ಕುಂದಾಪುರ (ಜ,23): ಕರ್ನಾಟಕ ರಾಜ್ಯ ಮಾಸ್ಟರ್ಸ್ ಗೇಮ್ಸ್ ಅಸೋಸಿಯೇಷನ್(ರಿ.) ಇವರು ಶಿವಮೊಗ್ಗದಲ್ಲಿ ಆಯೋಜಿಸಿದ ರಾಜ್ಯಮಟ್ಟದ ಈಜು ಸ್ಪರ್ಧೆಯಲ್ಲಿ ಕುಂದಾಪುರ ತಾಲೂಕಿನ ಗುಜ್ಜಾಡಿ ಗ್ರಾಮದ ಕಂಚುಗೋಡಿನ ನಿವಾಸಿ ನಾಗರಾಜ ಖಾರ್ವಿ ಮತ್ತು ಕೃಪಾ ದಂಪತಿ ಚಿನ್ನದ ಪದಕದೊಂದಿಗೆ ರಾಷ್ಟ್ರಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆಯಾಗಿದ್ದಾರೆ. ಪದವೀಧರ ಪ್ರಾಥಮಿಕ ಶಿಕ್ಷಕ ನಾಗರಾಜ ಖಾರ್ವಿ 50 ಮೀ. ಬ್ರೆಸ್ಟ್ ಸ್ಟ್ರೋಕ್ ಚಿನ್ನದ ಪದಕ 100 ಮೀ. ಬ್ರೆಸ್ಟ್ ಸ್ಟ್ರೋಕ್ ಚಿನ್ನದ ಪದಕ 200 ಮೀ. ಬ್ರೆಸ್ಟ್ ಸ್ಟ್ರೋಕ್ […]
Author: KundaVahini Editor
ಎಕ್ಸಲೆಂಟ್ ಪ್ರೌಢಶಾಲೆ ಸುಣ್ಣಾರಿಯಲ್ಲಿ ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳಿಗೆ ಪರೀಕ್ಷಾ ಸಿದ್ಧತಾ ಕಾರ್ಯಗಾರ
ಕುಂದಾಪುರ (ಜ, 20) : ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳಿಗೆ ಪರೀಕ್ಷಾ ಸಿದ್ಧತಾ ಕರ್ಯಗಾರವು ಜೆ.ಸಿ.ಐ ಇವರ ಸಹಭಾಗಿತ್ವದಲ್ಲಿ ಎಕ್ಸಲೆಂಟ್ ಪ್ರೌಢಶಾಲೆ, ಸುಣ್ಣಾರಿ ಇಲ್ಲಿ ನಡೆಯಿತು. ಮುಖ್ಯ ಅತಿಥಿಗಳಾಗಿ ಭಾಗವಹಿಸಿದ ಡಾ. ಜಗದೀಶ್ ಜೋಗಿಯವರು ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳನ್ನು ಹುರಿದುಂಬಿಸಿ ವಿದ್ಯಾರ್ಥಿಗಳ ಪರೀಕ್ಷಾ ಆತಂಕವನ್ನು ದೂರಮಾಡುತ್ತಾ ಸಮಯವು ಅತ್ಯಂತ ಮಹತ್ವಪೂರ್ಣವಾಗಿದ್ದು, ಕಳೆದು ಹೋದ ಸಮಯ ಮರಳಿಬಾರದು, ಎನ್ನುವ ಕಟುಸತ್ಯವನ್ನು ಅರಿತು ಶಿಸ್ತುಬದ್ಧವಾದ ಅಧ್ಯಯನ ನಡೆಸಬೇಕೆಂದರು. ವಿದ್ಯಾರ್ಥಿಗಳು ಆತ್ಮವಿಶ್ವಾಸದಿಂದ ಅಧ್ಯಯನ ವೇಳಾಪಟ್ಟಿ ಹಾಕಿಕೊಂಡು ನಿರಂತರ ಓದುವುದು […]
ಶಿಕ್ಷ ಪ್ರಭಾ ಅಕಾಡೆಮಿ ಕುಂದಾಪುರ : ಸಿಎಸ್ ಪರೀಕ್ಷೆಯಲ್ಲಿ ಶ್ರೇಷ್ಠ ಸಾಧನೆ.
ಕುಂದಾಪುರ (ಜ,20) : ಕುಂದಾಪುರ ಕುಂದೇಶ್ವರ ರಸ್ತೆಯ ಸಿರಿ ಬಿಲ್ಡಿಂಗ್ ನಲ್ಲಿ ಕಾರ್ಯನಿರ್ವಹಿಸುತ್ತಿರುವ ಶಿಕ್ಷ ಪ್ರಭಾ ಅಕಾಡೆಮಿ ಆಫ್ ಕಾಮರ್ಸ್ ಎಜುಕೇಶನ್ ಸಿಎ/ಸಿಎಸ್ ತರಬೇತಿ ಸಂಸ್ಥೆ (ಸ್ಪೇಸ್) ಇದರ ವಿದ್ಯಾರ್ಥಿಗಳು ಇನ್ಸ್ಟಿಟ್ಯೂಟ್ ಆಫ್ ಕಂಪನಿ ಸೆಕ್ರೆಟರಿ ಆಫ್ ಇಂಡಿಯಾ ಜನವರಿ 2023 ರಲ್ಲಿ ನಡೆಸಿದ ಸಿಎಸ್ ಫೌಂಡೇಶನ್ (ಸಿಎಸ್ಇಇಟಿ) ಪರೀಕ್ಷೆ ಬರೆದ 14 ವಿದ್ಯಾರ್ಥಿಗಳಲ್ಲಿ 12 ವಿದ್ಯಾರ್ಥಿಗಳು ತೇರ್ಗಡೆ ಹೊಂದುವುದರ ಮೂಲಕ ರಾಷ್ಟ್ರೀಯ ಮಟ್ಟದಲ್ಲಿ ಸಾಧನೆಗೈದಿದ್ದಾರೆ. ಸಂಸ್ಥೆಯ ವಿದ್ಯಾರ್ಥಿಗಳಾದ ಪ್ರೀತನ್ […]
ನೆಂಪು: ಗುರುವಂದನೆ ಕಾರ್ಯಕ್ರಮ
ವಂಡ್ಸೆ ( ಜ,18): ಸುಮಾರು 22 ವರ್ಷ (2000/01)ರ ಸಾಲಿನಲ್ಲಿ ಸರ್ಕಾರಿ ಪ್ರೌಢಶಾಲೆ ನೆಂಪು ವಂಡ್ಸೆಯಲ್ಲಿ ವ್ಯಾಸಂಗ ಮಾಡಿದ ವಿಧ್ಯಾರ್ಥಿಗಳು ತಮಗೆ ಶಿಕ್ಷಣ ನೀಡಿದ ಅಧ್ಯಾಪಕರಿಗೆ ಗುರುವಂದನೆ ಸಲ್ಲಿಸಿದ ಅಪರೂಪದ “ಗುರುವಂದನೆ”- ಪುನರ್ಮಿಲನ ಕಾರ್ಯಕ್ರಮ ಇತ್ತೀಚೆಗೆ ಚಿತ್ತೂರಿನ ಸಕಲ ಹಾಲ್ ಅಲ್ಲಿ ನೆರವೇರಿತು.
ಮೊಗವೀರ ಭವನ – ಜ.22 ರಂದು ಸುಸಜ್ಜಿತ, ಹವಾನಿಯಂತ್ರಿತ ಸಭಾಭವನ ಉದ್ಘಾಟನೆ
ಕುಂದಾಪುರ(ಜ,18): ಮೊಗವೀರ ಮಹಾಜನ ಸೇವಾ ಸಂಘ (ರಿ) (ಬಗ್ವಾಡಿ ಹೋಬಳಿ-1941) ಮುಂಬೈ, ಕುಂದಾಪುರ ಶಾಖೆಯ ಆಡಳಿತಕ್ಕೆ ಒಳಪಟ್ಟ , ಕುಂದಾಪುರದಲ್ಲಿ ಚಿಕನ್ಸಾಲ್ ರಸ್ತೆಯಲ್ಲಿ ಪ್ರಸ್ತುತ ಜನರ ಅಭಿರುಚಿ, ಬೇಡಿಕೆಗೆ ಅನುಗುಣವಾಗಿ ಬಹುಕೋಟಿ ವೆಚ್ಚದಲ್ಲಿ ಸುಸಜ್ಜಿತ, ಹವಾನಿಯಂತ್ರಿತ ಮೊಗವೀರ ಭವನ ನಿರ್ಮಾಣವಾಗಿದ್ದು ಇದೇ ಜನವರಿ,22 ರಂದು ಉದ್ಘಾಟನೆ ಗೊಳ್ಳಲ್ಲಿದೆ. ಕೊರೋನಾ ಸಂಕಷ್ಟದ ಕಾರಣಗಳಿಂದಾಗಿ ಭವನ ನಿರ್ಮಾಣ ಕಾಮಗಾರಿ ವಿಳಂಬವಾಗಿದ್ದು ಇತ್ತೀಚೆಗೆ ಕಾಮಗಾರಿ ವೇಗ ಪಡೆದುಕೊಂಡು, ಈಗ ಅಂದುಕೊoಡ ತೆ ಮೊಗವೀರ ಭವನ […]
ಶ್ರೀ ಚೇತನ್ ಶೆಟ್ಟಿ ಕೊವಾಡಿಯವರಿಗೆ ಯುವರತ್ನ ಪ್ರಶಸ್ತಿ
ಕುಂದಾಪುರ (ಜ,13): ಸಾಹಿತ್ಯ, ಸಾಂಸ್ಕೃತಿಕ ಶೈಕ್ಷಣಿಕ ಹಾಗೂ ಸಂಶೋಧನಾ ಚಟುವಟಿಕೆಯಲ್ಲಿ ನಿರತರಾಗಿರುವ ಕುಂದಾಪುರದ ಪ್ರತಿಷ್ಠಿತ ಡಾ|ಬಿ.ಬಿ ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಉಪಪ್ರಾಂಶುಪಾಲರು ಹಾಗೂ ಕಾಲೇಜಿನ ಎನ್ಎಸ್ಎಸ್ ಕಾರ್ಯಕ್ರಮಾಧಿಕಾರಿಯಾದ ಶ್ರೀಚೇತನ್ ಶೆಟ್ಟಿ ಕೊವಾಡಿಯವರಿಗೆ ಜೆ.ಸಿ.ಐ ಕುಂದಾಪುರ ಸಿಟಿ ವತಿಯಿಂದ ಯುವ ರತ್ನ ಪ್ರಶಸ್ತಿಯನ್ನು ಜ.12 ರಂದು ವಿವೇಕಾನಂದ ಜಯಂತಿಯ ಪ್ರಯುಕ್ತ ಹಮ್ಮಿಕೊಂಡ ಯುವ ದಿನಾಚರಣೆಯ ಕಾರ್ಯಕ್ರಮದಲ್ಲಿ ಪ್ರಧಾನ ಮಾಡಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ಕೆ .ಉಮೇಶ ಶೆಟ್ಟಿ ವಹಿಸಿದ್ದರು. […]
ಶಿಕ್ಷ ಪ್ರಭ ಅಕಾಡೆಮಿ ಕುಂದಾಪುರ: ಸಿ ಎ ಪರೀಕ್ಷೆಯಲ್ಲಿ ಉತ್ಕ್ರಷ್ಟ ಸಾಧನೆ
ಕುಂದಾಪುರ(ಜ,12): ಸಿಎ/ಸಿಎಸ್ ಪ್ರೊಫೆಶನಲ್ ಕೋರ್ಸುಗಳ ಹೆಸರಾಂತ ತರಬೇತಿ ಸಂಸ್ಥೆ ಕುಂದಾಪುರ ಕುಂದೇಶ್ವರ ದೇವಸ್ಥಾನ ರಸ್ತೆಯ ಸಿರಿ ಬಿಲ್ಡಿಂಗ್ನಲ್ಲಿ ಕಾರ್ಯ ನಿರ್ವಹಿಸುತ್ತಿರುವ ಶಿಕ್ಷ ಪ್ರಭ ಅಕಾಡೆಮಿ ಆಫ್ ಕಾಮರ್ಸ್ ಎಜ್ಯುಕೇಶನ್ (ಸ್ಪೇಸ್)ನ ವಿದ್ಯಾರ್ಥಿಗಳು ಇನ್ಸ್ಟಿಟ್ಯೂಟ್ ಆಫ್ ಚಾರ್ಟ್ ಡ್ ಅಕೌಂಟೆoಟ್ಸ್ ಆಫ್ ಇಂಡಿಯ ನವೆಂಬರ್ 2022 ರಲ್ಲಿ ನೆಡೆಸಿದ ಸಿಎ ಇಂಟರ್ಮೀಡಿಯೇಟ್ ಮತ್ತು ಸಿಎ ಅಂತಿಮ ಪರೀಕ್ಷೆಯಲ್ಲಿ ಅನೇಕ ವಿದ್ಯಾರ್ಥಿಗಳು ಉತ್ತಮ ಅಂಕಗಳೊo ದಿಗೆ ತೇರ್ಗಡೆ ಹೊಂದುದರ ಮೂಲಕ ಶ್ರೇಷ್ಠ ಸಾಧನೆಗೈದಿದ್ದಾರೆ. […]
ಡಾ| ಬಿ. ಬಿ. ಹೆಗ್ಡೆ ಕಾಲೇಜು: ಎನ್.ಎಸ್.ಎಸ್. ವಾರ್ಷಿಕ ವಿಶೇಷ ಶಿಬಿರ ಬವಳಾಡಿಯಲ್ಲಿ ಸಂಪನ್ನ
ಕುಂದಾಪುರ( ಜ,6): ಬಿಜೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ, ಬವಳಾಡಿಯಲ್ಲಿ ಡಿಸೆಂಬರ್ 25ರಿಂದ ಆರಂಭಗೊoಡ ಕುಂದಾಪುರದ ಡಾ| ಬಿ.ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ಘಟಕದ ವಾರ್ಷಿಕ ವಿಶೇಷ ಶಿಬಿರದ ಸಮಾರೋಪ ಸಮಾರಂಭ ಡಿಸೆಂಬರ್ರಂ31ದು ನಡೆಯಿತು. ಬೈಂದೂರು ವಿಧಾನಸಭಾ ಕ್ಷೇತ್ರದ ಶಾಸಕರು ಹಾಗೂ ಕುಂದಾಪುರ ಎಜ್ಯುಕೇಶನ್ ಸೊಸೈಟಿಯ ಅಧ್ಯಕ್ಷರಾದ ಶ್ರೀ ಬಿ.ಎಮ್. ಸುಕುಮಾರ ಶೆಟ್ಟಿಯವರು ಸಮಾರೋಪ ಭಾಷಣ ಮಾಡಿದರು. ಕಾಲೇಜಿನ ಪ್ರಾಂಶುಪಾಲರಾದ […]
ಕ್ರಿಯೇಟಿವ್ ಪಿ ಯು ಕಾಲೇಜಿನ ನಿಧಿ .ಯು .ಆಚಾರ್ ಗೆ ಅಂತರಾಷ್ಟ್ರೀಯ ಯೋಗ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ
ಕಾರ್ಕಳ ( ಜ,06): ಅಂಡಮಾನ್ ಮತ್ತು ನಿಕೋಬಾರ್ ದ್ವೀಪದಲ್ಲಿ ಡಿ 26 ರಿಂದ 28 ವರೆಗೆ ಇಂಡಿಯಾ ಸ್ಕೂಲ್ ಗೇಮ್ಸ್ ಸ್ಪೋರ್ಟ್ಸ್ ಫೌಂಡೇಶನ್ ನ (S. G. S. D. F India) ವತಿಯಿಂದ ನಡೆಸಲಾದ ಮೂರನೇ ಅಂತರಾಷ್ಟ್ರೀಯ 19 ವರ್ಷದೊಳಗಿನ ಯೋಗ ಚಾಂಪಿಯನ್ ಶಿಪ್ ನಲ್ಲಿ ಕಾರ್ಕಳ ಕ್ರಿಯೇಟಿವ್ ಕಾಲೇಜಿನ ಪೂರ್ವ ವಿದ್ಯಾರ್ಥಿನಿ ನಿಧಿ ಯು ಆಚಾರ್ ಭಾರತವನ್ನು ಪ್ರತಿನಿಧಿಸಿ ಬಂಗಾರದ ಪದಕವನ್ನು ಗಳಿಸಿರುತ್ತಾರೆ. ನಿಧಿ ಯು ಆಚಾರ್ […]
ಹಾಡಿಗರಡಿ ದೈವಸ್ಥಾನ: ಜ.14 ಮತ್ತು15 ರಂದು ವಾರ್ಷಿಕ ಜಾತ್ರಾ ಮಹೋತ್ಸವ
ಮುಳ್ಳಿಕಟ್ಟೆ(ಜ,6): ಶ್ರೀ ಹಾಡಿಗರಡಿ ದೇವಸ್ಥಾನ ನಾಡ ಇದರ ವಾರ್ಷಿಕ ಹಾಲುಹಬ್ಬ ,ಗೆಂಡಸೇವೆ ಇದೇ ಜನವರಿ,14 ಹಾಗೂ 15 ರಂದು ನಡೆಯಲಿದೆ. ಜಾತ್ರಾ ಪ್ರಯುಕ್ತ ಧಾರ್ಮಿಕ ಸಭಾಕಾರ್ಯಕ್ರಮ , ಸಾಂಸ್ಕೃತಿಕ ಕಾರ್ಯಕ್ರಮ ಸನ್ಮಾನ ಸಮಾರಂಭ, ಪ್ರತಿಭಾ ಪುರಸ್ಕಾರ, ವಿದ್ಯಾರ್ಥಿವೇತನ ವಿತರಣೆ ಹಾಗೂ ಮಹಾಅನ್ನಸಂತರ್ಪಣೆ ನಡೆಯಲಿರುವುದೆಂದು ದೈವಸ್ಥಾನದ ಆಡಳಿತ ಮಂಡಳಿ ತಿಳಿಸಿದೆ.










