ಬೈಂದೂರು (ಅ,28): ಮೊಗವೀರ ಯುವ ಸಂಘಟನೆ (ರಿ.) ಉಡುಪಿ ಜಿಲ್ಲೆ ಇದರ ಬೈಂದೂರು – ಶಿರೂರು ಘಟಕದ ಆಶ್ರಯದಲ್ಲಿ ಜಿ. ಶಂಕರ್ ಫ್ಯಾಮಿಲಿ ಟ್ರಸ್ಟ್ (ರಿ.) ,ಅಂಬಲಪಾಡಿ ಉಡುಪಿ, ಸರಕಾರಿ ಪ್ರಥಮ ದರ್ಜೆ ಕಾಲೇಜು ಬೈಂದೂರು, ರಕ್ತನಿಧಿ ಭಾರತೀಯ ರೆಡ್ಕ್ರಾಸ್ ಸಂಸ್ಥೆ ಕುಂದಾಪುರ ಹಾಗೂ ಬೈಂದೂರು ರಕ್ತನಿಧಿ ಕೇಂದ್ರ ಇವರ ಸಹಯೋಗದಲ್ಲಿ “ಸ್ವಯಂಪ್ರೇರಿತ ಬೃಹತ್ ರಕ್ತದಾನ ಶಿಬಿರ”ವು 58 ಯೂನಿಟ್ ರಕ್ತವನ್ನು ಸಂಗ್ರಹಿಸುವ ಮೂಲಕ ಅ.22 ರಂದು ಸಂಪನ್ನಗೊಂಡಿತು. ಮೊಗವೀರ […]
Author: KundaVahini Editor
ಬೈಂದೂರು: ವಿದ್ಯುತ್ ಉಪಕೇಂದ್ರ ಉದ್ಘಾಟನೆ-ಗ್ರಾಮೀಣ ಭಾಗದ ಜನರ ಬಹುಕಾಲದ ಬೇಡಿಕೆಗೆ ಸ್ಪಂದನೆ
ಬೈಂದೂರು(ಅ,25): ಗೋಳಿಹೊಳೆ ಗ್ರಾಮದ ಎಲ್ಲೂರಿನಲ್ಲಿ 33/11 ಕೆವಿ ವಿದ್ಯುತ್ ಉಪಕೇಂದ್ರ ಉದ್ಘಾಟನೆಯನ್ನು ಇಂಧನ ಸಚಿವರಾದ ಶ್ರೀ ಸುನಿಲ್ ಕುಮಾರ್ ರವರು ಅ .25 ರಂದು ನೆರವೇರಿಸಿದರು. ಇದರಿಂದಾಗಿ ಕೊಲ್ಲೂರು, ಜಡ್ಕಲ್, ಮುದೂರು, ಗೋಳಿಹೊಳೆ, ಇಡೂರು ಕುಂಜ್ಞಾಡಿ ಗ್ರಾಮಗಳ ಸುತ್ತ ಮುತ್ತಲಿನ ಜನರ ಬಹುಕಾಲದ ಬೇಡಿಕೆ ಈಡೇರಿದಂತಾಗಿ ಪ್ರತ್ಯೇಕ 11 ಕೆ.ವಿ. ಫೀಡರುಗಳ ಮೂಲಕ ಗುಣಮಟ್ಟದ ವಿದ್ಯುತ್ ಸರಬರಾಜು ಸಾಧ್ಯವಾಗುತ್ತದೆ. ಇದರಿಂದಾಗಿ ಕೃಷಿಯನ್ನು ಬದುಕಾಗಿಸಿಕೊಂಡಿರುವ ಈ ಭಾಗದ ಸುಮಾರು 1,745ಕ್ಕೂ ಮಿಕ್ಕಿ […]
ವಿಜ್ಞಾನ ವಸ್ತು ಪ್ರದರ್ಶನ ಸ್ಪರ್ಧೆಯಲ್ಲಿ ವಿ. ಕೆ. ಆರ್. ಶಾಲೆಗೆ ದ್ವಿತೀಯ ಸ್ಥಾನ
ಕುಂದಾಪುರ(ಅ,25): ಕುಂದಾಪುರ ಎಜ್ಯುಕೇಶನ್ ಸೊಸೈಟಿ ಪ್ರವರ್ತಿತ ಎಚ್. ಎಮ್. ಎಮ್. ಆಂಗ್ಲ ಮಾಧ್ಯಮ ಪ್ರಾಥಮಿಕ ಮತ್ತು ವಿ. ಕೆ. ಆರ್. ಆಚಾರ್ಯ ಸ್ಮಾರಕ ಪ್ರೌಢ ಶಾಲೆಯ ವಿದ್ಯಾರ್ಥಿಗಳಾದ ಅಕ್ಷಯ ವಿ. ಶೆಟ್ಟಿ ಮತ್ತು ಪ್ರಥಮ್ ವಿ. ಅಡಿಗ ಇತ್ತೀಚೆಗೆ ಸರಕಾರಿ ಪ್ರೌಢ ಶಾಲೆ ವಡೇರಹೋಬಳಿ ಇಲ್ಲಿ ನಡೆದ ವಲಯ ಮಟ್ಟದ ಪ್ರೌಢ ಶಾಲಾ ವಿದ್ಯಾರ್ಥಿಗಳ ವಿಜ್ಞಾನ ವಸ್ತು ಪ್ರದರ್ಶನ ಸ್ಪರ್ಧೆಯಲ್ಲಿ ಭಾಗವಹಿಸಿ ದ್ವಿತೀಯ ಸ್ಥಾನವನ್ನು ಪಡೆದು ಸಂಸ್ಥೆಗೆ ಹೆಮ್ಮೆಯನ್ನು ತಂದಿರುತ್ತಾರೆ. […]
ಬದ್ಧತೆಯ ಸಿದ್ಧತೆಯಿಂದಲೇ ಸಾಧ್ಯತೆ: ಶ್ರೀ ಗಣೇಶ್ ಶೆಣೈ
ಕುಂದಾಪುರ(ಅ,25): ಕುಂದಾಪುರ ಎಜ್ಯುಕೇಶನ್ ಸೊಸೈಟಿ ಪ್ರವರ್ತಿತ ಎಚ್. ಎಮ್. ಎಮ್. ಆಂಗ್ಲ ಮಾಧ್ಯಮ ಪ್ರಾಥಮಿಕ ಮತ್ತು ವಿ. ಕೆ. ಆರ್. ಆಚಾರ್ಯ ಸ್ಮಾರಕ ಪ್ರೌಢ ಶಾಲೆಯ 10 ನೇ ತರಗತಿ ವಿದ್ಯಾರ್ಥಿಗಳಿಗೆ ಪರೀಕ್ಷಾ ಪೂರ್ವ ಸಿದ್ಧತಾ ಕಾರ್ಯಾಗಾರ ಶ್ರೀ ಸಾಲಿಗ್ರಾಮ ಗಣೇಶ್ ಶೆಣೈ ಅವರಿಂದ ನೆರವೇರಿತು. ಬದ್ಧತೆಯ ಸಿದ್ಧತೆಯಿಂದಲೇ ಸಾಧ್ಯತೆ ಎನ್ನುವ ವಿಚಾರದ ಕುರಿತಾಗಿ ವಿದ್ಯಾರ್ಥಿಗಳಲ್ಲಿ ಪ್ರೇರಣೆ ಮೂಡಿಸಿದ ಸಂಪನ್ಮೂಲ ವ್ಯಕ್ತಿಗಳು ತಮ್ಮ ಕಲಾ ಕುಂಚ ವೇದಿಕೆಯ ಮೂಲಕ ಹತ್ತನೇ […]
ಡಾ| ಬಿ.ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜು ಕುಂದಾಪುರ: ಅಂಬಿಗರ ಚೌಡಯ್ಯನ ವಚನಗಳ ವಿಚಾರ ಧಾರೆಗಳ ಕುರಿತು ಉಪನ್ಯಾಸ
ಕುಂದಾಪುರ (ಅ,22) : ಅಸ್ಪ್ರಶ್ಯತೆ, ಆಹಾರ ಪದ್ಧತಿ ಇವುಗಳಿಗೆ ಮಹತ್ವ ಕೊಡದೆ ಗುಣಕ್ಕೆ ಮಹತ್ವಕೊಡಬೇಕೆಂಬ ನಿಲುವುಗಳು ಮತ್ತು ಧಾರ್ಮಿಕ ಚಿಂತನೆಯನ್ನು ತನ್ನದೇ ಆದ ನೆಲೆಯಲ್ಲಿ ಪ್ರಶ್ನಿಸಿ ಹಲವು ಸಮಾಜ ಸುಧಾರಣೆಯಲ್ಲಿ ತನ್ನನ್ನು ತೊಡಗಿಸಿಕೊಂಡ ಅಂಬಿಗರ ಚೌಡಯ್ಯನವರ ವಚನಗಳ ವಿಚಾರ ಧಾರೆಗಳು ಇಂದಿಗೂ ಪ್ರಸ್ತುತ ಎಂದು ತೆಂಕನಿಡಿಯೂರು ಸರಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರದ ಪ್ರಾಧ್ಯಾಪಕರಾದ ಡಾ| ಎಚ್.ಕೆ. ವೆಂಕಟೇಶ್ ಹೇಳಿದರು. ಇವರು ಮಂಗಳೂರು ವಿಶ್ವವಿದ್ಯಾನಿಲಯ ಅಂಬಿಗರ […]
ಅನಾರೋಗ್ಯದಿಂದ ಮೃತಪಟ್ಟ ವ್ಯಕ್ತಿಯ ಮೃತ ದೇಹವನ್ನು ತವರೂರಿಗೆ ತಲುಪಿಸಿದ ಈಶ್ವರ್ ಮಲ್ಪೆ
ಕುಂದಾಪುರ(ಅ,20): ಅನಾರೋಗ್ಯಕ್ಕೆ ಪೀಡಿತರಾದ ತೀರ್ಥಹಳ್ಳಿ ತಾಲ್ಲೂಕಿನ ಬಸಾವಣಿ ಮನೆಯ ವಿಜಯ್ ಉಡುಪಿ ಜಿಲ್ಲಾಸ್ಪತ್ರೆಯಲ್ಲಿ ಮೃತ ಪಟ್ಟಿರುತ್ತಾರೆ. ಈ ಹಿಂದೆ ಶಿರ್ವ ಪೊಲೀಸ್ ಠಾಣೆಯಲ್ಲಿ ಹೆಡ್ ಕಾನ್ಸ್ಟೇಬಲ್ ಕರ್ತವ್ಯ ನಿರ್ವಹಿಸುತ್ತಿದ್ದು ಇವರು 6 ತಿಂಗಳ ಹಿಂದೆ ಅನಾರೋಗ್ಯ ಸಮಸ್ಯೆಯಿಂದ ವೃತ್ತಿಯಿಂದ ದೂರವಿದ್ದು ಚಿಕಿತ್ಸೆ ಫಲಕಾರಿಯಾಗದೆ ಉಡುಪಿ ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟಿರುತ್ತಾರೆ. ವಿಷಯ ತಿಳಿದ ತಕ್ಷಣ ಸಮಾಜ ಸೇವಕ ಈಶ್ವರ್ ಮಲ್ಪೆ ಉಡುಪಿ ಜಿಲ್ಲಾ ಆಸ್ಪತ್ರೆಗೆ ಭೇಟಿ ನೀಡಿ ಮೃತಪಟ್ಟಿರುವ ವಿಜಯ್ ಅವರ ಮೃತದೇಹವನ್ನು ತೀರ್ಥಹಳ್ಳಿ ತಾಲ್ಲೂಕಿನ ಬಸಾವಣಿ […]
ಕೋಟೇಶ್ವರ: ಮರಳು ಶಿಲ್ಪದಲ್ಲಿ ಅರಳಿದ “ಕಾಂತಾರ ” ಒಂದು ದಂತ ಕಥೆ
ಕುಂದಾಪುರ (ಅ,19): ಕಾಂತಾರ ಸಿನೆಮಾ ದೇಶ- ವಿದೇಶಗಳಲ್ಲಿ ಭರ್ಜರಿ ಪ್ರದರ್ಶನ ಕಂಡು ಕರಾವಳಿ ಸಾಂಸ್ಕೃತಿಕ ಹಾಗೂ ಧಾರ್ಮಿಕ ನಂಬಿಕೆಗಳ ವೈಭವವನ್ನು ಮೆರೆಯುತ್ತಿರುವ ಸಂಧರ್ಭದಲ್ಲಿ ವರಹಾರೂಪಿ ಪಂಜುರ್ಲಿ ಮತ್ತು ದೈವದ ರೂಪ ದಲ್ಲಿ ಅವತರಿಸಿದ ನಟ ರಿಷಬ್ ಶೆಟ್ಟಿಯವರನ್ನು ಕೇಂದ್ರವಾಗಿರಿಸಿ, 4.00 ಅಡಿ ಎತ್ತರದ ಕಲಾಕೃತಿ ಕೋಟೇಶ್ವರ ಸಮೀಪದ ಹಳೆ ಅಳಿವೆ ಬೀಚ್ ನಲ್ಲಿ ಮರಳು ಶಿಲ್ಪದಲ್ಲಿ ಕಾಂತಾರ ” ಒಂದು ದಂತ ಕಥೆ ಆಕ್ರತಿಗೊoಡಿದೆ. ಹರೀಶ್ ಸಾಗಾ, ಸಂತೋಷ ಭಟ್ ಹಾಲಾಡಿ, […]
ಪ್ರದೀಪ್ ಕುಮಾರ್ ಶೆಟ್ಟಿ ರವರಿಗೆ ನೇಷನ್ ಬಿಲ್ಡರ್ ಪ್ರಶಸ್ತಿ
ಕುಂದಾಪುರ (ಅ,20): ರೋಟರಿ ಇಂಡಿಯಾ ಲಿಟರಸಿ ಮಿಷನ್ ವತಿಯಿಂದ ಶೈಕ್ಷಣಿಕ ಕ್ಷೇತ್ರದಲ್ಲಿ ವಿಶೇಷ ಸಾಧನೆಗೈದ ಶಿಕ್ಷಕರಿಗೆ ಕೊಡಮಾಡುವ ನೇಷನ್ ಬಿಲ್ಡರ್ ಪ್ರಶಸ್ತಿಗೆ ನಿವೇದಿತಾ ಪ್ರೌಢ ಶಾಲೆ ಬಸ್ರೂರಿನ ಸಹಶಿಕ್ಷಕರಾದ ಶ್ರೀ. ಪ್ರದೀಪ್ ಕುಮಾರ್ ಶೆಟ್ಟಿ ಭಾಜನರಾಗಿದ್ದಾರೆ. ದಕ್ಷಿಣ ರೋಟರಿ ಕ್ಲಬ್ ಕುಂದಾಪುರ ವತಿಯಿಂದ, ಅ,20 ರಂದು ಹೋಟೆಲ್ ಕಿದಿಯೂರು ಉಡುಪಿಯಲ್ಲಿ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಪ್ರಶಸ್ತಿಯನ್ನು ಪ್ರಧಾನ ಮಾಡಲಾಯಿತು . ಪ್ರದೀಪ್ ಕುಮಾರ್ ಶೆಟ್ಟಿಯವರ ಶಿಕ್ಷಣ, ಸಾಹಿತ್ಯ, ಕಲೆ ಸಾಂಸ್ಕೃತಿಕ ರಂಗಗಳಲ್ಲಿನ […]
ಗಂಗೊಳ್ಳಿಯಲ್ಲಿ ಗೂಡುದೀಪ ಸ್ಪರ್ಧೆ
ಗಂಗೊಳ್ಳಿ(ಅ,19): ಡಾ.ಬಿ.ಆರ್. ಅಂಬೇಡ್ಕರ್ ಯುವಕ ಮಂಡಲದ ವತಿಯಿಂದ ದೀಪಾವಳಿ ಹಬ್ಬದ ಪ್ರಯುಕ್ತ ಸಾರ್ವಜನಿಕರಿಗಾಗಿ ಗೂಡುದೀಪ ಸ್ಪರ್ಧೆಯನ್ನು ಅಕ್ಟೋಬರ್ 24 ರಂದು ಹಮ್ಮಿಕೊಳ್ಳಲಾಗಿದೆ. ಪ್ರಥಮ ದ್ವಿತೀಯ ಮತ್ತು ತೃತೀಯ ನಗದು ಬಹುಮಾನಗಳು ಇವೆ. ಸ್ವಂತ ರಚನೆಯ ಆಧುನಿಕ ಮತ್ತು ಸಾಂಪ್ರದಾಯಿಕ ಶೈಲಿಯ ಗೂಡುದೀಪಗಳಿಗೆ ಸ್ಪರ್ಧೆಯಲ್ಲಿ ಅವಕಾಶವಿದ್ದು ಅಕ್ಟೋಬರ್ 23ರ ಒಳಗೆ ಸ್ಪರ್ಧಾಳುಗಳು ಹೆಸರನ್ನು ನೋಂದಾಯಿಸಿಕೊಳ್ಳಬೇಕು. ಹೆಚ್ಚಿನ ಮಾಹಿತಿಗಾಗಿ 7406196138, 9481751521, 9535633230 9632867885 ನಂಬರನ್ನು ಸಂಪರ್ಕಿಸಲು ಕೋರಲಾಗಿದೆ. ವರದಿ : ನರೇಂದ್ರ […]
ಹೊರನಾಡು ಶ್ರೀ ಅನ್ನಪೂರ್ಣೇಶ್ವರಿ ಕ್ಷೇತ್ರದಿಂದ ನೆಂಪು ಶಾಲಾ ವಿದ್ಯಾರ್ಥಿಗಳಿಗೆ ಬಿಸಿಯೂಟದ ಪ್ಲೇಟ್ ಮತ್ತು ಲೋಟ ಕೊಡುಗೆ
ವಂಡ್ಸೆ(ಅ,19); ಕರ್ನಾಟಕದ ಪ್ರಮುಖ ಧಾರ್ಮಿಕ ಕ್ಷೇತ್ರದಗಳಲ್ಲಿ ಒಂದಾದ ಹೊರನಾಡು ಶ್ರೀ ಅನ್ನಪೂರ್ಣೇಶ್ವರಿ ಕ್ಷೇತ್ರದ ಆಡಳಿತ ಮಂಡಳಿಯ ವತಿಯಿಂದ ಉಪ್ಪಿನ ಕುದ್ರು ಗೊಂಬೆಯಾಟ ಅಕಾಡೆಮಿಯ ಅಧ್ಯಕ್ಷರಾದ ಶ್ರೀ ಭಾಸ್ಕರ ಕೊಗ್ಗ ಕಾಮತ್ ಹಾಗೂ ಸಮಾಜ ಸೇವಕ ರಾಘವೇಂದ್ರ ನೆಂಪು ರವರ ಕೋರಿಕೆಯ ಮೇರೆಗೆ ಅಂದಾಜು 40 ಸಾವಿರ ರೂಪಾಯಿ ಮೌಲ್ಯದ ಬಿಸಿಯೂಟದ ಪ್ಲೇಟ್ ಮತ್ತು ಲೋಟವನ್ನು ನೆಂಪುವಿನ ಕರ್ನಾಟಕ ಪಬ್ಲಿಕ್ ಸ್ಕೂಲ್ ನ ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳಿಗೆ ಕೊಡುಗೆಯಾಗಿ ನೀಡಿದ್ದಾರೆ. ಕ್ಷೇತ್ರದಿಂದ ಕೊಡುಗೆಯಾಗಿ ನೀಡಿದ […]










