ಕುಂದಾಪುರ( ಅ,29): ನಾಡು ನುಡಿಯ ಕುರಿತು ಅಭಿಮಾನ ಮೂಡಿಸುವ , ನಮ್ಮ ಪರಂಪರೆಯ ಬಗ್ಗೆ ಹೆಮ್ಮೆ ಮೂಡಿಸುವ ಸಲುವಾಗಿ ಕರ್ನಾಟಕ ಸರ್ಕಾರವು ಅನುಷ್ಠಾನಗೊಳಿಸಿದ “ಕೋಟಿ ಕಂಠ ಗೀತಗಾಯನ” ಕಾರ್ಯಕ್ರಮವನ್ನು ಕುಂದಾಪುರದ ಎಕ್ಸಲೆಂಟ್ ಪದವಿ ಪೂರ್ವ ಕಾಲೇಜು ಮತ್ತು ಪ್ರೌಢಶಾಲೆಯ ಸಭಾಂಗಣದಲ್ಲಿ ವಿದ್ಯಾರ್ಥಿಗಳು, ಶಿಕ್ಷಕರು, ಪ್ರಾಂಶುಪಾಲರನ್ನು ಒಳಗೊಂಡoತೆ ಸಮೂಹ ಗೀತಗಾಯನ ಅ.28 ರಂದು ಯಶಸ್ವಿಯಾಗಿ ನೆರವೇರಿತು. ವಿದ್ಯಾರ್ಥಿಗಳೆಲ್ಲರೂ ಸಮವಸ್ತ್ರ ಧರಿಸಿ ಶಿಸ್ತು ಬದ್ಧವಾಗಿ ಸರ್ಕಾರವು ನಿಗದಿಪಡಿಸಿದ ಗೀತೆಗಳಾದ ಜಯಭಾರತ ಜನನಿಯ ತನುಜಾತೆ, […]
Author: KundaVahini Editor
ಯಕ್ಷ ಕಲಾವಿದ ,ಅಬ್ಬರದ ಮಹಿಷಾಸುರ ಖ್ಯಾತಿಯ ನಂದೀಶ್ ಜನ್ನಾಡಿ
ನವರಸಗಳಿಂದ ಕೂಡಿದ ಒಂದು ಕಲಾ ಪ್ರಕಾರ ಇದೆ ಎಂದಾದರೆ ಅದು ಯಕ್ಷಗಾನ ಮಾತ್ರ. ಹಾಡುಗಾರಿಕೆ, ವೇಷ ಭೂಷಣಗಳ ಒಳಗೊಂಡ ಒಂದು ಸ್ವತಂತ್ರ ಕಲೆಯಾದ ಯಕ್ಷಗಾನ ಕರ್ನಾಟಕದ ಸಾಂಪ್ರದಾಯಿಕ ಕಲಾ ಪ್ರಕಾರಗಳಲ್ಲಿ ಅತ್ಯಂತ ಪ್ರಮುಖವಾದದ್ದು. ಕರ್ನಾಟಕದ ದಕ್ಷಿಣ ಕನ್ನಡ, ಉಡುಪಿ, ಶಿವಮೊಗ್ಗ ಚಿಕ್ಕಮಗಳೂರು, ಕೇರಳದ ಕಾಸರಗೋಡು, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಯಕ್ಷಗಾನವನ್ನು ಭಕ್ತಿಯಿಂದ ಆರಾಧನಾ ಕಲೆಯಾಗಿ ನಂಬಿದವರು ಇದ್ದಾರೆ. ಯಕ್ಷಗಾನವು ಮೂರು ತಿಟ್ಟುಗಳು ಬಡಗು ತಿಟ್ಟು, ತೆಂಕುತಿಟ್ಟು , ನಡುತಿಟ್ಟು ಎಂದು ವಿಂಗಡಿಸಲ್ಪಟ್ಟಿದ್ದರೂ ಆದರ ಮೂಲ ತತ್ವಗಳು ಮತ್ತು […]
ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜು ಕುಂದಾಪುರ: ಸಹಸ್ರ ವಿದ್ಯಾರ್ಥಿಗಳ ಕಂಠ ಸಿರಿಯಲ್ಲಿ ಕೋಟಿ ಕಂಠ ಗಾಯನ
ಕುಂದಾಪುರ( ಅ,28): ಇಲ್ಲಿನ ಡಾ| ಬಿ.ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಕನ್ನಡ ವಿಭಾಗದ ಆಶ್ರಯದಲ್ಲಿ ನಡೆದ ‘ಕೋಟಿ ಕಂಠ ಗಾಯನ’ದಲ್ಲಿ ಕಾಲೇಜಿನ ಪ್ರಾಂಶುಪಾಲರಾದ ಪ್ರೊ| ಕೆ. ಉಮೇಶ್ ಶೆಟ್ಟಿ, ವಿದ್ಯಾರ್ಥಿ ಕ್ಷೇಮಪಾಲನ ಅಧಿಕಾರಿ ಶ್ರೀ ರಕ್ಷಿತ್ ರಾವ್, ಕಾರ್ಯಕ್ರಮ ಸಂಯೋಜಕರಾದ ಶ್ರೀಮತಿ ರೇಷ್ಮಾ ಶೆಟ್ಟಿ, ಶ್ರೀ ಸುಕುಮಾರ್ ಶೆಟ್ಟಿ ಕಮಲಶಿಲೆ ಹಾಗೂ ಎಲ್ಲಾ ಪ್ರಾಧ್ಯಾಪಕರು, ಶಿಕ್ಷಕೇತರ ಸಿಬ್ಬಂದಿಗಳು ಮತ್ತು ವಿದ್ಯಾರ್ಥಿಗಳು ಕನ್ನಡ ಪ್ರತಿಜ್ಞಾ ವಿಧಿ ಸ್ವೀಕರಿಸಿ, ಕನ್ನಡ ಮಾತೆಗೆ […]
ಕುಂದಾಪುರ : ಆರ್. ಎನ್. ಶೆಟ್ಟಿ ಪದವಿ ಪೂರ್ವ ಕಾಲೇಜಿನಲ್ಲಿ ಕನ್ನಡ ಕೋಟಿ ಕಂಠ ಗಾಯನ
ಕುಂದಾಪುರ (ಅ,28):ಕರ್ನಾಟಕ ಸರಕಾರದ ಕನ್ನಡ ಮತ್ತು ಸಂಸ್ಸ್ಕ್ರತಿ ಇಲಾಖೆಯ ವತಿಯಿಂದ ಕನ್ನಡ ರಾಜ್ಯೋತ್ಸವದ ಅಂಗವಾಗಿ ಅ.28 ರಂದು ಕುಂದಾಪುರದ ಗಾಂಧಿ ಮೈದಾನದಲ್ಲಿ ಆಯೋಜಿಸಲಾದ ‘ ಕೋಟಿ ಕಂಠ ಗಾಯನ ‘ ಕಾರ್ಯಕ್ರಮದಲ್ಲಿ ಕುಂದಾಪುರದ ಆರ್. ಎನ್. ಶೆಟ್ಟಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಪಾಲ್ಗೊಂಡು ಕನ್ನಡ ನಾಡು- ನುಡಿಯ ಹಿರಿಮೆಗೆ ಸಂಬಂಧಿಸಿದ ಹಾಡುಗಳನ್ನು ಹಾಡಿದರು. ಕಾಲೇಜಿನ ಪ್ರಾಂಶುಪಾಲರಾದ ಶ್ರೀ ನವೀನ್ ಕುಮಾರ ಶೆಟ್ಟಿಯವರು ಹಾಗೂ ಬೋಧಕ- ಬೋಧಕೇತರ ಸಿಬ್ಬಂಧಿಗಳು ಕಾರ್ಯಕ್ರಮದಲ್ಲಿ […]
ಎಂ.ಜಿ.ಎಂ. ಕಾಲೇಜಿನಲ್ಲಿ 67ನೇ ಕರ್ನಾಟಕ ರಾಜ್ಯೋತ್ಸವದ ಕೋಟಿ ಕಂಠ ಗಾಯನ
ಉಡುಪಿ(ಅ,28): ಕರ್ನಾಟಕ ರಾಜ್ಯೋತ್ಸವದ ಅಂಗವಾಗಿ ಕೋಟಿ ಕಂಠ ಗಾಯನ ಕಾರ್ಯಕ್ರಮವು ಕಾಲೇಜಿನ ನೂತನ ರವೀಂದ್ರ ಮಂಟಪದ ಬಳಿ ಬೆಳಿಗ್ಗೆ 11 ಗಂಟೆಗೆ ಜರುಗಿತು. ಕಾಲೇಜಿನ ಪ್ರಾಂಶುಪಾಲ ಪ್ರೊ. ಲಕ್ಷ್ಮೀನಾರಾಯಣ ಕಾರಂತ ಕಾರ್ಯಕ್ರಮದ ಬಗ್ಗೆ ವಿವರಣೆ ನೀಡಿ ಕೋಟಿ ಕಂಠ ಗಾಯನಕ್ಕೆ ಚಾಲನೆ ನೀಡಿದರು. ಪದವಿ ಪೂರ್ವ ವಿಭಾಗದ ಪ್ರಾಂಶುಪಾಲೆ ಮಾಲತಿದೇವಿ ಎ. ಶುಭಹಾರೈಸಿದರು. ಸಂಸ್ಕೃತ ವಿಭಾಗದ ಮುಖ್ಯಸ್ಥೆ ಡಾ| ವಸುಮತಿ ಭಟ್ ನೇತೃತ್ವದಲ್ಲಿ ತರಬೇತಿ ಪಡೆದ ವಿದ್ಯಾರ್ಥಿಗಳು ಕನ್ನಡದ ಆರು […]
ಕುಂದಾಪುರ: ಡಾ | ಬಿ.ಬಿ.ಹೆಗ್ಡೆ ಕಾಲೇಜಿನಲ್ಲಿ ದೀಪಾವಳಿ ಸಂಭ್ರಮಾಚರಣೆ
ಕುಂದಾಪುರ (ಅ,27): ನೆಲದ ಸೊಗಡಿನ ಹಬ್ಬ ದೀಪಾವಳಿ. ಇದೊಂದು ಜನಪದ ಆಚರಣೆ, ಕೃಷಿ ಸಂಸ್ಕೃತಿಯನ್ನು ಬಿಂಬಿಸುದರ ಜೊತೆಗೆ ಕತ್ತಲೆಯ ಮೇಲೆ ಬೆಳಕಿನ ವಿಜಯವನ್ನು ಸಾಧಿಸುವ ಹಬ್ಬ ಎಂದು ಹಿರಿಯ ಜಾನಪದ ಕಲಾವಿದರಾದ ಶ್ರೀ ನಾಗರಾಜ ಪಾಣ ಮೂಡುವಾಲ್ತೂರು ಅವರು ಹೇಳಿದರು. ಅವರು ಅಕ್ಟೊಬರ್25 ರಂದು ಕುಂದಾಪುರದ ಡಾ| ಬಿ.ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಕನ್ನಡ ವಿಭಾಗ ಆಯೋಜಿಸಿದ “ದೀಪಾವಳಿ ಆಚರಣೆ” ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು. ಕಾಲೇಜಿನ ಪ್ರಾಂಶುಪಾಲರಾದ ಪ್ರೋ. […]
ರಾಜ್ಯಮಟ್ಟದ ಭಾವ ಬರಹ ಸ್ಪರ್ಧೆ
ಕುಂದಾಪುರ (ಅ,27): ಸಾಹಿತ್ಯ ತಂಗುದಾಣ ಬಳಗ ರಾಜ್ಯಮಟ್ಟದ ಭಾವ ಬರಹ ಸ್ಪರ್ಧೆಯನ್ನು ಏರ್ಪಡಿಸಿದೆ. ಆಸಕ್ತರು ತಮ್ಮ ಜೀವನಕ್ಕೆ ಸಂಬಂಧಿಸಿದ ಯಾವುದೇ ವಸ್ತು ವಿಚಾರ ವ್ಯಕ್ತಿ ಸಂಬಂಧ ಕನಸು ಸ್ಥಳ ಸನ್ನಿವೇಶ ಇತ್ಯಾದಿ ವಿಷಯಗಳ ಬಗೆಗೆ ಭಾವನೆಗಳನ್ನು ಪ್ರಕಟಪಡಿಸುವಂತಹ ಬರಹವನ್ನು ಬರೆಯಬಹುದು. ಪ್ರಥಮ ಮತ್ತು ದ್ವಿತೀಯ ನಗದು ಬಹುಮಾನಗಳ ಜೊತೆಗೆ ಪ್ರಮಾಣ ಪತ್ರಗಳನ್ನು ನೀಡಲಾಗುವುದು. ಬರಹಗಳನ್ನು ವಾಟ್ಸಪ್ ಮೂಲಕ 9242127307 ಅಥವಾ ಇಮೇಲ್ ಮೂಲಕ sahithyathangudana@gmail.com ಗೆ ಕಳುಹಿಸಬಹುದಾಗಿದೆ. ಬರಹವನ್ನು ಕಳಿಸಲು ಕೊನೆಯ ದಿನಾಂಕ […]
ಮೊಗವೀರ ಯುವ ಸಂಘಟನೆ (ರಿ.), ಉಡುಪಿ ಜಿಲ್ಲೆ, ಹೆಮ್ಮಾಡಿ ಘಟಕ: ನವೆಂಬರ್ 06 ರಂದು ಸಾರ್ವಜನಿಕ ಉಚಿತ ನೇತ್ರ ತಪಾಸಣೆ ಹಾಗೂ ಉಚಿತ ಕನ್ನಡಕ ವಿತರಣೆ ಶಿಬಿರ
ಹೆಮ್ಮಾಡಿ(ಅ,27): ರಾಜ್ಯೋತ್ಸವ ಪ್ರಶಸ್ತಿ ಪುರಸ್ಕ್ರತ ಮೊಗವೀರ ಯುವ ಸಂಘಟನೆ (ರಿ.) ಉಡುಪಿ ಜಿಲ್ಲೆ ಇದರ ಹೆಮ್ಮಾಡಿ ಘಟಕದ ಆಶ್ರಯದಲ್ಲಿ ಜಿ. ಶಂಕರ್ ಫ್ಯಾಮಿಲಿ ಟ್ರಸ್ಟ್ (ರಿ), ಅಂಬಲಪಾಡಿ ಉಡುಪಿ ,ಪ್ರಸಾದ್ ನೇತ್ರಾಲಯ ಸೂಪರ್ ಸ್ಪೆಷಾಲಿಟಿ ಕಣ್ಣಿನ ಆಸ್ಪತ್ರೆ ಉಡುಪಿ ಹಾಗೂ ನೇತ್ರ ಜ್ಯೋತಿ ಚಾರಿಟೇಬಲ್ ಟ್ರಸ್ಟ್ (ರಿ) ಉಡುಪಿ, ಹೆಮ್ಮಾಡಿ ಮೀನುಗಾರರ ಪ್ರಾಥಮಿಕ ಸಹಕಾರಿ ಸಂಘ ನಿ, ಹೆಮ್ಮಾಡಿ ಇವರ ಸಹಯೋಗದೊಂದಿಗೆ ನವೆಂಬರ್ 06 ರ ಆದಿತ್ಯವಾರ ಬೆಳಿಗ್ಗೆ ಗಂಟೆ 8 […]
ಮೊಗವೀರ ಯುವ ಸಂಘಟನೆ (ರಿ.), ) ಉಡುಪಿ ಜಿಲ್ಲೆ ಬೈಂದೂರು – ಶಿರೂರು ಘಟಕ: ರಕ್ತದಾನ ಶಿಬಿರ ಸಂಪನ್ನ
ಬೈಂದೂರು (ಅ,28): ಮೊಗವೀರ ಯುವ ಸಂಘಟನೆ (ರಿ.) ಉಡುಪಿ ಜಿಲ್ಲೆ ಇದರ ಬೈಂದೂರು – ಶಿರೂರು ಘಟಕದ ಆಶ್ರಯದಲ್ಲಿ ಜಿ. ಶಂಕರ್ ಫ್ಯಾಮಿಲಿ ಟ್ರಸ್ಟ್ (ರಿ.) ,ಅಂಬಲಪಾಡಿ ಉಡುಪಿ, ಸರಕಾರಿ ಪ್ರಥಮ ದರ್ಜೆ ಕಾಲೇಜು ಬೈಂದೂರು, ರಕ್ತನಿಧಿ ಭಾರತೀಯ ರೆಡ್ಕ್ರಾಸ್ ಸಂಸ್ಥೆ ಕುಂದಾಪುರ ಹಾಗೂ ಬೈಂದೂರು ರಕ್ತನಿಧಿ ಕೇಂದ್ರ ಇವರ ಸಹಯೋಗದಲ್ಲಿ “ಸ್ವಯಂಪ್ರೇರಿತ ಬೃಹತ್ ರಕ್ತದಾನ ಶಿಬಿರ”ವು 58 ಯೂನಿಟ್ ರಕ್ತವನ್ನು ಸಂಗ್ರಹಿಸುವ ಮೂಲಕ ಅ.22 ರಂದು ಸಂಪನ್ನಗೊಂಡಿತು. ಮೊಗವೀರ […]
ಬೈಂದೂರು: ವಿದ್ಯುತ್ ಉಪಕೇಂದ್ರ ಉದ್ಘಾಟನೆ-ಗ್ರಾಮೀಣ ಭಾಗದ ಜನರ ಬಹುಕಾಲದ ಬೇಡಿಕೆಗೆ ಸ್ಪಂದನೆ
ಬೈಂದೂರು(ಅ,25): ಗೋಳಿಹೊಳೆ ಗ್ರಾಮದ ಎಲ್ಲೂರಿನಲ್ಲಿ 33/11 ಕೆವಿ ವಿದ್ಯುತ್ ಉಪಕೇಂದ್ರ ಉದ್ಘಾಟನೆಯನ್ನು ಇಂಧನ ಸಚಿವರಾದ ಶ್ರೀ ಸುನಿಲ್ ಕುಮಾರ್ ರವರು ಅ .25 ರಂದು ನೆರವೇರಿಸಿದರು. ಇದರಿಂದಾಗಿ ಕೊಲ್ಲೂರು, ಜಡ್ಕಲ್, ಮುದೂರು, ಗೋಳಿಹೊಳೆ, ಇಡೂರು ಕುಂಜ್ಞಾಡಿ ಗ್ರಾಮಗಳ ಸುತ್ತ ಮುತ್ತಲಿನ ಜನರ ಬಹುಕಾಲದ ಬೇಡಿಕೆ ಈಡೇರಿದಂತಾಗಿ ಪ್ರತ್ಯೇಕ 11 ಕೆ.ವಿ. ಫೀಡರುಗಳ ಮೂಲಕ ಗುಣಮಟ್ಟದ ವಿದ್ಯುತ್ ಸರಬರಾಜು ಸಾಧ್ಯವಾಗುತ್ತದೆ. ಇದರಿಂದಾಗಿ ಕೃಷಿಯನ್ನು ಬದುಕಾಗಿಸಿಕೊಂಡಿರುವ ಈ ಭಾಗದ ಸುಮಾರು 1,745ಕ್ಕೂ ಮಿಕ್ಕಿ […]










