ಕುಂದಾಪುರ (ನ,26): ದೇಶದ ಮೂಲಭೂತ ಕಾನೂನಾದ ಸಂವಿಧಾನವನ್ನು ಶಾಸನಬದ್ಧವಾಗಿ ಸಮರ್ಪಿಸಿಕೊಂಡ ನವಂಬರ್ 26ನೇ ದಿನವನ್ನು ದೇಶದಾದ್ಯಂತ ಸಂವಿಧಾನ ದಿನಾಚರಣೆ ಎಂದು ಆಚರಿಸಲಾಗುತ್ತದೆ. ಈ ಹಿನ್ನೆಲೆಯಲ್ಲಿ ಸಂವಿಧಾನದ ಮಹತ್ವ ಹಾಗೂ ಪ್ರಜಾಪ್ರಭುತ್ವದ ಮೌಲ್ಯಗಳನ್ನು ದೇಶದ ಪ್ರತಿಯೊಬ್ಬ ಪ್ರಜೆಯು ತಿಳಿದುಕೊಳ್ಳಬೇಕು ಎಂದು ಕಾಲೇಜಿನ ರಾಜ್ಯಶಾಸ್ತ್ರ ಉಪನ್ಯಾಸಕ ಪ್ರವೀಣ್ ಮೊಗವೀರ ಗಂಗೊಳ್ಳಿ ಹೇಳಿದರು. ಅವರು ಕಾಲೇಜಿನಲ್ಲಿ ಎನ್ .ಎಸ್ . ಎಸ್ ಘಟಕ ಹಾಗೂ ಚುನಾವಣಾ ಸಾಕ್ಷಾರತ ಸಂಘದ ಜಂಟಿ ಆಶ್ರಯದಲ್ಲಿ ಹಮ್ಮಿಕೊಂಡ ಸಂವಿಧಾನ […]
Author: KundaVahini Editor
ಆರ್.ಎನ್. ಶೆಟ್ಟಿ ಪದವಿ ಪೂರ್ವ ಕಾಲೇಜು: ಉಪನ್ಯಾಸ ಕಾರ್ಯಕ್ರಮ
ಕುಂದಾಪುರ(ನ,24): ಇಲ್ಲಿನ ಆರ್.ಎನ್. ಶೆಟ್ಟಿ ಪದವಿ ಪೂರ್ವ ಕಾಲೇಜಿನಲ್ಲಿ ವಾಣಿಜ್ಯ ವಿಬಾಗದ ವಿದ್ಯಾರ್ಥಿಗಳಿಗಾಗಿ ಆಯೋಜಿಸಿದ ವಿಶೇಷ ಉಪನ್ಯಾಸ ಕಾರ್ಯಕ್ರಮದಲ್ಲಿ ಬೆಂಗಳೂರಿನಲ್ಲಿ ನೆಲೆಸಿರುವ ಚಾರ್ಟರ್ಡ್ ಎಕೌಟಂಟ್ ಚಿತ್ತೂರು ಶ್ರೀ ಗುರುರಾಜ್ ಶೆಟ್ಟಿಯವರು ವಿದ್ಯಾರ್ಥಿಗಳಿಗೆ ಮುಂದಿನ ವ್ಯಾಸಂಗದಲ್ಲಿ ಮತ್ತು ಔದ್ಯೋಗಿಕ ವಲಯಗಳಲ್ಲಿರುವ ವಿಫುಲವಾದ ಅವಕಾಶಗಳು ಮತ್ತು ಅವುಗಳನ್ನು ಲಭಿಸಿಕೊಳ್ಳುವುದರ ವಿವಿಧ ವಿಧಾನಗಳ ಬಗ್ಗೆ ಸವಿವರವಾದ ಮಾಹಿತಿ ನೀಡಿದರು. ಕಾಲೇಜಿನ ಪ್ರಾಂಶುಪಾಲರಾದ ಶ್ರೀ ನವೀನ್ ಕುಮಾರ ಶೆಟ್ಟಿಯವರು ಸ್ವಾಗತಿಸಿದರು. ವಾಣಿಜ್ಯ ಶಾಸ್ತ್ರ ಉಪನ್ಯಾಸಕಿ ಶ್ರೀಮತಿ ದೀಪಾ […]
ಡಾ | ಬಿ. ಬಿ. ಹೆಗ್ಡೆ ಕಾಲೇಜು: ಇoಗ್ಲೀಷ್ ಭಾಷಾ ಕಾರ್ಯಾಗಾರ
ಕುಂದಾಪುರ (ನ,24) : ಎಲ್ಲಾ ಭಾಷೆಗಳನ್ನು ಗೌರವಿಸುವುದರೊಂದಿಗೆ ಆ ಭಾಷೆಯ ಅನನ್ಯತೆಯನ್ನು ಅರ್ಥೈಸಿಕೊಳ್ಳಬೇಕು,. ಏಕೆಂದರೆ ಭಾಷೆಯ ಮೂಲಕ ಅಲ್ಲಿನ ಪ್ರಾದೇಶಿಕ ಭಿನ್ನತೆಯನ್ನು ಅರ್ಥೈಸಿಕೊಳ್ಳಲು ಸಾಧ್ಯ ಎಂದು ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲರಾದ ಪ್ರೊ| ಕೆ. ಉಮೇಶ್ ಶೆಟ್ಟಿ ಹೇಳಿದರು. ಅವರು ಇಲ್ಲಿನ ಡಾ| ಬಿ.ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಇಂಗ್ಲೀಷ್ ವಿಭಾಗದ ಆಶ್ರಯದಲ್ಲಿ ನಡೆದ ‘ಇಂಗ್ಲೀಷ್ ಆಸ್ ಎ ಸೆಕೆಂಡ್ ಲಾಂಗ್ವೇಜ್’ ಎಂಬ […]
ಡಾ | ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜು ಕುಂದಾಪುರ: ಕುಂದಗನ್ನಡ ಸಂಘ ಉದ್ಘಾಟನೆ
ಕುಂದಾಪುರ (ನ,24) : ಕುಂದಗನ್ನಡ ಭಾಷೆಯು ತನ್ನದೇ ಆದ ಸಂಸ್ಕೃತಿ ಯನ್ನು ಒಳಗೊಂಡಿದೆ. ನಮ್ಮ ತಾಯಿ ನುಡಿಯಾದ ಈ ಭಾಷೆಯು ತಾಯಿಯಷ್ಟೇ ಪ್ರಾಮುಖ್ಯವಾದುದು. ಮಂಗಳೂರು ವಿಶ್ವವಿದ್ಯಾನಿಲಯದಲ್ಲಿ ಕುಂದಗನ್ನಡ ಅಧ್ಯಯನ ಪೀಠದ ಸ್ಥಾಪನೆಯ ಈ ಸುಸಂದರ್ಭದಲ್ಲಿ ಮೊಟ್ಟ ಮೊದಲಬಾರಿಗೆ ಪದವಿ ಕಾಲೇಜೊಂದರಲ್ಲಿ ‘ಕುಂದಗನ್ನಡ ಸಂಘ’ವನ್ನು ಹುಟ್ಟುಹಾಕಿರುವುದು ಶ್ಲಾಘನೀಯ ಎಂದು ಕಾರ್ಕಳದ ವಿದ್ಯಾವರ್ಧಕ ಸಂಘ ಪ್ರೌಢಶಾಲೆಯ ಶಿಕ್ಷಕರಾದ ಪ್ರಭಾಕರ ಶೆಟ್ಟಿ ಕೊಂಡಳ್ಳಿ ಹೇಳಿದರು. ಅವರು ಇಲ್ಲಿನ ಡಾ| ಬಿ. ಬಿ. ಹೆಗ್ಡೆ ಪ್ರಥಮ […]
ಎಕ್ಸಲೆಂಟ್ ಪದವಿ ಪೂರ್ವ ಕಾಲೇಜು ಸುಣ್ಣಾರಿ: ವಾಣಿಜ್ಯ ವಿಭಾಗದಿಂದ ಕೈಗಾರಿಕಾ ಕೇಂದ್ರಗಳಿಗೆ ಭೇಟಿ
ಕುಂದಾಪುರ(ನ,24): ಇಲ್ಲಿನ ಎಕ್ಸಲೆಂಟ್ ಪದವಿ ಪೂರ್ವ ಕಾಲೇಜು ಸುಣ್ಣಾರಿ ಇದರ ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳು ಕೈಗಾರಿಕಾ ಸಂಸ್ಥೆಯ ವೀಕ್ಷಣೆ ಹಾಗೂ ಅಧ್ಯಯನ ವಿಷಯಕ್ಕೆ ಸಂಬoಧಿಸಿದoತೆ ಕೈಗಾರಿಕಾ ಕೇಂದ್ರಗಳಿಗೆ ಭೇಟಿ ನೀಡಿದರು. ಉಡುಪಿ ಜಿಲ್ಲೆಯ ಉಪ್ಪೂರಿನ ಬಳಿ ಇರುವ ಕೆ.ಎಂ.ಎಫ್ ನಂದಿನಿ ಡೈರಿ ಸ್ಥಾವರಕ್ಕೆ ವಿದ್ಯಾರ್ಥಿಗಳು ಭೇಟಿ ಕೊಟ್ಟು ಹಾಲಿನ ಪಾಶ್ಚರೀಕರಣ ಮತ್ತು ಹಾಲನ್ನು ಪ್ಯಾಕೇಟುಗಳಲ್ಲಿ ಸಂಗ್ರಹಿಸುವ ವಿಧಾನಗಳ ಬಗ್ಗೆ ತಿಳಿದುಕೊಂಡರು. ಹಾಲಿನಿಂದ ತಯಾರಾಗುವ ವಿವಿಧ ತಿಂಡಿ-ತಿನಿಸುಗಳು, ಸಂಗ್ರಹಿಸುವ ವಿಧಾನಗಳು ಹಾಗೂ […]
ಜೀವನದಲ್ಲಿ ಸೋತೆ ಇಲ್ಲ ಎಂದರೆ ಹೊಸತನಕ್ಕೆ ಪ್ರಯತ್ನಿಸಿಲ್ಲ ಎಂದರ್ಥ: ಮಧು ಬಿ.ಇ.
ಸುಣ್ಣಾರಿ( ನ ,24): ಸೋಲೆ ಗೆಲುವಿನ ಸೋಪಾನ ಎನ್ನುವ ಮಾತಿನಂತೆ ಸೋಲಿನಿಂದಾಚೆಗೆ ಬರುವುದು ಹೇಗೆ ಎಂದು ನಾವು ತಿಳಿಯಲಿಲ್ಲ ಎoದಾದರೆ ನಾವು ಗೆಲುವನ್ನು ನಿಭಾಯಿಸುವುದು ಕಷ್ಟಸಾಧ್ಯ . ಯಾವ ವ್ಯಕ್ತಿ ತನ್ನ ಜೀವನದಲ್ಲಿ ಸೋತೆ ಇಲ್ಲ ಎಂದರೆ ಅವನು ಜೀವನದ ಹೊಸತನಕ್ಕೆ ಪ್ರಯತ್ನಿಸಿಲ್ಲ ಎಂದರ್ಥ . ಈ ನಿಟ್ಟಿನಲ್ಲಿ ದೈಹಿಕ ಹಾಗೂ ಮಾನಸಿಕ ಆರೋಗ್ಯದ ಜತೆಗೆ ನಾಯಕತ್ವಗುಣ ಬೆಳೆಸಿಕೊಳ್ಳುವಲ್ಲಿ ಕ್ರೀಡೆ ಸಹಕಾರಿಯಾಗಿದೆ. ಕ್ರೀಡೆ ವ್ಯಕ್ತಿಗಳನ್ನು ಅರ್ಥ ಮಾಡಿಕೊಳ್ಳುವ ಗುಣವನ್ನು ಕಲಿಸಬಲ್ಲದು […]
ಶಿಕ್ಷ ಪ್ರಭ ಅಕಾಡೆಮಿ ಕುಂದಾಪುರ: ಸಿಎಸ್ ಪರೀಕ್ಷೆಯಲ್ಲಿ ವಿದ್ಯಾರ್ಥಿಗಳ ಅಮೋಘ ಸಾಧನೆ
ಕುಂದಾಪುರ(ನ,25): ಸಿಎ/ ಸಿಎಸ್ ಪ್ರೊಫೆಷನಲ್ ಕೋರ್ಸುಗಳ ಹೆಸರಾಂತ ತರಬೇತಿ ಸಂಸ್ಥೆ ಕುಂದಾಪುರದ ಕುಂದೇಶ್ವರ ರಸ್ತೆಯ ಸಿರಿ ಬಿಲ್ಡಿಂಗ್ ಲ್ಲಿ ಕಾರ್ಯನಿರ್ವಹಿಸುತ್ತಿರುವ ಶಿಕ್ಷ ಪ್ರಭ ಅಕಾಡೆಮಿ ಆಫ್ ಕಾಮರ್ಸ್ ಎಜುಕೇಶನ್(SPACE) ಸಂಸ್ಥೆಯ ವಿದ್ಯಾರ್ಥಿಗಳು ಇನ್ಸ್ಟಿಟ್ಯೂಟ್ ಆಫ್ ಕಂಪೆನಿ ಸೆಕ್ರೆಟರಿ ಆಫ್ ಇಂಡಿಯಾ ನಡೆಸಿದ ನವೆಂಬರ್ 2022ರ CSEET (ಸಿಎಸ್ ಫೌಂಡೇಶನ್ ) ಪರೀಕ್ಷೆಯಲ್ಲಿ 22 ವಿದ್ಯಾರ್ಥಿಗಳು ಉತ್ತಮ ಅಂಕಗಳೊಂದಿಗೆ ಉತ್ತೀರ್ಣರಾಗುವ ಮೂಲಕ ಉತ್ತಮ ಸಾಧನೆಗೈದಿದ್ದಾರೆ. ಸಂಸ್ಥೆಯ ವಿದ್ಯಾರ್ಥಿಗಳಾದ ಶಿಬಾನಿ (147), ಪೂಜಾ […]
ಸಂತ ಮೇರಿ ಮಹಾವಿದ್ಯಾಲಯ ಶಿರ್ವ: ಶೈಕ್ಷಣಿಕ ಅಧ್ಯಾಯನ ಪ್ರವಾಸ
ಶಿರ್ವ(ನ,24): ಇಲ್ಲಿನ ಶಿರ್ವ ಸಂತಮೇರಿ ಮಹಾವಿದ್ಯಾಲಯದ ಗಣಕ ವಿಜ್ಞಾನ ವಿಭಾಗ ಹಾಗೂ ಐಟಿ ಕ್ಲಬ್ ಜಂಟಿಯಾಗಿ ಜ್ಞಾನ ಮಟ್ಟವನ್ನು ಹೆಚ್ಚಿಸುವ ಸಲುವಾಗಿ ಅಧ್ಯಾಪಕರು ಹಾಗೂ ವಿದ್ಯಾರ್ಥಿಗಳು ಕೇಂಜಾರು ಶ್ರೀದೇವಿ ಸಮೂಹ ಸಂಸ್ಥೆಯಲ್ಲಿ ಏರ್ಪಡಿಸಿದ ಐಓಟಿ ಯೋಜನೆಯ ಅಭಿವೃದ್ಧಿಯ ಕಾರ್ಯಗಾರವನ್ನು ಅಧ್ಯಾಯನ ಮಾಡಲು ಇತ್ತೀಚೆಗೆ ಭೇಟಿ ನೀಡಿದರು. ಮುಖ್ಯ ಅತಿಥಿ ಮಂಗಳೂರಿನ ಐಕ್ಯೂ ಮ್ಯಾಟ್ರಿಕ್ಸ್ ನಿರ್ದೇಶಕ ಅಜಯ್ ಪ್ರಿನ್ಸ್ಟನ್ ಪಿಂಟೋ ರವರು ಕಾರ್ಯಗಾರವನ್ನು ಉದ್ದೇಶಿಸಿ ಮಾತನಾಡುತ್ತಾ , ಐಓಟಿ ಅಭಿವೃದ್ಧಿ […]
ಗಂಗೊಳ್ಳಿ: ಸರಸ್ವತಿ ವಿದ್ಯಾಲಯದಲ್ಲಿ ಸ್ವಯಂ ಅರಿವಿನ ಕಾರ್ಯಗಾರ
ಗಂಗೊಳ್ಳಿ( ನ,21): ಉತ್ತಮ ಭವಿಷ್ಯವನ್ನು ರೂಪಿಸಿಕೊಳ್ಳುವ ಮೊದಲು ಆ ಬಗೆಗೆ ನಿರ್ದಿಷ್ಟವಾದ ಪೂರ್ವ ಸಿದ್ಧತೆಯನ್ನು ಮಾಡಿಕೊಳ್ಳಬೇಕು. ಗುರಿಯ ದಿಕ್ಕಿನಲ್ಲಿ ಶ್ರಮವಹಿಸಿದರೆ ಮಾತ್ರ ಯಶಸ್ಸು ನಮ್ಮದಾಗುತ್ತದೆ ಎಂದು ಯುವ ಉದ್ಯಮಿ ಶಾರ್ಲೆಟ್ ಲೋಬೊ ಹೇಳಿದರು. ಅವರು ಇತ್ತೀಚಿಗೆ ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಪದವಿಪೂರ್ವ ಕಾಲೇಜಿನಲ್ಲಿ ಮತ್ತು ರೋಟರಿ ಕ್ಲಬ್ ಗಂಗೊಳ್ಳಿ ಹಾಗೂ ಇಂಟರಾಕ್ಟ್ ಕ್ಲಬ್ ಇವರ ಸಹಯೋಗದಲ್ಲಿ ಇಲ್ಲಿನ ಪ್ರೌಢಶಾಲಾ ವಿಭಾಗದ ಮಕ್ಕಳಿಗಾಗಿ ನಡೆದ ಸ್ವಯಂ ಅರಿವಿನ ವ್ಯಕ್ತಿತ್ವ ವಿಕಸನ ಕಾರ್ಯಗಾರದಲ್ಲಿ ಸಂಪನ್ಮೂಲ […]
ಅಂತರ್ ಜಿಲ್ಲೆ ಲಾಠಿ ತಿರುಗಿಸುವ ಸ್ಪರ್ಧೆಯಲ್ಲಿ ಯಶ್ ರಾಜ್ ಚಂದನ್ ಗೆ ಚಿನ್ನದ ಪದಕ
ಕುಂದಾಪುರ( ನ,21): ಮಹಾರಾಷ್ಟ್ರ ಲಾತೂರು ಜಿಲ್ಲೆಯ ತುಳ್ಜಾಪುರ್ ನಲ್ಲಿ ನೆಡೆದ ಅಂತರ್ ಜಿಲ್ಲೆ ಲಾಠಿ ತಿರುಗಿಸುವ ಸ್ಪರ್ಧೆಯಲ್ಲಿ 22 ಜಿಲ್ಲೆಯ ವಿದ್ಯಾರ್ಥಿಗಳು ಭಾಗವಹಿಸಿದ್ದು,ಅದರಲ್ಲಿ ಉಡುಪಿಯ ಬೈಂದೂರು ಮೂಲದ ಯಶ್ ರಾಜ್ ಚಂದನ್ ಪ್ರಥಮ ಬಹುಮಾನ ಪಡೆಯುವುದರೊಂದಿಗೆ ಚಿನ್ನದ ಪದಕ ಪಡೆದಿರುತ್ತಾರೆ. ಬೈಂದೂರು ಮೂಲದ ನಟರಾಜ್ ಚಂದನ್ ಮತ್ತು ಶಾರದಾ ಚಂದನ್ ಅವರ ಸುಪುತ್ರರಾಗಿರುವ ಯಶ್ ರಾಜ್ ಚಂದನ್ ಮಹಾರಾಷ್ಟ್ರದ ನೀಲಾಂಗದ ವಿ ಡಿ ಡಿ ನೊಬೆಲ್ ಪಬ್ಲಿಕ್ ಸ್ಕೂಲ್ ನಲ್ಲಿ […]










