ಬಂಟಕಲ್ (ನ,10): ಇಲ್ಲಿನ ಶ್ರೀ ಮಧ್ವ ವಾದಿರಾಜ ತಾಂತ್ರಿಕ ಮಹಾವಿದ್ಯಾಲಯದ ಗಣಕತಂತ್ರ ವಿಭಾಗದ ಐಎಸ್ಟಿಇ ವಿದ್ಯಾರ್ಥಿ ಘಟಕದ ಆಶ್ರಯದಲ್ಲಿ “ಆಳವಾದ ಕಲಿಕೆಯಲ್ಲಿ ಇತ್ತೀಚಿನ ಪ್ರವೃತ್ತಿಗಳು‘ ಎಂಬ ವಿಷಯದ ಕುರಿತು ತಾಂತ್ರಿಕ ಕಾರ್ಯಗಾರವನ್ನು ಇತ್ತೀಚೆಗೆ ಆಯೋಜಿಸಲಾಗಿತ್ತು. ಬೆಂಗಳೂರಿನ ಟೆಕ್ವೆಡ್ ಲ್ಯಾಬ್ಸ್ ನ ಕಾರ್ಪೊರೇಟ್ ತರಬೇತುದಾರರಾದ ಶ್ರೀ ಮೊಹಮ್ಮದ್ ಆಮೀರ್ ರವರು ಕಾರ್ಯಕ್ರಮದ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ್ದರು.ಇವರು ಆಳವಾದ ಕಲಿಕೆಯ ಕುರಿತು ವಿವರಿಸುತ್ತ, ಗುಗಲ್ನಲ್ಲಿ ಕಲಿಕಾ ವೇದಿಕೆಯನ್ನು ಉಪಯೋಗಿಸಿಕೊಂಡು ಕೆಲವು ಉದಾಹರಣೆಯನ್ನು ನೀಡಿದರು. […]
Author: KundaVahini Editor
ಡಾ.ಬಿ.ಬಿ ಹೆಗ್ಡೆ ಕಾಲೇಜು ಕುಂದಾಪುರ: ಶ್ರೀ ಆರ್. ಉಪೇಂದ್ರ ಶೆಟ್ಟಿ ಯವರಿಂದ ಸ್ಪರ್ಧಾತ್ಮಕ ಪರೀಕ್ಷೆಗಳ ಕುರಿತಾದ ಪುಸ್ತಕಗಳ ಹಸ್ತಾಂತರ
ಕುಂದಾಪುರ (ನ,10): ಕರ್ನಾಟಕದ ಪ್ರಸಿದ್ಧ ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿ ಸಂಸ್ಥೆಯಾದ ಬೆಂಗಳೂರಿನ ಯೂನಿವರ್ಸಲ್ ಗ್ರೂಪ್ ಆಫ್ ಇನ್ಸ್ಟಿಟ್ಯೂಷನ್ಸ್ ಇದರ ನಿರ್ದೇಶಕರಾದ ಶ್ರೀ ಉಪೇಂದ್ರ ಶೆಟ್ಟಿಯವರು ಕೇಂದ್ರ ಹಾಗೂ ರಾಜ್ಯ ಸರ್ಕಾರದ ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳ ಕುರಿತಾದ ಉಪಯುಕ್ತ ಮಾಹಿತಿಯುಳ್ಳ ಸರಿಸುಮಾರು ಮೂವತ್ತು ಸಾವಿರ ರೂಪಾಯಿ ಮೌಲ್ಯದ ಪುಸ್ತಕಗಳನ್ನು ಡಾ.ಬಿ.ಬಿ ಹೆಗ್ಡೆ ಕಾಲೇಜಿನ ಪ್ರಾಂಶುಪಾಲರಾದ ಪ್ರೊ.ಕೆ. ಉಮೇಶ್ ಶೆಟ್ಟಿಯವರಿಗೆ ಹಸ್ತಾಂತರಿಸಿದರು. ಈ ಸಂದರ್ಭದಲ್ಲಿ ಕಾಲೇಜಿನ ಉಪಪ್ರಾಂಶುಪಾಲ ಚೇತನ್ ಶೆಟ್ಟಿ ಕೋವಾಡಿ ಹಾಗೂ […]
ಉಡುಪಿ: ಜಾನಪದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮ
ಉಡುಪಿ (ನ,9): ಕನ್ನಡ ಜಾನಪದ ಪರಿಷತ್ ಬೆಂಗಳೂರು ಹಾಗೂ ಕನ್ನಡ ಜಾನಪದ ಪರಿಷತ್ ಉಡುಪಿ ಜಿಲ್ಲಾ ಘಟಕದ ವತಿಯಿಂದ ಜಾನಪದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮವು ಉಡುಪಿಯ ಬಾಲಕಿಯರ ಪದವಿ ಪೂರ್ವ ಕಾಲೇಜಿನಲ್ಲಿ ನ,08 ರಂದು ನಡೆಯಿತು.ಕಾರ್ಯಕ್ರಮದ ಉದ್ಘಾಟನೆ ನೆರವೇರಿಸಿದ ಕನ್ನಡ ಜಾನಪದ ಪರಿಷತ್ ರಾಜ್ಯಾಧ್ಯಕ್ಷರಾದ ಡಾ.ಎಸ್ ಬಾಲಾಜಿ ರವರು ಮಾತನಾಡಿ ಜಾನಪದ ಮೂಕಾದರೆ ಮಾನವ ಜಾನಂಗ ಮೂಕ ಆದಂತೆ,ಆದ್ದರಿಂದ ಜಾನಪದ ಕಲೆ ಸಂಸ್ಕತಿಯನ್ನು ಇಂದಿನ ಯುವ ಜನಾಂಗ ಉಳಿಸಿ ಬೆಳೆಸ ಬೇಕೆಂದು […]
ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ವಿಜೇತರಿಗೆ ಅಭಿನಂದನೆ ಸಲ್ಲಿಸಿದ ಶಾಸಕ ಬಿ.ಎಂ.ಸುಕುಮಾರ ಶೆಟ್ಟಿ
ವಂಡ್ಸೆ(ನ,7): ಉಡುಪಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಯುವ ವಿಜ್ಞಾನಿ ಡಾ. ದಿನೇಶ್ ಶೆಟ್ಟಿ, ಶ್ರೀ ಬಿ. ರಾಮ ಟೈಲರ್ ಹಾಗೂ ಉಪ್ಪುಂದ ಶ್ರೀಧರ ಗಾಣಿಗರನ್ನು ಬೈಂದೂರು ಶಾಸಕ ಶ್ರೀ ಬಿ.ಎಂ ಸುಕುಮಾರ ಶೆಟ್ಟಿಯವರು ತಮ್ಮ ಗ್ರಹ ಕಛೇರಿಯಲ್ಲಿ ಗೌರವಪೂರ್ವಕವಾಗಿ ಅಭಿನಂದಿಸಿದರು.
ಬಂಟಕಲ್ ಇಂಜಿನಿಯರಿಂಗ್ ಕಾಲೇಜಿನಲ್ಲಿ ಪದವಿ ಪ್ರದಾನ ಸಮಾರಂಭ
ಬಂಟಕಲ್(ನ,8): ಶ್ರೀ ಮಧ್ವ ವಾದಿರಾಜ ತಾಂತ್ರಿಕ ಮಹಾವಿದ್ಯಾಲಯದ 8ನೇ ವರ್ಷದ ಪದವಿ ಪ್ರದಾನ ಸಮಾರಂಭವು ನ, 07 ರ ಭಾನುವಾರದಂದು ಕಾಲೇಜಿನ ಆವರಣದಲ್ಲಿ ಜರುಗಿತು. ಮಣಿಪಾಲದ ಕೆನರಾ ಬ್ಯಾಂಕ್ ನ ಜನರಲ್ ಮ್ಯಾನೇಜರ್ ಶ್ರೀ ರಾಮ ನಾಯಕ್ ರವರು ಮುಖ್ಯ ಅತಿಥಿಯಾಗಿ ಆಗಮಿಸಿ ಪದವಿ ಪ್ರದಾನ ಸಮಾರಂಭದಲ್ಲಿ ವಿಶೇಷ ಉಪನ್ಯಾಸ ನೀಡಿದರು.ಗೌರವ ಆತಿಥಿಗಳಾಗಿ ಭಾಗವಹಿಸಿದ ಮಾಹೆ ಮಣಿಪಾಲದ ಕುಲಸಚಿವರಾದ ಡಾ. ನಾರಾಯಣ ಸಭಾಹಿತ್ ರವರು ವಿದ್ಯಾರ್ಥಿಗಳನ್ನು ಅಭಿನಂದಿಸುತ್ತಾ ,ಪದವೀಧರರು ತಮ್ಮ ವ್ಯತ್ತಿ ಜೀವನದಲ್ಲಿ […]
ಜೀವರಕ್ಷಕ ಭಾಸ್ಕರ್ ತಳಗೊಡುರವರ ಬದುಕನ್ನು ಬೆಳಗಿಸಿದ ದೀಪಾವಳಿ
ಜೀವರಕ್ಷಕ, ಮುಳುಗು ತಜ್ಞ ಭಾಸ್ಕರ್ ಕಳಸ ತಳಗೊಡು, ಈ ಬಡ ಸಂಸಾರ ಆ ಮಕ್ಕಳ ಮೊಗದಲ್ಲಿ ಬೆಳಕಿನ ಹಬ್ಬ ದೀಪಾವಳಿಯ ಸಂದರ್ಭದಲ್ಲಿ ಖುಷಿ ತರಿಸಿದ ಎಲ್ಲಾ ಸಮಾಜ ಸೇವಕರಿಗೂ ಶಿರಬಾಗಿ ನಮಸ್ಕರಿಸುವೆ. ಪ್ರತಿಬಿಂಬ ಟ್ರಸ್ಟ್ ಬೆಂಗಳೂರು ಭಾಸ್ಕರ್ ರವರ ಮೂರು ಮಕ್ಕಳಿಗೆ ಅನುಕೂಲವಾಗಲೆಂದು ಶಾಲಾ ಬ್ಯಾಗ್ ಮತ್ತು ಕಲಿಕಾ ಸಾಮಗ್ರಿಗಳು ಮತ್ತು ಬಟ್ಟೆ ಪುಸ್ತಕವನ್ನು ಜೋಡಿಸಿಡಲು ಕಾಪಾಟ್ ಒಂದನ್ನು ಬೆಂಗಳೂರಿನಿಂದ ಕಳಿಸಿಕೊಟ್ಟಿದ್ದಾರೆ. ಕಳಸದ ಕೃಷಿಕರು, ಪತ್ರಕರ್ತರಾದ ರವಿ ಕೆಳಂಗಡಿ […]
ಸಂಜಿತ್ ಎಮ್ ದೇವಾಡಿಗನಿಗೆ ಮಕ್ಕಳ ಕರ್ನಾಟಕ ರಾಜ್ಯೋತ್ಸವ ಗೌರವ ಪ್ರಶಸ್ತಿ
ಗಂಗೊಳ್ಳಿ(ನ,7): ಕಾರ್ಕಳ ತಾಲೂಕು ಅಜೆಕಾರುವಿನ ಅಖಿಲ ಕರ್ನಾಟಕ ಬೆಳದಿಂಗಳ ಸಾಹಿತ್ಯ ಸಮ್ಮೇಳನ ಸಮಿತಿಯು ವಿವಿಧ ಸಂಸ್ಥೆಗಳ ಸಹಯೋಗದೊಂದಿಗೆ ಕೊಡಮಾಡುವ ಮಕ್ಕಳ ಕರ್ನಾಟಕ ರಾಜ್ಯೋತ್ಸವ ಗೌರವ 2021 ಪ್ರಶಸ್ತಿಗೆ ಕುಂದಾಪುರದ ಗಂಗೊಳ್ಳಿಯ ಸ್ಯಾಕ್ಸೋಫೋನ್ ವಾದನದ ಬಾಲಪ್ರತಿಭೆ ಸಂಜಿತ್ ಎಮ್ ದೇವಾಡಿಗ ಇವರು ಆಯ್ಕೆಯಾಗಿರುತ್ತಾರೆ. ಗಂಗೊಳ್ಳಿಯ ಕೊಂಚಾಡಿ ರಾಧಾ ಶೆಣೈ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮೂರನೇ ತರಗತಿಯಲ್ಲಿ ಕಲಿಯುತ್ತಿರುವ ಸಂಜಿತ್ ಎಮ್ ದೇವಾಡಿಗ ಗಂಗೊಳ್ಳಿಯ ಖ್ಯಾತ ಸ್ಯಾಕ್ಸೋಫೋನ್ ವಾದಕ ಮತ್ತು ಚಿತ್ರಕಲಾ ಶಿಕ್ಷಕ […]
ಡಾ.ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ದೀಪಾವಳಿ ಸಂಭ್ರಮ (ಮರೆಯಾಗುತ್ತಿರುವ ಸಂಪ್ರದಾಯದ ಮೆಲುಕು : ಪ್ರೊ.ಕೆ .ಉಮೇಶ್ ಶೆಟ್ಟಿ)
ಕುಂದಾಪುರ (ನ,07): ನಮ್ಮ ಹಿರಿಯರ ಆಚರಣೆಗಳಲ್ಲಿ ವೈಜ್ಞಾನಿಕ ಅರ್ಥ ಇರುತ್ತದೆ. ಅದನ್ನೆಲ್ಲ ಅನುಸರಿಸಿದ ಕಾರಣಕ್ಕೆಅವರು ಆಯುಷ್ಯ ಮತ್ತು ಆರೋಗ್ಯವನ್ನು ಕಾಪಾಡಿಕೊಂಡರು. ನಮ್ಮ ಸಾಂಪ್ರದಾಯಿಕ ಆಚರಣೆಗಳನ್ನು ಮುಂದಿನ ತಲೆಮಾರಿಗೆ ದಾಟಿಸಬೇಕು. ಆ ನಿಟ್ಟಿನಲ್ಲಿ ನಮ್ಮ ಕಾಲೇಜಿನಲ್ಲಿ ಶಿಕ್ಷಣದ ಜೊತೆಗೆ, ವೈವಿಧ್ಯಮಯ ಕಾರ್ಯಕ್ರಮಗಳ ಮೂಲಕ ಎಲ್ಲಾ ಹಬ್ಬದ ಆಚರಣೆಯ ಮಹತ್ವವನ್ನು ನಮ್ಮ ವಿದ್ಯಾರ್ಥಿಗಳಿಗೆ ತಿಳಿಸುವ ಪ್ರಯತ್ನ ಮಾಡುತಿದ್ದೇವೆ ಎಂದು ಕುಂದಾಪುರದ ಡಾ.ಬಿ.ಬಿ. ಹೆಗ್ಡೆ ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ಕೊತ್ತಾಡಿ ಉಮೇಶ್ ಶೆಟ್ಟಿಯವರು ತಿಳಿಸಿದರು. ಅವರು […]
ಉಡುಪಿ: ನ ,08 ರಂದು ಉಡುಪಿಯ ಬಾಲಕಿಯರ ಪದವಿ ಪೂರ್ವ ಕಾಲೇಜಿನಲ್ಲಿ ಕನ್ನಡ ಜಾನಪದ ರಾಜ್ಯೋತ್ಸವ ಕಾರ್ಯಕ್ರಮ
ಉಡುಪಿ (ನ,06): ಕನ್ನಡ ಜಾನಪದ ಪರಿಷತ್ ಬೆಂಗಳೂರು,ಕನ್ನಡ ಜಾನಪದ ಪರಿಷತ್ ಜಿಲ್ಲಾ ಘಟಕ ಉಡುಪಿ ಜಿಲ್ಲೆ ಹಾಗೂ ಬಾಲಕಿಯರ ಪದವಿ ಪೂರ್ವ ಕಾಲೇಜು ಉಡುಪಿ ಇವರ ಸಂಯುಕ್ತ ಆಶ್ರಯದಲ್ಲಿ ಕನ್ನಡ ಜಾನಪದ ರಾಜ್ಯೋತ್ಸವ ಕಾರ್ಯಕ್ರಮವು ನ,8 ರಂದು ಉಡುಪಿಯ ಬಾಲಕಿಯರ ಪದವಿ ಪೂರ್ವ ಕಾಲೇಜು ಸಭಾ ಭವನದಲ್ಲಿ ನಡೆಯಲಿದೆ. ಈ ಕಾರ್ಯಕ್ರಮದ ಉದ್ಘಾಟನೆಯನ್ನು ಕನ್ನಡ ಜಾನಪದ ಪರಿಷತ್ತಿನ ರಾಜ್ಯಾಧ್ಯಕ್ಷರಾದ ಡಾ.ಎಸ್ ಬಾಲಾಜಿಯವರು ನೆರವೇರಿಸಲಿದ್ದಾರೆ. ಕಾಲೇಜಿನ ಪ್ರಾಂಶುಪಾಲರಾದ ಶ್ರೀ ರುದ್ರೇಗೌಡ ರವರು […]
ಗಂಗೊಳ್ಳಿ: ಭಾರತೀಯ ಜನತಾ ಪಾರ್ಟಿ ಬೈಂದೂರು ಮಂಡಲ ವತಿಯಿಂದ ಗೋಪೂಜಾ ಕಾರ್ಯಕ್ರಮ
ಗಂಗೊಳ್ಳಿ(ನ,5):ಇಲ್ಲಿನ ವೀರೇಶ್ವರ ಹಾಗೂ ಉಮಾಮಹೇಶ್ವರ ದೇವಸ್ಥಾನದಲ್ಲಿ ಭಾರತೀಯ ಜನತಾ ಪಾರ್ಟಿ ಬೈಂದೂರು ಮಂಡಲ ವತಿಯಿಂದ ದೀಪಾವಳಿಯ ಸಂಧರ್ಭದಲ್ಲಿ ವಿಶೇಷವಾಗಿ ಆಚರಿಸಲಾಗುವ ಗೋಪೂಜಾ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದಲ್ಲಿ ಬೈಂದೂರು ಮಂಡಲ ಅಧ್ಯಕ್ಷ ದೀಪಕ್ ಕುಮಾರ್ ಶೆಟ್ಟಿ, ಮಹಾಲಿಂಗೇಶ್ವರ ದೇವಸ್ಥಾನ ಬಸ್ರೂರು ಇದರ ಧರ್ಮಧರ್ಶಿಗಳಾದ ಅಪ್ಪಣ್ಣ ಹೆಗ್ಡೆಯವರು ಉಪಸ್ಥಿತರಿದ್ದರು. ಬಿಜೆಪಿ ಮುಖಂಡರಾದ ಪ್ರಿಯದರ್ಶಿನಿ ಬಿಜೂರು, ಸುರೇಶ್ ಬಟ್ವಾಡಿ, ಪುಷ್ಪರಾಜ್ ಶೆಟ್ಟಿ, ಅನಂದ ಖಾರ್ವಿ ಉಮೇಶ್ ಮೇಸ್ತ, ಹರೀಶ್ ಮೇಸ್ತ ಹಾಗೂ ಸ್ಥಳೀಯ ಗ್ರಾಮ ಪಂಚಾಯತ್ […]










