ಉಡುಪಿ (ಜೂ, 16): ಕರಾವಳಿ ಭಾಗದಲ್ಲಿ ಹಲವು ವರ್ಷಗಳಿಂದ ರಕ್ತದಾನ ಶಿಬಿರ ಹಾಗೂ ತುರ್ತು ಸಂದರ್ಭದಲ್ಲಿ ರಕ್ತದಾನಿಗಳ ಆಯೋಜನೆ ಮಾಡಿರುವ ರಕ್ತದ ಆಪತ್ಭಾಂಧವ ,ಉಡುಪಿ ಅಭಯ ಹಸ್ತ ಹೆಲ್ಪ್ ಲೈನ್ ಸ್ಥಾಪಕಾಧ್ಯಕ್ಷ ಸತೀಶ್ ಸಾಲ್ಯಾನ್ ಅವರನ್ನು ಜೂನ್,14 ರಂದು ಮಣಿಪಾಲದ ಕೆಎಂಸಿ ಇಂಟರಾಕ್ಟ್ ಹಾಲ್ನಲ್ಲಿ ನಡೆದ ವಿಶ್ವ ರಕ್ತದಾನಿಗಳ ದಿನಾಚರಣೆಯ ಸಂದರ್ಭದಲ್ಲಿ ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ಮಣಿಪಾಲ ಕೆಎಂಸಿ ಯ ವೈದ್ಯಕೀಯ ಅಧೀಕ್ಷಕ ಡಾ| ಅವಿನಾಶ್ ಶೆಟ್ಟಿ, ಬಿ.ಜೆ.ಪಿ. ಯ […]
Author: KundaVahini Editor
ಮೂಡ್ಲಕಟ್ಟೆ ಎಂಐಟಿ – ಮೈಕ್ರೋಸಾಫ್ಟ್ ಟ್ರೈನಿಂಗ್ ಪಾರ್ಟ್ನರ್ ಜೊತೆ ಒಪ್ಪಂದ
ಕುಂದಾಪುರ (ಜೂನ್, 15) : ಮೂಡ್ಲಕಟ್ಟೆ ಇಂಜಿನಿಯರಿಂಗ್ ಕಾಲೇಜು ಮತ್ತು ಪ್ರಸಿದ್ದ ಮೈಕ್ರೋಸಾಫ್ಟ್ ನ ಟ್ರೈನಿಂಗ್ ಪಾರ್ಟ್ನರ್ ಕಂಪನಿಯು ಒಂದು ಮಹತ್ವದ ಒಪ್ಪಂದಕ್ಕೆ ಸಹಿ ಹಾಕುವ ಮೂಲಕ ತನ್ನ ಬೆಳವಣಗೆಯ ಚಟುವಟಿಕೆಗೆ ಸಾಕ್ಷಿಯಾಯಿತು. ಈ ಒಪ್ಪಂದದಿಂದ ವಿದ್ಯಾರ್ಥಿಗಳು ಉನ್ನತ ಶ್ರೇಣಿಯ ಮತ್ತು ಹೊಸ ತಂತ್ರಜ್ಞಾನ ಭರಿತ ಕೋರ್ಸ್ ಗಳನ್ನು ಕಲಿತು, ವಿಶ್ವದ ಪ್ರಸಿದ್ಧ ಸಾಫ್ಟ್ ವೇರ್ ಕಂಪೆನಿಯಾದ ಮೈಕ್ರೋಸಾಫ್ಟ್ ನಿಂದ ಪ್ರಮಾಣಪತ್ರ ಪಡೆಯುವ ಅವಕಾಶವಿರುತ್ತದೆ. ವಿದ್ಯಾರ್ಥಿಗಳು ಅಂಕಗಳಿಗೆ ಮಾತ್ರ ಸೀಮಿತರಾಗದೆ, ಜ್ಞಾನ […]
ಕಟ್ ಬೆಲ್ತೂರು ಗ್ರಾ. ಪ. ಅಧ್ಯಕ್ಷ ನಾಗರಾಜ್ ಪುತ್ರನ್ ರಿಂದ ದಿನಸಿ ಕಿಟ್ ವಿತರಣೆ
ವಂಡ್ಸೆ (ಜೂ, 15): ಕಟ್ ಬೆಲ್ತೂರು ಗ್ರಾಮ ಪಂಚಾಯತ್ ಅಧ್ಯಕ್ಷರಾದ ನಾಗರಾಜ್ ಪುತ್ರನ್ ರವರು ಕರೋನಾ ಲಾಕ್ಡೌನ್ ಸಂಕಷ್ಟಕ್ಕೆ ಸಿಲುಕಿರುವ ಸುಳ್ಸೆ ಗ್ರಾಮದ ಬಡ ಕುಟುಂಬಗಳಿಗೆ ದೈನಂದಿನ ಉಪಯೋಗಕ್ಕೆ ಅನುಕೂಲವಾಗುವ ದಿನಸಿ ವಸ್ತುಗಳ ಕಿಟ್ ವಿತರಣೆ ಮಾಡಿದರು. ದೀರ್ಘಾವಧಿಯ ಕರೋನಾ ಲಾಕ್ಡೌನ್ ನಿಂದಾಗಿ ಹಲವು ಕುಟುಂಬಗಳು ಸಂಕಷ್ಟಕ್ಕೆ ಸಿಲುಕಿದೆ, ಆ ನಿಟ್ಟಿನಲ್ಲಿ ಮಾನವೀಯ ನೆಲೆಯಲ್ಲಿ ಸಹಾಯ ಮಾಡುವುದು ನಮ್ಮ ಆಧ್ಯ ಕರ್ತವ್ಯವಾಗಿದೆ ಎಂದು ಅವರು ಹೇಳಿದರು.
ನಾವುಂದ : ವರಲಕ್ಷ್ಮೀ ಚಾರಿಟೇಬಲ್ ಟ್ರಸ್ಟ್(ರಿ). ಉಪ್ಪುಂದ ವತಿಯಿಂದ ಬಡ ಕುಟುಂಬಗಳಿಗೆ ದಿನಸಿ ಸಾಮಾನುಗಳ ಕಿಟ್ ವಿತರಣೆ
ನಾವುಂದ( ಜೂ, 15) : ವರಲಕ್ಷ್ಮೀ ಚಾರಿಟೇಬಲ್ ಟ್ರಸ್ಟ್ ಉಪ್ಪುಂದ ಇದರ ಪ್ರವರ್ತಕರು ಹಾಗೂ ಮ್ಯಾನೇಜಿಂಗ್ ಡೈರೆಕ್ಟರ್ ಶ್ರೀ ಗೋವಿಂದ ಬಾಬು ಪೂಜಾರಿಯವರು ನಾವುಂದ ಗ್ರಾಮದ ಮಸ್ಕಿ ಯ ಶ್ರೀ ಗೋಪಾಲಕ್ರಷ್ಣ ದೇವಸ್ಥಾನದ ವಠಾರದಲ್ಲಿ ಕಡು ಬಡವರಿಗೆ ಕರೋನಾ ಲಾಕ್ಡೌನ್ ಸಮಯದಲ್ಲಿ ದೈನಂದಿನ ನಿರ್ವಹಣಿಗೆ ಬೇಕಾಗುವ ದಿನಸಿ ಸಾಮಾನುಗಳ ಕಿಟ್ ವಿತರಿಣೆ ಮಾಡಿದರು. ಈ ಸಂದರ್ಭದಲ್ಲಿ ಶ್ರೀ ಗೋಪಾಲ ಕ್ರಷ್ಣ ದೇವಸ್ಥಾನದ ಆಡಳಿತ ಮಂಡಳಿಯ ಸದಸ್ಯರು, ಈಶ್ವರ ಸಿ ನಾವುಂದ […]
“ಸೋಲದಿರು ಎಂದೆಂದೂ”
“ಸೋಲದಿರು ಎಂದೆಂದೂ” ಓ ಮನಸೇ, ನೀ ವಿಶ್ವಬಂಧುಸಾಧನೆಯ ಪಣವ ಸ್ವೀಕರಿಸು ಇಂದು.ಬಾನೇ ಬೀಳಲಿ, ಭುವಿಯೇ ಸೀಳಲಿಸೋಲನ್ನು ಕಂಡು ಕುಸಿಯದಿರು ಎಂದು.ಧೈರ್ಯವ ಬಿತ್ತಿ, ಸಹನೆಯ ಹೊತ್ತಿಸಾಗುತಿರು ಮುಂದೆಂದು, ಸಾಗುತಿರು ಮುಂದೆಂದು.ನೋವಿದ್ದರೆ ಇಂದು, ನಲಿವಿರುವುದು ಮುಂದುನುಗ್ಗುತಿರು ನುಗ್ಗುತಿರು, ಸೋಲದಿರು ಎಂದೆಂದೂ. ಕವಿಯತ್ರಿ: ಡಾ. ಉಮ್ಮೆ ಸಲ್ಮಾ ಎಂ. ಸಹಾಯಕ ಪ್ರಾಧ್ಯಾಪಕರುಕ್ರೈಸ್ಟ್ ವಿಶ್ವವಿದ್ಯಾಲಯಬೆಂಗಳೂರು ೫೬೦೦೨೯
ಹಳ್ಳಿಹೊಳೆ : ವಿಶೇಷ ಚೇತನರಿಗೆ ಎಪಿಡಿ (ದಿ ಅಸೋಸಿಯೇಶನ್ ಆಫ್ ಪೀಪಲ್ ವಿತ್ ಡಿಸೆಬಿಲಿಟಿ) ಸಂಸ್ಥೆಯಿಂದ ಫುಡ್ ಕಿಟ್ ವಿತರಣೆ
ಕುಂದಾಪುರ (ಜೂ, 14): ಹಳ್ಳಿಹೊಳೆಗ್ರಾಮ ಪಂಚಾಯತ್ವ್ಯಾಪ್ತಿಯಲ್ಲಿರುವ ವಿಶೇಷ ಚೇತನರಿಗೆ ಎಪಿಡಿ( ದಿ ಅಸೋಸಿಯೇಶನ್ ಆಫ್ ಪೀಪಲ್ ವಿತ್ ಡಿಸೆಬಿಲಿಟಿ) ಸಂಸ್ಥೆಯಿಂದ ಫುಡ್ ಕಿಟ್ ವಿತರಣಾ ಕಾರ್ಯಕ್ರಮ ಜೂನ್ , 14 ರಂದು ಪಂಚಾಯತ್ ಸಭಾಂಗಣದಲ್ಲಿ ಜರುಗಿತು. ಈ ಕಾರ್ಯಕ್ರಮದಲ್ಲಿ ಎಪಿಡಿ ಸಂಸ್ಥೆಯ ನೋಡಲ್ ಅಧಿಕಾರಿಗಳಾದ ಶ್ರೀ ಹರೀಶ ಶೆಟ್ಟಿಯವರು ಪುಡ್ ಕಿಟ್ ವಿತರಣೆ ಮಾಡಿ ಎಪಿಡಿ ಸಂಸ್ಥೆಯ ಬಗ್ಗೆ ಮತ್ತು ಜೀವನೋಪಾಯ ಕಾರ್ಯಕ್ರಮದ ತರಬೇತಿ ಬಗ್ಗೆ ಮಾಹಿತಿಯನ್ನು ನೀಡಿದರು. ಪಂಚಾಯತ್ […]
ದಾನದಲ್ಲಿ ಕರ್ಣ, ಆದರ್ಶದಲ್ಲಿ ರಾಮ, ಕಾರ್ಮಿಕರ ಅನ್ನದಾತ ಶ್ರೀ ಗೋವಿಂದ ಬಾಬು ಪೂಜಾರಿ
ಅವರ ಒಂದು ಹಿತನುಡಿಯೇ ಸಾಕು ನಿಮ್ಮ ಸಂಕಷ್ಟಗಳ ಸಾಂತ್ವನಕ್ಕೆ . ಅದರಲ್ಲೂ ಅವರ ಶ್ರೀರಕ್ಷೆ, ಸಹಾಯ ಹಾಗೂ ಸಹಕಾರ ಸಿಕ್ಕರಂತೂ ನೀವು ನಿಜವಾಗಿಯೂ ಜೀವನದಲ್ಲಿ ಸಾಧನೆಯ ಜೊತೆಗೆ ಯಶಸ್ಸನ್ನು ಕಾಣುತ್ತೀರಿ. ಜೀವನದಲ್ಲಿ ಎಂದಿಗೂ ಸೋತೆ ಎನ್ನುವ ಭಾವನೆಯೊಂದಿಗೆ ಜೀವನ ನೆಡೆಸಬೇಡಿ ,ಒಂದಲ್ಲ ಒಂದು ದಿನ ಗೆದ್ದೆ ಗೆಲ್ಲುವೆ ಎನ್ನುವ ಛಲದೊಂದಿಗೆ ಜೀವನ ನೆಡೆಸಿ ಎನ್ನುವ ಅವರ ಆದರ್ಶ ಪಾಲನೆಯ ಬದುಕು ಅನುಕರಣೀಯ. ಧೈರ್ಯದಿಂದ ಮುಂದೆ ಹೋಗಿ ,ಜಗತ್ತಿನ ಎಲ್ಲಾ ಕೆಲಸವನ್ನು […]
ಜೆಸಿಐ ಕುಂದಾಪುರ ಸಿಟಿ : ವಿಶ್ವ ರಕ್ತದಾನ ದಿನಾಚರಣೆ
ಕುಂದಾಪುರ (ಜೂ,14): ವಿಶ್ವ ರಕ್ತದಾನ ದಿನಾಚರಣೆ ಅಂಗವಾಗಿ ಜೆಸಿಐ ಕುಂದಾಪುರ ಸಿಟಿ ಯ ಸದ್ಯಸ್ಯರುಕುಂದಾಪುರದ ಇಂಡಿಯನ್ ರೆಡ್ ಕ್ರಾಸ್ ಸಂಸ್ಥೆ ಯಲ್ಲಿ ರಕ್ತದಾನ ಮಾಡುವುದರ ಮೂಲಕ ರಕ್ತದಾನ ಶ್ರೇಷ್ಠದಾನ ಎನ್ನುವ ಸಂದೇಶವನ್ನು ಸಾರಿದರು. ಈ ಸಂದರ್ಭದಲ್ಲಿ ಜೆಸಿಐ ಕುಂದಾಪುರ ಸಿಟಿಯ ಅಧ್ಯಕ್ಷ ವಿಜಯ ಭಂಡಾರಿ, ಸ್ಥಾಪಕಾಧ್ಯಕ್ಷ ಹುಸೇನ್ ಹೈಕಾಡಿ, ಪೂರ್ವಾಧ್ಯಕ್ಷರಾದ ರಾಘವೇಂದ್ರ ಚರಣ್ ನಾವಡ, ಪ್ರಶಾಂತ್ ಹವಾಲ್ದಾರ್ , ಜಯಚಂದ್ರ ಶೆಟ್ಟಿ ಜೇಸಿರೇಟ್ ಅಧ್ಯಕ್ಷೆ ಡಾ|ಸೋನಿ ಹಾಗೂ ಇಂಡಿಯನ್ ರೆಡ್ […]
ಕರೋನಾದಿಂದ ಮೃತಪಟ್ಟ ಬಿಪಿಎಲ್ ಕುಟುಂಬಕ್ಕೆ 1 ಲಕ್ಷ ರೂ. ಪರಿಹಾರ : ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಘೋಷಣೆ
ಬೆಂಗಳೂರು (ಜೂ, 14): ಕೋವಿಡ್ 19 ಗೆ ತುತ್ತಾಗಿ ಮೃತಪಟ್ಟ ಬಿಪಿಎಲ್ ಕಾರ್ಡ್ ಹೊಂದಿರುವ ವ್ಯಕ್ತಿಯ ಕುಟುಂಬಕ್ಕೆ 1 ಲಕ್ಷ ರೂ. ಪರಿಹಾರ ಧನವನ್ನು ನೀಡುವುದಾಗಿ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಇಂದು ನಡೆದ ಪತ್ರಿಕಾಗೋಷ್ಠಿಯಲ್ಲಿ ಘೋಷಣೆ ಮಾಡಿದರು.ಇದು ಕೋವಿಡ್-19 ಕ್ಕೆ ತುತ್ತಾಗಿ ಮೃತಪಟ್ಟಿರುವ ಕುಟುಂಬದ ಓರ್ವ ಸದಸ್ಯನಿಗೆ ಮಾತ್ರ ಅನ್ವಯಿಸುತ್ತದೆ.
ಚಿತ್ರದುರ್ಗ ರೆಡ್ ಕ್ರಾಸ್ : ಕೋವಿಡ್ ಸಂಧರ್ಬದಲ್ಲಿನ ವೈದ್ಯಕೀಯ ಉಪಕರಣಗಳ ಹಸ್ತಾಂತರ ಕಾರ್ಯಕ್ರಮ
ಚಿತ್ರದುರ್ಗ (ಜೂನ್ , 13) : ಕೋವಿಡ್ ಸಂಧರ್ಬದಲ್ಲಿನ ವೈದ್ಯಕೀಯ ಉಪಕರಣಗಳ ಹಸ್ತಾಂತರ ಕಾರ್ಯಕ್ರಮ ಅಂಗವಾಗಿ ಚಿತ್ರದುರ್ಗ ನಗರದ ಮೆದೆಹಳ್ಳಿ ರಸ್ತೆಯಲ್ಲಿರುವ ಶ್ರೀ ಶಾಂತ ರಾಮತೀರ್ಥ ಆಶ್ರಮದ ಶ್ರೀ ಶ್ರೀ ಶ್ರೀ ಪ್ರಹಲ್ಲಾದ್ ಗುರೂಜಿ ರವರನ್ನು ಜೂನ್ 13 ರಂದು ಭೇಟಿ ಮಾಡಿ ಪಲ್ಸ ಓಕ್ಸಿಮೀಟರನ್ನು ರೆಡ್ ಕ್ರಾಸ್ ವತಿಯಿಂದ ನೀಡಲಾಯಿತು. ಈ ಸಂದರ್ಭದಲ್ಲಿ ರೆಡ್ ಕ್ರಾಸ್ ಕಾರ್ಯದರ್ಶಿ ಮಜಹರ್ ಉಲ್ಲಾ ಮತ್ತು ನಿರ್ದೇಶಕರಾದ ಗಿರೀಶ್ ರವರು ಉಪಸ್ಥಿತರಿದ್ದರು.










