ಗಂಗೊಳ್ಳಿ(ಅ,26):ಇಲ್ಲಿನ ಸರಸ್ವತಿ ವಿದ್ಯಾಲಯ ಪದವಿಪೂರ್ವ ಕಾಲೇಜು ಇದರ ರಾಷ್ಟ್ರೀಯ ಸೇವಾ ಯೋಜನೆ ಘಟಕ, ರೋಟರಿ ಕ್ಲಬ್ ಗಂಗೊಳ್ಳಿ ಹಾಗೂ ರೋಟರ್ಯಾಕ್ಟ್ ಕ್ಲಬ್ ಗಂಗೊಳ್ಳಿ ಇವರ ಸಂಯುಕ್ತ ಆಶ್ರಯದಲ್ಲಿ ಕಾಲೇಜಿನ ವಿದ್ಯಾರ್ಥಿಗಳಿಗಾಗಿ ಜೀವನ ಕೌಶಲ್ಯ ಅಭಿವೃದ್ಧಿ ಕಾರ್ಯಕ್ರಮವನ್ನು ಗುಜ್ಜಾಡಿ ಗೋಪಾಲ ನಾಯಕ ರೋಟರಿ ಸಭಾಂಗಣದಲ್ಲಿ ಆಯೋಜಿಸಲಾಗಿತ್ತು. ಜೀವನ ಎಂಬುದು ಒಂದು ಕ್ರಿಕೆಟ್ ಸ್ಟೇಡಿಯಂ ಇದ್ದ ಹಾಗೆ .ಇಲ್ಲಿ ಬಾಲ್ ಎನ್ನುವ ಅವಕಾಶಗಳನ್ನು ಯಶಸ್ವಿಯಾಗಿ ಬಳಸಿಕೊಳ್ಳಬೇಕು.ವಿವಿಧ ಚಟುವಟಿಕೆಗಳನ್ನು ನಡೆಸುವ ಮೂಲಕ ಜೀವನದಲ್ಲಿ ಮಾತನಾಡುವ ಕಲೆ, ನಾಯಕತ್ವದ ಗುಣ,ಸಕಾರಾತ್ಮಕ […]
Author: KundaVahini Editor
ಉತ್ತರ ಸಿಗದ ಪ್ರಶ್ನೆ…..
ಅದೇನೋ ಗೊತ್ತಿಲ್ಲ .ಸುಮ್ಮನೆ ಕುಳಿತಾಗಲೆಲ್ಲಾ ನನ್ನನ್ನು ಕಾಡೋ ಪ್ರಶ್ನೆ ನಾನ್ಯಾಕೆ ಇಷ್ಟೊಂದು ಬದಲಾದೆ?ಸಮಯ ನನ್ನನ್ನ ಬದಲಿಸಿತಾ? ಇಲ್ಲ ಸಂದರ್ಭಕ್ಕೆ ತಕ್ಕ ಹಾಗೆ ಬದುಕುತ್ತಿರುವೆನಾ? ಇಲ್ಲ ಬದುಕಿನ ಚಂಚಲತೆ ನನ್ನನು ಬದಲಾಯಿಸಿತಾ? ಬಹುಶಃ ಉತ್ತರ ಸಿಗದ ಪ್ರಶ್ನೆ. ಮೊದಲೆಲ್ಲ ನೋಡಿದ್ದನ್ನೆಲ್ಲ ಅಮ್ಮನ ಬಳಿ ಹಠ ಹಿಡಿದು ಕೊಡಿಸುವಂತೆ ಕೇಳುತ್ತಿದ್ದ ನಾನು ಈವಾಗ ಅವಶ್ಯಕತೆ ಇದ್ದರೂ ಅಮ್ಮನ ಬಳಿ ಕೇಳಲು ಹಿಂಜರಿಕೆ! ಕಾರಣವೇ ಇಲ್ಲದ ಜಗಳ ಆಡ್ತಾ ಇದ್ದೆ ಅಣ್ಣ ತಮ್ಮನ ಜೊತೆ. […]
ಸಾಲಿಗ್ರಾಮ: ಗುರುನರಸಿಂಹ ಸಹಕಾರಿ ಸಂಸ್ಥೆಯ ಅಧ್ಯಕ್ಷರಾಗಿ ಆನಂದ ಸಿ. ಕುಂದರ್ ಪುನರಾಯ್ಕೆ
ಸಾಲಿಗ್ರಾಮ(ಅ,25): ಇಲ್ಲಿನ ಶ್ರೀ ಗುರು ನರಸಿಂಹ ವಿವಿಧೋದ್ದೇಶ ಸೌಹಾರ್ದ ಸಹಕಾರಿ ಸಂಸ್ಥೆಯ 5 ವರ್ಷಗಳ ಅವಧಿಯ ಆಡಳಿತ ಮಂಡಳಿಯ ಅಧ್ಯಕ್ಷರಾಗಿ ಉದ್ಯಮಿ ಆನಂದ ಸಿ, ಕುಂದರ್ ಮೂರನೇ ಬಾರಿ ಪುನರಾಯ್ಕೆಯಾಗಿದ್ದಾರೆ. ಉಪಾಧ್ಯಕ್ಷರಾಗಿ ಸಂಜೀವ ಜಿ. ಅವಿರೋಧ ಆಯ್ಕೆಯಾದರು. ನಿರ್ದೇಶಕರು ಹಾಗೂ ಅಧ್ಯಕ್ಷ, ಉಪಾಧ್ಯಕ್ಷರ ಸ್ಥಾನಕ್ಕೆ ಅ,24 ರಂದು ಚುನಾವಣೆ ನಡೆದಿದ್ದು,ಎಲ್ಲ ನಿರ್ದೇಶಕರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಮಾನವೀಯ ಮೌಲ್ಯಗಳ ಸರದಾರರು ”Humanity”ಸಂಸ್ಥೆಯ ಸದ್ಗುಣ ಸಮಾಜ ಸೇವಾ ಯುವಕರು
ಸಮಾಜ ಸೇವೆ ಮಾಡುವಾಗ ಜಾತಿ-ಧರ್ಮವನ್ನು ನೋಡದೆ ಪ್ರತಿಯೊಬ್ಬರ ಏಳಿಗೆಗಾಗಿ ಶ್ರಮಿಸಿದರೆ ಸಮಾಜದಲ್ಲಿ ಸೌಹಾರ್ಧತೆ ಮತ್ತು ಮನುಷ್ಯನ ಮಾನವೀಯತೆಯ ದರ್ಶನವಾಗುತ್ತದೆ.ಒಬ್ಬ ವ್ಯಕ್ತಿ ಅಥವಾ ಸಮಾಜ ಸೇವಾ ಸಂಸ್ಥೆ ತನ್ನನ್ನು ಸೇವಾ ಕೈಂಕರ್ಯದಲ್ಲಿ ತೊಡಗಿಸಿಕೊಳ್ಳುವಾಗ ಮಾನವೀಯ ಮೌಲ್ಯಗಳನ್ನು ಹೊಂದಬೇಕಾಗಿರುವುದು ಅತ್ಯವಶ್ಯಕ. ಈ ಸಮಾಜದಲ್ಲಿ ಬದುಕುತ್ತಿರುವ ಪ್ರತಿಯೊಬ್ಬ ವ್ಯಕ್ತಿ ತನಗೆ ಗೌರವದಿಂದ ಬದುಕಲು ಅವಕಾಶ ಮಾಡಿ ಕೊಟ್ಟ ಸಮಾಜಕ್ಕೆ ಋಣಿಯಾಗಿರುವುದರ ಜೊತೆಗೆ ತಮ್ಮಿಂದ ಸಮಾಜಕ್ಕೆ ಏನಾದರೂ ಸೇವೆ ನೀಡಬೇಕೆಂಬ ಒಂದಿಷ್ಟು ಸೇವಾ ಮನಸ್ಸುಗಳು ಕಾತುರದಿಂದಿರುತ್ತದೆ. ಅಂತ […]
ಕುಂದಾಪುರ: ಬಾಂಗ್ಲಾದೇಶದಲ್ಲಿ ನಡೆಯುತ್ತಿರುವ ಹಿಂದೂಗಳ ನರಮೇಧದ ವಿರುದ್ಧ ಪಂಜಿನ ಮೆರವಣಿಗೆ
ಕುಂದಾಪುರ (ಅ,23): ಬಾಂಗ್ಲಾದೇಶದಲ್ಲಿ ನಿರಂತರವಾಗಿ ನಡೆಯುತ್ತಿರುವ ಹಿಂದೂ ವಿರೋಧಿ ಚಟುವಟಿಕೆಗಳಾದ ಮಂದಿರಗಳ ದ್ವಂಸ ಕೃತ್ಯ ಗಳು, ಹದಿಹರೆಯದ ಹೆಣ್ಣುಮಕಳ ಮೇಲೆ ನಿರಂತರವಾಗಿ ನಡೆಯುತ್ತಿರುವ ಅತ್ಯಾಚಾರಗಳು, 38ಕ್ಕೂ ಅಧಿಕ ಹಿಂದೂ ಮನೆಗಳನ್ನ ಬೆಂಕಿಗೆ ಆಹುತಿ ಮಾಡಿ 100ಕ್ಕೂ ಅಧಿಕ ಮನೆಗಳನ್ನ ಧ್ವಂಸ ಮಾಡಿರುವಂತಹ ಹೇಯ ಕೃತ್ಯವನ್ನ ಖಂಡಿಸಿ ಅ,23 ಶನಿವಾರ ಸಂಜೆ 7:30ರಿಂದ ಕುಂದಾಪುರದ ಶಾಸ್ತ್ರಿ ವೃತ್ತದಲ್ಲಿ ಯುವಾ ಬ್ರಿಗೇಡ್ ಕುಂದಾಪುರದ ವತಿಯಿಂದ ಪಂಜಿನ ಮೆರವಣಿಗೆ ನಡೆಯಿತು. ಶಂಕರ್ ಅಂಕದ ಕಟ್ಟೆಯವರು, […]
ಸಂವಿಧಾನ ದೇಶದ ಎಲ್ಲಾ ಕಾನೂನುಗಳಿಗೆ ತಾಯಿ ಇದ್ದಂತೆ- ನ್ಯಾಯಾಧೀಶ ಶ್ರೀ ರವೀಂದ್ರ ಎಂ.ಜೋಶಿ
ಕುಂದಾಪುರ(ಅ,24): ವಿದ್ಯಾರ್ಥಿಗಳು ಪಠ್ಯದ ಜೊತೆಗೆ ಪಠ್ಯೇತರ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳ ಬೇಕು .ತಮ್ಮನ್ನು ಸಮಾಜ ಮುಖಿ ಕೆಲಸದಲ್ಲಿ ತೊಡಗಿಸಿಕೊಳ್ಳುತ್ತಾ, ದೇಶದ ಎಲ್ಲಾ ಕಾನೂನುಗಳಿಗೆ ತಾಯಿಯಂತಿರುವ ಸಂವಿಧಾನದ ಗೌರವಿಸುವುದರ ಜೊತೆಗೆ ಕಾನೂನುಗಳ ಅರಿವು ಹೊಂದಿರಬೇಕು ಎಂದು ಕುಂದಾಪುರದ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಗೌರವಾನ್ವಿತ ಶ್ರೀ ರವೀಂದ್ರ.ಎಂ. ಜೋಶಿ ಹೇಳಿದರು. ಅವರು ಡಾ|ಬಿ.ಬಿ ಹೆಗ್ದೆ ಪ್ರಥಮ ದರ್ಜೆ ಕಾಲೇಜಿನಲ್ಲಿ ಕುಂದಾಪುರ ತಾಲೂಕು ಕಾನೂನು ಸೇವೆಗಳ ಸಮಿತಿ ವಕೀಲರ ಸಂಘ(ರಿ). ಕುಂದಾಪುರ, […]
ಬೈಂದೂರು ಸರ್ಕಾರಿ ಐಟಿಐ ಕಾಲೇಜು: ಉನ್ನತ ಶಿಕ್ಷಣ ಸಚಿವ ಡಾ. ಅಶ್ವತ್ ನಾರಾಯಣ್ ರವರಿಂದ ಕಾಮಗಾರಿ ಪ್ರಗತಿ ಪರಿಶೀಲನೆ
ಬೈಂದೂರು (ಅ,23): ಬೈಂದೂರು ಸರ್ಕಾರಿ ಐಟಿಐ ಕಾಲೇಜನ್ನು ಟಾಟಾ ಸಂಸ್ಥೆಯ ಸಹಯೋಗದೊಂದಿಗೆ ಅಂತರರಾಷ್ಟ್ರೀಯ ಮಟ್ಟಕ್ಕೆ ಉನ್ನತೀಕರಿಸುವ ಕಾಮಗಾರಿಗಳು ನಡೆಯುತ್ತಿದ್ದು, ಉನ್ನತ ಶಿಕ್ಷಣ,ಕೌಶಲ್ಯಾಭಿವೃದ್ಧಿ ,ಐಟಿ ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಡಾ.ಅಶ್ವಥ್ ನಾರಾಯಣ ಅ,23 ರಂದು ಬೈಂದೂರು ಸರಕಾರಿ ಐ.ಟಿ.ಐ ಕಾಲೇಜಿಗೆ ಭೇಟಿ ಕಾಮಗಾರಿ ಪ್ರಗತಿ ಪರಿಶೀಲನೆ ನಡೆಸಿದರು. ನೂತನ 11 ಕೋರ್ಸ್ಗಳು ಆರಂಭವಾಗಲಿದ್ದು, ಅವುಗಳಲ್ಲಿ ಆರು ವಿಷಯಗಳು ಎರಡು ವರ್ಷ ಹಾಗೂ ಐದು ವಿಷಯಗಳು ಒಂದು ವರ್ಷದ ಅವಧಿಯದ್ದಾಗಿದೆ ಎಂದು ತಿಳಿಸಿದರು.ಈ ಸಂಧರ್ಭದಲ್ಲಿ […]
ರಾಷ್ಟಮಟ್ಟದ ಕ್ರೀಡಾಕೂಟಕ್ಕೆ ಶಿಕ್ಷಕ ನಾಗರಾಜ ಖಾರ್ವಿ ಆಯ್ಕೆ
ಕುಂದಾಪುರ (ಅ,23): ದಾವಣಗೆರೆಯ ಹರಿಹರದಲ್ಲಿ ನಡೆದ ರಾಜ್ಯಸರ್ಕಾರಿ ನೌಕರರ ರಾಜ್ಯಮಟ್ಟದ ಕ್ರೀಡಾಕೂಟದ ಈಜುಸ್ಪರ್ಧೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯನ್ನು ಪ್ರತಿನಿಧಿಸಿದ ಶಿಕ್ಷಕ ನಾಗರಾಜ ಖಾರ್ವಿ ಬ್ರೆಸ್ಟ್ ಸ್ಟ್ರೋಕ್ 50 ಮೀ ಚಿನ್ನಬ್ರೆಸ್ಟ್ ಸ್ಟ್ರೋಕ್ 100 ಮೀ ಚಿನ್ನಬ್ರೆಸ್ಟ್ ಸ್ಟ್ರೋಕ್ 200 ಮೀ ಬೆಳ್ಳಿ50×4 ಮೆಡ್ಲೆ ರಿಲೇ ಕಂಚು100X4 ಫ್ರೀ ಸ್ಟೈಲ್ ರಿಲೇ ಕಂಚು ಪಡೆದು ರಾಷ್ಟ್ರಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆಯಾಗಿದ್ದಾರೆ. ಇವರುಕುಂದಾಪುರ ತಾಲೂಕಿನ ಗುಜ್ಜಾಡಿ ಗ್ರಾಮದ ಕಂಚುಗೋಡಿನ ನಿವಾಸಿಯಾಗಿದ್ದು, ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ […]
ಜೈಕುಂದಾಪ್ರ ಸೇವಾ ಟ್ರಸ್ಟ್ (ರಿ) ಕುಂದಾಪುರ: ಅ,24 ರಂದು ಸಹಾಯ ಹಸ್ತ ಹಸ್ತಾಂತರ ಮತ್ತು ಅಭಿನಂದನಾ ಕಾರ್ಯಕ್ರಮ
ಕುಂದಾಪುರ (ಅ,23): “ಯುವ ಮನಸ್ಸುಗಳಿಗೆ ಸ್ಫೂರ್ತಿ, ನೊಂದವರಿಗೆ ನೆರವಿನ ದಾರಿದೀಪ” ಎನ್ನುವ ಧ್ಯೇಯದೊಂದಿಗೆ ಬಹು ಬಗೆಯಸೇವಾ ಕೈಂಕರ್ಯದಲ್ಲಿ ಸಕ್ರಿಯವಾಗಿ ಸೇವೆ ಸಲ್ಲಿಸುತ್ತಿರುವ ಸಮಾನ ಮನಸ್ಕ ಯುವಕರಿಂದ ರಚಿತವಾದ ಜೈ ಕುಂದಾಪ್ರ ಸೇವಾ ಟ್ರಸ್ಟ್ (ರಿ) ಇದೇ ಅಕ್ಟೋಬರ್,24 ರ ಭಾನುವಾರ ಸಮಯ ಮಧ್ಯಾಹ್ನ 3.30 ಕ್ಕೆ ಕೋಟ ಹಳೆಬಸ್ಟ್ಯಾಂಡ್ ಬಳಿ ಇರುವ ಶ್ರೀ ದೇವಿ ಕಾಂಪ್ಲೆಕ್ಸ್ ನಲ್ಲಿ ಸಹಾಯ ಹಸ್ತ ಹಸ್ತಾಂತರ ಮತ್ತು ಅಭಿನಂದನಾ ಕಾರ್ಯಕ್ರಮವನ್ನುನಲ್ಲಿ ಹಮ್ಮಿಕೊಳ್ಳಲಾಗಿದೆ. ಈ […]
ಕರಾವಳಿಯ ಹೆಮ್ಮೆ,ಅಕ್ಷರ ಸಂತ ಹರೇಕಳ ಹಾಜಬ್ಬರಿಗೆ ನ.8ರಂದು ಪದ್ಮಶ್ರೀ ಪ್ರಶಸ್ತಿ ಪುರಸ್ಕಾರ
ಮಂಗಳೂರು (ಅ,23): ಮಂಗಳೂರು ಬೀದಿಯಲ್ಲಿ ಬುಟ್ಟಿಯಲ್ಲಿ ಕಿತ್ತಾಳೆ ಹಣ್ಣು ಮಾರಾಟ ಮಾಡಿ ಬಂದ ಲಾಭದ ಹಣವನ್ನು ಗ್ರಾಮೀಣ ಪ್ರದೇಶವಾದ ಹರೇಕಳ ನ್ಯೂಪಡ್ಪುವಿನಲ್ಲಿ ಸರಕಾರಿ ಶಾಲೆ ಆರಂಭಿಸಲು ಶ್ರಮವಹಿಸಿದ ಹರೇಕಳ ಹಾಜಬ್ಬ ನವರ ಶೈಕ್ಷಣಿಕ ಕಾಳಜಿಯನ್ನು ಗುರುತಿಸಿ ಕೇಂದ್ರ ಸರಕಾರ 2020ರ ಸಾಲಿನಲ್ಲಿ ಪ್ರಕಟಿಸಿದ ಪ್ರತಿಷ್ಠಿತ ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಲು ನ.8ರಂದು ದೆಹಲಿಗೆ ಆಗಮಿಸುವಂತೆ ಕೇಂದ್ರ ಗೃಹಸಚಿವಾಲಯದಿಂದ ಅಧಿಕೃತ ಅಹ್ವಾನ ಬಂದಿದೆ. ರಾಜ್ಯ, ರಾಷ್ಟ್ರ ಮಟ್ಟದಲ್ಲಿ ಪ್ರಶಸ್ತಿಗಳನ್ನು ಪಡೆದಿರುವ ಸರಳ ಸಜ್ಜನಿಕೆಯ […]










