ಕುಂದಾಪುರ(ಮಾ.24): ಎಂಐಟಿ ಕುಂದಾಪುರದ ಎಂಬಿಎ ವಿದ್ಯಾರ್ಥಿಗಳು ಸಿದ್ಧಪಡಿಸಿದ “ಜನತಾ ಗ್ರೂಪ್ಗಾಗಿ ಸಾಮರ್ಥ್ಯ ಆಧಾರಿತ ಸಂದರ್ಶನಕ್ಕಾಗಿ ಪ್ರಶ್ನಾವಳಿ” ಎಂಬ ಪುಸ್ತಕದ ಬಿಡುಗಡೆ ಕಾರ್ಯಕ್ರಮವು ಇತ್ತೀಚೆಗೆ ಕೋಟಾದ ಜನತಾ ಗ್ರೂಪ್ನಲ್ಲಿ ನಡೆಯಿತು. ಜನತಾ ಗ್ರೂಪ್ ಕೋಟ ಇದರ ಸಿಇಒ, ಡಾ.ಧಾನೇಶ್ ಜೇವಾನಿ, ಸಿಎಫ್ಒ ಅಶ್ವಥ್ ಶೆಟ್ಟಿ, ಮಾನವ ಸಂಪನ್ಮೂಲ ವಿಭಾಗದ ಮುಖ್ಯಸ್ಥರಾದ ಎಂ.ಎಸ್. ಕೃಷ್ಣ, ಪ್ರಮೋಟರ್ ಗಳಾದ ಶ್ರೀ ಪ್ರಶಾಂತ್ ಕುಂದರ್, ಶ್ರೀ ರಕ್ಷಿತ್ ಕುಂದರ್, ಕಾರ್ಖಾನೆಯ ಉಸ್ತುವಾರಿ ಶ್ರೀ ಶ್ರೀನಿವಾಸ ಕುಂದರ್, ಮೂಡ್ಲಕಟ್ಟೆ ಕಾಲೇಜಿನ ಶೈಕ್ಷಣಿಕ ವಿಭಾಗದ ಡೀನ್ ಹಾಗೂ ಎಂಬಿಎ ವಿಭಾಗದ ಮುಖ್ಯಸ್ಥರಾದ ಡಾ. […]
Author: KundaVahini Editor
ಡಾ|ಬಿ. ಬಿ ಹೆಗ್ಡೆ ಕಾಲೇಜು ವಿದ್ಯಾರ್ಥಿಗಳಿಂದ ಶ್ರೀ ಗಣೇಶ್ ಕಲ್ಪತರು ಇಂಡಸ್ಟ್ರೀಸ್ ಗೆ ಭೇಟಿ
ಕುಂದಾಪುರ (ಮಾ.24):ಇಲ್ಲಿನ ಡಾ|ಬಿ. ಬಿ ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಅರ್ಥಶಾಸ್ತ್ರ ಸಂಘ, ವಾಣಿಜ್ಯ ಸಂಘ ಹಾಗೂ ರೋಟರ್ಯಾಕ್ಟ್ ಕ್ಲಬ್ ನ ವಿದ್ಯಾರ್ಥಿಗಳು ಕೋಟೇಶ್ವರದ ಶ್ರೀ ಗಣೇಶ್ ಕಲ್ಪತರು ಇಂಡಸ್ಟ್ರೀಸ್ ಗೆ ಕೌಶಲ್ಯ ಆಭಿವ್ರದ್ಧಿ ಹಾಗೂ ತರಬೇತಿ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಮಾ.24 ರಂದು ಭೇಟಿ ನೀಡಿದರು. ಈ ಸಂಧರ್ಭದಲ್ಲಿ ಶ್ರೀ ಗಣೇಶ್ ಕಲ್ಪತರು ಇಂಡಸ್ಟ್ರೀಸ್ ನ ಮಾಲಕರಾದ ಶ್ರೀ ಚಂದ್ರಶೇಖರ್ ಹಾಗೂ ಸಾತ್ವಿಕ್ ರವರು ವಿದ್ಯಾರ್ಥಿಗಳಿಗೆ ಮಾಹಿತಿ ನೀಡಿದರು. ಕಾಲೇಜಿನ […]
ಕುಂದಾಪುರ :ಸ್ವಾತಂತ್ರ್ಯ ಹೋರಾಟಗಾರ ಕೊಳ್ಕೈಬೈಲು ಮಹಾಬಲ ಶೆಟ್ಟಿಯವರ ಮನೆಗೆ ನಾಮಫಲಕ ಅನಾವರಣ ಕಾರ್ಯಕ್ರಮ
ಸೌಕೂರು(ಮಾ,13): ಸ್ವಾತಂತ್ರ್ಯ ಹೋರಾಟಗಾರ ಕೊಳ್ಕೈಬೈಲು ಮಹಾಬಲ ಶೆಟ್ಟಿಯವರ ಮನೆಗೆ ನಾಮಫಲಕ ಅನಾವರಣ ಕಾರ್ಯಕ್ರಮ ಮಾ.13ರಂದು ಕುಂದಾಪುರದ ಗುಳ್ವಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಸೌಕೂರು ಬೋಳ್ ಕಟ್ಟೆನಲ್ಲಿ ನಡೆಯಿತು. ಕುಂದಾಪುರ ಗ್ರಾಮಾಂತರ ಪೋಲಿಸ್ ಠಾಣೆ ಕಂಡ್ಲೂರು ಇದರ ಠಾಣಾಧಿಕಾರಿ ಶ್ರೀ ನಿರಂಜನ್ ಗೌಡ ರವರು ನಾಮ ಫಲಕ ಅನಾವರಣಗೈದರು. ಕೊಳ್ಕೈಬೈಲು ಮಹಾಬಲ ಶೆಟ್ಟಿ ಯವರ ಕೊಡುಗೆಯಕುರಿತು ಅಂತರಾಷ್ಟ್ರೀಯ ಚಿತ್ರ ಕಲಾವಿದ ಮಹೇಂದ್ರ ವಕ್ವಾಡಿ ತಿಳಿಸಿದರು.ಕಾರ್ಯಕ್ರಮದ ಅಧ್ಯಕ್ಷತೆಯನ್ನು ರಾಘವೇಂದ್ರ ಮೊಗವೀರ ದುರ್ಗಾ ನಗರ ಸೌಕೂರು […]
ವರಸಿದ್ಧಿ ವಿನಾಯಕ ಪಿ.ಯು ಕಾಲೇಜು ಕೆರಾಡಿ:ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ ಕಾರ್ಯಕ್ರಮ
ಕೆರಾಡಿ(ಮಾ.20): ಇಲ್ಲಿನ ವರಸಿದ್ಧಿ ವಿನಾಯಕ ಪಿ.ಯು ಕಾಲೇಜಿನ 2021 – 2022 ನೇ ಶೈಕ್ಷಣಿಕ ವರ್ಷದ ದ್ವಿತೀಯ ಪಿ ಯು ಸಿ ವಿದ್ಯಾರ್ಥಿಗಳ ಬೀಳ್ಕೊಡುಗೆ ಕಾರ್ಯಕ್ರಮ ಮಾ.17 ರಂದು ಕಾಲೇಜಿನ ಕ್ರಷ್ಣಮ್ಮ ಸಭಾಭವನದಲ್ಲಿ ಜರುಗಿತು. ಕಾಲೇಜಿನ ಸಂಸ್ಥಾಪಕರಾದ ಶ್ರೀ ಕೆರಾಡಿ ಚಂದ್ರಶೇಖರ ಶೆಟ್ಟಿ ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿದ್ದರು. ವಿದ್ಯಾರ್ಥಿಗಳು ಎರಡು ವರ್ಷದ ತಮ್ಮ ಕಾಲೇಜು ಜೀವನದ ಅನುಭವ ಅನಿಸಿಕೆಗಳನ್ನು ಹಂಚಿಕೊಂಡರು. ತದನಂತರ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು. ವೇದಿಕೆಯಲ್ಲಿ ಪ್ರಾಂಶುಪಾಲರಾದ […]
ಸಂತ ಮೇರಿ ಕಾಲೇಜು ಶಿರ್ವ: ಎನ್.ಎಸ್.ಎಸ್ ವಾರ್ಷಿಕ ವಿಶೇಷ ಶಿಬಿರ ಉದ್ಘಾಟನೆ
ಶಿವ೯(ಮಾ.20) : ಸಂತ ಮೇರಿ ಕಾಲೇಜಿನ ಸೇವಾ ಯೋಜನಾ ಘಟಕದ ವಾರ್ಷಿಕ ವಿಶೇಷ ಶಿಬಿರವು ವಿಜ್ಞಾನ ವೈಜ್ಞಾನಿಕ ಮನೋಧರ್ಮ ಕ್ಕಾಗಿ ಯುವಜನತೆ ಎಂಬ ಧ್ಯೇಯದ ಅಡಿಯಲ್ಲಿ ಪ್ರೌಢ ಶಾಲಾ ವಿಭಾಗ ಸರಕಾರಿ ಪದವಿಪೂರ್ವ ಕಾಲೇಜು ವಿದ್ಯಾನಗರ ಮುದರಂಗಡಿಯಲ್ಲಿ ನಡೆಯಿತು. ಪ್ರತಿಯೊಬ್ಬ ರಾಷ್ಟ್ರೀಯ ಸೇವಾ ಯೋಜನೆಯ ಶಿಬಿರಾಥಿ೯ಯು ನಿಷ್ಠೆಯಿಂದ ಪಾಲ್ಗೊಂಡು ತನ್ನ ಮುಂದಿನ ಜೀವನದಲ್ಲಿ ನಾಯಕನಾಗಿ ಹೊರಹೊಮ್ಮಲು ಸಾಧ್ಯವೆಂದು ಕಾರ್ಯಕ್ರಮ ಉದ್ಘಾಟಿಸಿ ಮುದರಂಗಡಿ ಗ್ರಾಮ ಪಂಚಾಯತ್ ಉಪಾಧ್ಯಕ್ಷಶ್ರೀ ಶರತ್ ಶೆಟ್ಟಿ ಮಾತನಾಡಿದರು. ಬದುಕಿನಲ್ಲಿ […]
ರಾಜ್ಯ ಮಟ್ಟದ ಕ್ವಿಜ್: ಕುಂದಾಪುರ ಸರಕಾರಿ ಪದವಿ ಪೂರ್ವ ಕಾಲೇಜು ಪ್ರಥಮ ಸ್ಥಾನ
ಕುಂದಾಪುರ (ಮಾ.20): ಮೂಡ್ಲಕಟ್ಟೆ ಇನ್ಸಿಟ್ಯೂಟ್ ಆಫ್ ಟೆಕ್ನಾಲಜಿ ವತಿಯಿಂದ ರಾಷ್ಟ್ರೀಯ ವಿಜ್ಞಾನ ದಿನದಂದು ನಡೆಸಿದ ಜ್ಞಾನ ವಿಜ್ಞಾನ, ರಾಜ್ಯಮಟ್ಟದ ಕ್ವಿಜ್ನಲ್ಲಿ ಸರಕಾರಿ ಪದವಿ ಪೂರ್ವ ಕಾಲೇಜು ಕುಂದಾಪುರ ವಿಜ್ಞಾನ ವಿದ್ಯಾರ್ಥಿಗಳಾದ ಕುಮಾರಿ ಅನನ್ಯ ಹಾಗೂ ಕುಮಾರಿ.ನಾಗಶ್ರೇಯಾ ಪ್ರಥಮ ಸ್ಥಾನಗಳಿಸಿ ಕಾಲೇಜಿಗೆ ಕೀರ್ತಿ ತಂದಿರುತ್ತಾರೆ. ಅವರಿಗೆ ಕಾಲೇಜಿನ ಪ್ರಾಂಶುಪಾಲರಾದ ಶ್ರೀ ರಾಮಕೃಷ್ಣ ಬಿ.ಜಿ ಬಹುಮಾನ ನೀಡಿ ಅಭಿನಂದಿಸಿದರು. ಈ ಸಂದರ್ಭದಲ್ಲಿ ಮೂಡ್ಲಕಟ್ಟೆ ಇಂಜಿನಿಯರಿಂಗ್ ಕಾಲೇಜಿನ ಉಪನ್ಯಾಸಕರು ಉಪಸ್ಥಿತರಿದ್ದರು. ಉಪನ್ಯಾಸಕ ಕಾಳಾವರ ಶ್ರೀ ಉದಯ […]
ಸಾಮಾಜಿಕ ಹಿತ ಚಿಂತನೆ ಯುವಕರಿಗೆ ಮುಖ್ಯ: ಯುವಶಕ್ತಿ ಬೆಳ್ಳಿ ಹಬ್ಬದಲ್ಲಿ ಸಚಿವ ಕೋಟ ಅಭಿಮತ
ವಕ್ವಾಡಿ(ಮಾ.20): ಸ್ವಾಸ್ಥ್ಯ ಸಮಾಜಕ್ಕೆ ಪ್ರಜ್ಞಾವಂತ ಯುವಕರ ಪಾಲು ಮಹತ್ತರವಾದದ್ದು. ಊರಿನ ಸಮಗ್ರ ಅಭಿವೃದ್ಧಿಗಾಗಿ ಯುವಕರು ದುಡಿಯಬೇಕು ಎಂದು ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು. ಯುವಶಕ್ತಿ ಮಿತ್ರ ಮಂಡಲಿ (ರಿ.) ಹೆಗ್ಗಾರ್ ಬೈಲು, ವಕ್ವಾಡಿ ಇದರ ಬೆಳ್ಳಿ ಹಬ್ಬದ ಪ್ರಯಕ್ತ ಹಮ್ಮಿಕೊಂಡ ಯುವ ಸಂಭ್ರಮ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಪ್ರಪಂಚದ ಯಾವುದೇ ದೇಶಗಳಲ್ಲೂ ಇಲ್ಲದಷ್ಟು ಯುವಶಕ್ತಿ ನಮ್ಮ ದೇಶದಲ್ಲಿದೆ. ಯುವ ಪೀಳಿಗೆಯಲ್ಲಿರುವ […]
ರಾಷ್ಟ್ರಮಟ್ಟದ ದೇಹದಾಢ್ಯ ಸ್ಪರ್ಧೆ: ಶರತ್ ಶೇರುಗಾರ್ ಗಂಗೊಳ್ಳಿಗೆ ಚಿನ್ನದ ಪದಕ
ಕುಂದಾಪುರ (ಮಾ.16): ಪಂಜಾಬಿನ ಮೊಹಾಲಿಯಾ ಚಂಡೀಗಢ ಯುನಿವರ್ಸಿಟಿಯಲ್ಲಿ ಇತ್ತೀಚೆಗೆ ನಡೆದ ವಿಶ್ವವಿದ್ಯಾನಿಲಯಗಳ ಅಖಿಲ ಭಾರತ ಮಟ್ಟದ 65 ಕೆ.ಜಿ ವಿಭಾಗದ ದೇಹದಾಢ್ಯ ಸ್ಪರ್ಧೆಯಲ್ಲಿ ಗಂಗೊಳ್ಳಿಯ ಶರತ್ ಶೇರುಗಾರ್ ಚಿನ್ನದ ಪದಕವನ್ನು ಗಳಸಿ ವಿಶೇಷ ಸಾಧನೆಗೈದಿದ್ದಾರೆ. ಇಷ್ಟೇ ಅಲ್ಲದೇ ಮಾ. 5 ರಂದು ಉಡುಪಿಯ ಮೌಂಟ್ ರೋಜರಿ ಚರ್ಚೆ ಗ್ರೌಂಡ್ ನಲ್ಲಿ ನಡೆದ ಜಿಲ್ಲಾ ಮಟ್ಟದ 70 ಕೆ.ಜಿ ವಿಭಾಗದ ದೇಹದಾಢ್ಯ ಸ್ಪರ್ಧೆಯಲ್ಲಿ ಮಿಸ್ಟರ್ ಉಡುಪಿ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಹಾಗೂ ಮಾ.6ರಂದು ಸಂತೆಕಟ್ಟೆಯಲ್ಲಿ ನಡೆದ ರಾಜ್ಯ ಮಟ್ಟದ ಮಿಸ್ಟರ್ […]
ಸರ್ಕಾರಿ ನೌಕರರ ಜಿಲ್ಲಾ ಮಟ್ಟದ ಕ್ರೀಡಾಕೂಟ :ಶಿಕ್ಷಕಿ ಕೃಪಾ ರಾಜ್ಯಮಟ್ಟಕ್ಕೆ ಆಯ್ಕೆ
ಮಂಗಳೂರು (ಮಾ.16): ದಕ್ಷಿಣ ಕನ್ನಡ ಜಿಲ್ಲಾಡಳಿತ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಯೋಗದಲ್ಲಿ ಸೈಂಟ್ ಅಲೋಸಿಯಸ್ ಈಜುಕೊಳದಲ್ಲಿ ನಡೆದ ಸರ್ಕಾರಿ ನೌಕರರ ಜಿಲ್ಲಾ ಮಟ್ಟದ ಕ್ರೀಡಾಕೂಟದ ಈಜುಸ್ಪರ್ಧೆಯಲ್ಲಿ ಭಾಗವಹಿಸಿದ ಸರಕಾರಿ ಪ್ರೌಢಶಾಲೆ ಮುಲ್ಲಕಾಡು ಇಲ್ಲಿನ ಹಿಂದಿ ಶಿಕ್ಷಕಿ ಕೃಪಾ ರವರು 200 ಮೀ. ಫ್ರೀ ಸ್ಟೈಲ್ ಚಿನ್ನದ ಪದಕ, 100 ಮೀ. ಬ್ರೆಸ್ಟ್ ಸ್ಟ್ರೋಕ್ನಲ್ಲಿ ಬೆಳ್ಳಿ ಪದಕ, 50 ಮೀ ಬ್ರೆಸ್ಟ್ ಸ್ಟ್ರೋಕ್ನಲ್ಲಿ ಬೆಳ್ಳಿ ಪದಕ ಪಡೆದು ರಾಜ್ಯಮಟ್ಟಕ್ಕೆ […]
ಇ ಸಿ ಆರ್ ಕಾಲೇಜು: ಎನ್ ಎಸ್ ಎಸ್ ವಾರ್ಷಿಕ ವಿಶೇಷ ಶಿಬಿರ 2021-22 ಉದ್ಘಾಟನೆ
ಮಧುವನ( ಮಾ.15): ಇಲ್ಲಿನ ಇ ಸಿ ಆರ್ ಕಾಲೇಜಿನ ಎನ್ ಎಸ್ ಎಸ್ ಘಟಕದ ವಾರ್ಷಿಕ ವಿಶೇಷ ಶಿಬಿರ2021-22 ರ ಉದ್ಘಾಟನಾ ಸಮಾರಂಭವು ಮಾ. 14 ರಂದು ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಕಟ್ಟಿನಮಕ್ಕಿ, ಹರ್ಕೂರು ಕುಂದಾಪುರ ಇಲ್ಲಿ ನೆರವೇರಿತು. ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದ ಆಲೂರು ಗ್ರಾಮ ಪಂಚಾಯತ್ನ ಅಧ್ಯಕ್ಷರಾದ ಶ್ರೀಮತಿ ಜಲಜ ಶೆಡ್ತಿಯವರು ಕಾರ್ಯಕ್ರಮವನ್ನು ಉದ್ಘಾಟಿಸಿ, ವಿದ್ಯಾರ್ಥಿಗಳು ಶಿಬಿರದ ಉಪಯೋಗ ಪಡೆದುಕೊಳ್ಳಬೇಕು ಎಂದು ಹೇಳಿದರು. ಕಾಲೇಜಿನ ಪ್ರಾಂಶುಪಾಲರಾದ ಶ್ರೀ […]










