್ಮಿಕೊಂಡ 3 ದಿನಗಳ ಉದ್ಯೋಗ ಮತ್ತು ಸಂದರ್ಶನ ಕೌಶಲ್ಯಗಳ ತರಬೇತಿಯ ಉದ್ಘಾಟನಾ ಕಾರ್ಯಕ್ರಮ ಮೇ ,13 ರಂದು ನೆರವೇರಿಸಿತು. ಅತಿಥಿ ನೆಲೆಯಲ್ಲಿ ಮಾತನಾಡಿದ ಫ್ರೀಲ್ಯಾನ್ಸ್ ಸಾಫ್ಟ್ ಸ್ಕಿಲ್ಸ್ ತರಬೇತುದಾರರಾದ ಶ್ರೀ ದಾಮೋದರನ್ ಸಿ. ಅವರು ಸಮಯ ನಿರ್ವಹಣೆಯು ವ್ಯಕ್ತಿಯು ಯಶಸ್ಸನ್ನು ಹೊಂದುವಲ್ಲಿ ಪ್ರಮುಖ […]
ಶ್ರೀ ಬೊಬ್ಬರ್ಯ ದೈವಸ್ಥಾನ ದೇವರ ನೂತನ ಶಿಲಾಮಯ ಆಲಯ ಸಮರ್ಪಣೆ ಮತ್ತು ಪುನಃ ಪ್ರತಿಷ್ಠಾ,ಬ್ರಹ್ಮಕಲಶೋತ್ಸವ
ಬೈಂದೂರು( ಮೇ.06): ಮೇ 5 ರಂದು, ಸ್ಥಳೀಯ ನಾಗೂರು ಕುಂಜಾನುಗುಡ್ಡೆಯಲ್ಲ ಶ್ರೀ ಬೊಬ್ಬರ್ಯ ನೂತನ ಶಿಲಾಮಯ ದೈವಸ್ಥಾನವನ್ನು ಶ್ರೀ ಶ್ರೀ ಶ್ರೀ ಕ ಈಶ ವಿಠ್ಠಲ ದಾಸ ಸ್ವಾಮೀಜಿಯವರು ಶ್ರಿ ಕ್ಷೇತ್ರ ಕೇಮಾರು ಲೋಕಾರ್ಪಣೆಗೊಳಿಸಿದರು . ಸ್ವಾಮೀಜಿಯವರು ದೀನ,ಧನ್ಯತೆ,ದಾನ ಈ ಮೂಲಕ ಪ್ರತಿ ಊರಲ್ಲಿ ನಿರ್ಮಾಣ ಸಾದ್ಯ ಎಂದು ಆಶೀರ್ವಚನ ನೀಡಿದರು. ಹಾಗೆಯೇ ಪುನಃ ಪ್ರತಿಷ್ಠಾ,ಬ್ರಹ್ಮಕಲಶೋತ್ಸವ ಕಾರ್ಯಕ್ರಮವು ನಡೆಯಿತು. ಧಾರ್ಮಿಕ ಮುಖಂಡ ಅಪ್ಪಣ್ಣ ಹೆಗ್ಡೆ, ನರಸಿಂಹ ಹಳಗೆರಿ,ಮುಂತಾದವರು ಉಪಸ್ಥಿತರಿದ್ದರು. ವರದಿ : […]
ಬಂಟಕಲ್ ಇಂಜಿನಿಯರಿoಗ್ ಕಾಲೇಜಿನಲ್ಲಿ ಶಿಕ್ಷಕ-ರಕ್ಷಕರ ಸಭೆ
ಬಂಟಕಲ್( ಮೇ,10): ಶ್ರೀ ಮಧ್ವ ವಾದಿರಾಜ ತಾಂತ್ರಿಕ ಮಹಾವಿದ್ಯಾಲಯ ಇದರ ಪ್ರಥಮ ವರ್ಷದ ವಿದ್ಯಾರ್ಥಿಗಳ 2023-24ನೇ ಸಾಲಿನ ಶಿಕ್ಷಕ-ರಕ್ಷಕರ ಎರಡನೇಯ ಸಭೆಯು ದಿನಾಂಕ 11 ಮೇ 2024 ರಂದು ಸಂಸ್ಥೆಯ ಆವರಣದಲ್ಲಿ ಆಯೋಜಿಸಲಾಗಿತ್ತು. \ಇಂಜಿನಿಯರಿoಗ್ ಕೋರ್ಸ್ನ ಬಗ್ಗೆ ಅರಿವು ಮೂಡಿಸುವುದು, ಸಂಸ್ಥೆಯ ನಿಯಮಗಳು ಮತ್ತು ವಿದ್ಯಾರ್ಥಿಗಳ ಕಾರ್ಯಕ್ಷಮತೆಯನ್ನು ಮೇಲ್ವಿಚಾರಣೆ ಮಾಡುವಲ್ಲಿ ಪೋಷಕರ ಪಾತ್ರದ ಬಗ್ಗೆ ತಿಳಿಸುವುದು ಈ ಸಭೆಯ ಮುಖ್ಯ ಉದ್ದೇಶವಾಗಿತ್ತು. ಸಂಸ್ಥೆಯ ಪ್ರಾಂಶುಪಾಲರಾದ ಡಾ. ತಿರುಮಲೇಶ್ವರ ಭಟ್ ಸ್ವಾಗತಿಸಿ […]
ಬಿ. ಬಿ. ಹೆಗ್ಡೆ ಕಾಲೇಜು: ಪ್ರತಿಭಾ ದಿನಾಚರಣೆ ಉದ್ಘಾಟನೆ
ಕುಂದಾಪುರ (ಮೇ 09): ಸುಪ್ತವಾಗಿರುವ ಪ್ರತಿಭೆಗಳಿಗೆ ವೇದಿಕೆ ದೊರೆತಾಗ ವಿದ್ಯಾರ್ಥಿಗಳಲ್ಲಿನ ಸಭಾ ಕಂಪನ ಕಡಿಮೆಯಾಗಿ ಮುಂದೆ ಹಲವು ವೇದಿಕೆಗಳಲ್ಲಿ ಗುರುತಿಸಿಕೊಳ್ಳಲು ಸಾಧ್ಯ. ಪದವಿ ಶಿಕ್ಷಣದ ಸಂದರ್ಭದಲ್ಲಿ ಈ ರೀತಿಯ ಕಾರ್ಯಕ್ರಮಗಳು ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಗೆ ಪೂರಕವಾದದ್ದು ಎಂದು ಕುಂದಾಪುರದ ವಸಂತನಾಟ್ಯಲಯದ ನೃತ್ಯ ತರಬೇತುದಾರರಾದ ಶ್ರೀಮತಿ ಪ್ರವಿತಾ ಅಶೋಕ್ ಹೇಳಿದರು. ಅವರು ಇಲ್ಲಿನ ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಪ್ರತಿಭಾ ದಿನಾಚರಣೆ “ಸಂಭ್ರಮ”ವನ್ನು ಉದ್ಘಾಟಿಸಿ ಮಾತನಾಡಿದರು. […]
ಬಿ. ಬಿ. ಹೆಗ್ಡೆ ಕಾಲೇಜು: ಸಂಸ್ಥಾಪನಾ ದಿನ
ಕುಂದಾಪುರ (ಮೇ 10): ಇಲ್ಲಿನ ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಸಂಸ್ಥಾಪನಾ ದಿನವನ್ನು ನಿವೃತ್ತ ತೋಟಗಾರಿಕಾ ಇಲಾಖೆಯ ಜಂಟಿ ನಿರ್ದೇಶಕ ಶ್ರೀ ಹೆಚ್. ಜಯಶೀಲ ಶೆಟ್ಟಿ, ಉದ್ಘಾಟಿಸಿದರು .ಸಂಸ್ಥೆ ಸ್ಥಾಪನೆಯಾದ ತದನಂತರದಲ್ಲಿನ ಅಭಿವೃದ್ಧಿ ಅವಿಸ್ಮರಣೀಯ ಎಂದು ಹೇಳಿದರು. ಜಿಲ್ಲಾ ಪಂಚಾಯತ್ ನಿವೃತ್ತ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶ್ರೀ ಎಸ್.ಎ. ಪ್ರಭಾಕರ್ ಶರ್ಮ, ಮುಖ್ಯ ಅತಿಥಿ ನೆಲೆಯಲ್ಲಿ ಮಾತನಾಡಿ ಸಂಸ್ಥೆ ಸ್ಥಾಪನೆಯಾದ ಹದಿನಾಲ್ಕು ವರ್ಷಗಳಲ್ಲಿ ಹಲವು ಕ್ಷೇತ್ರಗಳಲ್ಲಿ ಮಾಡಿದ […]
ಡಾ| ಬಿ. ಬಿ. ಹೆಗ್ಡೆ ಕಾಲೇಜು, ಕುಂದಾಪುರ : ವಾರ್ಷಿಕ ಸಂಚಿಕೆ ‘ಶಿಖರ’ ಅನಾವರಣ
ಕುಂದಾಪುರ, (ಮೇ, 29): ಮಂಗಳೂರು ವಿಶ್ವವಿದ್ಯಾನಿಲಯ ಅಂತರ್ ಕಾಲೇಜು ಮಟ್ಟದ ವಾರ್ಷಿಕ ಸಂಚಿಕೆ ಸ್ಪರ್ಧೆಯಲ್ಲಿ ಗಮನ ಸೆಳೆದ ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ 2022-23 ನೇ ಸಾಲಿನ ವಾರ್ಷಿಕ ಸಂಚಿಕೆ ‘ಶಿಖರ’ ಸಂಚಿಕೆಯನ್ನು ಕಾಲೇಜಿನ ಸಂಸ್ಥಾಪನಾ ದಿನದ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ನಿವೃತ್ತ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶ್ರೀ ಎಸ್.ಎ. ಪ್ರಭಾಕರ್ ಶರ್ಮ ರವರು ಅನಾವರಣಗೊಳಿಸಿ ಶುಭ ಹಾರೈಸಿದರು . ನಿವೃತ್ತ ತೋಟಗಾರಿಕಾ ಇಲಾಖೆಯ ಜಂಟಿ ನಿರ್ದೇಶಕ […]
ಬಿ. ಬಿ. ಹೆಗ್ಡೆ ಕಾಲೇಜು-ಅಖಿಲ ಭಾರತ ಸಾಫ್ಟ್ ಬಾಲ್ ಪಂದ್ಯಾಟ: ಮಂಗಳೂರು ವಿ.ವಿ. ತಂಡ ಪ್ರಕಟ
ಕುಂದಾಪುರ (ಮೇ 10): ಕುಂದಾಪುರದ ಪ್ರತಿಷ್ಠಿತ ಡಾ| ಬಿ.ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನಲ್ಲಿ ಮೇ 05 ರಿಂದ 10ರ ತನಕ ನಡೆದ ಮಂಗಳೂರು ವಿ.ವಿ. ವ್ಯಾಪ್ತಿಯ ಕಾಲೇಜುಗಳ ಕ್ರೀಡಾಪಟುಗಾಗಿ ಆಯೋಜಿಸಿದ ಸಾಫ್ಟ್ ಬಾಲ್ ಆಯ್ಕೆ ಶಿಬಿರದಲ್ಲಿ 14 ಕ್ರೀಡಾಪಟುಗಳು ಆಯ್ಕೆಯಾಗಿ ಮಂಗಳೂರು ವಿ.ವಿ. ತಂಡವನ್ನು ಪ್ರತಿನಿಧಿಸಲಿದ್ದಾರೆ. ಮೂಡುಬಿದಿರೆಯ ಮಹಾವೀರ ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕರಾದ ಶ್ರೀ ಅಕ್ಷಿತ್ ರೈ ಈ ಸಾಫ್ಟ್ ಬಾಲ್ ತಂಡದ ವ್ಯವಸ್ಥಾಪಕರಾಗಿ ಕಾರ್ಯನಿರ್ವಹಿಸಲ್ಲಿದ್ದು, […]
ಬಿ. ಬಿ. ಹೆಗ್ಡೆ ಕಾಲೇಜು: ಪ್ರತಿಭಾ ದಿನಾಚರಣೆ ಸಮಾರೋಪ
ಕುಂದಾಪುರ (ಮೇ 09): ಇಲ್ಲಿನ ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಪ್ರತಿಭಾ ದಿನಾಚರಣೆಯ ಸಮಾರೋಪ ಸಮಾರಂಭದಲ್ಲಿ ತೀರ್ಪುಗಾರರಾದ ಕುಂದಾಪುರದ ವಸಂತ ನಾಟ್ಯಲಯದ ನೃತ್ಯ ತರಬೇತುದಾರರಾದ ಶ್ರೀಮತಿ ಪ್ರವಿತಾ ಅಶೋಕ್, ಮಂದರ್ತಿ ದುರ್ಗಾಪರಮೇಶ್ವರಿ ಪದವಿ ಪೂರ್ವ ಕಾಲೇಜಿನ ಸಂಖ್ಯಾಶಾಸ್ತ್ರ ಉಪನ್ಯಾಸಕ ಶ್ರೀ ಪ್ರಭಾಕರ್ ಶೆಟ್ಟಿಗಾರ್ ಹಾಗೂ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಳ ಪದವಿ ಪೂರ್ವ ಕಾಲೇಜಿನ ರಾಜ್ಯಶಾಸ್ತ್ರ ಉಪನ್ಯಾಸಕಿ ಶ್ರೀಮತಿ ಸಂಗೀತಾ ಶೆಟ್ಟಿ ಉಪಸ್ಥಿತರಿದ್ದು, ಅನಿಸಿಕೆಯ ಮಾತುಗಳನ್ನಾಡಿದರು. […]










