ಕೋಟೇಶ್ವರ (ಫೆ.2): ಇಲ್ಲಿನ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಯಾದ ಎಕ್ಸಲೆಂಟ್ ಪದವಿ ಪೂರ್ವ ಕಾಲೇಜಿನಲ್ಲಿ ವಿಧ್ಯಾರ್ಥಿಗಳಿಗೆ ನೆನಪಿನ ಶಕ್ತಿ ವೃದ್ಧಿಸುವ ಹಾಗೂ ಪರಿಣಾಮಕಾರಿ ಕಲಿಕೆ ಕುರಿತಾದ ತರಬೇತಿ ಕಾರ್ಯಕ್ರಮ ಇತ್ತೀಚೆಗೆ ನಡೆಯಿತು. ಮೂಡ್ಲಕಟ್ಟೆ ಇಂಜಿನಿಯರಿಂಗ್ ಕಾಲೇಜಿನ ಉಪ ಪ್ರಾಂಶುಪಾಲರಾದ ಪ್ರೊ.ಮೆಲ್ವಿನ್ ಡಿ’ಸೋಜ ರವರು ಸಂಪನ್ಮೂಲ ವ್ಯಕ್ತಿ ಯಾಗಿ ಆಗಮಿಸಿ ವಿದ್ಯಾರ್ಥಿಗಳು ಯಾವ ರೀತಿಯಲ್ಲಿ ತಮ್ಮ ಎಡ ಹಾಗೂ ಬಲ ಭಾಗದ ಮೆದುಳನ್ನು ಸಮತೋಲನದಲ್ಲಿ ಇರಿಸಿಕೊಂಡು ನೆನಪಿನ ಶಕ್ತಿ ಹೆಚ್ಚಿಸ ಬೇಕು ಎಂಬುದನ್ನು […]
Author: KundaVahini Editor
ಅನಾರೋಗ್ಯ ಪೀಡಿತ ಮಗುವಿನ ಬಾಳಲ್ಲಿ ಬೆಳಕಾದ ಡಾ. ಗೋವಿಂದ ಬಾಬು ಪೂಜಾರಿ
ಡಾ. ಗೋವಿಂದ ಬಾಬು ಪೂಜಾರಿ ಇವರ ಹೆಸರು ಕೇಳದೆ ಇರುವವರು ಅತೀ ವಿರಳ. ಕನಾರ್ಟಕದ ಕರಾವಳಿ ಭಾಗದಿಂದ ಹಿಡಿದು ವಿವಿದ ರಾಜ್ಯಗಳಲ್ಲಿ ತಮ್ಮ ಉದ್ಯಮವನ್ನು ವಿಸ್ತಾರ ಮಾಡಿದ ಉದ್ಯಮ ಸಾಹಸಿ .ಕಡು ಬಡತನದಲ್ಲಿ ಜನಿಸಿದ ಇವರು ತಮ್ಮ ಸ್ವ ಪರಿಶ್ರಮದಿಂದನೆ ದುಡಿದು ಬಹುದೊಡ್ಡ ಯುವ ಉದ್ಯಮಿಗಳ ಸಾಲಿನಲ್ಲಿ ಗುರುತಿಸಿಕೊಂಡಿದ್ದಾರೆ. ಡಾ.ಗೋವಿಂದ ಪೂಜಾರಿಯವರು ತನ್ನ ದುಡಿಮೆಯ ಒಂದು ಭಾಗವನ್ನು ಸಮಾಜ ಸೇವೆಗೆ ಮೀಸಲಿರಿಸಿ ಕಡುಬಡವರು, ಅನಾರೋಗ್ಯ ಪೀಡಿತರು, ನಿರ್ಗತಿಕರು, ವಸತಿರಹಿತರ ಪಾಲಿಗೆ […]
ಡಾ. ಬಿ.ಬಿ. ಹೆಗ್ಡೆ ಕಾಲೇಜು : ರಕ್ಷಕ- ಶಿಕ್ಷಕ ಸಭೆ
ಕುಂದಾಪುರ (ಫೆ.1):ಈಗಿನ ಆಹಾರ ಪದ್ಧತಿ, ಮೊಬೈಲ್ ಬಳಕೆಗಳ ಕಾರಣಕ್ಕೆ ವಿದ್ಯಾರ್ಥಿಗಳಲ್ಲಿ ಮಾನಸಿಕ ಸಮಸ್ಯೆಗಳು ಹೆಚ್ಚಾಗುತ್ತಿವೆ. ದುರ್ಬಲ ಮನಸ್ಸಿನ ಮಕ್ಕಳ ಬಗ್ಗೆ ಪೋಷಕರು ಎಚ್ಚರಿಕೆ ವಹಿಸಬೇಕು. ಇಂತಹ ವಿದ್ಯಾರ್ಥಿಗಳನ್ನು ತರಗತಿಯಲ್ಲಿ ಸಾಮೂಹಿಕವಾಗಿ ವಿಚಾರಿಸುವುದಕ್ಕಿಂತ ಸಾಧ್ಯವಾದಷ್ಟು ಪ್ರತ್ಯೇಕವಾಗಿ ವಿಚಾರಣೆ ಅತಿ ಅವಶ್ಯಕ ಎಂದು ಖ್ಯಾತ ಮನೋವೈದ್ಯ ಡಾ.ಪಿ.ವಿ ಭಂಡಾರಿಯವರು ಹೇಳಿದರು. ಅವರು ಡಾ. ಬಿ.ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನಲ್ಲಿ ನಡೆದ ರಕ್ಷಕ ಶಿಕ್ಷಕ ಸಂಘದ ಸಭೆಯಲ್ಲಿ ಮುಖ್ಯ ಅತಿಥಿ ನೆಲೆಯಲ್ಲಿ ಮಾತನಾಡಿದರು. ಸಭೆಯ […]
ಆರೂರು: ಆರೋಗ್ಯ ಮಾಹಿತಿ-ನಾಟಕ ಕಾರ್ಯಕ್ರಮ
ಕೋಟ(ಫೆ.1): ಜಿಲ್ಲಾಡಳಿತ,ಜಿಲ್ಲಾ ಪಂಚಾಯತ್ ಉಡುಪಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಉಡುಪಿ, ಗಣೇಶ ಗಂಗೊಳ್ಳಿ ಹಾಗೂ ಬಳಗದವರ ಸಹಯೋಗದೊಂದಿಗೆ ಜಾನಪದ ಹಾಡು ಹಾಗೂ ನಾಟಕದ ಮೂಲಕ ಆರೋಗ್ಯ ಇಲಾಖೆಯ ಕಾರ್ಯಕ್ರಮಗಳು, ಯೋಜನೆಗಳು ಮತ್ತು ಸಾಂಕ್ರಾಮಿಕ ರೋಗದ ಮುಂಜಾಗ್ರತಾ ಕ್ರಮಗಳ ಕುರಿತು ಅರಿವು ಮೂಡಿಸುವ ಕಾರ್ಯಕ್ರಮವನ್ನು ಪೇತ್ರಿ ಪ್ರಾಥಮಿಕ ಆರೋಗ್ಯ ಕೇಂದ್ರ ವ್ಯಾಪ್ತಿಯ ಶ್ರೀ ಮೊರಾರ್ಜಿ ದೇಸಾಯಿ ಮಾದರಿ ವಸತಿ ಶಾಲೆ ಆರೂರಿನಲ್ಲಿ ಫೆ.1 ರಂದು ಹಮ್ಮಿಕೊಳ್ಳಲಾಯಿತು. ಈ […]
ಪ್ರೇಕ್ಷಕರ ಮನಗೆದ್ದ ಇಷ್ಟಾರ್ಥ ಪ್ರೊಡಕ್ಷನ್ಸ್ ಹೊಸ ತಂಡ
ಕಿರುಚಿತ್ರ ಲೋಕದಲ್ಲಿ ದಿನೇ ದಿನೇ ಹೊಸ ಪ್ರತಿಭೆಗಳು ಪರಿಚಯವಾಗುತ್ತಿದೆ. ಆ ಸಾಲಿನಲ್ಲಿ ಈಗ ಕುಂದಾಪುರದ ‘ಇಷ್ಟಾರ್ಥ ಪ್ರೊಡಕ್ಷನ್’ ಎನ್ನುವ ಹೊಸ ತಂಡ ಮೊದಲ ಹೆಜ್ಜೆ ಇಟ್ಟಿದೆ.ನಟನೆಯಿಂದ ನಿರ್ದೇಶನದ ತನಕ ಮೊದಲ ಬಾರಿಗೆ ಹೊಸ ಪ್ರತಿಭೆಗಳು ಸೇರಿಕೊಂಡು ಮಾಡಿರುವ “ಕಲ್ಮಶ” ಎನ್ನುವ ಕಿರುಚಿತ್ರ ಈಗ ಪ್ರೇಕ್ಷಕರ ಮನಗೆದ್ದು ಎಲ್ಲೆಡೆ ಸದ್ದು ಮಾಡುತ್ತಿದೆ.ಗೆಳೆತನದ ನಡುವೆ ಸ್ವಾರ್ಥ ಎಂಬುದು ಬಂದಾಗ ಏನಾಗಬಹುದು ಎಂಬುದನ್ನ ಎಳೆಯಾಗಿ ಇಟ್ಟುಕೊಂಡು ಮಾಡಿರುವ ಚಿತ್ರ, ಪ್ರೇಕ್ಷಕರ ಕುತೂಹಲಕ್ಕೆ ಕೊನೆತನಕ ತಿರುವುಗಳು […]
ಶ್ರೀ ಮೂಕಾಂಬಿಕಾ ದೇವಳದ ಸ್ವತಂತ್ರ ಪದವಿ ಪೂರ್ವ ಕಾಲೇಜು ಕೊಲ್ಲೂರು : ರಾಷ್ಟ್ರೀಯ ಮತದಾರರ ದಿನಾಚರಣೆ
ಕೊಲ್ಲೂರು(ಜ.30); ಇಲ್ಲಿನ ಶ್ರೀ ಮೂಕಾಂಬಿಕಾ ದೇವಳದ ಸ್ವತಂತ್ರ ಪದವಿ ಪೂರ್ವ ಕಾಲೇಜಿನಲ್ಲಿ ರಾಷ್ಟ್ರೀಯ ಮತದಾರರ ದಿನಾಚರಣೆಯನ್ನು ಜ.25 ರಂದು ಆಚರಿಸಲಾಯಿತು. ಕಾಲೇಜಿನ ಪ್ರಾಂಶುಪಾಲರಾದ ಶ್ರೀ ಎಸ್ ಅರುಣ್ಪ್ರಕಾಶ್ ಶೆಟ್ಟಿಯವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮತದಾನದ ಮಹತ್ವದ ಬಗ್ಗೆ ತಿಳಿಸಿದರು. ದೈಹಿಕ ಶಿಕ್ಷಣ ಉಪನ್ಯಾಸಕ ಸುಕೇಶ್ ಶೆಟ್ಟಿ ಪ್ರತಿಜ್ಞೆಯನ್ನು ಬೋಧಿಸಿದರು. ಕಾರ್ಯಕ್ರಮದಲ್ಲಿ ಕಾಲೇಜಿನ ಎಲ್ಲಾ ಉಪನ್ಯಾಸಕ ಉಪನ್ಯಾಸಕೇತರ ವೃಂದದವರು ಹಾಗೂ ಉಪಸ್ಥಿತರಿದ್ದರು.
ಸಂವಿಧಾನದ ಅರಿವು ಅಗತ್ಯ : ನರೇಂದ್ರ ಎಸ್ ಗಂಗೊಳ್ಳಿ
ಗಂಗೊಳ್ಳಿ (ಜ.30): ನಮ್ಮ ಸಂವಿಧಾನದ ಉನ್ನತ ಆಶಯಗಳನ್ನು ಅರ್ಥಮಾಡಿಕೊಳ್ಳಬೇಕಾದರೆ ಅದನ್ನು ಅಧ್ಯಯನ ಮಾಡುವಂತಹ ಕೌಶಲ್ಯವನ್ನು ನಾವು ಬೆಳೆಸಿಕೊಳ್ಳಬೇಕಿದೆ. ಪೂರ್ವಾಪರಗಳನ್ನು ಅರಿಯದೆ ಎಲ್ಲ ವಿಚಾರಗಳಿಗೂ ಅನಗತ್ಯವಾಗಿ ಸಂವಿಧಾನವನ್ನು ತಳುಕು ಹಾಕುವ ಕೆಟ್ಟ ಪ್ರವೃತ್ತಿ ನಮ್ಮಲ್ಲಿ ಕೊನೆಗಾಣಬೇಕಿದೆ ಎಂದು ಯುವ ಲೇಖಕ ನರೇಂದ್ರ ಎಸ್ ಗಂಗೊಳ್ಳಿ ಅಭಿಪ್ರಾಯಪಟ್ಟರು. ಅವರು ಇಲ್ಲಿನ ಗುಜ್ಜಾಡಿ ಗೋಪಾಲನಾಯಕ ಇಂಡೋರ್ ಸ್ಟೇಡಿಯಂನಲ್ಲಿ ಗಂಗೊಳ್ಳಿ ರೋಟರಾಕ್ಟ್ ಕ್ಲಬ್ ಮತ್ತು ಸರಸ್ವತಿ ವಿದ್ಯಾಲಯ ಪದವಿಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ಘಟಕದ […]
ಇ ಸಿ ಆರ್ ಕಾಲೇಜ್: 73 ನೇ ಗಣರಾಜ್ಯೋತ್ಸವ
ಮಧುವನ(ಜ.30): ಇ ಸಿ ಆರ್ ಕಾಲೇಜಿನಲ್ಲಿ 73ನೇ ಗಣರಾಜ್ಯೋತ್ಸವ ಸಂಭ್ರಮದಿಂದ ನೆರವೇರಿತು. ಸಂಸ್ಥೆಯ ಮುಖ್ಯಸ್ಥರಾದ ಶ್ರೀ ಮಧು ಟಿ ಭಾಸ್ಕರನ್ ಧ್ವಜಾರೋಹಣ ನೆರವೇರಿಸಿ ಪ್ರಜಾ ಪ್ರಭುತ್ವದ ಕುರಿತು ಮಾತನಾಡಿದರು. ಸಂಸ್ಥೆಯ ಆಡಳಿತಾಧಿಕಾರಿಗಳಾದ ಶ್ರೀ ಜೋಬಿನ್ ಜೋಸೆಫ್, ಶ್ರೀ ಅನಿಲ್ ಪಣಿಕ್ಕರ್, ಪ್ರಾಂಶುಪಾಲರಾದ ಶ್ರೀ ಆಕಾಶ್ ಸಾವಳ ಸಂಗ್, ಕೆನರಾ ಕಾಲೇಜ್ ಆಫ್ ನರ್ಸಿಂಗ್ನ ಪ್ರಾಂಶುಪಾಲರಾದ ಶ್ರೀ ನಟರಾಜ್ ಕೆ, ಸಿಬ್ಬಂದಿ ವರ್ಗ, ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ವಿದ್ಯಾರ್ಥಿಗಳಾದ ಕುಮಾರಿ ಸುಷ್ಮಿತಾ ಸ್ವಾಗತಿಸಿದರು, […]
ಸಂತ ಮೇರಿ ಮಹಾವಿದ್ಯಾಲಯದ 73 ನೇ ಗಣರಾಜ್ಯೋತ್ಸವ ಸಂಭ್ರಮಾಚರಣೆ
ಶಿರ್ವ(ಜ.29): ಸಂತ ಮೇರಿ ಮಹಾವಿದ್ಯಾಲಯದ 73ನೆ ಗಣರಾಜ್ಯೋತ್ಸವ ದಿನಾಚರಣೆ ಕಾಲೇಜಿನ ಎನ್.ಸಿ.ಸಿಯ ಭೂಯುವ ಸೇನಾದಳ ನೇತೃತ್ವದಲ್ಲಿ ನಡೆಯಿತು. ಮುಖ್ಯ ಅತಿಥಿಯಾಗಿ ಪ್ರೌಢಶಾಲೆಯ ಮುಖೋಪಾಧ್ಯಾಯರಾದ ಶ್ರೀ ಗಿಲ್ಬರ್ಟ್ ಪಿಂಟೋರವರು ಧ್ವಜಾರೋಹಣವನ್ನು ನೆರವೇರಿಸಿ ಮಾತನಾಡಿ ಇಂದು ಈ ಗಣರಾಜ್ಯೋತ್ಸವ ದಿನಾಚರಣೆಯನ್ನು 75ನೇ ಸ್ವಾತಂತ್ರ್ಯ ಅಮೃತಮಹೋತ್ಸವ ಪ್ರಯುಕ್ತ ಸರ್ಕಾರದ ಆದೇಶದಂತೆ ಶಾಲಾ-ಕಾಲೇಜಿನಲ್ಲಿ ಕೋವಿಡ್ 19 ರ ಮಾರ್ಗಸೂಚಿ ಅನ್ವಯ ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ರವರ ಭಾವಚಿತ್ರದೊಂದಿಗೆ ಆಚರಿಸುತ್ತಿದ್ದೇವೆ. ಇಂದು ನಮ್ಮ ರಾಷ್ಟ್ರ […]
ಶಿರ್ವ ಸಂತ ಮೇರಿ ಮಹಾವಿದ್ಯಾಲಯದಲ್ಲಿ ಸ್ವಚ್ಛತಾ ಅಭಿಯಾನ
ಶಿರ್ವ(ಜ.29):73 ನೇ ಗಣರಾಜ್ಯೋತ್ಸವ ದಿನದಂದು ಶಿರ್ವ-ಮಂಚಕಲ್ ಲಯನ್ಸ್ ಕ್ಲಬ್ ಹಾಗೂ ಶಿರ್ವ ಸಂತ ಮೇರಿ ಕಾಲೇಜಿನ ಎನ್ ಸಿ ಸಿ, ಎನ್ ಎಸ್ ಎಸ್, ರೆಂಜರ್ಸ್ ಮತ್ತು ರೋವರ್ಸ್ ಘಟಕಗಳ ಜಂಟಿ ಆಶ್ರಯದಲ್ಲಿ ಶಿರ್ವದ ಪ್ರವಾಸಿ ಮಂದಿರ ವಠಾರವನ್ನು ಸ್ವಚ್ಛಗೊಳಿಸುವ “ಶ್ರಮದಾನ” ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಾಂಶುಪಾಲರಾದ ಶ್ರೀ ಡಾ.ಹೆರಾಲ್ಡ್ ಐವನ್ ಮೋನಿಸ್,ಅಲ್ಲದೆ ಪ್ರಾದ್ಯಾಪಕರುಗಳಾದ ಕಾಲೇಜಿನ ಎನ್.ಸಿ.ಸಿ ಅಧಿಕಾರಿ ಲೆಫ್ಟಿನೆಂಟ್ ಕೆ.ಪ್ರವೀಣ್ಕುಮಾರ್,ಎನ್ ಎಸ್ ಎಸ್ ಯೋಜನಾಧಿಕಾರಿ ಶ್ರೀ ಪ್ರೇಮನಾಥ್, […]










