ಗಂಗೊಳ್ಳಿ(ನ,8): ಸಮಾಜದ ಸಂತೋಷದಲ್ಲಿ ತನ್ನ ಸಂತೋಷವನ್ನು ಕಂಡುಕೊಳ್ಳುವುದು ನಿಜವಾದ ಬದುಕಿನ ಸಾರ್ಥಕತೆ. ವ್ಯಕ್ತಿಯ ಸಂಸ್ಕಾರ ಎನ್ನುವುದು ಅವನ ವ್ಯವಹಾರವನ್ನು ಉನ್ನತ ಮಟ್ಟಕ್ಕೆ ಕೊಂಡೊಯ್ಯುತ್ತದೆ ಎಂದು ಯುವ ಬರಹಗಾರ ಮತ್ತು ಉಪನ್ಯಾಸಕ ನರೇಂದ್ರ ಎಸ್ ಗಂಗೊಳ್ಳಿ ಅಭಿಪ್ರಾಯಪಟ್ಟರು. ಅವರು ಗಂಗೊಳ್ಳಿಯ ವೆಂಕಟೇಶ ಕೃಪಾ ಟ್ರೇಡರ್ಸ್ ಇಲ್ಲಿನ ಸರಸ್ವತಿ ವಿದ್ಯಾಲಯ ಪದವಿ ಪೂರ್ವ ಕಾಲೇಜಿನ ಗುಜ್ಜಾಡಿ ಗೋಪಾಲ ನಾಯಕ್ ರೋಟರಿ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ದೀಪಾವಳಿ ಧಮಾಕ ವಿಶೇಷ ಕೊಡುಗೆಯ ಸಮಾರೋಪ ಸಮಾರಂಭದಲ್ಲಿ ಮಾತನಾಡಿದರು. […]
Author: KundaVahini Editor
ಕಾರ್ಕಳ ಕ್ರಿಯೇಟಿವ್ ಪದವಿ ಪೂರ್ವ ಕಾಲೇಜಿನಲ್ಲಿ ಸಡಗರದ ದೀಪಾವಳಿ ಹಾಗೂ ತುಳಸಿ ಹಬ್ಬ
ಕಾರ್ಕಳ(ನ,07): ಇಲ್ಲಿನ ಕ್ರಿಯೇಟಿವ್ ಪದವಿ ಪೂರ್ವ ಕಾಲೇಜಿನಲ್ಲಿ ದೀಪಾವಳಿ ಮತ್ತು ತುಳಸಿ ಪೂಜಾ ಹಬ್ಬವನ್ನು ನ.05 ರಂದು ದ ಆಚರಿಸಲಾಯಿತು. ವಿದ್ಯಾರ್ಥಿಗಳಲ್ಲಿ ನಮ್ಮ ಪರಂಪರೆ, ಸಾಂಸ್ಕೃತಿಕ ಮೌಲ್ಯಗಳನ್ನು ತಿಳಿಯಲು ಮತ್ತು ಹಬ್ಬಗಳ ಮಹತ್ವ ತಿಳಿಯಲು ಭಾರತೀಯ ಪರಂಪರೆಯ ಹಬ್ಬಗಳು ಮಾದರಿಯಾಗಿವೆ ಎಂದು ಪ್ರಾಂಶುಪಾಲರಾದ ವಿದ್ವಾನ್ ಗಣಪತಿ ಭಟ್ ತಿಳಿಸಿದರು. ಸಂಸ್ಥಾಪಕರಲ್ಲೊಬ್ಬರಾದ ಅಶ್ವಥ್ ಎಸ್ ಎಲ್ ಮಾತನಾಡಿ ಭಾರತೀಯ ಹಬ್ಬಗಳು ವೈಜ್ಞಾನಿಕವಾಗಿಯೂ, ಸಾಂಸ್ಕೃತಿಕವಾಗಿಯೂ ಅತ್ಯಂತ ಮಹತ್ವ ಹೊಂದಿದೆ. ಆಧ್ಯಾತ್ಮಿಕವಾಗಿ ನೋಡಿದಾಗಲು ಶ್ರೇಷ್ಠ […]
ಕಾಕ೯ಳ: ಮುಳ್ಕಾಡಿನ ಸ್ವಾತಂತ್ರ್ಯ ಹೋರಾಟಗಾರ ಮುಳ್ಕಾಡು ಗಾಂಧಿ ಕಾಂತಪ್ಪ ಪೂಜಾರಿ ಮನೆಗೆ ನಾಮಫಲಕ ಅನಾವರಣ
ಕಾಕ೯ಳ(ನ,07): ಕಾಕ೯ಳ ತಾಲೂಕು ಕಡ್ತಲ ಗ್ರಾಮ ಪಂಚಾಯತ್ ವ್ಯಾಪ್ತಿಯ ಮುಳ್ಕಾಡಿನ ಸ್ವಾತಂತ್ರ್ಯ ಹೋರಾಟಗಾರರಾಗಿರುವ ಕಾಂತಪ್ಪ ಪೂಜಾರಿ ಇವರ ಮನೆಗೆ ನ.07 ರಂದು ಸ್ವಾತಂತ್ರ್ಯ ಹೋರಾಟಗಾರರ ಮನೆ ಎನ್ನುವ ನಾಮ ಫಲಕ ಅಳವಡಿಸುವ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು. ” ಸ್ವರಾಜ್ಯ 75 ” ರ 19ನೇ ಮನೆ ಯಲ್ಲಿ ಕನ್ನಡ ಸಾಹಿತ್ಯ ಪರಿಷತ್ ಉಡುಪಿ ಜಿಲ್ಲೆ ಗೌರವ ಕಾಯ೯ದಶಿ೯ಯವರಾಗಿರುವ ಶ್ರೀ ನರೇಂದ್ರ ಕುಮಾರ್ ಕೋಟ ಇವರು ನಾಮ ಫಲಕ ಅನಾವರಣ ನೆರವೇರಿಸಿ ಮಾತನಾಡಿದರು.ರಾಷ್ಟ್ರ […]
ಶಿರ್ವ: ಕಮಾಂಡಿಂಗ್ ಆಫೀಸರ್ ಕರ್ನಲ್ ಆರ್ಕೆ ಸಿಂಗ್ ಭೇಟಿ
ಶಿರ್ವ(ನ,7): ಇಲ್ಲಿನ ಶಿರ್ವ ಸಂತ ಮೇರಿ ವಿದ್ಯಾಲಯಕ್ಕೆ 21 ಕರ್ನಾಟಕ ಬೆಟಾಲಿಯನ್ ಎನ್ ಸಿಸಿ, ಉಡುಪಿ ಕಮಾಂಡಿಂಗ್ ಆಫೀಸರ್ ಕರ್ನಲ್ ಆರ್ಕೆ ಸಿಂಗ್ ಅವರ ಭೇಟಿ ನೀಡಿದರು. ಯುವ ಸೇನಾದಳದ ಕೆಡೆಟ್ಗಳನ್ನು ಉದ್ದೇಶಿಸಿ ಮಾತನಾಡುತ್ತಾ ವ್ಯಕ್ತಿತ್ವ ವಿಕಸನ ಹಾಗೂ ನಾಯಕತ್ವ ಗುಣಗಳನ್ನು ಬೆಳೆಸುವಲ್ಲಿ ಎನ್ ಸಿಸಿ ಸಹಾಯಕಾರಿ. ಎನ್ಸಿಸಿ ತರಬೇತಿಯಿಂದ ಕ್ಯಾಡೆಡ್ಗಳಲ್ಲಿ ದೇಶ ಸೇವೆ ಹಾಗೂ ಸಾಮಾಜಿಕ ಸೇವೆ ಮಾಡಲು ಪ್ರೇರೇಪಿಸುತ್ತದೆ. ಶಿಸ್ತುಬದ್ಧವಾದ ಜೀವನವನ್ನು ನಡೆಸಲು, ಉನ್ನತ ಉದ್ಯೋಗ ಪಡೆಯಲು ಕ್ಯಾಡೆಡ್ಗಳಿಗೆ ಎನ್ಸಿಸಿ […]
ವಿದ್ಯಾರ್ಥಿಗಳೇ ದೇಶದ ಶಕ್ತಿ: ಡಾ.ಎಸ್.ಭಾಸ್ಕರ್ ಶೆಟ್ಟಿ
ಕುಂದಾಪುರ (ನ,7): ವಿದ್ಯಾರ್ಥಿಗಳೇ ದೇಶದ ಆಸ್ತಿ. ಯುವ ಸಮುದಾಯವು ಕಲಿಕೆಯ ಜೊತೆಗೆ ಬದುಕಿನ ಕೌಶಲ್ಯಗಳನ್ನು ಬೆಳೆಸಿಕೊಂಡು ಸತ್ಪ್ರಜೆಗಳಾಗ ಬೇಕು. ವಿದ್ಯಾರ್ಥಿಗಳು ದೇಶದ ಶಕ್ತಿ ಇದ್ದಂತೆ,ಆ ನಿಟ್ಟಿನಲ್ಲಿ ದೇಶ ಕಟ್ಟುವ ಕಾರ್ಯದಲ್ಲಿ ತಮ್ಮನ್ನು ಸಕ್ರಿಯವಾಗಿ ತೊಡಗಿಸಿ ಕೊಳ್ಳಬೇಕು ಎಂದು ಡಾ.ಜಿ.ಶಂಕರ್ ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜು ಹಾಗೂ ಸ್ನಾತಕೋತ್ತರ ಅಧ್ಯಯನ ಕೇಂದ್ರ ಅಜ್ಜರಕಾಡು ,ಉಡುಪಿ ಇದರ ಪ್ರಾಂಶುಪಾಲರಾದ ಡಾ.ಎಸ್.ಭಾಸ್ಕರ್ ಶೆಟ್ಟಿಯವರು ಹೇಳಿದರು. ಅವರು ಡಾ.ಬಿ.ಬಿ.ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ 2022-23 ನೇ ಸಾಲಿನ […]
ಮೊಗವೀರ ಯುವ ಸಂಘಟನೆ (ರಿ.), ಉಡುಪಿ ಜಿಲ್ಲೆ ಹೆಮ್ಮಾಡಿ ಘಟಕ: ಉಚಿತ ನೇತ್ರ ತಪಾಸಣಾ ಶಿಬಿರ ಸಂಪನ್ನ
ಹೆಮ್ಮಾಡಿ(ನ,06): ಮೊಗವೀರ ಯುವ ಸಂಘಟನೆ (ರಿ.) ಉಡುಪಿ ಜಿಲ್ಲೆ ಇದರ ಹೆಮ್ಮಾಡಿ ಘಟಕದ ಆಶ್ರಯದಲ್ಲಿ ಜಿ. ಶಂಕರ್ ಫ್ಯಾಮಿಲಿ ಟ್ರಸ್ಟ್ (ರಿ), ಅಂಬಲಪಾಡಿ ಉಡುಪಿ ,ಪ್ರಸಾದ್ ನೇತ್ರಾಲಯ ಸೂಪರ್ ಸ್ಪೆಷಾಲಿಟಿ ಕಣ್ಣಿನ ಆಸ್ಪತ್ರೆ ಉಡುಪಿ, ನೇತ್ರ ಜ್ಯೋತಿ ಚಾರಿಟೇಬಲ್ ಟ್ರಸ್ಟ್ (ರಿ) ಉಡುಪಿ, ಹೆಮ್ಮಾಡಿ ಮೀನುಗಾರರ ಪ್ರಾಥಮಿಕ ಸಹಕಾರಿ ಸಂಘ ನಿ, ಹೆಮ್ಮಾಡಿ ಇವರ ಸಹಯೋಗದೊಂದಿಗೆ ನ.06 ರಂದು ನೆಡದ ಸಾರ್ವಜನಿಕ ಉಚಿತ ನೇತ್ರ ತಪಾಸಣೆ ಹಾಗೂ ಕನ್ನಡಕ ವಿತರಣಾ […]
ಟೆನ್ನಿ ಕಾಯ್ಟ್ ನಲ್ಲಿ ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾದ ಕಿಶನ್ ಮತ್ತು ಮಹಿಮಾ
ಗಂಗೊಳ್ಳಿ (ನ,6): ಚಿಕ್ಕಮಗಳೂರಿನ ನೇತಾಜಿ ಸುಭಾಷ್ ಚಂದ್ರ ಬೋಸ್ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆದ ಕರ್ನಾಟಕ ರಾಜ್ಯ ಪದವಿಪೂರ್ವ ಕಾಲೇಜುಗಳ ವಿದ್ಯಾರ್ಥಿ ಮತ್ತು ವಿದ್ಯಾರ್ಥಿನಿಯರ ಟೆನ್ನಿ ಕಾಯ್ಟ್ ಪಂದ್ಯಾವಳಿಯಲ್ಲಿ ಅತ್ಯುತ್ತಮ ಆಟವನ್ನು ಪ್ರದರ್ಶಿಸಿದ ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಪದವಿಪೂರ್ವ ಕಾಲೇಜಿನ ವಿಜ್ಞಾನ ವಿಭಾಗದ ವಿದ್ಯಾರ್ಥಿ ಕಿಶನ್ ಡಿ ಪೂಜಾರಿ ಮತ್ತು ವಾಣಿಜ್ಯ ವಿಭಾಗದ ವಿದ್ಯಾರ್ಥಿನಿ ಮಹಿಮಾ ರಾಷ್ಟ್ರಮಟ್ಟದ ಪಂದ್ಯಾವಳಿಗೆ ಕರ್ನಾಟಕ ತಂಡವನ್ನು ಪ್ರತಿನಿಧಿಸಲು ಆಯ್ಕೆ ಆಗಿರುತ್ತಾರೆ. ಇವರನ್ನು ಕಾಲೇಜಿನ ಬಳಗ ಮತ್ತು […]
ಹೆಮ್ಮಾಡಿಯ ಜನತಾ ಸ್ವತಂತ್ರ ಪದವಿಪೂರ್ವ ಕಾಲೇಜಿನಲ್ಲಿ ಕಾನೂನು ಮಾಹಿತಿ ಕಾರ್ಯಕ್ರಮ
ಹೆಮ್ಮಾಡಿ(ನ,6): ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ ಬೆಂಗಳೂರು,ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಉಡುಪಿ, ತಾಲೂಕು ಕಾನೂನು ಸೇವೆಗಳ ಸಮಿತಿ ಕುಂದಾಪುರ,ವಕೀಲರ ಸಂಘ(ರಿ)ಕುಂದಾಪುರ, ಅಭಿಯೋಗ ಇಲಾಖೆ ಕುಂದಾಪುರ,ಜನತಾ ಸ್ವತಂತ್ರ ಪದವಿಪೂರ್ವ ಕಾಲೇಜು ಹೆಮ್ಮಾಡಿ ಇವರ ಸಂಯುಕ್ತ ಆಶ್ರಯದಲ್ಲಿ ಕಾನೂನು ಅರಿವು ಮತ್ತು ಪ್ರಚಾರ ಅಭಿಯಾನದ ಮೂಲಕ ನಾಗರಿಕರ ಸಬಲೀಕರಣ ಈ ಕುರಿತು ಮಾಹಿತಿ ಕಾರ್ಯಕ್ರಮ ನಡೆಯಿತು. ಸಮಾರಂಭದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲರಾದ ಶ್ರೀ ಗಣೇಶ ಮೊಗವೀರರವರು ವಹಿಸಿದ್ದರು.ಸಮಾರಂಭವನ್ನು ಹಿರಿಯ ಸಿವಿಲ್ […]
ಯಡ್ತರೆ: ಕ್ಯಾನ್ಸರ್ ಪೀಡಿತ ಮಗುವಿನ ಶಸ್ತ್ರ ಚಿಕಿತ್ಸೆಗೆ ನೆರವು ಕೋರಿ ಮನವಿ
ಬೈಂದೂರು (ನ,6) : ಇಲ್ಲಿನ ಯಡ್ತರೆಯ ಸಂಜೀವಿನಿ ಎನ್ನುವ ಮಗು ಕ್ಯಾನ್ಸರ್ ಪೀಡಿತೆಯಾಗಿದ್ದು ,ಮಗುವಿನ ಶಸ್ತ್ರ ಚಿಕಿತ್ಸೆಗೆ ಹತ್ತು ಲಕ್ಷಕ್ಕೂ ಮಿಕ್ಕಿ ಅಧಿಕ ಹಣದ ಅವಶ್ಯಕತೆ ಇದ್ದು ,ಮಗುವಿನ ಶಸ್ತ್ರ ಚಿಕಿತ್ಸೆಗೆ ಹಣ ಹೊಂದಿಸಲು ಮಗುವಿನ ಮನೆಯವರಿಗೆ ಕಷ್ಟ ಆಗುತ್ತಿದ್ದು ,ಬಡತನದಲ್ಲಿರುವ ಮಗುವಿನ ಕುಟುಂಬ ದಿಕ್ಕು ತೋಚದಾಗಿದೆ. ಸಹ್ರದಯಿ ದಾನಿಗಳಿಂದ ಸಹಾಯ ಧನ ಕ್ಕಾಗಿ ಮನವಿ ಮಾಡಿದ್ದಾರೆ . ಮಗುವಿನ ಶಸ್ತ್ರ ಚಿಕಿತ್ಸೆಗೆ ಧನ ಸಹಾಯ ಮಾಡಲಿಚ್ಚಿಸುವರು ಕೆಳಗೆ ತಿಳಿಸಿದ […]
ಕುಂದಾಪುರ: ಆರ್. ಎನ್.ಶೆಟ್ಟಿ ಪಿ ಯು ಕಾಲೇಜಿಗೆ ಶ್ರೀ ಸುನೀಲ್ ಆರ್ .ಎನ್ ಶೆಟ್ಟಿ ಭೇಟಿ
ಕುಂದಾಪುರ( ನ,4): ಇಲ್ಲಿನ ಆರ್. ಎನ್.ಶೆಟ್ಟಿ ಪದವಿ ಪೂರ್ವ ಕಾಲೇಜಿನ ಮಹಾಪೋಷಕರಾದ ದಿ. ಆರ್. ಎನ್. ಶೆಟ್ಟಿಯವರ ಪುತ್ರ ಶ್ರೀ ಸುನೀಲ್ ಶೆಟ್ಟಿಯವರು ನ.04 ರಂದು ಕಾಲೇಜಿಗೆ ಭೇಟಿ ನೀಡಿದರು. ಸಂಸ್ಥೆಯ ಸಂಚಾಲಕರಾದ ಶ್ರೀ ಬಿ.ಎಮ್. ಸುಕುಮಾರ್ ಶೆಟ್ಟಿಯವರು ಶ್ರೀ ಸುನೀಲ್ ಶೆಟ್ಟಿಯವರನ್ನು ಪುಷ್ಪಗುಚ್ಛ ನೀಡಿ ಸ್ವಾಗತಿಸಿ ಸನ್ಮಾನಿಸಿದರು. ಈ ಸಂದರ್ಭದಲ್ಲಿ ಕಾಲೇಜಿನ ಪ್ರಾಂಶುಪಾಲರಾದ ಶ್ರೀ ನವೀನ್ ಕುಮಾರ ಶೆಟ್ಟಿಯವರು ಉಪಸ್ಥಿತರಿದ್ದರು.










