ಕವಿಸಂಚಾರ ಹೊರಟಿದೆ ಕಾಣದೂರಿಗೆ ನೆನಪ ಮೈಲಿಗಲ್ಲುಗಳ ಜೊತೆಗೆ; ಹರ್ಷೊಲ್ಲಾಸದ ಗಡಿ ಹುಡುಕಿ ನಡಿಗೆ… ನಡೆದಷ್ಟೂ ನಡೆಸುವ ಪಥಕೆ ಹೆಜ್ಜೆಗಳು ಮುನ್ನುಡಿ ಬರೆದಿವೆ,, ಗೀಚಿದಷ್ಟೂ ಜಿನುಗುವ ಭವಕೆಪುಟಗಳು ಸೋಲನೊಪ್ಪಿ ತಿರುಗಿವೆ ..ಅಕ್ಷರವೆಲ್ಲಾ ಮಾಸಿ ಮರೆಯಾಗಿವೆ..!! ದಿಗಂತ ಕಡಲಿನ ನಡುವಿನಲ್ಲಿ ಅನಂತತೆಯ ಹಾಯಿದೋಣಿ…. ಸಾಗುತಿದೆ ನಿರ್ದಿಗಂತವಾಗಿ ಏರಿ ಕವಿಕಲ್ಪನೆಗಳನ್ನ ಅಲ್ಪತೆಗೆ ತೂರಿ!! ಅಲ್ಪಾನಂತತೆಯ ಕದನದಲಿ ಸಕಲತೆಯ ಕಿಡಿ ಉದ್ಭವಿಸಿಧಗಿಸಿತೇ ಧರೆಹೊತ್ತಿ ಜ್ವಾಲೆಯಲಿ?? ಸುಪ್ತ ಮನಸಿನ ಮಿತಿಮೀರಿ…..!! ಸವಿದಷ್ಟೂ ಸವೆಯುತಿದೆ ಜೀವನ ತುಂಬಿದಷ್ಟೂ ಬತ್ತುತಿದೆ […]
Author: KundaVahini Editor
ಜೀವ ರಕ್ಷಕ, ಮುಳುಗು ತಜ್ಞ ಸುರೇಶ ಖಾರ್ವಿ ಭಟ್ಕಳ್ (ಕಡಲಾಳದ ಅಂತರಂಗ- ಬದುಕಿನ ಕಥೆ ವ್ಯಥೆ )
ಜೀವ ರಕ್ಷಣೆ ಮತ್ತು ಸಾವು ಅದು ಎಷ್ಟು ಕಠೋರವೆಂದರೆ ಆ ಚಕ್ರವ್ಯೂಹಕ್ಕೆ ಸಿಲುಕಿ ಬದುಕು ಬಂದವರರಿಗೆ ಮಾತ್ರ ಗೊತ್ತು .ಸಾವಿನಂಚಿನ ಕದ ತಟ್ಟಿ ಬದುಕಿ ಬರುವುದೆಂದರೆ ಅದೇನು ಆಟವಲ್ಲಾ.ಅದರ ಪರಿಕಲ್ಪನೆ ಮಾಡುವುದು ಕೂಡ ಕಷ್ಟ, ಅಂತಹ ಪರಿಸ್ಥಿತಿಯಲ್ಲಿ ಇರುವವರನ್ನು ಬದುಕಿಸುವವರೇ ಜೀವ ರಕ್ಷಕರು. ಜೀವರಕ್ಷಕರು ಅಕ್ಷರಶಃ ದೇವರಿಗೆ ಸಮನಾದವರು. ಆದರೆ ಇಂಥ ದೇವರುಗಳು ಮಾತ್ರ ಕಣ್ಣೀರಲ್ಲಿ ಕೈತೊಳೆತ್ತಾ ಇರುವುದು ಮಾತ್ರ ಶೋಚನೀಯ…!ಇವರ ನಿಸ್ವಾರ್ಥ ಸೇವಾ ಕಾರ್ಯವನ್ನು ಗುರುತಿಸಿ ಇವರಿಗೆ ಗೌರವದ […]
ಸರಸ್ವತಿ ವಿದ್ಯಾಲಯದಲ್ಲಿ ಕಾನೂನು ಅರಿವು ಕಾರ್ಯಕ್ರಮ
ಗಂಗೊಳ್ಳಿ(ನ,12): ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ ನಿರ್ದೇಶನದಂತೆ ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಪದವಿಪೂರ್ವ ಕಾಲೇಜಿನಲ್ಲಿ ಇಲ್ಲಿನ ರಾಷ್ಟ್ರೀಯ ಸೇವಾ ಯೋಜನೆಯ ಸಹಯೋಗದೊಂದಿಗೆ ವಿದ್ಯಾರ್ಥಿಗಳಿಗೆ ಕಾನೂನು ಅರಿವು ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಮುಖ್ಯ ಅತಿಥಿಯಾಗಿ ಆಗಮಿಸಿದ್ದ ನ್ಯಾಯವಾದಿ ಶರತ್ ಕುಮಾರ್ ಶೆಟ್ಟಿ ಮಾತನಾಡಿ ನಮ್ಮ ದೇಶದಲ್ಲಿ ಚಾಲ್ತಿಯಲ್ಲಿರುವ ಕಾನೂನಿನ ಬಗೆಗಿನ ವಿವಿಧ ವಿಚಾರಗಳ ಪ್ರಾಥಮಿಕ ಅರಿವು ಪ್ರತಿಯೊಬ್ಬ ನಾಗರಿಕನಲ್ಲಿಯೂ ಇರಬೇಕು. ಇಂತಹ ಅರಿವಿನ ಜೊತೆಗೆ ಉತ್ತಮ ವ್ಯಕ್ತಿತ್ವವನ್ನು ಕೂಡ ನಮ್ಮದಾಗಿಸಿಕೊಳ್ಳುವ ಮೂಲಕ ಅಪರಾಧ […]
ಶಿಕ್ಷ ಪ್ರಭಾ ಅಕಾಡೆಮಿ ಕುಂದಾಪುರ: ವಾರ್ಷಿಕ ಕ್ರೀಡಾಕೂಟ (ಕ್ರೀಡಾ ಮನೋಭಾವ ವಿದ್ಯಾರ್ಥಿಗಳ ಮನಸ್ಸನ್ನು ಗಟ್ಟಿಗೊಳಿಸುತ್ತದೆ- ಪಿ.ಎಸ್.ಐ ನಿರಂಜನ್ ಗೌಡ)
ಕುಂದಾಪುರ(ನ,12): ವಿದ್ಯಾರ್ಥಿಗಳು ಜೀವನದಲ್ಲಿ ಕ್ರೀಡಾ ಮನೋಭಾವವನ್ನು ಮೈಗೂಡಿಸಿಕೊಂಡರೆ ವಿದ್ಯಾರ್ಥಿಗಳ ಮನಸ್ಸು ಗಟ್ಟಿ ಆಗುವುದರ ಜೊತೆಗೆ ಎಂತಹ ಕಠಿಣ ಪರಿಶ್ರಮವನ್ನು ಎದುರಿಸಲು ಕೂಡ ಸಜ್ಜಾಗುತ್ತದೆ ಎಂದು ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯ ಸಬ್ ಇನ್ಸ್ ಪೆಕ್ಟರ್ ನಿರಂಜನ್ ಗೌಡ ರವರು ಹೇಳಿದರು ಅವರು ಕುಂದಾಪುರದ ಪ್ರತಿಷ್ಠಿತ ಶಿಕ್ಷ ಪ್ರಭಾ ಅಕಾಡೆಮಿ ಆಫ್ ಕಾಮರ್ಸ್ ಎಜುಕೇಶನ್ ಸಿ.ಎ/ಸಿ.ಎಸ್ ಸಂಸ್ಥೆಯ ವಾರ್ಷಿಕ ಕ್ರೀಡಾಕೂಟವನ್ನು ಉದ್ಘಾಟಿಸಿ ಹೇಳಿದರು.ವಿದ್ಯಾರ್ಥಿಗಳ ವಿದ್ಯಾಭ್ಯಾಸದ ಜೊತೆಗೆ ಕ್ರೀಡೆಗೂ ಕೂಡ ಸ್ವಲ್ಪ […]
ನ,15 ರಿಂದ ಜಿ. ಶಂಕರ್ ಆರೋಗ್ಯಸುರಕ್ಷಾ ಕಾರ್ಡ್ಗಳ ನವೀಕರಣ ಪ್ರಾರಂಭ
ಕುಂದಾಪುರ (ನ,12): ಜಿ.ಶಂಕರ್ ಫ್ಯಾಮಿಲಿ ಟ್ರಸ್ಟ್ ಅಂಬಲಪಾಡಿ ಇದರ ಪ್ರವರ್ತಕರಾದ ನಾಡೋಜಾ ಡಾ. ಜಿ. ಶಂಕರ್ ರವರು ಯಾವುದೇ ಜಾತಿ, ಮತ, ಧರ್ಮ ಭೇದವಿಲ್ಲದೆ ಬಡವರ ಅರೋಗ್ಯ ಸ್ವಾಸ್ಥ್ಯಕ್ಕಾಗಿ ಮಣಿಪಾಲ ಸಿಗ್ನಾ ಹೆಲ್ತ್ ಇನ್ಸೂರೆನ್ಸ್ ಕಂಪೆನಿ ಸಹಯೋಗದೊಂದಿಗೆ ಮಾಹೆ ಮಣಿಪಾಲದ ಸಹಕಾರದಿಂದ ಹಮ್ಮಿಕೊಂಡ ಜಿ. ಶಂಕರ್ ಆರೋಗ್ಯ ವಿಮಾ ಯೋಜನೆ ನವೀಕರಣ ಮತ್ತು ಹೊಸ ಕಾರ್ಡುಗಳ ನೋಂದಾವಣಿ ಅಭಿಯಾನ ಇದೇ ನವೆಂಬರ್ ,15 ರಿಂದ 30 ರ ತನಕ ನಡೆಯಲಿದೆ. 2021ರಲ್ಲಿ ಒಟ್ಟು 52,505 […]
ನ,15 ರಿಂದ ಜಿ. ಶಂಕರ್ ಆರೋಗ್ಯಸುರಕ್ಷಾ ಕಾರ್ಡ್ಗಳ ನವೀಕರಣ ಪ್ರಾರಂಭ
ಕುಂದಾಪುರ (ನ,12): ಜಿ.ಶಂಕರ್ ಫ್ಯಾಮಿಲಿ ಟ್ರಸ್ಟ್ ಅಂಬಲಪಾಡಿ ಇದರ ಪ್ರವರ್ತಕರಾದ ನಾಡೋಜಾ ಡಾ. ಜಿ. ಶಂಕರ್ ರವರು ಯಾವುದೇ ಜಾತಿ, ಮತ, ಧರ್ಮ ಭೇದವಿಲ್ಲದೆ ಬಡವರ ಅರೋಗ್ಯ ಸ್ವಾಸ್ಥ್ಯಕ್ಕಾಗಿ ಮಣಿಪಾಲ ಸಿಗ್ನಾ ಹೆಲ್ತ್ ಇನ್ಸೂರೆನ್ಸ್ ಕಂಪೆನಿ ಸಹಯೋಗದೊಂದಿಗೆ ಮಾಹೆ ಮಣಿಪಾಲದ ಸಹಕಾರದಿಂದ ಹಮ್ಮಿಕೊಂಡ ಜಿ. ಶಂಕರ್ ಆರೋಗ್ಯ ವಿಮಾ ಯೋಜನೆ ನವೀಕರಣ ಮತ್ತು ಹೊಸ ಕಾರ್ಡುಗಳ ನೋಂದಾವಣಿ ಅಭಿಯಾನ ಇದೇ ನವೆಂಬರ್ ,15 ರಿಂದ 30 ರ ತನಕ ನಡೆಯಲಿದೆ. 2021ರಲ್ಲಿ ಒಟ್ಟು 52,505 […]
•••ಗೆಳೆತನ•••
ಎತ್ತ ಸಾಗುವುದೀ ಪಯಣ ಹೊತ್ತು ಮುಳುಗುವ ಮುನ್ನ ಚಿತ್ತ ಧೃತಿಗೆಡದಿದ್ದರೆ ಸಾಕು ಮತ್ತೆ ಶೋಧಿಸಲು ಸಮಯವಾದೀತು…..!! ಕಳೆದೆವು ಅದೆಷ್ಟೋ ಕ್ಷಣಗಳ ಸ್ನೇಹದ ಕಡಲಲ್ಲಿ ನೆನಪಿನ ದೋಣಿಯೇರಿ ಸಾಗಿದಷ್ಟೂ ದೂರ ಸೇರಿದಷ್ಟೂ ದಾರಿ….. ಸವಿದರೂ ಸವೆಯದ ಸ್ನೇಹವ ನೆನೆದು ಅಳುವುದೊಂದೆ ಉಳಿದಿದೆ ಇನ್ನೆಲ್ಲವ ನಾವಾಗಲೇ ಅಳಿಸಿಯಾಗಿದೆ. ಅನಂತತೆಯ ಅಲೆಯೊಂದು ಉದಯಿಸಿದೆ ಎದೆಯೊಳಗೆ ಸಾಗಲು ದೋಣಿ ಹಡಗುಗಳಿಲ್ಲ ಸೇರಲು ಸ್ನೇಹ ಸಂಬಂಧಗಳಿಲ್ಲ ತೀರ ಸಾಗರದಲ್ಲಿ ಒಂಟಿ ನಾನು….. ಮಾತಿನ ಶಿಖರಕ್ಕೀಗ ಮೌನದ ಮೆಟ್ಟಿಲು […]
ಡಾ|ಬಸ್ರೂರು ಭುಜಂಗ ಹೆಗ್ಡೆ ಸಂಸ್ಮರಣೆ
ಕುಂದಾಪುರ(ನ,11):ಉದ್ಯಮಿಗಳಾಗಿ ಅನೇಕರಿಗೆ ಉದ್ಯೋಗವನ್ನು ನೀಡಿದ ಡಾ.ಬಿ.ಬಿ. ಹೆಗ್ಡೆಯವರು ವೈದ್ಯರಾಗಿ ಕೂಡ ಸೇವೆ ಸಲ್ಲಿಸಿದವರು. ಸಮಾಜದ ಸಮಸ್ಯೆಗಳಿಗೆ ಶಿಕ್ಷಣದ ಮೂಲಕ ಚಿಕಿತ್ಸೆ ನೀಡುವ ಕಾರ್ಯ ಆರಂಭಿಸಿದ ಡಾ.ಬಿ.ಬಿ. ಹೆಗ್ಡೆಯವರ ಸಂಸ್ಮರಣೆಯನ್ನು ಕಾಲೇಜಿನ ಕನ್ನಡ ವಿಭಾಗದಿಂದ ಆಯೋಜಿಸಲಾಗಿತ್ತು. ಪ್ರಾಂಶುಪಾಲರಾದ ಪ್ರೊ. ಕೆ. ಉಮೇಶ್ ಶೆಟ್ಟಿ ದೀಪ ಬೆಳಗಿ, ಪುಷ್ಪನಮನ ಸಲ್ಲಿಸಿದರು. ಉಪಪ್ರಾಂಶುಪಾಲರಾದ ಚೇತನ್ ಶೆಟ್ಟಿ ಕೋವಾಡಿ ಪ್ರಾಸ್ತಾವಿಕ ನುಡಿಗಳನ್ನಾಡಿದರು. ನಂತರ ಬೋಧಕ ಬೋಧಕೇತರರು ಉಪಸ್ಥಿತರಿದ್ದು ಮೌನ ಪ್ರಾರ್ಥನೆ ಸಲ್ಲಿಸಿದರು. ಉಪನ್ಯಾಸಕಿ ರೇಷ್ಮಾ ಶೆಟ್ಟಿ […]
ಬಂಟಕಲ್ ಇಂಜಿನಿಯರಿಂಗ್ ಕಾಲೇಜಿನಲ್ಲಿ ಆಳವಾದ ಕಲಿಕೆಯಲ್ಲಿ ಇತ್ತೀಚಿನ ಪ್ರವೃತ್ತಿಗಳು ಎಂಬ ವಿಷಯದ ಕುರಿತು ತಾಂತ್ರಿಕ ಕಾರ್ಯಗಾರ
ಬಂಟಕಲ್ (ನ,10): ಇಲ್ಲಿನ ಶ್ರೀ ಮಧ್ವ ವಾದಿರಾಜ ತಾಂತ್ರಿಕ ಮಹಾವಿದ್ಯಾಲಯದ ಗಣಕತಂತ್ರ ವಿಭಾಗದ ಐಎಸ್ಟಿಇ ವಿದ್ಯಾರ್ಥಿ ಘಟಕದ ಆಶ್ರಯದಲ್ಲಿ “ಆಳವಾದ ಕಲಿಕೆಯಲ್ಲಿ ಇತ್ತೀಚಿನ ಪ್ರವೃತ್ತಿಗಳು‘ ಎಂಬ ವಿಷಯದ ಕುರಿತು ತಾಂತ್ರಿಕ ಕಾರ್ಯಗಾರವನ್ನು ಇತ್ತೀಚೆಗೆ ಆಯೋಜಿಸಲಾಗಿತ್ತು. ಬೆಂಗಳೂರಿನ ಟೆಕ್ವೆಡ್ ಲ್ಯಾಬ್ಸ್ ನ ಕಾರ್ಪೊರೇಟ್ ತರಬೇತುದಾರರಾದ ಶ್ರೀ ಮೊಹಮ್ಮದ್ ಆಮೀರ್ ರವರು ಕಾರ್ಯಕ್ರಮದ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ್ದರು.ಇವರು ಆಳವಾದ ಕಲಿಕೆಯ ಕುರಿತು ವಿವರಿಸುತ್ತ, ಗುಗಲ್ನಲ್ಲಿ ಕಲಿಕಾ ವೇದಿಕೆಯನ್ನು ಉಪಯೋಗಿಸಿಕೊಂಡು ಕೆಲವು ಉದಾಹರಣೆಯನ್ನು ನೀಡಿದರು. […]
ಡಾ.ಬಿ.ಬಿ ಹೆಗ್ಡೆ ಕಾಲೇಜು ಕುಂದಾಪುರ: ಶ್ರೀ ಆರ್. ಉಪೇಂದ್ರ ಶೆಟ್ಟಿ ಯವರಿಂದ ಸ್ಪರ್ಧಾತ್ಮಕ ಪರೀಕ್ಷೆಗಳ ಕುರಿತಾದ ಪುಸ್ತಕಗಳ ಹಸ್ತಾಂತರ
ಕುಂದಾಪುರ (ನ,10): ಕರ್ನಾಟಕದ ಪ್ರಸಿದ್ಧ ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿ ಸಂಸ್ಥೆಯಾದ ಬೆಂಗಳೂರಿನ ಯೂನಿವರ್ಸಲ್ ಗ್ರೂಪ್ ಆಫ್ ಇನ್ಸ್ಟಿಟ್ಯೂಷನ್ಸ್ ಇದರ ನಿರ್ದೇಶಕರಾದ ಶ್ರೀ ಉಪೇಂದ್ರ ಶೆಟ್ಟಿಯವರು ಕೇಂದ್ರ ಹಾಗೂ ರಾಜ್ಯ ಸರ್ಕಾರದ ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳ ಕುರಿತಾದ ಉಪಯುಕ್ತ ಮಾಹಿತಿಯುಳ್ಳ ಸರಿಸುಮಾರು ಮೂವತ್ತು ಸಾವಿರ ರೂಪಾಯಿ ಮೌಲ್ಯದ ಪುಸ್ತಕಗಳನ್ನು ಡಾ.ಬಿ.ಬಿ ಹೆಗ್ಡೆ ಕಾಲೇಜಿನ ಪ್ರಾಂಶುಪಾಲರಾದ ಪ್ರೊ.ಕೆ. ಉಮೇಶ್ ಶೆಟ್ಟಿಯವರಿಗೆ ಹಸ್ತಾಂತರಿಸಿದರು. ಈ ಸಂದರ್ಭದಲ್ಲಿ ಕಾಲೇಜಿನ ಉಪಪ್ರಾಂಶುಪಾಲ ಚೇತನ್ ಶೆಟ್ಟಿ ಕೋವಾಡಿ ಹಾಗೂ […]










