ಉಚ್ಚಿಲ(ಮಾ.5): ಮೊಗವೀರ ಸಮುದಾಯದ ಆರಾಧ್ಯ ದೇವತೆ ಉಚ್ಚಿಲ ಮಹಾಲಕ್ಷ್ಮೀ ದೇವಸ್ಥಾನ ಪುನಃಪ್ರತಿಷ್ಠೆ ,ಬ್ರಹ್ಮಕಲಶೋತ್ಸವ ಹಾಗೂ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ಎಪ್ರಿಲ್ 01ರಿಂದ 15ರವರಗೆ ಜರುಗಲಿದ್ದು , ಹೊರೆ ಕಾಣಿಕೆ,ಪುನರ್ ಪ್ರತಿಷ್ಠೆ,ಬ್ರಹ್ಮಕಲಶ, ನಾಗಮಂಡಲೋತ್ಸವ ಮತ್ತು ಅಂತರ್ ರಾಜ್ಯ ಮಟ್ಟದ ಮತ್ತು ಸ್ಥಳೀಯ ಕಲಾವಿದರಿಂದ ನಡೆಯುವ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಉಪ್ಪಳ ದಿಂದ ಶೀರೂರು ತನಕ ಪ್ರಚಾರ ಪಡಿಸುವ ಉದ್ದೇಶದಿಂದ ನಿರ್ಮಿಸಲಾದ “ಶ್ರೀ ಮಹಾಲಕ್ಷ್ಮೀ ರಥ”ಕ್ಕೆ ಬ್ರಹ್ಮಕಲಶೋತ್ಸವ ಸಮಿತಿಯ ಅಧ್ಯಕ್ಷ ಹಾಗೂ ಜೀರ್ಣೋದ್ಧಾರ ಸಮಿತಿಯ […]
Author: KundaVahini Editor
ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಖಾರ್ವಿಕೇರಿ: ಪ್ರಥಮ ಚಿಕಿತ್ಸೆ ಪ್ರಾತ್ಯಕ್ಷಿಕೆ
ಗಂಗೊಳ್ಳಿ(ಮಾ.4): ಇಲ್ಲಿನ ಕೊಂಚಾಡಿ ರಾಧಾ ಶೆಣೈ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಖಾರ್ವಿಕೇರಿಯ ಹಸಿರು ಇಕೋ ಕ್ಲಬ್ ವತಿಯಿಂದ, ಫೆ.26 ರಂದು ಪ್ರಥಮ ಚಿಕಿತ್ಸೆ ಪ್ರಾತ್ಯಕ್ಷಿಕೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ಶಾಲಾ ಮುಖ್ಯ ಶಿಕ್ಷಕರಾದ ಶ್ರೀಮತಿ ಸುಮತಿ.ಎಂ ಅಧ್ಯಕ್ಷತೆ ವಹಿಸಿ, ಕಾರ್ಯಕ್ರಮ ಉದ್ಘಾಟಿಸಿ ಶುಭಹಾರೈಸಿದರು. SDMC ಸದಸ್ಯೆ ಶ್ರೀಮತಿ ರೇಷ್ಮಾ ಖಾರ್ವಿ ಉಪಸ್ಥಿತರಿದ್ದರು. ದೈಹಿಕ ಶಿಕ್ಷಣ ಶಿಕ್ಷಕ ಶ್ರೀ ಉಮೇಶ್ ಕುಂದರ್ ಪ್ರಥಮ ಚಿಕಿತ್ಸೆ ಕುರಿತು ಪ್ರಾತ್ಯಕ್ಷಿಕೆ ಯನ್ನು ನೆರವೇರಿಸಿಕೊಟ್ಟರು. ಇಕೋ […]
ಜಿಲ್ಲಾ ಮಟ್ಟದ ಕಿರುಚಿತ್ರ ಸ್ಪರ್ಧೆ: ಡಾ. ಬಿ.ಬಿ ಹೆಗ್ಡೆ ಕಾಲೇಜಿಗೆ ಪ್ರಥಮ ಸ್ಥಾನ
ಕುಂದಾಪುರ (ಮಾ.3): ಮಂಗಳೂರು ವಿಶ್ವವಿದ್ಯಾಲಯ,ಕರ್ನಾಟಕ ರಾಜ್ಯ ಏಡ್ಸ್ ಪ್ರಿವೆನ್ಶನ್ ಸೊಸೈಟಿ,ಜಿಲ್ಲಾ ಪಂಚಾಯತ್ ಉಡುಪಿ,ಜಿಲ್ಲಾ ಆರೋಗ್ಯ ಹಾಗೂ ಕುಟುಂಬ ಕಲ್ಯಾಣ ಇಲಾಖೆ,ಜಿಲ್ಲಾ ಏಡ್ಸ್ ನಿಯಂತ್ರಣ ಹಾಗೂ ತಡೆಗಟ್ಟುವ ಘಟಕ ಉಡುಪಿ, ರಾಷ್ಟ್ರೀಯ ಸೇವಾ ಯೋಜನಾ ಘಟಕ,ರೆಡ್ ರಿಬ್ಬನ್ ಕ್ಲಬ್,ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಶಂಕರನಾರಾಯಣ,ರೋಟರಿ ಕ್ಲಬ್ ಶಂಕರನಾರಾಯಣ,ರಕ್ತ ನಿಧಿ ಕೇಂದ್ರ ಜಿಲ್ಲಾಸ್ಪತ್ರೆ ಉಡುಪಿ ಇವರ ಸಂಯುಕ್ತ ಆಶ್ರಯದಲ್ಲಿ ಏರ್ಪಡಿಸಿದ್ದ ರಾಷ್ಟ್ರೀಯ ಯುವ ದಿನಾಚರಣೆಯ ಪ್ರಯುಕ್ತ ಉಡುಪಿ ಜಿಲ್ಲಾ ಮಟ್ಟದ ಕಿರುಚಿತ್ರ ಸ್ಪರ್ಧೆ […]
ಹಕ್ಲಾಡಿ :ಸ್ವಾತಂತ್ರ್ಯ ಹೋರಾಟಗಾರ ಮಂಕಿ ದಿ. ರಾಮಣ್ಣರ ಮನೆಗೆ ನಾಮಫಲಕ ಅಳವಡಿಕೆ ಕಾರ್ಯಕ್ರಮ
ಮುಳ್ಳಿಕಟ್ಟೆ(ಫೆ,27 ): ಕುಂದಾಪುರದ ಹಕ್ಲಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಕಟ್ಟಿನಮಕ್ಕಿ ಗೋಳಿಕಟ್ಟೆಯ ಸ್ವಾತಂತ್ರ್ಯ ಹೋರಾಟಗಾರಮಂಕಿ ದಿ.ರಾಮಣ್ಣನವರ ಮನೆಗೆ ಸ್ವಾತಂತ್ರ್ಯ ಹೋರಾಟಗಾರರ ಮನೆ ಎನ್ನುವ ನಾಮ ಫಲಕ ಅಳವಡಿಕೆ ಕಾರ್ಯಕ್ರಮ ಫೆ.27ರಂದು ನಡೆಯಿತು. ಕಾರ್ಯಕ್ರಮದಲ್ಲಿ ನಾಮ ಫಲಕವನ್ನು ಮೊಗವೀರ ಮಹಾಜನ ಸೇವಾ ಸಂಘ (ರಿ), ಬಗ್ವಾಡಿ ಹೋಬಳಿ ,ಕುಂದಾಪುರ ಶಾಖೆಯ ಅಧ್ಯಕ್ಷರಾದ ಶ್ರೀ ಉದಯ ಕುಮಾರ್ ಹಟ್ಟಿಯಂಗಡಿ ಯವರು ಅನಾವರಣಗೈದರು. ಭಾರತದ ಸ್ವಾತಂತ್ರ್ಯಕ್ಕೆ ಕರಾವಳಿಗರ ಕೊಡುಗೆ ಹಾಗೂ ಮಂಕಿ ರಾಮಣ್ಣರ ಸೇವೆಯ […]
ಡಾ|ಬಿ. ಬಿ ಹೆಗ್ಡೆ ಕಾಲೇಜು : ಮಾತೃ ಭಾಷಾ ದಿನಾಚರಣೆ
ಕುಂದಾಪುರ (ಫೆ.25): ಡಾ| ಬಿ .ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜು ಕುಂದಾಪುರ ಇದರ ಕನ್ನಡ ವಿಭಾಗದ ಆಯೋಜನೆಯಲ್ಲಿ ಮಾತೃ ಭಾಷಾ ದಿನಾಚರಣೆಯನ್ನು ಫೆ.25 ರಂದು ಆಯೋಜಿಸಲಾಗಿತ್ತು.ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ ಕುಂದಾಪುರದ ಆರ್.ಎನ್. ಶೆಟ್ಟಿ ಪದವಿ ಪೂರ್ವ ಕಾಲೇಜಿನ ಕನ್ನಡ ವಿಭಾಗದ ಮುಖ್ಯಸ್ಥ ಶ್ರೀ ಕ್ರಷ್ಣಮೂರ್ತಿ ಡಿ.ಬಿ ಮಾತನಾಡಿ ಸಂಸ್ಕೃತಿ ,ಸಂಪ್ರದಾಯ, ಆಚರಣೆಗಳು ಮರೆಯಾದಂತೆ ಭಾಷೆಯ ಪದಗಳು ಮರೆಯಾಗುತ್ತದೆ . ಆ ನಿಟ್ಟಿನಲ್ಲಿ ನಮ್ಮ ಮಾತೃಭಾಷೆಯನ್ನು ಉಳಿಸಿ ಬೆಳೆಸುವ […]
“ದೇಗುಲವೀ ದೇಹ”
ಹೃದಯವು ಬಲೂನಲ್ಲ ….ಆದರೂ ಗಾಳಿ ತುಂಬಿಸಿಕೊಳ್ಳುತ್ತೆರಕ್ತವು ನೀರಲ್ಲ …ಆದರೂ ದೇಹದೊಳಗೆ ಹರಿಯುತ್ತಿರುತ್ತೆಹೊಟ್ಟೆಯು ಚೀಲವಲ್ಲ…ಆದರೂ ಆಹಾರ ತುಂಬಿಸಿಕೊಳ್ಳುತ್ತೆಕೈಕಾಲುಗಳು ಯಂತ್ರವಲ್ಲ…ಆದರೂ ಪ್ರತಿಕ್ಷಣವೂ ಚಲನೆಯಲ್ಲಿರುತ್ತೆ ಎಲುಬುಗಳು ಕಬ್ಬಿಣವಲ್ಲ …ಆದರೂ ದೇಹಕ್ಕೆ ರಕ್ಷಣೆ ನೀಡುತ್ತೆಕೈ-ಬೆರಳುಗಳು ಅಳತೆಯ ಕೋಲಲ್ಲ…ಆದರೂ ಅಳತೆಗೆ ಉಪಯೋಗವಾಗುತ್ತೆಚರ್ಮ ಕಂಬಳಿಯಲ್ಲ…..ಆದರೂ ಬಿಸಿಲು ಮಳೆ ಚಳಿಗೆ ಕವಚವಾಗುತ್ತೆಕಣ್ಗಳೆರಡು ಸಮುದ್ರವಲ್ಲ….ಆದರೂ ದುಃಖದಿ ಉಕ್ಕಿ ಹರಿಯುತ್ತೆಮೆದುಳು ಸಾಧನವಲ್ಲ… ಆದರೂ ದೇಹದಾಂಗವ ಶೋಧಿಸುತ್ತಿರುತ್ತೆ… ಕವನ : ಜಗದೀಶ್ ಮೇಲ್ಮನೆ ಉಪ್ಪುಂದ
ಉಪ್ಪುಂದ: ಮಾ. 6 ರಂದು ಜ| ಬಿಪಿನ್ ರಾವತ್ ಕೃತಿ ಲೋಕಾರ್ಪಣೆ
ಬೈಂದೂರು (ಫೆ.26): ಭಾರತೀಯ ಸೇನೆಯನ್ನು ಸ್ವಾವಲಂಬಿ ಮತ್ತು ಶಕ್ತಿಶಾಲಿಯಾಗಿಸಲು ಸೇವಾಕಾಲದುದ್ದಕ್ಕೂ ಶ್ರಮಿಸುತ್ತಾ, ಕಳೆದ ವರ್ಷ ಡಿ.8 ರಂದು ಹೆಲಿಕಾಪ್ಟರ್ ದುರ್ಘಟನೆಯಲ್ಲಿ ವಿಧಿವಶರಾದ ಪದ್ಮವಿಭೂಷಣ CDS ಜ. ಬಿಪಿನ್ ರಾವತ್ ಅವರ ಪ್ರೇರಣಾದಾಯಿ ವ್ಯಕ್ತಿತ್ವವನ್ನು ಜನಸಾಮಾನ್ಯರಿಗೆ ತಲುಪಿಸುವ ದೃಷ್ಟಿಯಿಂದ ಮಾಜಿ ಸೈನಿಕ, ಲೇಖಕ ಬೈಂದೂರು ಚಂದ್ರಶೇಖರ ನಾವಡರು `ಮಹಾನ್ ಸೇನಾನಿ ಜನರಲ್ ಬಿಪಿನ್ ರಾವತ್` ಕೃತಿ ರಚಿಸಿರುತ್ತಾರೆ. ಮಂಗಳೂರಿನ ಅವನಿ ಪ್ರಕಾಶನ ಕೃತಿಯನ್ನು ಹೊರತಂದಿದೆ.ಕೃತಿ ಲೋಕಾರ್ಪಣೆ ಸಮಾರಂಭವು ಭಾನುವಾರ ಮಾ. 6 […]
ಮೂಡ್ಲಕಟ್ಟೆ ಎಂ ಐ ಟಿ: ಮಾತೃಭಾಷೆ ದಿವಸ ಆಚರಣೆ
ಕುಂದಾಪುರ(ಫೆ.24):ಇಲ್ಲಿನ ಮೂಡ್ಲಕಟ್ಟೆ ಇಂಜಿನಿಯರಿಂಗ್ ಕಾಲೇಜಿನಲ್ಲಿ ಮಾತೃಭಾಷೆ ದಿವಸದ ಆಚರಣೆಯ ಪ್ರಯುಕ್ತ ವಿದ್ಯಾರ್ಥಿಗಳಿಗೆ ವಿವಿಧ ಸ್ಪರ್ಧೆಗಳನ್ನು ಆಯೋಜಿಸಲಾಯಿತು. ಮಾತೃಭಾಷೆ ವಿಷಯಕ್ಕೆ ಸಂಬಂಧಿಸಿದಂತೆ ಚಿತ್ರಕಲೆ ಹಾಗೂ ಭಾಷಣ ಸ್ಪರ್ಧೆಗಳಲ್ಲಿ ಅನೇಕ ವಿದ್ಯಾರ್ಥಿಗಳು ಭಾಗವಹಿಸಿದರು.ಪ್ರತಿಯೊಬ್ಬರಿಗೂ ಅವರ ಮಾತೃಭಾಷೆಯ ಮೇಲಿನ ಅಭಿಮಾನ ಹೆಚ್ಚಿಸುವ ಉದ್ದೇಶದಿಂದ ಪ್ರತೀ ವರ್ಷ ಫೆಬ್ರುವರಿ 21 ರಂದು ಅಂತರರಾಷ್ಟ್ರೀಯ ಮಾತೃಭಾಷೆ ದಿನವನ್ನು ಆಚರಿಸಲಾಗುತ್ತದೆ. ಈ ಸಂದರ್ಭದಲ್ಲಿ ಕಾಲೇಜಿನ ವಿವಿಧ ವಿಭಾಗಗಳ ಮುಖ್ಯಸ್ಥರು, ಸಿಬ್ಬಂದಿ ವರ್ಗ ಹಾಗೂ ವಿಧ್ಯಾರ್ಥಿಗಳು ಉಪಸ್ಥಿತರಿದ್ದರು. ಇ&ಸಿ ವಿಭಾಗದ ಪ್ರೊ. ಸೂಕ್ಷ್ಮ ಅಡಿಗ ಕಾರ್ಯಕ್ರಮ […]
ಮೂಡ್ಲಕಟ್ಟೆ ಎಂ ಐ ಟಿ: ಪ್ರಥಮ ವರ್ಷದ ಎಂಬಿಎ ವಿದ್ಯಾರ್ಥಿಗಳಿಗೆ ಓರಿಯಂಟೇಶನ್ ಕಾರ್ಯಕ್ರಮ
ಕುಂದಾಪುರ( ಫೆ.24): ಮೂಡ್ಲಕಟ್ಟೆ ಇಂಜಿನಿಯರಿಂಗ್ ಕಾಲೇಜಿನ ಎಂಬಿಎ ವಿಭಾಗದ ಪ್ರಥಮ ವರ್ಷದ ವಿದ್ಯಾರ್ಥಿಗಳಿಗೆ ಓರಿಯಂಟೇಶನ್ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿ ಹಾಗೂ ಸಂಪನ್ಮೂಲ ವ್ಯಕ್ತಿಯಾಗಿ ಜನತಾ ಗ್ರೂಪ್, ಕೋಟ ಇದರ ಮಾನವ ಸಂಪನ್ಮೂಲ ವಿಭಾಗದ ಮುಖ್ಯಸ್ಥರಾದ ಎಂ.ಎಸ್. ಕೃಷ್ಣ ಇವರು ಭಾಗವಹಿಸಿದ್ದರು. ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಇವರು ಮುಂದಿನ ಎರಡು ವರ್ಷಗಳ ವಿದ್ಯಾರ್ಥಿ ಜೀವನವನ್ನು ಯಾವ ರೀತಿಯಲ್ಲಿ ಸದುಪಯೋಗ ಪಡಿಸಿಕೊಳ್ಳಬೇಕು ಎಂದು ಮಾಹಿತಿ ನೀಡಿದರು. ಹಾಗೆಯೇ ಅರ್ಹತೆ, ಸಾಮರ್ಥ್ಯ ಮತ್ತು ಉದ್ಯೋಗಕ್ಕೆ ಬೇಕಾದ ಸೂಕ್ತತೆಗಳನ್ನು ಬೆಳೆಸಿಕೊಳ್ಳಲು […]
ಶ್ರೀ ಚಂದ್ರಶೇಖರ್ ಬಸ್ರೂರು ರವರಿಗೆ “ಭಾರತ ಸೇವಾ ರತ್ನ ಪ್ರಶಸ್ತಿ”
ಕುಂದಾಪುರ (ಫೆ.24):ಸುದ್ದಿ ಕಿರಣ ಟಿವಿ ವಾಹಿನಿ ಹಾಗೂ ಕನ್ನಡ ಮತ್ತು ಸಂಸ್ಕ್ರತಿ ಇಲಾಖೆ ಕೊಡಮಾಡುವ “ಭಾರತ ಸೇವಾ ರತ್ನ ಪ್ರಶಸ್ತಿ” ಯನ್ನು ಶ್ರೀ ಚಂದ್ರಶೇಖರ ಬಸ್ರೂರು ರವರಿಗೆ ಲಭಿಸಿದೆ. ಫೆ. 20 ರಂದು ರವೀಂದ್ರ ಕಲಾ ಕ್ಷೇತ್ರದ ನಯನ ಸಭಾಂಗಣ ಬೆಂಗಳೂರು ಇಲ್ಲಿ ನಡೆದ ಅಭಿನಂದನಾ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಯಿತು.ರಂಗಭೂಮಿ ಕಲಾವಿದರಾಗಿ,ನಾಟಕ ರಚನೆ ಹಾಗೂ ನಿರ್ದೇಶಕರು,ಸಿನಿಮಾ ನಟ,ನಿರ್ದೇಶಕ,ನಿರ್ಮಾಪಕರಾಗಿ,ಸಾರ್ವಜನಿಕ ಹೋರಾಟದಲ್ಲಿ ಮುಂಚೂಣಿಯಾಗಿ ಇವರು ಸೇವೆ ಸಲ್ಲಿಸಿರುತ್ತಾರೆ.










