ಕಲ್ಯಾಣಪುರ(ಸೆ,07): ಗುರು ಮಾಡಿದ ಪಾಠವು ವರವಾಗಿ ನನ್ನ ಸಾಧನೆಗೆ ಮೆಟ್ಟಿಲಾಗಿ ನಿಂತ ಕ್ಷಣವನ್ನು ನೆನಪಿಸಿ ಶಿಕ್ಷಕರ ದಿನಾಚರಣೆಯೆಂದು ತವರು ಮನೆ ಟ್ರಸ್ಟ್ ನ ಸಂಸ್ಥಾಪಕಿ ಶೈನಾ ಕಲ್ಯಾಣಪುರ ತನ್ನ ಶಿಕ್ಷಕ ಶೇಖರ್ ಶೆಟ್ಟಿ ಮಟಪಾಡಿಯವರನ್ನು ಗೌರವಪೂರ್ವಕವಾಗಿ ಸನ್ಮಾನಿಸಿದರು. 6 ನೇ ತರಗತಿಯಲ್ಲಿ ತಾನು ಕಲಿತ ಪಾಠದ ವಿಷಯಗಳಾದ ಸತಿ ಪದ್ಧತಿ, ಹೆಣ್ಣು ಮಕ್ಕಳ ಶೋಷಣೆ, ಭ್ರೂಣ ಹತ್ಯೆ, ಲೈಂಗಿಕ ಶೋಷಣೆ ಇದರ ಬಗ್ಗೆ ಸಮಾಜ ವಿಜ್ಞಾನದ ಶಿಕ್ಷಕರಾದ ಶೇಖರ್ ಶೆಟ್ಟಿ […]
Author: KundaVahini Editor
ಡಾ.ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ಶಿಕ್ಷಕರ ದಿನಾಚರಣೆ – ಸನ್ಮಾನ ಕಾರ್ಯಕ್ರಮ
ಕುಂದಾಪುರ ( ಸೆ.7): ಎಲ್ಲಾ ವೃತ್ತಿಗಳಿಗಿಂತ ಶ್ರೇಷ್ಠವಾದ ವೃತ್ತಿ ಶಿಕ್ಷಕ ವೃತ್ತಿ. ಅದೆಷ್ಟೆ ಜನರಿದ್ದರೂ ಕೂಡ ನನಗೆ ಕಲಿಸಿದ ಶಿಕ್ಷಕರು ಎದುರಿಗೆ ಬಂದರೆ ಅವರ ಕಾಲಿಗೆರಗುತ್ತೇನೆ. ಶಿಕ್ಷಕರೆಂದರೆ ನನಗೆ ಅಪಾರ ಗೌರವ. ತಂದೆ ತಾಯಿಗೆ ಮೂರು ಮಕ್ಕಳಿದ್ದರೆ ಯಾವ ಮಗು ಬುದ್ಧಿವಂತ ಎಂದು ಗುರುತಿಸುವುದು ಕಷ್ಟ ಆಗಬಹುದು. ಆದರೆ ತರಗತಿಯಲ್ಲಿ ಸಾವಿರ ವಿದ್ಯಾರ್ಥಿಗಳಿದ್ದರೂ ಕೂಡ ಪ್ರತಿ ಮಗುವಿನ ಸಾಮರ್ಥ್ಯವನ್ನು ಅಧ್ಯಾಪಕರು ಗುರುತಿಸುವಲ್ಲಿ ಸಫಲರಾಗುತ್ತಾರೆ. ಕರೋನಾ ಕಾರಣದಿಂದಾಗಿ ಹದಗೆಟ್ಟ ವಿದ್ಯಾರ್ಥಿಗಳ ಶೈಕ್ಷಣಿಕ […]
ಲಯನ್ಸ್ ಕ್ಲಬ್ ಕುಂದಾಪುರ ಕೋಸ್ಟಲ್ ವತಿಯಿಂದ ಶಿಕ್ಷಕರ ದಿನಾಚರಣೆ
ಕುಂದಾಪುರ(ಸೆ,5): ಲಯನ್ಸ್ ಕ್ಲಬ್ ಕುಂದಾಪುರ ಕೋಸ್ಟಲ್ ವತಿಯಿಂದ ಶಿಕ್ಷಕರ ದಿನಾಚರಣೆಯನ್ನು ಕುಂದಾಪುರ ತಾಲೂಕಿನ ಹೊಂಬಾಡಿಯ ನಿವೃತ್ತ ಶಿಕ್ಷಕರಾದ ಶ್ರೀ ಸಚ್ಚಿದಾನಂದ ಹೆಗ್ಡೆ ದಂಪತಿಯವರನ್ನು ಕ್ಲಬ್ ನ ಅಧ್ಯಕ್ಷರಾದ ಲ. ಜಯಶೀಲ ಶೆಟ್ಟಿ ಕಂದಾವರ ಇವರಿಗೆ ಸನ್ಮಾನಿಸುವ ಮೂಲಕ ಆಚರಿಸಲಾಯಿತು. ಸನ್ಮಾನ ಸ್ವೀಕರಿಸಿ ಮಾತನಾಡಿದ ಅವರು ವಿದ್ಯಾರ್ಥಿಗಳ ಭವಿಷ್ಯ ರೂಪಿಸುವ ಶಿಕ್ಷಕ ವೃತ್ತಿ ಅತ್ಯಂತ ಶ್ರೇಷ್ಠವಾದದ್ದು. ಪ್ರತಿಯೊಬ್ಬ ಶಿಕ್ಷಕರು ತಮ್ಮ ವೃತ್ತಿಯ ಬಗ್ಗೆ ಅಪಾರ ಗೌರವ ಹಾಗೂ ಅಭಿಮಾನ ಹೊಂದಿರುತ್ತಾರೆ. ಅಲ್ಲದೆ ಸಂಘ […]
ಜೈ ಕುಂದಾಪ್ರ ಸೇವಾ ಟ್ರಸ್ಟ್(ರಿ.) ಕುಂದಾಪುರ: 41ನೇ ತುರ್ತು ಚಿಕಿತ್ಸಾ ನೆರವು ಯೋಜನೆ-ಸಹಾಯಧನ ಹಸ್ತಾಂತರ
ಕೋಟ( ಸೆ.06) : ನೊಂದವರಿಗೆ ನೆರವಿನ ದಾರಿ ದೀಪ ವಾಗಿರುವ ಕುಂದಾಪುರದ ಜೈ ಕುಂದಾಪ್ರ ಸೇವಾ ಟ್ರಸ್ಟ್ ಬಹುಬಗೆಯ ಸಮಾಜ ಸೇವೆಯಲ್ಲಿ ತೊಡಗಿಸಿಕೊಂಡಿವುದರ ಜೊತೆಗೆ ನೊಂದವರಿಗೆ ಸಹಾಯ ಹಸ್ತ ಚಾಚಲು ಅರ್ಥಪೂರ್ಣ ಯೋಜನೆಗಳನ್ನು ಹಾಕಿಕೊಂಡಿದೆ. ಆ ನಿಟ್ಟಿನಲ್ಲಿ ಟ್ರಸ್ಟ್ ನ 41ನೇ ತುರ್ತು ಚಿಕಿತ್ಸಾ ನೆರವು ಯೋಜನೆ-ಸಹಾಯ ಧನ ಹಸ್ತಾಂತರ ಕಾರ್ಯಕ್ರಮ ಸಪ್ಟೆಂಬರ್, 5 ರಂದು ನೆರವೇರಿತು. ಗುರುಪ್ರಸಾದ್ ಎನ್ನುವ ವ್ಯಕ್ತಿ ಟಿಪ್ಪರ್ ಲಿಫ್ಟ್ ಮಾಡುವ ಸಂದರ್ಭದಲ್ಲಿ ವಿದ್ಯುತ್ ತಂತಿಗೆ ಟಿಪ್ಪರ್ […]
ಮೊಗವೀರ ಯುವ ಸಂಘಟನೆ ಕೋಟೇಶ್ವರ ಘಟಕ : ಕೊರೋನ ಲಸಿಕಾ ಅಭಿಯಾನ
ಕೋಟೇಶ್ವರ(ಸೆ.6): ಮೊಗವೀರ ಯುವ ಸಂಘಟನೆ(ರಿ) ಉಡುಪಿ ಇದರ ಕೋಟೇಶ್ವರ ಘಟಕ ಹಾಗೂ ಪ್ರಾಥಮಿಕ ಆರೋಗ್ಯ ಕೇಂದ್ರ ಕೋಟೇಶ್ವರದ ಸಹಭಾಗಿತ್ವದಲ್ಲಿ ಸೆಪ್ಟೆಂಬರ್,4 ರಂದು ಕೋಟೇಶ್ವರದ ವಿಶ್ವ ಕರ್ಮ ಕಲ್ಯಾಣ ಮಂಟಪದಲ್ಲಿ ಉಚಿತ ಕೊರೋನ ಲಸಿಕಾ ಅಭಿಯಾನ ಹಮ್ಮಿಕೊಳ್ಳಲಾಯಿತು.217 ಡೋಸ್ ಲಸಿಕೆ ಹಾಕುವ ಮೂಲಕ ಅಭಿಯಾನ ಯಶಸ್ವಿಯಾಯಿತು. ಮೊಗವೀರ ಯುವ ಸಂಘಟನೆಯ ಮಾರ್ಗದರ್ಶಕರಾದ ಡಾ. ಜಿ. ಶಂಕರ್ ರವರು ಕರೋನ ಸಮಯದಲ್ಲಿ ಆಮ್ಲಜನಕದ ಕೊರತೆ ನೀಗಿಸಲು ಸ್ಪಂದಿಸಿದ ರೀತಿ ಮತ್ತು ಕೋಟೇಶ್ವರ ಸಂಘಟನೆಯ […]
ಕುಂದಾಪುರ ಏನಿದರ ಇತಿಹಾಸ?
ಪರಶುರಾಮ ಸೃಷ್ಟಿಯ ತುಳುನಾಡಿನಲ್ಲಿ ಬಹಳ ಇತಿಹಾಸವಿದೆ. ಆ ಎಲ್ಲಾ ಇತಿಹಾಸಕ್ಕೆ ಮುಕುಟಪ್ರಯವಾಗಿರುವ ಸ್ಥಳವೇ ಕುಂದಾಪುರ.ಭಾರತಕ್ಕೆ ಹೇಗೆ ಹಿಮಾಲಯವೋ ಅದೇ ರೀತಿಯಲ್ಲಿ ಕುಂದಾಪುರಕ್ಕೆ ನದಿಗಳು. ಮೂಡಣದಲ್ಲಿ ಉಗಮವಾಗುವ ಚಕ್ರ, ಸೌಪರ್ಣಿಕ, ವಾರಾಹಿ, ಕೇದಕ ಹಾಗೂ ಕುಬ್ಜ ಎಂಬ ಈ ಐದು ನದಿಗಳು ಗಂಗೊಳ್ಳಿಯಲ್ಲಿ ಒಂದಾಗಿ ಅರಬ್ಬಿ ಸಮುದ್ರವನ್ನು ಸೇರುತ್ತದೆ. ಆ ಸ್ಥಳವೇ ಪಂಚಗಂಗಾವಳಿ. ನದಿಗಳು ಒಂದೆಡೆಯಾದರೆ ದೇವಸ್ಥಾನಗಳು ಇನ್ನೊಂದೆಡೆ. ನೂರಾರು ದೇವಾಲಯಗಳ ಹೊಂದಿರುವ ಕುಂದಾಪುರ ಕೊಲ್ಲೂರು ಮೂಕಾಂಬಿಕೆ, ಆನೆಗುಡ್ಡೆಯ ವಿನಾಯಕ,ಮಾರಣಕಟ್ಟೆಯ ಬ್ರಹ್ಮಲಿಂಗೇಶ್ವರ, […]
ನಾ ಕಂಡಂತೆ ಚಿಂತಕ, ಮಾರ್ಗದರ್ಶಕ ಮತ್ತು ಸಲಹೆಗಾರ ಈಶ್ವರ್ ಸಿ ನಾವುಂದ
ನಿಜ. ಆ ಚಿಂತನೆಗಳು ಬಹಳ ಸೂಕ್ಷ್ಮ ಮತ್ತು ಆಳವಾಗಿದ್ದವು. ಆ ಚಿಂತನೆಗಳ ಒಂದೊಂದು ಪದಗಳನ್ನು ಮಣಿಗಳಂತೆ ಪೋಣಿಸುತ್ತಾ ಹೋದಾಗ ಅದ್ಬುತ ಬರವಣಿಗೆಯಾಗಿ ಹೊರಹೊಮ್ಮತ್ತಿತ್ತು. ಸಾಧನೆ ಮಾಡ ಹೊರಟವರಿಗೆ ಶಕ್ತಿಯಾಗಿ ನಿಲ್ಲುತ್ತಿತ್ತು. ಈ ಬರವಣಿಗೆಯ ಹಿಂದಿರುವ ಕೈ ಬೇರೆ ಯಾರದ್ದು ಅಲ್ಲ. ಇದು ನಮ್ಮ ನಿಮ್ಮೆಲ್ಲರ ನೆಚ್ಚಿನ ಚಿಂತಕ,ಬರಹಗಾರ ಈಶ್ವರ್ ಸಿ ನಾವುಂದರವರದ್ದು. ಯೋಚನೆಗಳು ನನ್ನ ಸಾಧನೆಗಳಾಗಿದ್ದವು ಹಾಗೂ ಶಕ್ತಿಶಾಲಿ ಸಾಧನೆಗಳು ಹೌದು.ಕೆಲವೊಂದು ಸೃಜನಶೀಲ ಕೆಲಸಗಳಿಗೆ ನನ್ನ ಈ ಯೋಚನೆಗಳೇ ಸಾಧನವಾಗಿದ್ದವು. […]
ಗುರು ಮಾತೆ – ಅಕ್ಷರ ಕಲಿಸಿದ ವಿದ್ಯಾ ಸರಸ್ವತಿ : ಸಿಂಗಾರಿ ಅಮ್ಮ ಟೀಚರ್ ನಾವುಂದ
ಗುರು ಎನ್ನುವ ಪರಿಕಲ್ಪನೆಗೆ ಭಾರತೀಯ ಸಂಸ್ಕೃತಿಯಲ್ಲಿ ವಿಶೇಷವಾದ ಸ್ಥಾನವನ್ನು ಕಲ್ಪಿಸಲಾಗಿದೆ. ಏಕೆಂದರೆ ಒರ್ವ ಗುರು ತಂದೆ-ತಾಯಿಯ ಎರಡು ಪಾತ್ರವನ್ನು ಏಕಕಾಲದಲ್ಲಿ ನಿರ್ವಹಿಸಬಲ್ಲವನಾಗಿದ್ದು, ವಿದ್ಯಾರ್ಥಿಗಳನ್ನು ತನ್ನ ಮಕ್ಕಳಂತೆ ಭಾವಿಸುವ ,ಪ್ರೀತಿಸುವ ಹಾಗೂ ತನ್ನ ವಿದ್ಯಾರ್ಥಿಗಳ ಬದುಕನ್ನು ರೂಪಿಸುವ ಮತ್ತು ದೇಶಕ್ಕೆ ಉತ್ತಮ ಪ್ರಜೆಯನ್ನಾಗಿ ರೂಪಿಸುವಲ್ಲಿ ಗುರುವಿನ ಪಾತ್ರ ಮಹತ್ವ ದಾಗಿದೆ. ನಮ್ಮಲ್ಲಿರುವ ಅಜ್ಞಾನವನ್ನು ಹೊರಹಾಕಲು ಶಿಕ್ಷಕರು ಮಾರ್ಗದರ್ಶಕರಾಗುತ್ತಾರೆ. ಗುರು ಎಂಬ ಶಬ್ದದ ಅರ್ಥವು ಅಜ್ಞಾನವನ್ನು ಓಡಿಸುವುದೇ ಆಗಿದೆ. ಪ್ರತಿಯೊಬ್ಬರ ಜೀವನದ ಏಳು- ಬೀಳುಗಳಿಗೆ […]
ಓ ಗುಣವಂತನೆ
ಓ ಗುಣವಂತನೆನೀ ಗುಣಗಳ ಖಜಾನೆನೀ ಗುಣಕಾರಿ, ನೀನೇ ಗುಣಾಧಿಕಾರಿನೀ ಸುಗುಣಾಚಾರಿ, ನೀನೇ ಗುಣಗಳ ರೂವಾರಿನೀ ಗುಣವರ್ಧಕ, ನೀನೇ ಗುಣಾತ್ಮಕನೀ ಗುಣವಿಶೇಷ, ನೀನೇ ಗುಣವಾಚಕಗುರಿ ತೋರಿಸುವ ಗುರುವೇನಾ ಹೇಗೇ ಮಾಡಲಿ ನಿನ್ನ ಗುಣಗಾನಓ ಗುಣಮಟ್ಟದ ಉತ್ತುಂಗವೆನಿನಗೆ ಕೋಟಿ ಕೋಟಿ ನಮನ. ಡಾ. ಉಮ್ಮೆ ಸಲ್ಮಾ ಎಂ., ಸಹಾಯಕ ಪ್ರಾಧ್ಯಾಪಕರುಕ್ರೈಸ್ಟ್ ವಿಶ್ವವಿದ್ಯಾಲಯಬೆಂಗಳೂರು ೫೬೦೦೨೯
ಲಯನ್ಸ್ ಕ್ಲಬ್ ಕುಂದಾಪುರ ಕೋಸ್ಟಲ್ :ವನಮಹೋತ್ಸವ ಆಚರಣೆ
ಕುಂದಾಪುರ( ಸೆ.03): ಲಯನ್ಸ್ ಕ್ಲಬ್ ಕುಂದಾಪುರ ಕೋಸ್ಟಲ್ ವತಿಯಿಂದ ವನಮಹೋತ್ಸವ ಕಾರ್ಯಕ್ರಮವನ್ನು ಸೆಪ್ಟೆಂಬರ್ 03 ರಂದು ಕುಂದಾಪುರ ತಾಲೂಕಿನ ಜಪ್ತಿ ಗ್ರಾಮದಲ್ಲಿ ಆಚರಿಸಲಾಯಿತು. ಕ್ಲಬ್ ನ ಅಧ್ಯಕ್ಷರಾದ ಲ. ಜಯಶೀಲ ಶೆಟ್ಟಿ ಕಂದಾವರ ಗಿಡ ನೆಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ವಲಯಾಧ್ಯಕ್ಷರಾದ ಲ. ಅಶೋಕ್ ಶೆಟ್ಟಿ ಸಂಸಾಡಿ , ನಿಕಟ ಪೂರ್ವ ಅಧ್ಯಕ್ಷರಾದ ಲ.ರತ್ನಾಕರ ಶೆಟ್ಟಿ ಕಂದಾವರ, ಪ್ರಧಾನ ಕಾರ್ಯದರ್ಶಿ ಲ. ಗಿರೀಶ್ ಮೇಸ್ತ, ನಿರ್ದೇಶಕರಾದ ಲ. ಅಂಪಾರು ನಿತ್ಯಾನಂದ ಶೆಟ್ಟಿ, […]










