ಕುಂದಾಪುರ (ಜು,21): ಕಠಿಣ ಪರಿಶ್ರಮ, ನಿರ್ದಿಷ್ಟ ಗುರಿಯೊಂದಿಗೆ ಅಭ್ಯಸಿಸುವ ಯಾವುದೇ ವಿದ್ಯಾರ್ಥಿಯು ಕೂಡ ಸಿಎ/ಸಿಎಸ್ ಪರೀಕ್ಷೆಯನ್ನು ನಿರಾಂತಕವಾಗಿ ಪೂರ್ಣಗೊಳಿಸಬಹುದು ಎಂದು ದಕ್ಷಿಣ ಕನ್ನಡ ಜಿಲ್ಲೆಯ ಇಂಡಿಯನ್ ರೆಡ್ಕ್ರಾಸ್ ಸೊಸೈಟಿಯ ಅಧ್ಯಕ್ಷ, ಚಾರ್ಟೆರೆಡ್ ಅಕೌಟೆಂಟ್ ಶಾಂತರಾಮ್ ಶೆಟ್ಟಿ ಹೇಳಿದರು . ಅವರು ಕುಂದಾಪುರದ ಎಕ್ಸ್ಲೆಂಟ್ ಪಿಯು ಕಾಲೇಜಿನಲ್ಲಿ ಜು16ರಂದು ನಡೆದ ಸಿಎ/ಸಿಎಸ್ ಫೌಂಡೇಶನ್ ತರಗತಿಯನ್ನು ಉದ್ಘಾಟನೆಗೊಳಿಸಿ ಮಾತನಾಡಿದರು.ಪಿಯುಸಿಯಲ್ಲಿ ಒಬ್ಬ ಸಾಮಾನ್ಯ ವಿದ್ಯಾರ್ಥಿಯಾದ ನಾನು ಗ್ರಾಮೀಣ ಭಾಗದಲ್ಲಿ ವಿದ್ಯಾಭ್ಯಾಸ ಪೂರೈಸಿ ಈ ಹಂತಕ್ಕೆ […]
Author: KundaVahini Editor
ತಾಲೂಕು ಮಟ್ಟದ ಚೆಸ್ ಪಂದ್ಯಾಟ: ಎಕ್ಸಲೆಂಟ್ ಪ್ರೌಢಶಾಲೆ ಜಿಲ್ಲಾ ಮಟ್ಟಕ್ಕೆ ಆಯ್ಕೆ
ಕುಂದಾಪುರ(ಜು,21): ಉಡುಪಿ ಜಿಲ್ಲಾ ಪಂಚಾಯತ್ ಆಯೋಜಿಸಿದ ತಾಲ್ಲೂಕು ಮಟ್ಟದ ಚೆಸ್ ಪಂದ್ಯಾಟವು ಸಾರ್ವಜನಿಕ ಶಿಕ್ಷಣ ಇಲಾಖೆ ಕುಂದಾಪುರ ತಾಲ್ಲೂಕು ಮತ್ತು ಕುಂದಾಪುರ ಎಜುಕೇಶನ್ ಸೊಸೈಟಿ ಪವರ್ತಿತ ಹೆಚ್ ಎಂ ಎಂ ಆಂಗ್ಲ ಮಾಧ್ಯಮ ಪ್ರಾಥಮಿಕ ಮತ್ತು ವಿ ಕೆ ಆರ್ ಆಚಾರ್ಯ ಸ್ಮಾರಕ ಪ್ರೌಢಶಾಲೆ ಕುಂದಾಪುರ ಇವರ ಆಶ್ರಯದಲ್ಲಿ ನಡೆದ ಕುಂದಾಪುರ ತಾಲೂಕು ಮಟ್ಟದ ಪ್ರಾಥಮಿಕ ಮತ್ತು ಪ್ರೌಢಶಾಲಾ ಬಾಲಕ ಬಾಲಕಿಯರ ಚೆಸ್ ಪಂದ್ಯಾಟ ಇತ್ತೀಚಿಗೆ ನಡೆಯಿತು. ಎಕ್ಸಲೆಂಟ್ ಪಿಯು […]
ಎಚ್ ಎಮ್ ಎಮ್ ಮತ್ತು ವಿ ಕೆ ಆರ್ ಆಂಗ್ಲ ಮಾಧ್ಯಮ ಶಾಲೆ: ಶಿಕ್ಷಕ ಸುರೇಶ್ ಮರಕಾಲರಿಂದ ವಿಶೇಷ ಉಪನ್ಯಾಸ
ಕುಂದಾಪುರ( ಜು,21 ): ಎರಡೂ ಕೈಗಳಿಲ್ಲದ ಜೆಸಿಕಾ ಕಾಕ್ ತನ್ನ ಪದವಿ ಮುಗಿಸಿ, ಕಾಲಿನಿಂದ ಕಂಪ್ಯೂಟರ್ ಆಪರೇಟ್ ಮಾಡ್ತಾಳೆ, ಕರಾಟೆ ಬ್ಲ್ಯಾಕ್ ಬೆಲ್ಟ್, ಸ್ಕೇಟಿಂಗ್, ಕಾರ್ ಡ್ರೈವಿಂಗ್ ಮಾಡ್ತಾಳೆ, ಪೈಲೆಟ್ ಆಗ್ತಾಳೆ ಅಂದಮೇಲೆ ಸಾಧಿಸುವ ಕಿಚ್ಚೊಂದಿದ್ದರೆ ಅಸಾಧ್ಯವಾದುದು ಯಾವುದೂ ಇಲ್ಲ ಎಂದು ರಾಷ್ಟ್ರ ಪ್ರಶಸ್ತಿ ವಿಜೇತ ಶಿಕ್ಷಕ ಸುರೇಶ್ ಮರಕಾಲ ಹೇಳಿದರು. ಕುಂದಾಪುರ ಎಜುಕೇಶನ್ ಸೊಸೈಟಿ (ರಿ),ಪ್ರವರ್ತಿತ , ಎಚ್ ಎಮ್ ಎಮ್ ಆಂಗ್ಲ ಮಾಧ್ಯಮ ಪ್ರಾಥಮಿಕ ಮತ್ತು ವಿ […]
ರೋಟರಿ ಕ್ಲಬ್ ಗಂಗೊಳ್ಳಿ : ಪದಪ್ರದಾನ ಸಮಾರಂಭ
ಗಂಗೊಳ್ಳಿ(ಜು,21): ನಾವು ಮಾಡುವ ಸೇವೆ ಅರ್ಹ ವ್ಯಕ್ತಿಗಳಿಗೆ ತಲುಪಬೇಕು. ಯಾವುದೇ ಫಲಾಪೇಕ್ಷೆ ಇಲ್ಲದೆ ಮಾಡಿದ ಸೇವೆಯಿಂದ ಜೀವನ ಸಾರ್ಥಕ ಗೊಳ್ಳುತ್ತದೆ ಎಂದು ರೋಟರಿ ಕ್ಲಬ್ ನ ವಲಯ ಒಂದರ ಅಸಿಸ್ಟೆಂಟ್ ಗವರ್ನರ್ ರೋ. ಡಾ. ಉಮೇಶ್ ಪುತ್ರನ್ ಅಭಿಪ್ರಾಯಪಟ್ಟರು. ಅವರು ಗಂಗೊಳ್ಳಿ ಸರಸ್ವತಿ ವಿದ್ಯಾಲಯದ ಗುಜ್ಜಾಡಿ ಗೋಪಾಲ ನಾಯಕ್ ರೋಟರಿ ಸಭಾಂಗಣದಲ್ಲಿ ನಡೆದ ರೋಟರಿ ಕ್ಲಬ್ ಗಂಗೊಳ್ಳಿಯ ನೂತನ ಪದಾಧಿಕಾರಿಗಳ ಪದ ಪ್ರಧಾನ ಸಮಾರಂಭದಲ್ಲಿ ಉದ್ಘಾಟನೆಯನ್ನು ನೆರವೇರಿಸಿ ಮಾತನಾಡಿದರು. ಸಮಾಜ ಸೇವಾ […]
ಡಾ.ಡಿ.ವೀರೇಂದ್ರ ಹೆಗ್ಗಡೆಯವರಿಗೆ ಅಭಿನಂದನೆ ಸಲ್ಲಿಸಿದ ಶಾಸಕ ಬಿ.ಎಂ.ಸುಕುಮಾರ ಶೆಟ್ಟಿ
ಕುಂದಾಪುರ(ಜು,19): ನೂತನವಾಗಿ ರಾಜ್ಯಸಭೆ ಸದಸ್ಯರಾಗಿ ನಾಮನಿರ್ದೇಶನಗೊಂಡ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿಯಾದ ಡಾ. ಡಿ. ವೀರೇಂದ್ರ ಹೆಗ್ಗಡೆಯವರನ್ನು ಬೈಂದೂರು ಶಾಸಕರಾದ ಶ್ರೀ ಬಿ.ಎಂ .ಸುಕುಮಾರ ಶೆಟ್ಟಿಯವರು ಧರ್ಮಸ್ಥಳದಲ್ಲಿ ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದರು. ಕ್ಷೇತ್ರದ ಅಭಿವೃದ್ಧಿ ಕೆಲಸಗಳನ್ನು ಗುರುತಿಸಿ ದೇಶವ್ಯಾಪಿ ಹಲವು ಜನಪರ ಯೋಜನೆಗಳನ್ನು ವಿಸ್ತರಿಸಲು ಇದೀಗ ಅನುವು ಮಾಡಿಕೊಟ್ಟ ಬಗ್ಗೆ ಹರ್ಷ ವ್ಯಕ್ತಪಡಿಸಿದರು.
ಸಿ.ಎ ಪರೀಕ್ಷೆಯಲ್ಲಿ ತನುಷಾ ಡಿ.ರಾವ್ ಉತ್ತೀರ್ಣ
ಕುಂದಾಪುರ (ಜು,15); ಇನ್ಸ್ಟಿಟ್ಯೂಟ್ ಆಫ್ ಚಾರ್ಟರ್ಡ್ ಅಕೌಂಟೆಂಟ್ ಆಫ್ ಇಂಡಿಯಾ ಕಳೆದ ಮೇ 2022ರಲ್ಲಿ ನಡೆಸಿದ ಸಿ.ಎ ಅಂತಿಮ ಪರೀಕ್ಷೆಯಲ್ಲಿ ಕೋಟೇಶ್ವರದ ತನುಷಾ ಡಿ.ರಾವ್ ಉತ್ತೀರ್ಣರಾಗಿದ್ದಾರೆ. ಇವರು ಕುಂದಾಪುರದ ಸಿ. ಎ ಎನ್. ಶಾಂತರಾಮ್ & ಕೋ ಇಲ್ಲಿ ತರಬೇತಿ ಪಡೆದಿರುತ್ತಾರೆ. ಇವರು ಕೋಟೇಶ್ವರದ ಕುಂಬ್ರಿ ಯ ದಿನೇಶ್ ಚಂದ್ರ ರಾವ್ ಹಾಗೂ ಮಮತಾ ಎಸ್ ರಾವ್ ದಂಪತಿಯ ಪುತ್ರಿ ಮತ್ತು ಕುಂದಾಪುರದ ಪ್ರತಿಷ್ಠಿತ ಡಾ.ಬಿ.ಬಿ ಹೆಗ್ಡೆ ಕಾಲೇಜಿನ ಹಳೆವಿದ್ಯಾರ್ಥಿ.
ಗಂಗೊಳ್ಳಿ:ರೋಟರಿ ಕ್ಲಬ್ ವತಿಯಿಂದ ವನಮೋತ್ಸವ
ಗಂಗೊಳ್ಳಿ (ಜು,15): ರೋಟರಿ ಕ್ಲಬ್ ಗಂಗೊಳ್ಳಿ ವತಿಯಿಂದ ಗಂಗೊಳ್ಳಿಯ ಸರಸ್ವತಿ ವಿದ್ಯಾಲಯದ ಮೈದಾನದಲ್ಲಿ ಗಿಡಗಳನ್ನು ನೆಡುವ ಮೂಲಕ ವನಮೋತ್ಸವ ಕಾರ್ಯಕ್ರಮವನ್ನು ಇತ್ತೀಚೆಗೆ ನೆರವೇರಿಸಲಾಯಿತು. ಈ ಸಂದರ್ಭದಲ್ಲಿ ರೋಟರಿ ಕ್ಲಬ್ ಅಧ್ಯಕ್ಷೆ ಸುಗುಣ ಆರ್ ಕೆ,ಕಾರ್ಯದರ್ಶಿ ಚಂದ್ರಕಲಾ ಟಿ. ಮತ್ತು ರೋಟರಿ ಕ್ಲಬ್ ಸದಸ್ಯರಾದ ಲಕ್ಷ್ಮಿಕಾಂತ್ ಮಡಿವಾಳ, ನಾರಾಯಣ ನಾಯ್ಕ್, ಜನಾರ್ದನ ಪೆರಾಜೆ,ರಾಮನಾಥ ನಾಯಕ್, ಗಿರೀಶ್ ಖಾರ್ವಿ ಮೊದಲಾದವರು ಉಪಸ್ಥಿತರಿದ್ದರು.
ಗಂಗೊಳ್ಳಿ : ಸಿ.ಎ ಪರೀಕ್ಷೆಯಲ್ಲಿ ಸ್ವಸ್ತಿಕ್ ಶೆಣೈ ಉತ್ತೀರ್ಣ
ಗಂಗೊಳ್ಳಿ(ಜು,15): ಇನ್ಸ್ಟಿಟ್ಯೂಟ್ ಆಫ್ ಚಾರ್ಟರ್ಡ್ ಅಕೌಂಟೆಂಟ್ ಆಫ್ ಇಂಡಿಯಾ ಕಳೆದ ಮೇ 2022ರಲ್ಲಿ ನಡೆಸಿದ ಸಿ.ಎ ಅಂತಿಮ ಪರೀಕ್ಷೆಯಲ್ಲಿ ಕುಂದಾಪುರ ತಾಲೂಕಿನ ಗಂಗೊಳ್ಳಿಯ ಸ್ವಸ್ತಿಕ್ ಶೆಣೈ ಉತ್ತೀರ್ಣರಾಗಿದ್ದಾರೆ. ಇವರು ಕುಂದಾಪುರದ ಶಾನುಭಾಗ್ ಹೆಗಡೆ ಅಂಡ್ ಅಸೋಸಿಯೇಟ್ಸ್ ನಲ್ಲಿ ತರಬೇತಿ ಪಡೆದಿರುತ್ತಾರೆ. ಗಂಗೊಳ್ಳಿಯ ಉದ್ಯಮಿ ಟಿ. ವೆಂಕಟೇಶ್ ದೇವಣ್ಣ ಶೆಣೈ ಮತ್ತು ವಿಜಯಲಕ್ಷ್ಮಿ ಶೆಣೈ ದಂಪತಿಯ ಪುತ್ರನಾಗಿರುವ ಇವರು ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಪದವಿಪೂರ್ವ ಕಾಲೇಜಿನ ಹಳೆವಿದ್ಯಾರ್ಥಿ.
ಆರ್. ಎನ್. ಶೆಟ್ಟಿ ಪಿ ಯು ಕಾಲೇಜು ಕುಂದಾಪುರ: ಪ್ರಾಂಶುಪಾಲರಿಗೆ ಅಭಿನಂದನೆ
ಕುಂದಾಪುರ(ಜು,15): ಹಲವು ಸಂಘ ಸಂಸ್ಥೆಯಲ್ಲಿ ಸಕ್ರಿಯವಾಗಿ ಸೇವೆಸಲ್ಲಿಸುತಿರುವ ಕುಂದಾಪುರದ ಆರ್. ಎನ್. ಶೆಟ್ಟಿ ಪಿ ಯು ಕಾಲೇಜಿನ ಪ್ರಾಂಶುಪಾಲರಾದ ಶ್ರೀ ನವೀನ್ ಕುಮಾರ್ ಶೆಟ್ಟಿಯವರು ಕುಂದಾಪುರದ ಲಯನ್ಸ್ ಕ್ಲಬ್ ಇದರ ಅಧ್ಯಕ್ಷರಾಗಿ ಆಯ್ಕೆ ಯಾಗಿದ್ದಾರೆ . ಈ ಹಿನ್ನೆಲೆಯಲ್ಲಿ ಕಾಲೇಜಿನ ಭೋದಕ -ಭೋಧಕೇತರ ಸಿಬ್ಬಂದಿಗಳು ಶುಭಕೋರಿದರು .
ಶಿಕ್ಷ ಪ್ರಭ ಅಕಾಡೆಮಿ ಕುಂದಾಪುರ :ಸಿಎ ಪರೀಕ್ಷೆ ಸಾಧಕ ವಿದ್ಯಾರ್ಥಿಗಳಿಗೆ ಸನ್ಮಾನ
ಕುಂದಾಪುರ(ಜು,15): ಸಿಎ /ಸಿಎಸ್ ಪರೀಕ್ಷೆಗಳಿಗೆ ಗುಣಮಟ್ಟದ ತರಬೇತಿಯನ್ನು ನೀಡುತ್ತಾ ರಾಷ್ಟ್ರೀಯ ಮಟ್ಟದ ಅನೇಕ ರ್ಯಾಂಕ್ ಗಳನ್ನು ಪಡೆದ ಸಂಸ್ಥೆ ಶಿಕ್ಷ ಪ್ರಭ ಅಕಾಡೆಮಿ ಆಫ್ ಕಾಮರ್ಸ್ ಎಜುಕೇಶನ್ (ಸ್ಪೇಸ್) ಕುಂದಾಪುರ. ಸಿಎ ಅಂತಿಮ ಹಂತದ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿದ ಸಂಸ್ಥೆಯ ವಿದ್ಯಾರ್ಥಿಗಳನ್ನು ಅಭಿನಂದಿಸುವ ಕಾರ್ಯಕ್ರಮವನ್ನು ಜುಲೈ15ರಂದು ಕುಂದೇಶ್ವರ ರಸ್ತೆಯ ಸಂಸ್ಥೆಯ ಕಚೇರಿಯ ಸಭಾಂಗಣದಲ್ಲಿ ಹಮ್ಮಿಕೊಂಡಿತು. ಇನ್ಸ್ಟಿಟ್ಯೂಟ್ ಆಫ್ ಚಾರ್ಟ್ ಡ್ ಅಕೌಂಟೆಂಟ್ಸ್ ಆಫ್ ಇಂಡಿಯಾ ಮೇ 2022 ರಲ್ಲಿ ನಡೆಸಿದ […]










