ಗಂಗೊಳ್ಳಿ: (ಜು,24): ಇಲ್ಲಿನ ಸರಸ್ವತಿ ವಿದ್ಯಾಲಯ ಪದವಿಪೂರ್ವ ಕಾಲೇಜು ಈ ಬಾರಿಯ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಶೇ.100 ಫಲಿತಾಂಶ ದಾಖಲಿಸಿದೆ. ಪರೀಕ್ಷೆಗೆ ಹಾಜರಾದ 182 ವಿದ್ಯಾರ್ಥಿಗಳಲ್ಲಿ 31 ವಿದ್ಯಾರ್ಥಿಗಳು ಉನ್ನತ ಶ್ರೇಣಿಯಲ್ಲಿ, 106 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ ಮತ್ತು 45 ವಿದ್ಯಾರ್ಥಿಗಳು ದ್ವಿತೀಯ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ವಿಜ್ಞಾನ ವಿಭಾಗದಲ್ಲಿ ಪ್ರಸನ್ನಾ ಪೈ 600ಕ್ಕೆ 600 ಅಂಕಗಳನ್ನು ಪಡೆದು ಕಾಲೇಜಿಗೆ ಪ್ರಥಮ ಸ್ಥಾನವನ್ನು ಪಡೆದಿದ್ದಾರೆ. ವಿಜ್ಞಾನ ವಿಭಾಗದಲ್ಲಿ ರಿಫ್ಜಾ (597) ಮತ್ತು […]
Author: KundaVahini Editor
ವಿಶ್ವ ಕುಂದಾಪ್ರ ಕನ್ನಡ ದಿನಾಚರಣೆಯ ಪ್ರಯುಕ್ತ ಪದವಿ ಮತ್ತು ಪದವಿ ಪೂರ್ವ ವಿದ್ಯಾರ್ಥಿಗಳಿಗೆ ಕುಂದಾಪ್ರ ಕನ್ನಡದಲ್ಲಿ ಭಾಷಣ ಸ್ಪರ್ಧೆ
ಕುಂದಾಪುರ (ಜು, 22) : ಕುಂದಾಪುರದ ಪ್ರತಿಷ್ಠಿತ ಶಿಕ್ಷಣ ಸಂಸ್ಥೆ ಡಾ। ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜು ಇದರ ಕನ್ನಡ ವಿಭಾಗ ಹಾಗೂ ಕುಂದವಾಹಿನಿ ಅಂತರ್ಜಾಲ ಸುದ್ದಿತಾಣದ ಜಂಟಿ ಆಯೋಜನೆಯಲ್ಲಿ ‘ವಿಶ್ವ ಕುಂದಾಪ್ರ ಕನ್ನಡ ದಿನಾಚರಣೆಯ ಪ್ರಯುಕ್ತ ಪದವಿ ಮತ್ತು ಪದವಿ ಪೂರ್ವ ವಿದ್ಯಾರ್ಥಿಗಳಿಗೆ ‘ಕುಂದಾಪ್ರ ಕನ್ನಡದಲ್ಲಿ “ಕುಂದಗನ್ನಡ ಭಾಷಿ ಮತ್ತು ಬದ್ಕ್” ಎನ್ನುವ ವಿಷಯದ ಕುರಿತು ಭಾಷಣ ಸ್ಪರ್ಧೆಯನ್ನು ಆಯೋಜಿಸಲಾಗಿದೆ. ಸ್ಪರ್ಧೆಯಲ್ಲಿ ಭಾಗವಹಿಸುವ ವಿದ್ಯಾರ್ಥಿಗಳು ಮೂರು […]
ಕೃಷಿ ಚಟುವಟಿಕೆಗಳಲ್ಲಿ ನಾವು ಸ್ವಾವಲಂಬಿಯಾಗಬೇಕು – ಶ್ರೀ ಮುರಳಿ ಕಡೆಕಾರು
ಕಲ್ಯಾಣಪುರ(ಜು,22): ಮಿಲಾಗ್ರಿಸ್ ಕಾಲೇಜಿನ ಎನ್.ಎಸ್.ಎಸ್. ಘಟಕದ ವತಿಯಿಂದ ದಿನಾಂಕ ಜುಲೈ 22 ರ ಗುರುವಾರದಂದು ವಿದ್ಯಾರ್ಥಿಗಳಿಗೆ ಕೃಷಿಯ ಬಗ್ಗೆ ಅರಿವು ಮೂಡಿಸುವ ಸದುದ್ದೇಶದಿಂದ ಸಂತೆಕಟ್ಟೆ ಪರಿಸರದ ನಯಂಪಳ್ಳಿ ಮತ್ತು ಕೊಡಂಕೂರು ಪರಿಸರದ ಗದ್ದೆಯಲ್ಲಿ ನಾಟಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ಕೇದಾರೋತ್ಥಾನ ಟ್ರಸ್ಟ್ (ರಿ) ಉಡುಪಿ ಇದರ ಸಹಯೋಗದಲ್ಲಿ ಆಯೋಜಿಸಿದ ಈ ಕಾರ್ಯಕ್ರಮದಲ್ಲಿ ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರು ಹಾಗೂ ಕೇದಾರೋತ್ಥಾನ ಟ್ರಸ್ಟ್ (ರಿ) ಉಡುಪಿ ಇದರ ಕೋಶಾಧಿಕಾರಿಗಳಾದ ಶ್ರೀ ರಾಘವೇಂದ್ರ ಕಿಣಿ […]
ಸರಕಾರಿ ಪದವಿಪೂರ್ವ ಕಾಲೇಜು,ನಾವುಂದ : ಚವೀಶ್ ಜೈನ್ ಕಾಲೇಜಿಗೆ ಪ್ರಥಮ ಸ್ಥಾನ
ನಾವುಂದ (ಜು,22): ಕರ್ನಾಟಕ ಪದವಿ ಪೂರ್ವ ಶಿಕ್ಷಣ ಇಲಾಖೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಿಸಿದ್ದು,ಇದರಲ್ಲಿ ನಾವುಂದ ಸರಕಾರಿ ಪದವಿಪೂರ್ವ ಕಾಲೇಜಿನ ವಿಜ್ಞಾನ ವಿಭಾಗದ ವಿದ್ಯಾರ್ಥಿ ನಾವುಂದ ಚವೀಶ್ ಜೈನ್ 600 ರಲ್ಲಿ 590 ಅಂಕಗಳಿಸುವ ಮೂಲಕ ಕಾಲೇಜಿಗೆ ಪ್ರಥಮ ಸ್ಥಾನ ಪಡೆದಿರುತ್ತಾನೆ. ಕಾಲೇಜಿನ ಪ್ರಾಂಶುಪಾಲರು, ಭೋಧಕ ಹಾಗೂ ಭೋಧಕೇತರ ವ್ರಂದ ಚವೀಶ್ ಜೈನ್ ಗೆ ಶುಭಾಶಯ ಕೋರಿರುತ್ತಾರೆ.
ಲಯನ್ಸ್ ಕ್ಲಬ್ ಕುಂದಾಪುರ ಕೋಸ್ಟಲ್: ನೂತನ ಸಾರಥಿಯಾಗಿ ಲ.ಜಯಶೀಲ ಶೆಟ್ಟಿ ಕಂದಾವರ ಆಯ್ಕೆ
ಕುಂದಾಪುರ( ಜುಲೈ .22): ಲಯನ್ಸ್ ಕ್ಲಬ್ ಕುಂದಾಪುರ ಕೋಸ್ಟಲ್ ನ ನೂತನ ಸಾರಥಿಯಾಗಿ ಕೋಡಿ ಬ್ಯಾರೀಸ್ ಪ್ರೌಢಶಾಲೆಯ ಅಧ್ಯಾಪಕರೂ, ಉಡುಪಿ ಜಿಲ್ಲಾ ಸಮಾಜ ವಿಜ್ಞಾನ ಶಿಕ್ಷಕರ ಸಂಘದ ಗೌರವಾಧ್ಯಕ್ಷರೂ, ಕುಂದಾಪುರ ಬುಕ್ ಹೌಸ್ ನ ಮಾಲೀಕರಾದ ಲ. ಜಯಶೀಲ ಶೆಟ್ಟಿ ಕಂದಾವರ ಸರ್ವಾನುಮತದಿಂದ ಆಯ್ಕೆಯಾಗಿರುತ್ತಾರೆ. ಪ್ರಧಾನ ಕಾರ್ಯದರ್ಶಿಯಾಗಿ ಕುಂದಾಪುರದ ಭಾರತೀಯ ಜೀವ ವಿಮಾ ನಿಗಮದ ಅಭಿವೃದ್ಧಿ ಅಧಿಕಾರಿ ಲ.ಗಿರೀಶ್ ಮೇಸ್ತ , ಕೋಶಾಧಿಕಾರಿಯಾಗಿ ಶ್ರೀ ರಾಮಕೃಷ್ಣ ಕೋ ಆಪರೇಟಿವ್ ಸೊಸೈಟಿ […]
ಲಯನ್ಸ್ ಜಿಲ್ಲೆ 317 ಸಿ, ಪ್ರಾಂತ್ಯ 5 ರ ವ್ಯಾಪ್ತಿಯ, ವಲಯ 2 ರ ವಲಯಾಧ್ಯಕ್ಷರಾಗಿ ಲ. ಅಶೋಕ್ ಶೆಟ್ಟಿ ಸಂಸಾಡಿ ಅಯ್ಕೆ
ಕುಂದಾಪುರ(ಜು 22) : ಲಯನ್ಸ್ ಜಿಲ್ಲೆ 317 ಸಿ, ಪ್ರಾಂತ್ಯ 5 ರ ವ್ಯಾಪ್ತಿಯ, ವಲಯ 2 ರ ವಲಯಾಧ್ಯಕ್ಷರಾಗಿ ಕುಂದಾಪುರದ ಪ್ರತಿಷ್ಠಿತ ಜೆ.ಕೆ ಹೋಟೆಲ್ ನ ಆಡಳಿತ ಪಾಲುದಾರರು, ಯುವ ಉದ್ಯಮಿ, ರಾಜಕೀಯ ಧುರೀಣರು, ಸಮಾಜ ಸೇವಕರು ಹಾಗೂ ಕೊಡುಗೈ ದಾನಿಯಾದ ಲ. ಅಶೋಕ್ ಶೆಟ್ಟಿ ಸಂಸಾಡಿ Mjf ಯವರನ್ನು ಜಿಲ್ಲಾ ಗವರ್ನರ್ ವಿಶ್ವನಾಥ ಶೆಟ್ಟಿ ನಿಯುಕ್ತಿಗೊಳಿಸಿದ್ದಾರೆ. ಲ. ಅಶೋಕ್ ಶೆಟ್ಟಿ ಸಂಸಾಡಿ ಲಯನ್ಸ್ ಕ್ಲಬ್ ಕುಂದಾಪುರ ಕೋಸ್ಟಲ್ […]
ಸಂತ ಮೇರಿ ಮಹಾವಿದ್ಯಾಲಯ, ಶಿರ್ವ : ಹಸಿರಿನಿಂದ ಉಸಿರು – ವನ ಮಹೋತ್ಸವ ಕಾರ್ಯಕ್ರಮ
ಶಿರ್ವ(ಜು,22): ಇಲ್ಲಿನ ಸಂತ ಮೇರಿ ಮಹಾವಿದ್ಯಾಲಯದ ವಿವಿಧ ಘಟಕಗಳಾದ ಗ್ರೀನ್ ಟೀಚರ್ ಫೋರಂ, ಎನ್ ಸಿಸಿ, ಎನ್ಎಸ್ ಎಸ್, ಯೂತ್ ರೆಡ್ ಕ್ರಾಸ್ ಮತ್ತು ರೋವರ್ಸ-ರೇಂಜರ್ಸ್ ಸಂಯುಕ್ತ ಆಶ್ರಯದಲ್ಲಿ ಹಸಿರಿನಿಂದ ಉಸಿರು – ವನಮಹೋತ್ಸವ ಕಾರ್ಯಕ್ರಮವನ್ನು ಕಾಲೇಜಿನ ಕ್ಯಾಂಪಸ್ ನಲ್ಲಿ ಫಲನೀಡುವ ಗಿಡಗಳನ್ನು ನೆಡುವ ಮೂಲಕ ಆಚರಿಸಲಾಯಿತು. ಸಂತ ಮೇರಿ ಸಮೂಹ ಸಂಸ್ಥೆಗಳ ಸಂಚಾಲಕರಾದ ಅತಿ ವಂದನೀಯ ಧರ್ಮಗುರುಗಳಾದ ಡೆನ್ನಿಸ್ ಅಲೆಕ್ಸಾಂಡರ್ ಡೇಸ್ ರವರು ಸಾಂಕೇತಿಕವಾಗಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.ಕಾಲೇಜಿನ […]
ಉಪ್ಪುಂದ : ಸಂಸ್ಥೆಯ ಸಿಬ್ಬಂದಿಗಳಿಗೆ 1 ಲಕ್ಷ ಮೌಲ್ಯದ ಹೆಲ್ತ್ ಕಾರ್ಡ್ ವಿತರಿಸಿದ ಕೊಡುಗೈದಾನಿ ಶ್ರೀ ಗೋವಿಂದ ಬಾಬು ಪೂಜಾರಿ
ಉಪ್ಪುಂದ (ಜು,22):ಶ್ರೀ ವರಲಕ್ಷ್ಮೀ ಚಾರಿಟೇಬಲ್ ಟ್ರಸ್ಟ್ (ರಿ) ಉಪ್ಪುಂದ ಇದರ ಅಧ್ಯಕ್ಷರಾದ ಕೊಡುಗೈದಾನಿ ಶ್ರೀ ಗೋವಿಂದ ಬಾಬು ಪೂಜಾರಿಯವರು ವರಲಕ್ಷ್ಮೀ ಕೋ -ಆಪರೇಟಿವ್ ಸೊಸೈಟಿಯ ನೌಕರರಿಗೆ, ನಿರ್ದೇಶಕರಿಗೆ ಹಾಗೂ ಶ್ರೀ ವರಲಕ್ಷ್ಮೀ ಚಾರಿಟೇಬಲ್ ಟ್ರಸ್ಟ್ ನ ಸದಸ್ಯರಿಗೆ ತನ್ನ ಸ್ವಂತ ಹಣದಲ್ಲಿ ಸುಮಾರು 1 ಲಕ್ಷ ರೂ, ಮೌಲ್ಯದ ಹೆಲ್ತ್ ಕಾರ್ಡ್ ನ್ನು ವಿತರಿಸಿದರು. ತಮ್ಮ ಸಂಸ್ಥೆಯಲ್ಲಿ ದುಡಿಯುವ ಸಿಬ್ಬಂದಿಗಳಿಗೆ ಆರೋಗ್ಯ ತುರ್ತು ಸಂದರ್ಭದಲ್ಲಿ ಈ ಹೆಲ್ತ್ ಕಾರ್ಡ್ ಬಳಸಿ […]
ಆನಗಳ್ಳಿ ಶ್ರೀದತ್ತಾಶ್ರಮ : ಜು, 24 ರಂದು ಗುರು ಪೂರ್ಣಿಮೆ ಪ್ರಯುಕ್ತ ವಿಶೇಷ ಕಾರ್ಯಕ್ರಮ
ಕುಂದಾಪುರ (ಜು, 21): ಕುಂದಾಪುರದ ಪ್ರಸಿದ್ಧ ಧಾರ್ಮಿಕ ಕೇಂದ್ರವಾದ ಆನಗಳ್ಳಿಯ ಶ್ರೀ ದತ್ತಾಶ್ರಮದಲ್ಲಿ ಜುಲೈ, 24 ರಂದು ಗುರು ಪೂರ್ಣಿಮೆಯ ಪ್ರಯುಕ್ತ ವಿಶೇಷ ಧಾರ್ಮಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಬೆಳಿಗ್ಗೆ ತುಳಸಿ ಅರ್ಚನೆ, ಮಹಾಮಂಗಳಾರತಿ ಹಾಗೂ ಸಂಜೆ ದತ್ತ ಹೋಮ, ಭಜನಾ ಕೀರ್ತನೆ, ಸಾಧು-ಸಂತರಿಗೆ ಕಾಣಿಕೆ ಸಮರ್ಪಣೆ , ವಸ್ತ್ರ ವಿತರಣೆ , ಮಹಾಮಂಗಳಾರತಿ ಹಾಗೂ ಪ್ರಸಾದ ವಿತರಣೆ ನೆರವೇರಲಿದ್ದು ಈ ಎಲ್ಲಾ ಧಾರ್ಮಿಕ ಕಾರ್ಯಕ್ರಮಗಳಿಗೆ ಭಕ್ತರು ಆಗಮಿಸಬೇಕೆಂದು ಆನಗಳ್ಳಿ ಶ್ರೀ […]
ಪಣಂಬೂರು ವೆಂಕಟ್ರಾಯ ಐತಾಳ ಸಾಂಸ್ಕೃತಿಕ ಪ್ರತಿಷ್ಠಾನ : ಉಡುಪಿಯಲ್ಲಿ ಉಚಿತ ಯಕ್ಷಗಾನ ನಾಟ್ಯ ತರಬೇತಿ
ಉಡುಪಿ (ಜೂ, 21): ಕರಾವಳಿಯ ಹೆಮ್ಮೆಯ ಕಲೆಯಾದ ಯಕ್ಷಗಾನದ ಕುರಿತು ಯುವ ಜನತೆಯಲ್ಲಿ ಆಸಕ್ತಿ ಹಾಗೂ ಕಾಳಜಿ ಮೂಡಿಸುವ ನೆಲೆಯಲ್ಲಿ ಪಣಂಬೂರು ವೆಂಕಟ್ರಾಯ ಐತಾಳ ಸಾಂಸ್ಕೃತಿಕ ಪ್ರತಿಷ್ಠಾನವು ಉಡುಪಿಯಲ್ಲಿ ತೆಂಕುತಿಟ್ಟು ಯಕ್ಷಗಾನ ನಾಟ್ಯ (ಹೆಜ್ಜೆಗಾರಿಕೆ) ಉಚಿತ ತರಬೇತಿ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದು, ಇದರ ಉದ್ಘಾಟನಾ ಸಮಾರಂಭ ಜುಲೈ 20 ರ ಮಂಗಳವಾರದಂದು ಜರುಗಿತು. ಶ್ರೀ ಶಶಿಕಾಂತ್ ಭಟ್ ರವರು ಕಾರ್ಯಕ್ರಮವನ್ನು ಉದ್ಘಾಟಿಸಿ ಯಕ್ಷಗಾನ ಹಾಗೂ ಈ ಸಂಸ್ಥೆಯ ಹಿರಿಮೆಯನ್ನು ಜಗತ್ತಿನಾದ್ಯಂತ ಪಸರಿಸುವ […]










