ಕುಂದಾಪುರ (ಜ.21): ಡಾ.ಬಿ.ಬಿ. ಹೆಗ್ಡೆ ಕಾಲೇಜಿನ ಪ್ರಥಮ ಬಿಸಿಎ ವಿದ್ಯಾರ್ಥಿಗಳು ವಂಡ್ಸೆ ಗ್ರಾಮ ಪಂಚಾಯತ್ನ ಘನ ಮತ್ತು ದ್ರವ ತ್ಯಾಜ್ಯ ಸಂಪನ್ಮೂಲ ನಿರ್ವಹಣಾ ಘಟಕಕ್ಕೆ ಭೇಟಿ ನೀಡಿದರು. ವಿಸ್ತರಣಾ ಚಟುವಟಿಕೆಯ ಅಂಗವಾಗಿ ಭೇಟಿ ನೀಡಿದ ವಿದ್ಯಾರ್ಥಿಗಳು, ತ್ಯಾಜ್ಯ ನಿರ್ವಹಣೆಯ ಕುರಿತಂತೆ ಸಂಪೂರ್ಣ ಮಾಹಿತಿಗಳನ್ನು ಪಡೆದರು. ಭೇಟಿಯ ಸಂದರ್ಭದಲ್ಲಿ ರಾಜ್ಯದಲ್ಲಿಯೇ ಮಾದರಿತ್ಯಾಜ್ಯ ನಿರ್ವಹಣಾ ಘಟಕವಾಗಿ ರೂಪಿಸಿದ ರೂವಾರಿಗಳು, ವಂಡ್ಸೆ ಗ್ರಾಮ ಪಂಚಾಯತ್ನ ಅಧ್ಯಕ್ಷರಾದ ಉದಯ ಕುಮಾರ್ ಶೆಟ್ಟಿ ಅಡಿಕೆಕೋಡ್ಲು ಅವರು ಉಪಸ್ಥಿತರಿದ್ದು […]
Author: KundaVahini Editor
ಗಂಗೊಳ್ಳಿ: ಸರಸ್ವತಿ ವಿದ್ಯಾಲಯದಲ್ಲಿ ರಾಷ್ಟ್ರೀಯ ಯುವ ದಿನಾಚರಣೆ
ಗಂಗೊಳ್ಳಿ(ಜ.20): ವಿವೇಕಾನಂದರ ಚಿಂತನೆಗಳು ಸಾರ್ವಕಾಲಿಕ ಪ್ರಸ್ತುತತೆಯನ್ನು ಹೊಂದಿರುವಂಥವು. ಅವರ ಜೀವನವನ್ನು ಅಭ್ಯಸಿಸುವುದರ ಜೊತೆಗೆ ಅಂತಹ ಚಿಂತನೆಗಳನ್ನು ನಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಲು ಪ್ರತಿಯೊಬ್ಬರೂ ಪ್ರಯತ್ನಿಸಿದಾಗ ಜೀವನವು ಸಾರ್ಥಕವಾಗಲು ಸಾಧ್ಯ ಎಂದು ಜೆ.ಸಿ ರಾಷ್ಟ್ರೀಯ ತರಬೇತುದಾರರಾದ ಕೆ.ಕೆ ಶಿವರಾಮ ಅಭಿಪ್ರಾಯ ಪಟ್ಟರು. ಅವರು ಗಂಗೊಳ್ಳಿಯ ಸರಸ್ವತಿವಿದ್ಯಾಲಯ ಪದವಿಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ಆಶ್ರಯದಲ್ಲಿ ನಡೆದ ರಾಷ್ಟ್ರೀಯ ಯುವ ದಿನಾಚರಣೆಯನ್ನು ಉದ್ಘಾಟಿಸಿ ಮಾತನಾಡಿದರು. […]
ಶಿಕ್ಷ ಪ್ರಭಾ ಅಕಾಡೆಮಿ ಕುಂದಾಪುರ: ಸಿಎಸ್ ಪರೀಕ್ಷೆಯಲ್ಲಿ ಶ್ರೇಷ್ಠ ಸಾಧನೆ
ಕುಂದಾಪುರ(ಜ.20): ಇಲ್ಲಿನ ಕುಂದೇಶ್ವರ ರಸ್ತೆಯ ಸಿರಿ ಬಿಲ್ಡಿಂಗ್ನಲ್ಲಿ ಕಾರ್ಯನಿರ್ವಹಿಸುತ್ತಿರುವ ಶಿಕ್ಷ ಪ್ರಭಾ ಅಕಾಡೆಮಿ ಆಫ್ ಕಾಮರ್ಸ್ ಎಜುಕೇಶನ್ ಸಿಎ/ಸಿಎಸ್ ಮತ್ತು ಬ್ಯಾಂಕಿಂಗ್ ತರಬೇತಿ ಸಂಸ್ಥೆ (ಸ್ಪೇಸ್) ಇದರ ವಿದ್ಯಾರ್ಥಿಗಳು ಇನ್ಸ್ಟಿಟ್ಯೂಟ್ ಆಫ್ ಕಂಪನಿ ಸೆಕ್ರೆಟರಿ ಆಫ್ ಇಂಡಿಯಾ ಜನವರಿ 2022 ರಲ್ಲಿ ನಡೆಸಿದ ಸಿಎಸ್ ಫೌಂಡೇಶನ್ (ಸಿಎಸ್ಇಇಟಿ) ಪರೀಕ್ಷೆ ಬರೆದ 6 ವಿದ್ಯಾರ್ಥಿಗಳಲ್ಲಿ 5 ವಿದ್ಯಾರ್ಥಿಗಳು ತೇರ್ಗಡೆ ಹೊಂದುವುದರ ಮೂಲಕ ರಾಷ್ಟ್ರೀಯ ಮಟ್ಟದಲ್ಲಿ ಸಾಧನೆಗೈದಿದ್ದಾರೆ. ಸಂಸ್ಥೆಯ ವಿದ್ಯಾರ್ಥಿಗಳಾದ ಮಿಥುನ್ ಪೂಜಾರಿ […]
ಶ್ರೀ ವನದುರ್ಗಾದೇವಿ ದೇವಸ್ಥಾನ ಕಾಳಾವರ: ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾಗಿ ಶ್ರೀ ಉದಯ ಕುಮಾರ ಶೆಟ್ಟಿ ಆಯ್ಕೆ
ಕೋಟೇಶ್ವರ (ಜ.20): ಶ್ರೀ ವನದುರ್ಗಾದೇವಿ ದೇವಸ್ಥಾನ ಕಾಳಾವರ ಕ ಇದರ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾಗಿ ಶ್ರೀ ಉದಯ ಕುಮಾರ ಶೆಟ್ಟಿ ಕಾಳಾವರ ಇವರನ್ನು ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾಧಾಯ ದತ್ತಿಗಳ ಇಲಾಖೆ ಆಯ್ಕೆ ಮಾಡಿ ಆದೇಶಿಸಿದೆ. ಪ್ರಧಾನ ಅರ್ಚಕರಾಗಿ ಶ್ರೀ ಸತೀಶ ಜೋಗಿ, ಸಮಿತಿ ಸದಸ್ಯರಾಗಿ ಶ್ರೀ ಎ. ರೋಶನ್ ಶೆಟ್ಟಿ ಸಲ್ವಾಡಿ, ಶ್ರೀ ಕಾಳಿಂಗ ಶೆಟ್ಟಿ ಬೀಡಿನಮನೆ, ಶ್ರೀ ಚಂದ್ರಶೇಖರ ನಾಯ್ಕ ಕಾಳಾವರ, ಶ್ರೀ ವಸಂತ ಶೆಟ್ಟಿ […]
ಕಂಬದಕೋಣೆ: ಲಿವರ್ ಕ್ಯಾನ್ಸರ್ ಸಮಸ್ಯೆಯಿಂದ ಬಳಲುತ್ತಿರುವ ಜಯಶ್ರೀ ಮೊಗವೀರಗೆ ಬೇಕಿದೆ ಸಹಾಯ ಹಸ್ತ
ಕಂಬದಕೋಣೆ(ಜ.18): ಕಂಬದಕೋಣೆ ನಿವಾಸಿಯಾದ ನಾಗರಾಜರವರ ಪತ್ನಿ ಜಯಶ್ರೀ ಮೊಗವೀರ ರವರು ದೀರ್ಘಕಾಲದಿಂದ ಲಿವರ್ ಕ್ಯಾನ್ಸರ್” ಸಮಸ್ಯೆಯಿಂದ ಬಳಲುತ್ತಿದ್ದು , ಪ್ರಸ್ತುತ ಇವರು ಮಣಿಪಾಲ ಕೆಎಂಸಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇದುವರೆಗೆ ಚಿಕಿತ್ಸೆಗೆ ಸುಮಾರು 10 ಲಕ್ಷದವರಿಗೆ ಖರ್ಚಾಗಿದ್ದು, ಮುಂದಿನ ಚಿಕಿತ್ಸೆಗೆ 8ಲಕ್ಷ ಖರ್ಚಾಗಬಹುದು ಎಂದು ವೈದ್ಯಾಧಿಕಾರಿಗಳು ತಿಳಿಸಿದ್ದಾರೆ . ಇಷ್ಟು ಖರ್ಚನ್ನು ಬರಿಸಲು ಈ ಬಡ ಕುಟುಂಬಕ್ಕೆ ಸಾಧ್ಯವಾಗುತ್ತಿಲ್ಲ ಹಾಗಾಗಿ ಸಹ್ರದಯಿ ದಾನಿಗಳು ಚಿಕಿತ್ಸೆಗೆ ನೆರವು ನೀಡಬೇಕೆಂದು ವಿನಂತಿಸಿಕೊಂಡಿದ್ದಾರೆ.ಧನ ಸಹಾಯ ಮಾಡುವವರು ಈ […]
ಮುಂಬೈ: ಮೊಗವೀರ ಮಹಾಜನ ಸೇವಾ ಸಂಘ ಬಗ್ವಾಡಿ ಹೋಬಳಿಯ ಅಧ್ಯಕ್ಷರಾಗಿ ರಾಜು ಮೆಂಡನ್ ಆಯ್ಕೆ
ಕುಂದಾಪುರ (ಜ.17 ): ಮೊಗವೀರ ಮಹಾಜನ ಸೇವಾ ಸಂಘ ಬಗ್ವಾಡಿ ಹೋಬಳಿ ಮುಂಬೈಇದರ ನೂತನ ಅಧ್ಯಕ್ಷರಾಗಿ ಉದ್ಯಮಿ ರಾಜು ಮೆಂಡನ್ ಆಯ್ಕೆಯಾಗಿದ್ದಾರೆ.ಇತ್ತೀಚೆಗೆ ನಡೆದ ಸಂಘದ ಕಾರ್ಯಕ್ರಮದಲ್ಲಿ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ಸಂದರ್ಭದಲ್ಲಿಶ್ರೀ ರಾಜು ಮೆಂಡನ್ ರವರನ್ನು ಅಧ್ಯಕ್ಷರನ್ನಾಗಿ ಆಯ್ಕೆ ಮಾಡಲಾಗಿದೆ. ಉದ್ಯಮಿ ರಮೇಶ್ ಬಂಗೇರ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಈ ಸಂದರ್ಭದಲ್ಲಿ ಕಾರ್ಯದರ್ಶಿ ಮಂಜುನಾಥ್ ಎನ್ ನಾಯ್ಕ್, ಮೊಗವೀರ ಮುಖಂಡರುಗಳಾದ ಸುರೇಶ್ ಆರ್ ಕಾಂಚನ್, ಮಹಾಬಲ ಕುಂದರ್, ಎನ್ ಎಚ್ ಬಗ್ವಾಡಿ, ಸಂತೋಷ್ […]
ಮಲ್ಪೆ: ಈಜುಪಟು ಸುರೇಶ್ ಖಾರ್ವಿಯಿಂದ ಮೀನುಗಾರ ಮಹಿಳೆಯ ರಕ್ಷಣೆ
ಮಲ್ಪೆ(ಜ,17): ಇತ್ತೀಚೆಗೆ ಮಲ್ಪೆ ಬಂದರಿನಲ್ಲಿ ಮೀನು ಹೊರುವ ಮಹಿಳೆ ರಾತ್ರಿ ಸಂದರ್ಭದಲ್ಲಿ ಕೆಲಸ ನಿರ್ವಹಿಸುತಿರುವಾಗ ಆಯತಪ್ಪಿ ನೀರಿಗೆ ಬಿದ್ದ ಅಪಾಯದ ಸಂದರ್ಭದಲ್ಲಿ ಸ್ವಲ್ಪವೂ ತಡಮಾಡದೆ ಅಮೃತೇಶ್ವರಿ ಬೋಟಿನಲ್ಲಿ ದುಡಿಯುತ್ತಿದ್ದ ಜೀವರಕ್ಷಕ ಸುರೇಶ್ ಖಾರ್ವಿ ಭಟ್ಕಳ (ಬಂದರ್ ರೋಡ್ ) ತನ್ನ ಜೀವದ ಹಂಗು ತೊರೆದು ನೀರಿಗೆ ಹಾರಿ ಮಹಿಳೆಯನ್ನು ರಕ್ಷಣೆ ಮಾಡಿದ್ದಾರೆ. ಇವರ ಸಮಯ ಪ್ರಜ್ಞೆಯಿಂದಾಗಿ ಮಹಿಳೆ ಪ್ರಾಣಪಾಯದಿಂದ ಪಾರಾಗಿದ್ದಾರೆ. ಶ್ರೀ ಸುರೇಶ್ ಖಾರ್ವಿಯವರು ನುರಿತ ಈಜುಪಟು ಆಗಿದ್ದು, ತುರ್ತು ಸಮಯದಲ್ಲಿ ಹಲವಾರು […]
ಶಿರ್ವ ಸಂತ ಮೇರಿ ಮಹಾವಿದ್ಯಾಲಯದಲ್ಲಿ ಕ್ಯಾಂಪಸ್ ಸಂದರ್ಶನ
ಶಿರ್ವ(ಜ.17): ಮಂಗಳೂರಿನ ಪ್ರತಿಷ್ಠಿತ ದಿಯಾ ಸಿಸ್ಟಮ್ ಸಂಸ್ಥೆ(ಗ್ಲೋಟಚ್ ಟೆಕ್ನಾಲಜೀಸ್) ಯು ನೇರ ನೇಮಕಾತಿ ಕ್ಯಾಂಪಸ್ ಸಂದರ್ಶನ ಈಗಾಗಲೇ ಬಿಸಿಎ, ಬಿಎಸ್ಸಿ (ಸಿ.ಎಸ್),ಬಿಇ(ಸಿವಿಲ್ ಮತ್ತು ಮೆಕಾನಿಕಲ್ ಹೊರತುಪಡಿಸಿ), ಬಿಕಾಂ( ಕಂಪ್ಯೂಟರ್ ಅಪ್ಲಿಕೇಶನ್), ಡಿಪ್ಲೋಮಾ(ಸಿಎಸ್),ಎಂಎಸ್ಸಿ (ಸಿಎಸ್), ಎಂಸಿಎ ಮುಗಿಸಿಕೊಂಡಿರುವ ಅಭ್ಯರ್ಥಿಗಳಿಗೆ ಶಿರ್ವ ಸಂತ ಮೇರಿ ಕಾಲೇಜಿನ ಗಣಕ ವಿಜ್ಞಾನ ವಿಭಾಗ,ವೃತ್ತಿ ಸಮಾಲೋಚನೆ ಮತ್ತು ನಿಯೋಜನೆ ಕೋಶ ವತಿಯಿಂದ ಜನವರಿ 13 ರಂದು ಕಾಲೇಜಿನ ಫಾ. ಹೆನ್ರಿ ಕ್ಯಾಸ್ಟಲಿನೊ ಸಭಾಂಗಣದಲ್ಲಿ ನಡೆಯಿತು. ಇದು ಸ್ಪರ್ಧಾತ್ಮಕ ಯುಗ […]
ಶಿರ್ವ ಸಂತ ಮೇರಿ ಕಾಲೇಜಿನಲ್ಲಿ 74ನೇ ಸೇನಾ ದಿನಾಚರಣೆ
ಶಿರ್ವ(ಜ.17): ರಾಷ್ಟ್ರದ ಭದ್ರತೆಯನ್ನು ಕಾಪಾಡುವುದು ಪ್ರತಿಯೊಬ್ಬ ಯುವ ನಾಗರಿಕನ ಕರ್ತವ್ಯವಾಗಿದೆ. ರಾಷ್ಟ್ರೀಯ ಆಸ್ತಿಗಳು, ನೈಸರ್ಗಿಕ ಸಂಪನ್ಮೂಲಗಳು, ಕಾನೂನು ಮತ್ತು ಸುವ್ಯವಸ್ಥೆಯನ್ನು ರಕ್ಷಿಸಲು ಇಂದು ನಾವು ಸಶಸ್ತ್ರ ಪಡೆಗಳನ್ನು ಹೆಚ್ಚಿಸಬೇಕಾಗಿದೆ. ಸೇನೆ ತನ್ನ ನೆಲೆಯಲ್ಲಿ ಸಮರ್ಪಕವಾಗಿ ಕಾರ್ಯ ನಿರ್ವಹಿಸಲು ಪ್ರಜೆಗಳು ಮತ್ತು ಸರ್ಕಾರ ತಮ್ಮ ಸಂಪೂರ್ಣ ಸಹಕಾರವನ್ನು ನೀಡಿ ರಾಷ್ಟ್ರದ ಪ್ರಗತಿಗೆ ಕೈಜೋಡಿಸಬೇಕಾಗಿರುವುದು ಇಂದು ಅತಿ ಅಗತ್ಯವಾಗಿದೆ ಎಂದು ಇಲ್ಲಿನ ಸಂತ ಮೇರಿ ಮಹಾವಿದ್ಯಾಲಯದಲ್ಲಿ ಕಾಲೇಜಿನ ಎನ್.ಸಿ.ಸಿ ಭೂಯುವ ಸೇನಾ ದಳದಿಂದ […]
ನರೇಂದ್ರ ಎಸ್ ಗಂಗೊಳ್ಳಿಗೆ ಸನ್ಮಾನ
ಗಂಗೊಳ್ಳಿ(ಜ.15 ): ಯುವ ಲೇಖಕ ಮತ್ತು ಉಪನ್ಯಾಸಕ ನರೇಂದ್ರ ಎಸ್ ಗಂಗೊಳ್ಳಿ ಅವರ ಬಹುಮುಖ ಪ್ರತಿಭೆಯನ್ನು ಗುರುತಿಸಿ ತಲ್ಲೂರಿನ ಸಪ್ತಸ್ವರ ವಿವಿಧೋದ್ದೇಶ ಸಹಕಾರಿ ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರವಿ ದೇವಾಡಿಗ ಉಪ್ಪಿನಕುದ್ರು ಇವರು ವೈಯಕ್ತಿಕ ನೆಲೆಯಲ್ಲಿ ಗಂಗೊಳ್ಳಿಯ ಶ್ರೀ ಶಾರದಾ ಮಂಟಪದಲ್ಲಿ ಸನ್ಮಾನಿಸಿದರು. ಸನ್ಮಾನಿಸಿ ಮಾತನಾಡಿದ ಅವರು ನಮ್ಮ ನಡುವಿನ ಪ್ರತಿಭೆಗಳನ್ನು ಗುರುತಿಸಿ ಪ್ರೋತ್ಸಾಹಿಸಿ ಗೌರವಿಸುವ ಕಾರ್ಯ ನಿರಂತರವಾಗಿ ಆಗಬೇಕಿದೆ. ಆ ಮೂಲಕ ಇಂತಹ ಕಾರ್ಯಗಳು ಮತ್ತಷ್ಟು ಪ್ರತಿಭೆಗಳ ಬೆಳವಣಿಗೆಗೆ […]










