ಕೋಟೇಶ್ವರ (ನ,22): ಸುಣ್ಣಾರಿಯ ಎಕ್ಸಲೆಂಟ್ ಪದವಿಪೂರ್ವಕಾಲೇಜಿನ ವಿದ್ಯಾರ್ಥಿಗಳಿಗೆ ಕಾನೂನು ಅರಿವು ಕಾರ್ಯಾಗಾರವನ್ನು ನ,19 ರಂದು ಹಮ್ಮಿಕೊಳ್ಳಲಾಯಿತು. ಕುಂದಾಪುರದ ಡಿವೈಎಸ್ಪಿ ಕೆ. ಶ್ರೀಕಾಂತ್ ರವರು ಕಾರ್ಯಾಗಾರವನ್ನು ಉದ್ಘಾಟಿಸಿ ,ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿ, ಕಾನೂನು ಅರಿವು ಮೂಡಿಸುವುದರ ಬಗ್ಗೆ ವಿವರಿಸುತ್ತಾ ಇಂದಿನ ವಿದ್ಯಾರ್ಥಿಗಳು ಮಾದಕದ್ರವ್ಯ ವ್ಯಸನಕ್ಕೆ ಒಳಪಡುವ ಪ್ರಕರಣ ಹೆಚ್ಚಾಗಿ ಕಾಣುತ್ತಿದ್ದೇವೆ. ಇದರಿಂದ ತಮ್ಮ ಇಡೀ ವಿದ್ಯಾರ್ಥಿ ಜೀವನವನ್ನು ಹಾಳುಮಾಡಿಕೊಳ್ಳುತ್ತಿದ್ದಾರೆ ಹಾಗೂ ಮೊಬೈಲ್ ಬಳಕೆ, ಫೇಸ್ಟುಕ್, ಇನ್ಸ್ಟಾಗ್ರಾಂ, ವಾಟ್ಸಾಪ್ ಗಳನ್ನು ತುಂಬಾ ಜಾಗ್ರತೆಯಿಂದ […]
Author: KundaVahini Editor
ಉಚ್ಚಿಲ ಮೊಗವೀರ ಭವನ : ಉದ್ಘಾಟನಾ ಸಮಾರಂಭ
ಉಚ್ಚಿಲ(ನ,21): ದಕ್ಷಿಣ ಕನ್ನಡ ಮೊಗವೀರ ಮಹಾಜನ ಸಂಘ (ರಿ.) ಉಚ್ಚಿಲ, ಎಂ. ಆರ್.ಪಿ.ಎಲ್ ಕಾರ್ಪೊರೇಟ್ ಸೋಶಿಯಲ್ ರೆಸ್ಪಾನ್ಸಿಬಿಲಿಟಿ ಇನ್ಸ್ಟಿಟ್ಯೂಟ್ ಸಹಯೋಗದೊಂದಿಗೆ ನಿರ್ಮಾಣಗೊಂಡ “ಮೊಗವೀರ ಭವನದ ಉದ್ಘಾಟನಾ ಸಮಾರಂಭ” ನ,21 ರಂದು ಬಹಳ ಅದ್ದೂರಿಯಾಗಿ ನಡೆಯಿತು. ಉಡುಪಿ ಶಾಸಕ ಶ್ರೀ ಕೆ ರಘುಪತಿ ಭಟ್ ರವರು ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಶುಭ ಹಾರೈಸಿದರು.ಈ ಸಂದರ್ಭದಲ್ಲಿ ಜಿ. ಶಂಕರ್ ಫ್ಯಾಮಿಲಿ ಟ್ರಸ್ಟ್ ನ ಪ್ರವರ್ತಕರಾದ ನಾಡೋಜ ಜಿ. ಶಂಕರ್,ಶ್ರೀಮತಿ ಶಾಲಿನಿ ಜಿ . […]
ಪ್ರೇಕ್ಷಕರ ಬಹುನಿರೀಕ್ಷೆಯ ‘ಕಪೋ ಕಲ್ಪಿತಂ’ ಕನ್ನಡ ಚಿತ್ರ ನ. 26 ರಂದು ತೆರೆಗೆ
ಮಂಗಳೂರು (ನ, 21) : ಅಕ್ಷರಪ್ರೊಡಕ್ಷನ್ ಹಾಗೂ ಸವ್ಯಸಾಚಿ ಕ್ರಿಯೇಷನ್ ಬ್ಯಾನರ್ನಡಿ ಮೂಡಿ ಬಂದಿರುವ ‘ಕಪೋ ಕಲ್ಪಿತಂ’ ಕನ್ನಡ ಚಿತ್ರ ನ.26 ರಂದು ರಾಜ್ಯದಾದ್ಯಂತ ತೆರೆ ಕಾಣಲಿದೆ. ಇತ್ತೀಚೆಗೆ ನಡೆದ ಸುದ್ದಿಗೋಷ್ಠಿಯಲ್ಲಿ ಕಪೋ ಕಲ್ಪಿತಂ ಚಿತ್ರದ ನಿರ್ದೇಶಕಿ ಹಾಗೂ ನಾಯಕಿ ಸುಮಿತ್ರ ಗೌಡ ಚಿತ್ರ ಬಿಡುಗಡೆಯ ದಿನಾಂಕವನ್ನು ತಿಳಿಸಿದರು. ನಮ್ಮ ಕರಾವಳಿಯ ಅನೇಕ ಪ್ರತಿಭೆಗಳು ಚಿತ್ರದಲ್ಲಿ ನಟಿಸಿದ್ದು, ದ.ಕ., ಉಡುಪಿ, ಬೆಳ್ತಂಗಡಿ ಸೇರಿದಂತೆ ವಿವಿಧ ಭಾಗಗಳಲ್ಲಿ ಚಿತ್ರೀಕರಣ ನಡೆದಿದ್ದು ಚಿತ್ರ […]
ರಾಜ್ಯಮಟ್ಟದ ಕರಾಟೆಯಲ್ಲಿ ಗಂಗೊಳ್ಳಿಯ ಕೆ.ಡಿ.ಎಫ್ ಕರಾಟೆ ಎಂಡ್ ಫಿಟ್ನೆಸ್ ಅಕಾಡೆಮಿಯ ವಿದ್ಯಾರ್ಥಿಗಳ ಉತ್ತಮ ಸಾಧನೆ
ಗಂಗೊಳ್ಳಿ(ನ ,21): ಶೋರಿನ್ ರಿಯೂ ಕರಾಟೆ ಎಂಡ್ ಕೊಬುಡೊ ಅಸೋಸಿಯೇಷನ್ ವತಿಯಿಂದ ಬೆಳ್ತಂಗಡಿಯ ಶ್ರೀ ಧರ್ಮಸ್ಥಳ ಮಂಜುನಾಥ ಸ್ವಾಮಿ ಕಲಾಭವನದಲ್ಲಿ ಇತ್ತೀಚಿಗೆ ನಡೆದ 18ನೇ ರಾಜ್ಯಮಟ್ಟದ ಕರಾಟೆ ಚಾಂಪಿಯನ್ ಶಿಪ್ ಸ್ಪರ್ಧೆಯ ಕಟಾ ಮತ್ತು ಕುಮಿಟೊ ಭಾಗದಲ್ಲಿ ವಿಜೇತರಾದ ಗಂಗೊಳ್ಳಿಯ ಕೆ.ಡಿ.ಎಫ್ ಕರಾಟೆ ಎಂಡ್ ಫಿಟ್ನೆಸ್ ಅಕಾಡೆಮಿಯ ವಿದ್ಯಾರ್ಥಿಗಳು ಕಟಾ ಮತ್ತು ಕುಮಿಟಿ ವಿಭಾಗದಲ್ಲಿ ಉತ್ತಮ ಸಾಧನೆ ಮಾಡಿದ್ದಾರೆ. ತರಬೇತುದಾರರಾದ ಟಿ ಶಶಾಂಕ್ ಶೆಣೈ ಇವರಿಗೆ ತರಬೇತಿ ನೀಡಿದ್ದರು.ನಿಂತವರು : ಶ್ಯಾಮ್ […]
ಗಂಗೊಳ್ಳಿ ಸರಸ್ವತಿ ವಿದ್ಯಾಲಯದಲ್ಲಿ ಸಮವಸ್ತ್ರ ವಿತರಣೆ
ಗಂಗೊಳ್ಳಿ(ನ ,20): ಇಲ್ಲಿನ ಸರಸ್ವತಿ ವಿದ್ಯಾಲಯ ಪ್ರೌಢಶಾಲಾ ಕನ್ನಡ ಮಾಧ್ಯಮ ವಿಭಾಗದ 8ನೇ ತರಗತಿಯ ವಿದ್ಯಾರ್ಥಿಗಳಿಗೆ ಇಲ್ಲಿನ ಅಧ್ಯಾಪಕರ ಆರ್ಥಿಕ ಸಹಾಯದೊಂದಿಗೆ ಪ್ರತಿವರ್ಷದಂತೆ ಈ ಬಾರಿ ಕೂಡ ಉಚಿತವಾಗಿ ಸಮವಸ್ತ್ರಗಳನ್ನು ನೀಡಲಾಯಿತು. ಜಿ. ಎಸ್. ವಿ ಎಸ್ ಅಸೋಸಿಯೇಷನ್ ಕಾರ್ಯದರ್ಶಿ ಹೆಚ್. ಗಣೇಶ್ ಕಾಮತ್ ವಿದ್ಯಾರ್ಥಿಗಳಿಗೆ ಸಮವಸ್ತ್ರಗಳನ್ನು ವಿತರಿಸಿದರು. ಈ ಸಂದರ್ಭದಲ್ಲಿ ಪ್ರೌಢಶಾಲಾ ಉಪಪ್ರಾಂಶುಪಾಲರಾದ ಉಮೇಶ್ ಕರ್ಣಿಕ್ ಮತ್ತು ಅಧ್ಯಾಪಕರು ಹಾಗೂ ಮಕ್ಕಳ ಪೋಷಕರು ಉಪಸ್ಥಿತರಿದ್ದರು. ಶಾಲಾ ಆರಂಭದ ದಿನಗಳಲ್ಲಿ ಇಲ್ಲಿನ […]
ಕಾಳಾವರ ಷಷ್ಠಿ ಪ್ರಯುಕ್ತ ಪೂರ್ವಭಾವಿ ಸಭೆ
ಕಾಳಾವರ(ನ,20): ಕಾಳಾವರ ಶ್ರೀ ಮಹಾಲಿಂಗೇಶ್ವರ ಹಾಗೂ ಕಾಳಿಂಗ (ಸುಬ್ರಹ್ಮಣ್ಯ) ದೇವಸ್ಥಾನದ ವರ್ಷಂಪ್ರತಿ ನಡೆಯುವ ಷಷ್ಠಿ ಪ್ರಯುಕ್ತ ಪೂರ್ವಭಾವಿ ಸಭೆ ದೇವಸ್ಥಾನದ ವಠಾರದಲ್ಲಿ ವ್ಯವಸ್ಥಾಪನ ಸಮಿತಿ ಅಧ್ಯಕ್ಷರಾದ ಶ್ರೀ ಚಂದ್ರಶೇಖರ ಹೆಗ್ಡೆ ಶಾನಾಡಿ ಯವರ ಅಧ್ಯಕ್ಷತೆಯಲ್ಲಿ ನಡೆಯಿತು. ಈ ಸಂದರ್ಭದಲ್ಲಿ ಷಷ್ಠಿ ಉತ್ಸವದ ಆಮಂತ್ರಣ ಪತ್ರಿಕೆಯನ್ನು ವೇದಿಕೆಯಲ್ಲಿ ಉಪಸ್ಥಿತರಿದ್ದ ಸಮಿತಿಯ 9 ಸದಸ್ಯರು ಅನಾವರಣಗೊಳಿಸಿದರು. ಶ್ರೀ ಚಂದ್ರಶೇಖರ ಹೆಗ್ಡೆ ಯವರು ಅಧ್ಯಕ್ಷೀಯ ನೆಲೆಯ ಮಾತುಗಳನ್ನಾಡಿ ಉತ್ಸವಕ್ಕೆ ಗ್ರಾಮಸ್ಥರ ಸಹಕಾರವನ್ನು ಕೋರಿದರು. ಈ ಸಂದರ್ಭದಲ್ಲಿ ಪೊಲೀಸ್ […]
ದಾಸಶ್ರೇಷ್ಟ ಕನಕದಾಸರು
ಕರ್ನಾಟಕದ ಹರಿದಾಸಭಕ್ತ ಶ್ರೇಷ್ಟರಲ್ಲಿ ಒಬ್ಬರಾಗಿದ್ದ ಕನಕದಾಸರು ರಣರಂಗದಕಲಿ, ಜನಪ್ರಿಯದೊರೆ, ಸಮರ್ಥ ಆಡಳಿತಗಾರ, ಕವಿ, ಸಂತ, ಕೀರ್ತನಾಕಾರ, ಸಂಗೀತಗಾರ, ವಿಚಾರವಂತ ಮತ್ತು ಸಮಾಜ ಸುಧಾರಕರಾಗಿದ್ದರು. ದಾಸ ಪರಂಪರೆಯಲ್ಲಿ ಬರುವ 250 ಕ್ಕೂ ಹೆಚ್ಚು ದಾಸರಲ್ಲಿ ಕನಕದಾಸರೊಬ್ಬರೇ ಶೂದ್ರದಾಸರೆಂಬುದು ನಿಜಕ್ಕೂ ಹೆಗ್ಗಳಿಕೆಯೇ. ಇವರು ಪುರಂದರದಾಸರ ಸಮಕಾಲೀನರು. ಧಾರವಾಡ ಜಿಲ್ಲೆಯ ಬಂಕಾಪುರ ತಾಲ್ಲೂಕಿನ ಕಾಗಿನೆಲೆಯ ಸಮೀಪದ ‘ಬಾಡ’ ಎಂಬ ಗ್ರಾಮದಲ್ಲಿ (ಈಗ ಹಾವೇರಿ ಜಿಲ್ಲೆಸಿಗ್ಗಾವಿ ತಾಲ್ಲೂಕಿನ ಬಾಡ) ಬೀರಪ್ಪನಾಯಕ ಮತ್ತು ಬಚ್ಚಮ್ಮ ಕುರುಬ ದಂಪತಿಗಳ […]
ಶಿಕ್ಷ ಪ್ರಭಾ ಅಕಾಡೆಮಿ ಕುಂದಾಪುರ: ಸಿಎಸ್ ಪರೀಕ್ಷೆಯಲ್ಲಿ ಶ್ರೇಷ್ಠ ಸಾಧನೆ
ಕುಂದಾಪುರ(ನ,20): ಇಲ್ಲಿನ ಕುಂದೇಶ್ವರ ರಸ್ತೆಯ ಸಿರಿ ಬಿಲ್ಡಿಂಗಿನಲ್ಲಿ ಕಾರ್ಯನಿರ್ವಹಿಸುತ್ತಿರುವ ಶಿಕ್ಷ ಪ್ರಭ ಅಕಾಡೆಮಿ ಆಫ್ ಕಾಮರ್ಸ್ ಎಜುಕೇಶನ್ ಸಿಎ ಸಿಎಸ್ ಮತ್ತು ಬ್ಯಾಂಕಿಂಗ್ ತರಬೇತಿ ಸಂಸ್ಥೆ (ಸ್ಪೇಸ್) ಇದರ ವಿದ್ಯಾರ್ಥಿಗಳು ಇನ್ಸಿಟ್ಯೂಟ್ ಆಫ್ ಕಂಪೆನಿ ಸಕ್ರೆಟರಿ ಆಫ್ ಇಂಡಿಯಾ ನವೆಂಬರ್ 2021 ರಲ್ಲಿ ನಡೆಸಿದ ಸಿಎಸ್ ಫೌಂಡೇಶನ್ ಸಿಎಸ್ಇಇಟಿ ಪರೀಕ್ಷೆ ಬರೆದ 38 ವಿದ್ಯಾರ್ಥಿಗಳಲ್ಲಿ 34 ವಿದ್ಯಾರ್ಥಿಗಳು ತೇರ್ಗಡೆ ಹೊಂದುವುದರ ಮೂಲಕ ರಾಷ್ಟ್ರ ಮಟ್ಟದಲ್ಲಿ ಸಾಧನೆಗೈದಿದ್ದಾರೆ. ಸಂಸ್ಥೆಯ ವಿದ್ಯಾರ್ಥಿಗಳಾದ ಕಾರ್ತಿಕ್ […]
ಬೆಂಗಳೂರು: ನರಕಾಸುರ ವಧೆ ಯಕ್ಷಗಾನ ಪ್ರದರ್ಶನ
ಬೆಂಗಳೂರು (ನ,20): ಟೀಮ್ ಉತ್ಸಹಿ ಬೆಂಗಳೂರು ತಂಡ ಮತ್ತು ಬಡಗುತಿಟ್ಟಿನ ಸುಪ್ರಸಿದ್ಧ ಅತಿಥಿ ಕಲಾವಿದರ ಸಂಗಮದಲ್ಲಿ ” ನರಕಾಸುರ ವಧೆ” ಎನ್ನುವ ಪೌರಾಣಿಕ ಯಕ್ಷಗಾನ ಪ್ರಸಂಗವು ಬೆಂಗಳೂರಿನ ಕತ್ರಿಗುಪ್ಪೆ ಹೋಟೆಲ್ ಅನ್ನಕುಟೀರದ ಸಭಾಂಗಣದಲ್ಲಿ ವೈಭವದಿಂದ ಪ್ರದರ್ಶನಗೊಂಡಿತು. ಬಡಗು ತಿಟ್ಟಿನ ಹಿರಿಯ ಭಾಗವತರಾದ ಹೆರಂಜಾಲು ಗೋಪಾಲ ಗಾಣಿಗ ರವರ ಹಿಮ್ಮೇಳ , ಕಲಾವಿದರಾದ ನಾಗ ಶ್ರಿ ಜಿ.ಎಸ್ , ಅರ್ಪಿತ ಹೆಗ್ಡೆ ಮತ್ತು ಸಹ ಕಲಾವಿದರು ರಂಗವನ್ನು ವೈಭಿಕರಿಸಿದರು. ವರದಿ: ರಾಘವೇಂದ್ರ […]
ಡಾ.ಬಿ.ಬಿ.ಹೆಗ್ಡೆ ಕಾಲೇಜು: ನಮ್ಮ ಭೂಮಿ ಸಂಸ್ಥೆಯ ಪರಿಚಯ ಕಾರ್ಯಕ್ರಮ
ಕುಂದಾಪುರ,(ನ,18): ಇಲ್ಲಿನ ಡಾ.ಬಿ.ಬಿ.ಹೆಗ್ಡೆ ಕಾಲೇಜಿನ ಎನ್.ಎಸ್.ಎಸ್ ಹಾಗೂ ಸೆಂಟರ್ ಫಾರ್ ಕಮ್ಯುನಿಟಿ ಸರ್ವಿಸ್ ಘಟಕಗಳ ಆಶ್ರಯದಲ್ಲಿ ತಲ್ಲೂರು – ಕನ್ಯಾನ ದ ನಮ್ಮ ಭೂಮಿ (The Concerned for Working Children) ಸ್ವಯಂ ಸೇವಾ ಸಂಸ್ಥೆಯ ಕುರಿತಾದ ಪರಿಚಯ ಕಾರ್ಯಕ್ರಮವನ್ನು ನ,17 ರಂದು ಕಾಲೇಜಿನ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಯಿತು. ನಮ್ಮ ಭೂಮಿ ಸಂಸ್ಥೆಯ ಸಂಯೋಜಕರಾದ ಶ್ರೀಮತಿ ಕ್ರಪಾ ಎಮ್.ಎಮ್ ಸಂಸ್ಥೆಯ ಹಿನ್ನೆಲೆ, ಧ್ಯೇಯೊದ್ದೇಶಗಳು ಹಾಗೂ ಕಾರ್ಯಕ್ರಮಗಳ ಕುರಿತಾದ ತಿಳಿಸಿದರು. ಕಾರ್ಯಕ್ರಮದಲ್ಲಿ ಕಾಲೇಜಿನ ಎನ್.ಎಸ್.ಎಸ್ ಹಾಗೂ […]










