ಕುಂದಾಪುರ (ಸೆ,16): ರಾಷ್ಟ್ರೀಯ ಶಿಕ್ಷಣ ನೀತಿ 2021 – 22 ವಿದ್ಯಾರ್ಥಿ ಕೇಂದ್ರಿತ ನೀತಿಯಾಗಿದ್ದು, ಇದರಲ್ಲಿನ ಪ್ರತಿ ಅಂಶವನ್ನೂ ವಿದ್ಯಾರ್ಥಿಯ ಸರ್ವತೋಮುಖ ಬೆಳವಣಿಗೆಗೆ ಪೂರಕವಾಗಿ ರೂಪಿಸಲಾಗಿದೆ. ಹೊಸ ಶಿಕ್ಷಣ ನೀತಿಯ ಮೂಲಕ ಆಸಕ್ತಿ-ಕೌಶಲ್ಯ ಆಧಾರಿತ ಕಲಿಕೆ ಹಾಗೂ ದೇಶದ ಮಾನವ ಸಂಪನ್ಮೂಲದ ಸದ್ಬಳಕೆ ನಿಜಾರ್ಥದಲ್ಲಿ ಆಗಲಿದೆ ಎಂದು ಮಣಿಪಾಲ ಎಂಐಟಿಯ ಪ್ರಾಧ್ಯಾಪಕ ಹಾಗೂ ಮಂಗಳೂರು ವಿವಿ ಸಿಂಡಿಕೇಟ್ ಸದಸ್ಯ ಡಾ. ಕರುಣಾಕರ ಕೊಟೇಗಾರ್ ಹೇಳಿದರು. ಅವರು ಗುರುವಾರ ಕುಂದಾಪುರದ ಡಾ. […]
Author: KundaVahini Editor
ಕುಂದಾಪುರ: ಶಾಲಾ ಮಕ್ಕಳಿಗೆ ಅಪೌಷ್ಟಿಕತೆ ತಪಾಸಣೆ ಮತ್ತು ಚಿಕಿತ್ಸಾ ಶಿಬಿರ
ಕುಂದಾಪುರ(ಸೆ,15): ಇಲ್ಲಿನ ಕಲಾಮಂದಿರದಲ್ಲಿ ರೋಟರಿ ಕುಂದಾಪುರ, ತಾಲೂಕು ಆರೋಗ್ಯ ಇಲಾಖೆ ಇವರ ಜಂಟಿ ಆಶ್ರಯದಲ್ಲಿ ಕುಂದಾಪುರ ತಾಲೂಕಿನ ಶಾಲಾ ಮಕ್ಕಳಿಗೆ ಅಪೌಷ್ಟಿಕತೆ ತಪಾಸಣೆ ಮತ್ತು ಚಿಕಿತ್ಸಾ ಶಿಬಿರವನ್ನು ಏರ್ಪಡಿಸಲಾಯಿತು. ತಾಲೂಕಿನ ಬೇರೆ ಬೇರೆ ಗ್ರಾಮಗಳಿಂದ ಆಗಮಿಸಿದ ಸುಮಾರು 500 ಮಕ್ಕಳಿಗೆ ಚಿಕಿತ್ಸೆಯನ್ನು ನೀಡಲಾಯಿತು. ಸಮಾರಂಭವನ್ನು ಸಹಾಯಕ ಆಯುಕ್ತರಾದ ಶ್ರೀ ರಾಜು ರವರು ದೀಪ ಬೆಳಗಿಸಿ ಉದ್ಘಾಟಿಸಿದರು. ಸಮಾರಂಭದಲ್ಲಿ ತಾಲೂಕು ಆರೋಗ್ಯ ಅಧಿಕಾರಿಗಳಾದ ಡಾ. ರಾಜೇಶ್ವರಿ, ತಾಲೂಕು ಆಸ್ಪತ್ರೆ ಆಡಳಿತಾಧಿಕಾರಿ ಡಾ.ರಾಬರ್ಟ್, […]
ಅತೀ ಶೀಘ್ರದಲ್ಲಿ ನಿಮ್ಮ ಮುಂದೆ ಬರಲಿದ್ದಾನೆ “ಅರ್ಜುನ್ ಸನ್ಯಾಸಿ”
ಮುಂದಿನ ತಿಂಗಳು ತೆರೆ ಕಾಣಲಿರುವ ನಮ್ಮೂರ ಹುಡುಗ ಸಿ .ಸಿ. ರಾವ್ ನಾಯಕ ನಟನಾಗಿ ಅಭಿನಯಿಸಿರುವ “ಅರ್ಜುನ್ ಸನ್ಯಾಸಿ” ಚಿತ್ರದ ಪೋಸ್ಟರ್ ಇತ್ತೀಚಿಗೆ ಸೋಶಿಯಲ್ ಮೀಡಿಯಾ ಮತ್ತು ಸಿನಿಮಾರಂಗದಲ್ಲಿ ಹವಾ ಸ್ರಷ್ಟಿಸುತ್ತಿದೆ. ಉತ್ತಮ ಅಭಿನಯ ಹಾಗೂ ನಿರ್ದೇಶನದ ಬಗ್ಗೆ ಒಳ್ಳೆ ಮಾತುಗಳು ಪತ್ರಿಕಾ ವಲಯ ಮತ್ತು ಸೋಶಿಯಲ್ ಮೀಡಿಯಾದಲ್ಲಿ ಕೇಳಿ ಬರುತ್ತಿದೆ. ಈಶ್ವರ್ ಪೋಲಂಕಿ ಈ ಚಿತ್ರಕ್ಕೆ ಕಥೆ, ಚಿತ್ರಕಥೆ, ನಿರ್ದೇಶನ ಹಾಗೂ ನಿರ್ಮಾಣ ಮಾಡುತ್ತಿದ್ದು ಗುರುಮೂರ್ತಿ ಹೆಗಡೆ ,ಕಣ್ಣಿ ಪಾಲ್, […]
ಕುಂದಾಪುರ: ಅತ್ಯಾಚಾರ ಪ್ರಕರಣಗಳ ಆರೋಪಿಗಳಿಗೆ ಕಠಿಣ ಶಿಕ್ಷೆ ನೀಡುವ ಕಾನೂನು ಜಾರಿಗೊಳಿಸಲು ಎ ಬಿ ವಿ ಪಿ ಆಗ್ರಹ
ಕುಂದಾಪುರ(ಸೆ,15): “ಯತ್ರ ನಾರ್ಯಸ್ತು ಪೂಜ್ಯಂರಮಂತೇ ತತ್ರ ದೇವತಾಃ” ಎನ್ನುವ ನಮ್ಮ ದೇಶದಲ್ಲಿ ಎಳೆ ವಯಸ್ಸಿನ ಮಕ್ಕಳಿಂದ ಹಿಡಿದು ಇಳಿವಯಸ್ಸಿನವರ ಮೇಲೆ ಅತ್ಯಾಚಾರ, ಹಿಂಸೆ,ದೌರ್ಜನ್ಯ ಪ್ರಕರಣಗಳು ನಡೆಯುತ್ತಿರುವುದು ದುಃಖಕರ ಸಂಗತಿ. ದೇಶದಲ್ಲಿ ನಿರಂತರವಾಗಿ ನಡೆಯುತ್ತಲೇ ಇರುವ ಅತ್ಯಾಚಾರ ಪ್ರಕರಣದ ಅಪರಾಧಿಗಳಿಗೆ ಕಠಿಣ ಶಿಕ್ಷೆಯಾಗುವ ಕಾನೂನು ಜಾರಿಯಾಗಬೇಕೆಂದು ವಿದ್ಯಾರ್ಥಿನಿ ಪ್ರಮುಖ್ ನಿರಕ್ಷಿತಾ ಹೇಳಿದರು. ಅವರು ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ (ಎಬಿವಿಪಿ) ಕುಂದಾಪುರದ ವತಿಯಿಂದ ಕುಂದಾಪುರ ಮಿನಿವಿಧಾನಸೌಧದ ಎದುರು ಸೆಪ್ಟೆಂಬರ್,15 ರಂದು ದೇಶಾದ್ಯಂತ […]
ಭಾರತೀಯ ಸಿನಿಮಾ ರಂಗಕ್ಕೆ ನಾಯಕ ನಟನಾಗಿ ಪಾದಾರ್ಪಣೆಗೈಯಲ್ಲಿರುವ ಕುಂದಾಪುರದ ಯುವ ಪ್ರತಿಭೆ ಸಿ. ಸಿ. ರಾವ್
ಕುಂದಾಪುರ ತಾಲೂಕು ಸಿದ್ಧಾಪುರ ಎಂಬ ಗ್ರಾಮದ ಖಾಸಗಿ ಬಸ್ ಚಾಲಕರಾಗಿ ಕೆಲಸ ನಿರ್ವಹಿಸುತ್ತಿರುವ ಚಂದ್ರಶೇಖರ ಭಟ್ ಹಾಗೂ ಸತ್ಯವತಿ ದಂಪತಿಯ ಮಗನಾದ ಚೇತನ್ ಚಂದ್ರಶೇಖರ ರಾವ್ ಯಾನೆ ಸಿ.ಸಿ ರಾವ್ ರವರು ಬಾಲ್ಯದಲ್ಲಿ ತಂದೆ-ತಾಯಿಯ ಪ್ರೀತಿ ಮತ್ತು ಸ್ನೇಹದೊಂದಿಗೆ ಬೆಳೆದರು. ಕುಂದಾಪುರದ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಯಾದ ಡಾ.ಬಿ.ಬಿ.ಹೆಗ್ಡೆ ಕಾಲೇಜಿನಲ್ಲಿ ಪದವಿ ವಿದ್ಯಾಭ್ಯಾಸ ಮುಗಿಯುತ್ತಿದ್ದಂತೆ ತಾನು ಬದುಕಿನಲ್ಲಿ ಏನಾದರು ಸಾಧಿಸಬೇಕು ಎನ್ನುವ ಛಲದೊಂದಿಗೆ ಕನ್ನಡ ಚಿತ್ರರಂಗದಲ್ಲಿ ತನ್ನದೇ ಛಾಪನ್ನು ಮೂಡಿಸಬೇಕೆಂದು ಹುಟ್ಟೂರ […]
ಹಿಂದಿ ಭಾಷೆಯ ಮೇಲೆ ಯಾಕಿಷ್ಟು ದ್ವೇಷ ?ಒಂದು ವಿಮರ್ಶೆ
ವಂದೇ ಮಾತರಂ,ಜನಗನಮನ,ಮಾ ತುಜೆ ಸಲಾಮ್ ,ಯೇ ಮೆರೆ ವತನ್ ಕೆ ಲೋಗೊ,ಸಂದೇಸೆ ಆತೆ ಹೆ ಹಮೆ ತಡಪಾತೆ ಹೆ….ಈ ಹಾಡುಗಳನ್ನು ನಾವೆಲ್ಲರೂ ಒಮ್ಮೆಯಾದರೂ ಹಾಡಿದ್ದೆವೆ.ಜೊತೆಗೆ ಸಂದರ್ಭಕ್ಕೆ ಅನುಗುಣವಾಗಿ ಒಂದೆರಡು ಕಂಬನಿ ಕಣ್ಣಂಚಲಿ ಸುರಿಸಿದ್ದೆವೆ. ಈ ಹಾಡುಗಳನ್ನು ಕೇಳುವಾಗ ಅಥವಾ ಹಾಡುವಾಗ ಮೈ ಮನಗಳಲ್ಲಿ ರೋಮಾಂಚನ ಹಾಗೂ ರಾಷ್ಟ್ರಭಕ್ತಿ ಉದ್ದೀಪನಗೊಂಡ ಅನುಭವ ಪ್ರತಿಯೊಬ್ಬ ಭಾರತೀಯನಿಗೂ ಆಗಿರುತ್ತದೆ ಎನ್ನುವುದು ನನ್ನ ಅನಿಸಿಕೆ .ಯಾಕೆಂದರೆ ಈ ಹಾಡುಗಳಲ್ಲಿ ಸ್ವಾತಂತ್ರ್ಯ ಹೋರಾಟದ ಅದೆಷ್ಟೋ ಸಂಗತಿಗಳು ಅಡಗಿದೆ. […]
ಶಿಕ್ಷಪ್ರಭಾ ಆಕಾಡೆಮಿ ಕುಂದಾಪುರ : ಸಿ. ಎ. ಪರೀಕ್ಷೆಯಲ್ಲಿ ಶ್ರೇಷ್ಠ ಸಾಧನೆ
ಕುಂದಾಪುರ (ಸೆ, 13) : ಕುಂದೇಶ್ವರ ದೇವಸ್ಥಾನ ಮಾರ್ಗದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಶಿಕ್ಷ ಪ್ರಭಾ ಅಕಾಡಮಿ ಆಫ್ ಕಾಮರ್ಸ್ ಏಜುಕೇಶನ್ (ಸ್ಪೇಸ್) ಸಿಎ/ಸಿಎಸ್/ಸಿಎಂಎ ಮತ್ತು ಬ್ಯಾಂಕಿಂಗ್ ತರಬೇತಿ ಸಂಸ್ಥೆಯು ವಿದ್ಯಾರ್ಥಿಗಳು ಇನ್ಟಿಟ್ಯೂಟ್ ಆಫ್ ಚಾರ್ಟರ್ ಅಕೌಂಟೆಂಟ್ ಆಫ್ ಇಂಡಿಯಾ ನಡೆಸಿದ ಸಿಎ ಅಂತಿಮ ಮತ್ತು ಸಿಎ ಪೌಂಡೇಶನ್ ಪರೀಕ್ಷೆಯಲ್ಲಿ ಶ್ರೇಷ್ಠ ಸಾಧನೆ ತೋರಿದ್ದಾರೆ. ಸಂಸ್ಥೆಯ ವಿದ್ಯಾರ್ಥಿಗಳಾದ ವಿಲಾಸ್ ಶೆಟ್ಟಿ, ಸಿಎ ಅಂತಿಮ ಪರೀಕ್ಷೆಯಲ್ಲಿ 528 ಅಂಕ ಗಳಿಸುವುದರೊಂದಿಗೆ ಉತ್ತಮ ಅಂಕಗಳೊಂದಿಗೆ ಸಿ.ಎ. […]
ಮಲ್ಪೆ: ಮೀನುಗಾರರ ತುರ್ತು ಆರೋಗ್ಯ ಸೇವೆಗೆ ಕೆಪಿಸಿಸಿ ವತಿಯಿಂದ ಆಂಬುಲೆನ್ಸ್ ಸೇವೆ -ಹಸ್ತಾಂತರ ಕಾರ್ಯಕ್ರಮ
ಮಲ್ಪೆ (ಸೆ,11): ಕೆಪಿಸಿಸಿ ವತಿಯಿಂದ ರಾಜ್ಯದ ಪ್ರಮುಖ ಮೀನುಗಾರಿಕಾ ಬಂದರಾದ ಮಲ್ಪೆಯ ಮೀನುಗಾರರ ತುರ್ತು ಆರೋಗ್ಯ ಸೇವೆಗೆ ಆಂಬುಲೆನ್ಸ್ ಹಸ್ತಾಂತರ ಕಾರ್ಯಕ್ರಮ ಇತ್ತೀಚೆಗೆ ನಡೆಯಿತು .ಕೆಪಿಸಿಸಿ ರಾಜ್ಯಾಧ್ಯಕ್ಷ ಡಿ.ಕೆ ಶಿವಕುಮಾರ್ ಮಲ್ಪೆಗೆ ಹಿಂದೊಮ್ಮೆ ಆಗಮಿಸಿದಾಗ ಮೀನುಗಾರ ಸಮುದಾಯದವರು ಆಂಬ್ಯುಲೆನ್ಸ್ನ ಬೇಡಿಕೆ ಇಟ್ಟಿದ್ದರು. ಅದರಂತೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ಆಂಬುಲೆನ್ಸ್ ವ್ಯವಸ್ಥೆ ಮಾಡಿದ್ದು, ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಕಾಂಗ್ರೆಸ್ ಭವನದ ಮುಂಭಾಗ ಆಂಬುಲೆನ್ಸ್ ನ ಕೀಯನ್ನು ಮಲ್ಪೆಯ ಸಮಾಜ ಸೇವಕ […]
ಆಪತ್ಭಾಂಧವ ಈಶ್ವರ್ ಮಲ್ಪೆ ಕುಟುಂಬಕ್ಕೆ ಸಹ್ರದಯಿ ಯುವಕರಿಂದ ಸಹಾಯ ಧನ ಹಸ್ತಾಂತರ
ಮಲ್ಪೆ (ಸೆ,12): ತನ್ನ ಕೌಟುಂಬಿಕ ಸವಾಲುಗಳ ನಡುವೆಯೂ ಇನ್ನೊಬ್ಬರ ಸಹಾಯಕ್ಕೆ ಸದಾ ಸಿದ್ದರಾಗುವ, ಜೊತೆಗೆ ಅದೆಷ್ಟೋ ಜನರಿಗೆ ಆಪತ್ ಕಾಲದಲ್ಲಿ ಸಹಾಯಹಸ್ತ ಚಾಚಿರುವ ಈಶ್ವರ ಮಲ್ಪೆಯವರ ಕೌಟುಂಬಿಕ ಸಂಕಷ್ಟಕ್ಕೆ ಸ್ಪಂದಿಸುವ ಸಲುವಾಗಿ ಉಡುಪಿಯ ಸಹೃದಯಿ ಯುವಕರಾದ ಸ್ಯಾನ್ಫೋರ್ಡ್ ಡಿ’ಸೋಜಾ,ಸತ್ಯ ಆಚಾರ್ಯ,ನವೀನ್ ಸಾಲಿಯಾನ್,ಮಿಥುನ್ ಪೂಜಾರಿಯವರ ತಂಡ ಈಶ್ವರ್ ಮಲ್ಪೆ ಯವರ ಮನೆಗೆ ಭೇಟಿ ನೀಡಿ ಇವರ 2 ವಿಕಲ ಚೇತನ ಮಕ್ಕಳ ಚಿಕಿತ್ಸೆಗಾಗಿ 25000 ರೂ, ಗಳನ್ನು ದೇಣಿಗೆಯಾಗಿ ನೀಡಿದ್ದಾರೆ. ಈ ಯುವಕರ ತಂಡದ ಸಹಾಯಕ್ಕೆ […]
ಮಾರಣಕಟ್ಟೆ: ಶ್ರೀ ಬ್ರಹ್ಮಲಿಂಗೇಶ್ವರ ಯಕ್ಷಗಾನ ಕಲಾವಿದರ ಕಾರ್ಮಿಕರ ಹಿತರಕ್ಷಣಾ ಯಕ್ಷಕಲಾ ಟ್ರಸ್ಟ್ ಉದ್ಘಾಟನೆ
ವಂಡ್ಸೆ(ಸೆ,11): ಕರಾವಳಿಯ ಸಾಂಸ್ಕೃತಿಕ ವೈಭವ ಸಾರುವ ಯಕ್ಷಗಾನ ಇಂದು ಜಗತ್ ಪ್ರಸಿದ್ದ ವಾಗಿದ್ದು , ಯಕ್ಷಗಾನ ಕಲಾವಿದರು ಸಂಘಟಿತರಾಗಿ ಹೊಸ ಟ್ರಸ್ಟ್ ಹುಟ್ಟುಹಾಕಿದ್ದು, ಕಲಾವಿದರು ಜೊತೆಗೆ ಕಾರ್ಮಿಕರನ್ನೂ ಸೇರಿಸಿಕೊಂಡಿರುವುದು ಧನಾತ್ಮಕ ಬೆಳವಣಿಗೆ. ಈ ಟ್ರಸ್ಟ್ ಸಮಾಜದೊಂದಿಗೆ ಸೇರಿ ಸೌಹಾರ್ದತೆಗೆ ದಾರಿಯಾಗಬೇಕು ಹಾಗೂ ಕಲಾವಿದರಿಗೆ, ಕಾರ್ಮಿಕರಿಗೆ ನ್ಯಾಯ ಒದಗಿಸಿಕೊಡುವ ಜೊತೆಗೆ ಅವರ ಕಷ್ಟಸುಖಗಳಲ್ಲಿ ಭಾಗಿಯಾಗಬೇಕು ಎಂದು ಹೋಟೆಲ್ ಉದ್ಯಮಿ, ಸಹ್ರದಯಿ ಕೃಷ್ಣಮೂರ್ತಿ ಮಂಜ ಹೇಳಿದರು. ಅವರು ಮಾರಣಕಟ್ಟೆ ಶ್ರೀ ಬ್ರಹ್ಮಲಿಂಗೇಶ್ವರ ಕಲ್ಯಾಣ […]










