ಕುಂದಾಪುರ(ಎ,06): : ಕುಂದಾಪುರ ಎಜುಕೇಶನ್ ಸೊಸೈಟಿ ಪ್ರವರ್ತಿತ ಎಚ್.ಎಮ್.ಎಮ್ ಆಂಗ್ಲ ಮಾಧ್ಯಮ ಪ್ರಾಥಮಿಕ ಮತ್ತು ವಿ.ಕೆ.ಆರ್ ಆಚಾರ್ಯ ಸ್ಮಾರಕ ಆಂಗ್ಲ ಮಾಧ್ಯಮ ಪ್ರೌಢಶಾಲೆಗಳಲ್ಲಿ, ವಿದ್ಯಾರ್ಥಿಗಳು ಬೇಸಿಗೆಯ ರಜಾ ದಿನಗಳನ್ನು ಅರ್ಥಪೂರ್ಣವಾಗಿ ಕಳೆಯುವ ಮತ್ತು ಹಳ್ಳಿ ಜನರ ಬದುಕಿನ ಸೊಗಡನ್ನು ಪರಿಚಯಿಸುವ ಉದ್ದೇಶದೊಂದಿಗೆ ಪ್ರಪ್ರಥಮ ಬಾರಿಗೆ ಪಾರಂಪರಿಕ ವಾತಾವರಣದಲ್ಲಿ ಕಲಿಕಾನುಭವ ಒದಗಿಸುವ ಅಪರೂಪದ ಒಂದು ವಿಭಿನ್ನ ಮತ್ತು ವಿನೂತನವಾದ 10 ದಿನಗಳ ಬೇಸಿಗೆ ಶಿಬಿರ ” ಪ್ಯಾಟಿ ಮಕ್ಕಳ್ ಹಳ್ಳಿ ಟೂರ್ […]
Author: KundaVahini Editor
ಮಿಲಾಗ್ರಿಸ್ ಕಾಲೇಜನಲ್ಲಿ ನಂಗೆಲಿಯ ರೂಪಕ
ಉಡುಪಿ(ಎ,06): ಮಿಲಾಗ್ರಿಸ್ ಕಾಲೇಜು ಕಲ್ಯಾಣಪುರದಲ್ಲಿ ಎಪ್ರಿಲ್ 06 ರ ಗುರುವಾರ ಅಪರಾಹ್ನ ನೆಡೆದ ವಿದ್ಯಾರ್ಥಿ ದರ್ಬಾರ್ ಕಾರ್ಯಕ್ರಮದಲ್ಲಿ ಕೇರಳದಲ್ಲಿ 19 ನೇ ಶತಮಾನದ ಸಂದರ್ಭದಲ್ಲಿ ಇದ್ದ ನಂಗೆಲಿಯ ಎನ್ನುವ ಮಹಿಳೆಯ ಮೂಲಕ ಮೊಲೆ ತೆರಿಗೆ ಕಾನೂನು ನಿಂತು ಹೋದ ಬಗ್ಗೆ ಕಾಲೇಜ್ ನ ಪ್ರಾಂಗಣದಲ್ಲಿ ದಲ್ಲಿ ಉಡುಪಿಯ ರೋಬೋ ಸಾಫ್ಟ್ ಉದ್ಯೋಗಿ ಬಿ. ಇ ಪದವೀಧರೆ ಹೊನ್ನಾವರದ ಚಿಕ್ಕನಕೊಡಿಯ ಕುಮಾರಿ ಪವಿತ್ರ ರೂಪಕದ ಮೂಲಕ ವಿದ್ಯಾರ್ಥಿಗಳಿಗೆ ಅಭಿನಯ ಮಾಡಿ ತೋರಿಸಿದರು. […]
ಹೆಮ್ಮಾಡಿಯಲ್ಲಿ ಎ.09 ರಂದು ಸ್ವಯಂ ಪ್ರೇರಿತ ರಕ್ತದಾನ ಶಿಬಿರ
ಹೆಮ್ಮಾಡಿ(ಎ,06): ಮೊಗವೀರ ಯುವ ಸಂಘಟನೆ (ರಿ.), ಉಡುಪಿ ಜಿಲ್ಲೆ, ಹೆಮ್ಮಾಡಿ ಘಟಕ, ಜಿ. ಶಂಕರ್ ಫ್ಯಾಮಿಲಿ ಟ್ರಸ್ಟ್ (ರಿ.), ಅಂಬಲಪಾಡಿ, ಹೆಮ್ಮಾಡಿ ಮೀನುಗಾರರ ಪ್ರಾಥಮಿಕ ಸಹಕಾರಿ ಸಂಘ ಹೆಮ್ಮಾಡಿ, ರಕ್ತನಿಧಿ ಕೆಎಂಸಿ ಆಸ್ಪತ್ರೆ ಮಣಿಪಾಲ ಇವರ ನೇತೃತ್ವದಲ್ಲಿ ಏಪ್ರಿಲ್, 09 ರ ಭಾನುವಾರ ಬೆಳಿಗ್ಗೆ 8 ಗಂಟೆಯಿಂದ ಮಧ್ಯಾಹ್ನ 2 ಗಂಟೆಯ ತನಕ ಹೆಮ್ಮಾಡಿ ಮೀನುಗಾರರ ಪ್ರಾಥಮಿಕ ಸಹಕಾರಿ ಸಂಘದ ಮತ್ಸಜ್ಯೋತಿ ಸಭಾಂಗಣದಲ್ಲಿ ನಡೆಯಲಿದೆ. ಶ್ರೀ ಲಕ್ಷ್ಮೀನಾರಾಯಣ ರಿಕ್ಷಾ ಚಾಲಕರು […]
ಜೆಸಿಐ ಬ್ರಹ್ಮಾವರ ಸೇವಾಮೇ : ಸೆಲ್ಯೂಟ್ ದಿ ಸೈಲೆಂಟ್ ಸ್ಟಾರ್ ಸನ್ಮಾನ ಕಾರ್ಯಕ್ರಮ
ಬ್ರಹ್ಮಾವರ (ಎ.,06): ಇಲ್ಲಿನ ಜೆಸಿಐ ಬ್ರಹ್ಮಾವರ ಸೇವಾಮೆ ಬ್ರಹ್ಮಾವರ ಸಂಸ್ಥೆಯ ಸೆಲ್ಯೂಟ್ ದಿ ಸೈಲೆಂಟ್ ಸ್ಟಾರ್ ಕಾರ್ಯಕ್ರಮದ ಅಡಿಯಲ್ಲಿ ಇತ್ತೀಚೆಗೆ ಬ್ರಹ್ಮಾವರದ ಘನ ಮತ್ತು ದ್ರವ ಸಂಪನ್ಮೂಲ ಘಟಕ ದಲ್ಲಿ ಸೇವೆ ಮಾಡುತ್ತಿರುವ 6 ಜನ ಸ್ವಚ್ಚತಾ ಕಾರ್ಯಕರ್ತೆಯರಿಗೆ ಅವರ ಸೇವೆಯನ್ನು ಗುರುತಿಸಿ ಗೌರವಿಸಿದರು. ಕಾರ್ಯಕ್ರಮದಲ್ಲಿ ವಾರಂಬಳ್ಳಿ ಗ್ರಾಮ ಪಂಚಾಯತ್ ಅದ್ಯಕ್ಷರಾದ ಶ್ರೀಮತಿ ನಾಗವೇಣಿ ಪಂಡರಿನಾಥ್, ಉಪಾದ್ಯಕ್ಷರಾದ ದೇವಾನಂದ್ ನಾಯಕ್ ಹಂದಾಡಿ ಪಂಚಾಯತ್ ಉಪಾದ್ಯಕ್ಷರಾದ ಶ್ರೀಮತಿ ಶೋಭಾ ಪೂಜಾರಿ , […]
ಬದುಕಿನ ಸ್ವಯಂ ವಿಶ್ಲೇಷಣೆ ಮುಖ್ಯ : ನರೇಂದ್ರ ಎಸ್ ಗಂಗೊಳ್ಳಿ
ಗಂಗೊಳ್ಳಿ(ಏ .01): ನಮ್ಮ ಬದುಕಿನ ಸ್ವಯಂ ವಿಶ್ಲೇಷಣೆ ಮಾಡಿಕೊಂಡಾಗ ಆತ್ಮತೃಪ್ತಿ ಸಂತೋಷ ಕಾಣಸಿಗುವಂತಾಗಬೇಕು ಅದು ನಿಜವಾದ ಬದುಕಿನ ಸಾರ್ಥಕತೆ ಎಂದು ಸರಸ್ವತಿ ವಿದ್ಯಾಲಯ ಪದವಿ ಪೂರ್ವ ಕಾಲೇಜಿನ ಉಪನ್ಯಾಸಕ ಯುವ ಬರಹಗಾರ ನರೇಂದ್ರ ಎಸ್ ಗಂಗೊಳ್ಳಿ ಅಭಿಪ್ರಾಯಪಟ್ಟರು. ಅವರು ಗಂಗೊಳ್ಳಿಯ ಶ್ರೀ ಗುರು ಜ್ಯೋತಿ ಸ್ಪೋರ್ಟ್ಸ್ ಕ್ಲಬ್ ಇದರ 39ನೇ ವಾರ್ಷಿಕೋತ್ಸವ ಮತ್ತು ಗುರು ಜ್ಯೋತಿ ಶಿಕ್ಷಣ ನಿಧಿ ಯೋಜನೆಯ 22ನೇ ವರ್ಷದ ವಿದ್ಯಾರ್ಥಿ ವೇತನ ವಿತರಣಾ ಸಮಾರಂಭದ ಅಧ್ಯಕ್ಷತೆ […]
ಗಂಗೊಳ್ಳಿ:ಡಾ.ಬಿ.ಆರ್ ಅಂಬೇಡ್ಕರ್ ಜನ್ಮ ದಿನಾಚರಣೆಯ ಪ್ರಯುಕ್ತ ಪ್ರಬಂಧ ಸ್ಪರ್ಧೆ
ಗಂಗೊಳ್ಳಿ(ಏ,01): ಡಾ.ಬಿ.ಆರ್ ಅಂಬೇಡ್ಕರ್ ಯುವಕ ಮಂಡಲ(ರಿ),ಅಮೃತಾ ಯುವತಿ ಮಂಡಲ (ರಿ) ಮತ್ತು ಅರ್ಚನಾ ಮಹಿಳಾ ಮಂಡಲ ಮೇಲ್ ಗಂಗೊಳ್ಳಿ ಇವರ ಸಂಯುಕ್ತ ಆಶ್ರಯದಲ್ಲಿ ಡಾ.ಬಿ.ಆರ್ ಅಂಬೇಡ್ಕರ್ ಅವರ 132ನೇ ಜನ್ಮ ದಿನಾಚರಣೆಯ ಪ್ರಯುಕ್ತ ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಯಲ್ಲಿನ ಪದವಿ ಪೂರ್ವ ಮತ್ತು ಪದವಿ ಕಾಲೇಜಿನ ವಿದ್ಯಾರ್ಥಿಗಳಿಗಾಗಿ ಪ್ರಬಂಧ ಸ್ಪರ್ಧೆಯನ್ನು ಏರ್ಪಡಿಸಲಾಗಿದೆ. ವಿಷಯ : ನನ್ನ ಅರಿವಿನ ಅಂಬೇಡ್ಕರ್. ಸ್ಪರ್ಧೆಯ ನಿಯಮಗಳು *2022-23 ನೇ ಶೈಕ್ಷಣಿಕ ಸಾಲಿನಲ್ಲಿ ಉಡುಪಿ […]
ಐ.ಎಂ.ಜೆ. ವಿದ್ಯಾ ಸಂಸ್ಥೆ: ಸಂಸ್ಥಾಪಕ ದಿನದ ಅಂಗವಾಗಿ ವಿಸ್ಮಯ ಕಾರ್ಯಕ್ರಮ
ಕುಂದಾಪುರ(ಏ,01): ಏಪ್ರಿಲ್ 10 ರಂದು ಐ.ಎಂ.ಜೆ. ವಿದ್ಯಾ ಸಂಸ್ಥೆಯಲ್ಲಿ ‘ಸಂಸ್ಥಾಪಕ ದಿನ’ವನ್ನು ಆಚರಿಸುವ ಅಂಗವಾಗಿ ಕುಂದಾಪುರ ‘ಮಾನಸ- ಜ್ಯೋತಿ’ ವಿಕಲಚೇತನ ಮಕ್ಕಳಿಗೆ ನಮ್ಮ ಐ. ಎಂ. ಜೆ. ವಿದ್ಯಾ ಸಂಸ್ಥೆ ಬೋಧಕ- ವಿದ್ಯಾರ್ಥಿವೃಂದದವರು ‘ವಿಸ್ಮಯ’ ಕಾರ್ಯಕ್ರಮದಡಿ ವಿವಿಧ ಪ್ರದರ್ಶನದಿಂದ ಮಕ್ಕಳನ್ನು ರಂಜಿಸಿದರು. ಮಾನಸ ಜ್ಯೋತಿ ಸಂಸ್ಥೆಯ ವ್ಯವಸ್ಥಾಪಕರಾದ ಶ್ರೀಮತಿ ಶೋಭಾ ಮಧ್ಯಸ್ಥ ಅವರು ಈ ಸಂಸ್ಥೆಯನ್ನು ಪ್ರಸ್ತುತ ನಿರ್ವಹಿಸುತ್ತಿದ್ದಾರೆ. ಈ ಸಂಸ್ಥೆಯಲ್ಲಿ 2011 ರಿಂದ ನೆದರ್ಲ್ಯಾಂಡಿನ ಮಾರ್ಟೆ ವಾನ್ ಡೆನ್ ಬ್ಯಾಂಡ್ ನವರು ಕಾರ್ಯನಿರ್ವಹಿಸುತ್ತಿದ್ದಾರೆ. ಈ ಕಾರ್ಯಕ್ರಮದಲ್ಲಿ ಐ.ಎಂ.ಜೆ ವಿದ್ಯಾ ಸಂಸ್ಥೆಯ […]
ಎಚ್. ಎಮ್. ಎಮ್.ಆಂಗ್ಲ ಮಾಧ್ಯಮ ಶಾಲೆ: ಗ್ರಾಜುಯೇಷನ್ ಡೇ ಆಚರಣೆ
ಕುಂದಾಪುರ( ಏ.01): ಇಲ್ಲಿನ ಕುಂದಾಪುರ ಎಜುಕೇಶನ್ ಸೊಸೈಟಿ ಪ್ರವರ್ತಿತ ಎಚ್.ಎಂ.ಎಂ ಆಂಗ್ಲ ಮಾಧ್ಯಮ ಶಾಲೆಯ ಪೂರ್ವ ಪ್ರಾಥಮಿಕ ವಿಭಾಗದ ಯುಕೆಜಿ ವಿದ್ಯಾರ್ಥಿಗಳಿಗೆ ಗ್ರಾಜುಯೇಷನ್ ಡೇ ನಡೆಯಿತು . ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಡಾIಬಿ. ಬಿ ಹೆಗ್ಡೆ ಕಾಲೇಜು ಕುಂದಾಪುರ ಇಲ್ಲಿನ ವ್ಯವಹಾರ ನಿರ್ವಹಣಾ ವಿಭಾಗದ ಮುಖ್ಯಸ್ಥರಾದ ನಂದಾ ರೈ ಮಕ್ಕಳ ವ್ಯಕ್ತಿತ್ವವನ್ನು ರೂಪಿಸುವಲ್ಲಿ ಶಿಕ್ಷಕರ ಜೊತೆ ಪೋಷಕರ ಪಾತ್ರವೂ ಅತಿ ಮಹತ್ವವಾದದ್ದು ಎಂದು ತಿಳಿಸಿದರು. ಸಂಸ್ಥೆಯ ಪ್ರಾಂಶುಪಾಲರಾದ ಡಾ. ಚಿಂತನಾ […]
ಶ್ರೀ ಸಸಿಗೋಳಿ ದೈವಸ್ಥಾನದ ಸ್ವಾಗತ ಗೋಪುರ ಲೋಕಾರ್ಪಣೆ
ಶ್ರೀ ನಂದಿಕೇಶ್ವರ ಸಹಪರಿವಾರ ದೈವಸ್ಥಾನಕ್ಕೆ ರಾಜೀವಿ ಹರೀಶ್ ಶೆಟ್ಟಿ, ಕೋಡ್ಗಿ, ಸಿದ್ದಾಪುರ ಇವರು ಕೊಡುಗೆಯಾಗಿ ನೀಡಿದ ಸ್ವಾಗತ ಗೋಪುರ ಲೋಕಾರ್ಪಣೆ ಇತ್ತೀಚೆಗೆ ನಡೆಯಿತು. ಕಾರ್ಯಕ್ರಮದಲ್ಲಿ ವಿಜಯ ಕುಮಾರ ಅಡಿಗ ಕಕ್ಕುಂಜೆ, ವೇದಮೂರ್ತಿ ಶ್ರೀಪತಿ ಭಟ್ ಕಂಬಿಕಲ್ಲು, ಹೆಚ್.ಬಿ ರಾಜೀವ ಶೆಟ್ಟಿ, ಶಿವರಾಮ ಶೆಟ್ಟಿ ಪಾತ್ರಿಗಳು ಕಕ್ಕುಂಜೆ, ಹೆರಿಯಣ್ಣ ಶೆಟ್ಟಿ ಹರ್ಕಾಡಿ, ಸುಕೇಶ್ ಶೆಟ್ಟಿ ಹೊಸಮಠ, ದಿನಕರ ಶೆಟ್ಟಿ ಹರ್ಕಾಡಿ, ಸುಧಾಕರ ಶೆಟ್ಟಿ ಹರ್ಕಾಡಿ, ಪ್ರಶಾಂತ್, ರತ್ನಾಕರ ಶೆಟ್ಟಿ ದೊಡ್ಮನೆ, ಪ್ರಶಾಂತ […]
ಕುಂದಾಪುರ : ಏ.05 ರಂದು ವೀಳ್ಯ ಶಾಸ್ತ್ರ ಹಾಗೂ ವಧು-ವರರಿಗೆ ಉಡುಗೆ ತೊಡುಗೆಗಳ ವಿತರಣಾ ಕಾರ್ಯಕ್ರಮ
ಕೋಟೇಶ್ವರ (ಮಾ.29): ಜಿ. ಶಂಕರ್ ಫ್ಯಾಮಿಲಿ ಟ್ರಸ್ಟ್ (ರಿ) ಅಂಬಲಪಾಡಿ ಹಾಗೂ ಮೊಗವೀರ ಯುವ ಸಂಘಟನೆ(ರಿ) ಉಡುಪಿ ಜಿಲ್ಲೆ ಇವರ ಜಂಟಿ ಆಶ್ರಯದಲ್ಲಿ ಮೇ 03 ರಂದು ನಡೆಯಲಿರುವ ಉಚಿತ ಸಾಮೂಹಿಕ ವಿವಾಹ ಕಾರ್ಯಕ್ರಮದ ಪೂರ್ವಭಾವಿಯಾಗಿ ಸಾಮೂಹಿಕ ವೀಳ್ಯ ಶಾಸ್ತ್ರ ಕಾರ್ಯಕ್ರಮ ಹಾಗೂ ವಧು- ವರರಿಗೆ ಉಡುಗೆ ತೊಡುಗೆಗಳ ವಿತರಣಾ ಕಾರ್ಯಕ್ರಮ ಕುಂದಾಪುರದ ಚಿಕ್ಕನ್ ಸಾಲ್ ರಸ್ತೆ ಬಳಿ ಇರುವ ಮೊಗವೀರ ಭವನದಲ್ಲಿ ಏಪ್ರಿಲ್.05 ರoದು ನಡೆಯಲಿದೆ. ಮಾ.28 ರಂದು […]










