ಬರಿ ಪದಕ್ಕೆ ಪದ ಸೇರಿಸಿ ಹಾಡು ಕಟ್ಟಿ, ಒಂದೊಂದು ಅಕ್ಷರವನ್ನೂ ತುಂಬಾ ಅನುಭವಿಸಿ ಭಾವಗಳನ್ನೇ ಎದೆಗಿಳಿಸಿದ ಕವಿ ಡಾ.ಎನ್.ಎಸ್. ಲಕ್ಷ್ಮೀನಾರಾಯಣ ಭಟ್ಟರ ಗೀತೆಗಳು ಬದುಕಿನ ಗೀತೆಗಳು ಎಂದು ಸಾಂಸ್ಕೃತಿಕ ಚಿಂತಕ ಶ್ರೀ ಮುಸ್ತಾಕ್ ಹೆನ್ನಾಬೈಲು ಹೇಳಿದರು.
Author: KundaVahini Editor
ಡಾ| ಬಿ. ಬಿ. ಹೆಗ್ಡೆ ಕಾಲೇಜು : ರೋವರ್ಸ್ ಮತ್ತು ರೇಂಜರ್ಸ್ ಘಟಕಗಳ ವಾರ್ಷಿಕ ಚಟುವಟಿಕೆ ಉದ್ಘಾಟನೆ ಮತ್ತು ನಿಪುಣ ಪರೀಕ್ಷೆ ತರಬೇತಿ
ಭಾರತ್ ಸೈಟ್ ಮತ್ತು ಗೈಡ್ಸ್ ಕರ್ನಾಟಕ ಉಡುಪಿ ಜಿಲ್ಲೆಯ ಜಿಲ್ಲಾ ಸಂಘಟಕರಾದ ಶ್ರೀಮತಿ ಸುಮನ ಶೇಖರ್ ಮಾರ್ಚ್ 16ರಂದು ಡಾ.ಬಿ .ಬಿ ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ರೂವರ್ಸ್ ಮತ್ತು ರೇಂಜರ್ಸ್ ಘಟಕಗಳ ವಾರ್ಷಿಕ ಚಟುವಟಿಕೆಗಳನ್ನು ಉದ್ಘಾಟಿಸಿದರು.
ಡಾ| ಬಿ. ಬಿ. ಹೆಗ್ಡೆ ಕಾಲೇಜು : ಡಿಜಿಟಲ್ ಮಾರ್ಕೆಟಿಂಗ್ ಮಾಹಿತಿ ಕಾರ್ಯಕ್ರಮ
ಕುಂದಾಪುರ (ಮಾ. 18): ಇಲ್ಲಿನ ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ವಾಣಿಜ್ಯ ವಿಭಾಗ, ವ್ಯವಹಾರ ನಿರ್ವಹಣೆ ಶಾಸ್ತ್ರ ವಿಭಾಗ ಹಾಗೂ ವಾಣಿಜ್ಯ ಮತ್ತು ವ್ಯವಹಾರ ಶಾಸ್ತ್ರ ಸಂಘದ ಆಶ್ರಯದಲ್ಲಿ ‘ಡಿಜಿಟಲ್ ಮಾರ್ಕೆಟಿಂಗ್ ಮಾಹಿತಿ’ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಡಿಜಿಟಲ್ ರಾಯ್ ಅಕಾಡೆಮಿ, ಬೆಂಗಳೂರಿನ ಸಂಸ್ಥಾಪಕರಾದ ಶ್ರೀ ರಾಜೀವ ಶೆಟ್ಟಿಯವರು ವಿದ್ಯಾರ್ಥಿಗಳಿಗೆ ಡಿಜಿಟಲ್ ಮಾರ್ಕೆಟಿಂಗ್ನ ಮಹತ್ವ ಮತ್ತು ಅದರಿಂದ ಮುಂದಿನ ದಿನಗಳಲ್ಲಿ ಸಿಗುವ ಉದ್ಯೋಗಾವಕಾಶಗಳ […]
ಮಾರ್ಚ್ 21ರಂದು ಗಂಗೊಳ್ಳಿ ಭಾಸ್ಕರ ಕಲೈಕಾರ್ ಮ್ಯೂಸಿಯಂ ಉದ್ಘಾಟನೆ
ಗಂಗೊಳ್ಳಿ (ಮಾ.18) ಕರ್ನಾಟಕ ಸರಕಾರ ಸ್ವಾತಂತ್ರ್ಯೋತ್ಸವ ಪ್ರಶಸ್ತಿ, ಕೊಂಕಣಿ ಅಕಾಡೆಮಿಯ ಕೊಂಕಣಿ ನಕ್ಷತ್ರ ಬಿರುದು, ಎಸ್.ಎಮ್.ಎಸ್. ಕಲಾವೈಭವ ಪ್ರಶಸ್ತಿ ಪುರಸ್ಕೃತ ವ್ಯಂಗ್ಯಚಿತ್ರಗಾರ, ಪ್ರಾಚೀನ ವಸ್ತು ಸಂಗ್ರಹಕಾರ, ಚುಟುಕು ಸಾಹಿತಿ, ಪ್ರದರ್ಶನಕಾರ ಮತ್ತು ಛಾಯಾ ಚಿತ್ರಗ್ರಾಹಕ ಗಂಗೊಳ್ಳಿ ಶ್ರೀ ಭಾಸ್ಕರ ಕಲೈಕಾರ್ ರವರು ಮುಂದಿನ ಯುವ ಪೀಳಿಗೆಗಾಗಿ ನಿರ್ಮಿಸಿರುವ ಮ್ಯೂಸಿಯಂ ಉದ್ಘಾಟನೆ ಇದೇ ಮಾರ್ಚ್ 21ರ ಬೆಳಿಗ್ಗೆ 10-30 ಗಂಟೆಗೆ ಗಂಗೊಳ್ಳಿಯ. ‘ಶ್ರೀ ದೇವಿಪ್ರಸಾದ್’ ಕಲೈಕಾರ್ ಮಠದ ಬಳಿ ನಡೆಯಲಿದೆ. ಈ […]
ಸೈಬರ್ ಸೆಕ್ಯೂರಿಟಿ : ಒಂದಿಷ್ಟು ಮಾಹಿತಿ – ಜಾಗೃತಿ
ಕಂಪ್ಯೂಟರ್, ಮೊಬೈಲ್ ಮತ್ತು ಇಂಟರ್ನೆಟ್ ಗಳ ವಿವಿಧ ಮೂಲಗಳನ್ನು ದುರ್ಬಳಕೆ ಮಾಡಿಕೊಂಡು ಕೆಲವು ದುಷ್ಕರ್ಮಿಗಳು ಸಾರ್ವಜನಿಕರನ್ನು ಮೋಸಗೊಳಿಸುವುದು, ವೈಯಕ್ತಿಕ ಬ್ಯಾಂಕ್ ಖಾತೆಗೆ ಕನ್ನ ಹಾಕುವಂಥದ್ದು, ಸುಳ್ಳು ಮಾಹಿತಿ ಮೂಲಕ ದಾರಿ ತಪ್ಪಿಸುವಂತದ್ದು, ಇತ್ತೀಚಿನ ದಿನಗಳಲ್ಲಿ ಹೆಚ್ಚಾಗುತ್ತಿದೆ.
ಡಾ. ಬಿ.ಬಿ. ಹೆಗ್ಡೆ ಕಾಲೇಜು : ಎನ್ . ಎಸ್. ಎಸ್. ಘಟಕದ ವಾರ್ಷಿಕ ಚಟುವಟಿಕೆಗಳ ಉದ್ಘಾಟನೆ
ಕುಂದಾಪುರ(ಮಾ.15): ಭಾರತ ಕರ್ಮಭೂಮಿ, ಈ ದೇಶದಲ್ಲಿ ಜನಿಸಿರುವುದೇ ನಮ್ಮೆಲ್ಲರ ಸೌಭಾಗ್ಯ. ಭಾರತದಂತಹ ದೇಶದಲ್ಲಿ ಬಲಿಷ್ಠ ರಾಷ್ಟ್ರ ನಿರ್ಮಾಣ ಮಾಡುವಲ್ಲಿ ಎನ್.ಎಸ್.ಎಸ್. ಪ್ರಮುಖ ಪಾತ್ರವಹಿಸುತ್ತಿದೆ. ವಿದ್ಯಾರ್ಥಿಗಳು ಎನ್.ಎಸ್.ಎಸ್. ಕಾರ್ಯಚಟುವಟಿಕೆಯಲ್ಲಿ ಸಕ್ರಿಯವಾಗಿ ಭಾಗವಹಿಸಿ, ಶಿಸ್ತು-ಸಂಯಮ, ಸಹಬಾಳ್ವೆಯೊಂದಿಗೆ ತಮ್ಮ ವ್ಯಕ್ತಿತ್ವ ರೂಪಿಸಿಕೊಳ್ಳಬೇಕು,ಜೊತೆಗೆ ದೇಶ ಕಟ್ಟುವ ಕಾರ್ಯದಲ್ಲಿ ಪ್ರವೃತ್ತರಾಗಬೇಕೆಂದು ಕೋಟ ವಿವೇಕ ಪದವಿ ಪೂರ್ವ ಕಾಲೇಜಿನ ವಾಣಿಜ್ಯ ಉಪನ್ಯಾಸಕರಾದ ಶ್ರೀ ಸಂಜೀವ ಗುಂಡ್ಮಿ ಹೇಳಿದರು. ಅವರು ಡಾ| ಬಿ. ಬಿ . ಹೆಗ್ಡೆ ಪ್ರಥಮ ದರ್ಜೆ […]
ದೇಶ ಕಟ್ಟುವ ಕಾರ್ಯದಲ್ಲಿ ಎನ್.ಎಸ್.ಎಸ್ ಮಹತ್ವ ಪಾತ್ರ ವಹಿಸುತ್ತಿದೆ : ಮೈಸೂರು ವಿ.ವಿ. ವಿಶ್ರಾಂತ ಕುಲಪತಿ ಪ್ರೊ. ಕೆ.ಎಸ್. ರಂಗಪ್ಪ ಅಭಿಪ್ರಾಯ
ಮೈಸೂರು ( ಮಾ.16) ದೇಶದ ಸಮಗ್ರ ಅಭಿವ್ರದ್ದಿ ಹಾಗೂ ದೇಶ ಕಟ್ಟುವ ಕಾರ್ಯದಲ್ಲಿ ಎನ್.ಎಸ್ .ಎಸ್ ಮಹತ್ವದ ಪಾತ್ರ ವಹಿಸುತ್ತಿದೆ.ಗ್ರಾಮಗಳ ಅಭಿವೃದ್ಧಿಯಲ್ಲಿ ಎನ್.ಎಸ್.ಎಸ್ ರಚನಾತ್ಮಕವಾಗಿ ಕಾರ್ಯನಿರ್ವಹಿಸುತ್ತಿದೆ ಎಂದು ಮೈಸೂರು ವಿ.ವಿ ಯ ವಿಶ್ರಾಂತ ಕುಲಪತಿ ಪ್ರೊ.ಕೆ.ಎಸ್.ರಂಗಪ್ಪ ಹೇಳಿದರು. ಅವರು ಮಾರ್ಚ್ 16 ರಿಂದ 22 ರ ತನಕ ಮೈಸೂರಿನ ಸರಸ್ವತಿಪುರಂನ ಎನ್.ಎಸ್.ಎಸ್ ಭವನದಲ್ಲಿ ರಾಜ್ಯದ ವಿವಿಧ ಕಾಲೇಜಿನಿಂದ ಆಗಮಿಸಿದ ಎನ್ನೆಸ್ಸೆಸ್ ಯೋಜನಾಧಿಕಾರಿಗಳಿಗೆ ಆಯೋಜಿಸಿದ್ದ ಇಟಿಐ ತರಬೇತಿ ಕಾರ್ಯಾಗಾರವನ್ನು ಉದ್ಘಾಟಿಸಿ […]
ಶ್ರೀ ಚೆನ್ನ ಬಸವೇಶ್ವರ ಭಜನಾ ಮಂದಿರ : ಗಾಯಕ ಗಣೇಶ್ ಗಂಗೊಳ್ಳಿ ಯವರಿಗೆ ಸನ್ಮಾನ
ಗಂಗೊಳ್ಳಿ (ಮಾ. 17) : ಕುಂಭಾಶಿ ಗ್ರಾಮದ ಹೊಳೆ ಕಟ್ಟು ಶ್ರೀಚೆನ್ನಬಸವೇಶ್ವರ ಭಜನಾ ಮಂದಿರದ ಮಹಾ ಶಿವರಾತ್ರಿ ಹಬ್ಬದ ಪ್ರಯುಕ್ತ ಗಣೇಶ್ ಗಂಗೊಳ್ಳಿ ಮತ್ತು ಬಳಗದವರಿಂದ ಭಕ್ತಿಗೀತೆಗಳ ಕಾರ್ಯಕ್ರಮ ಜರುಗಿತು. ಈ ಸಂದರ್ಭದಲ್ಲಿ ಕಲಾವಿದರಾದ ಗಣೇಶ್ ಗಂಗೊಳ್ಳಿ ಯವರನ್ನು ಶ್ರೀ ಚೆನ್ನಬಸವೇಶ್ವರ ಭಜನಾ ಮಂದಿರದ ಆಡಳಿತ ಮಂಡಳಿಯ ವತಿಯಿಂದ ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ಆಡಳಿತ ಮಂಡಳಿಯ ಸರ್ವ ಪದಾಧಿಕಾರಿಗಳು ಹಾಗೂ ಸದಸ್ಯರು ಉಪಸ್ಥಿರಿದ್ದರು
ಸರಸ್ವತಿ ವಿದ್ಯಾಲಯ ಗಂಗೊಳ್ಳಿ : ಜಿಲ್ಲಾಮಟ್ಟದ ಬಾಲ್ ಬ್ಯಾಡ್ಮಿಂಟನ್ ಮತ್ತು ಟೆನ್ನಿಕಾಯ್ಟ್ ಪಂದ್ಯಾಟ ಉದ್ಘಾಟನೆ
ಗಂಗೊಳ್ಳಿ (ಮಾ. 17) : ವಿದ್ಯಾರ್ಥಿಗಳು ಕ್ರೀಡಾ ಮನೋಭಾವವನ್ನು ಬೆಳೆಸಿಕೊಂಡು ಸೋಲು-ಗೆಲುವನ್ನು ಸಮಚಿತ್ತದಿಂದ ಸ್ವೀಕರಿಸಬೇಕು. ಕ್ರೀಡಾ ಶಿಕ್ಷಣದ ಜೊತೆ ಜೊತೆಯಲ್ಲಿ ವ್ಯಕ್ತಿತ್ವ ವಿಕಸನದ ಕಡೆಗೂ ಗಮನಹರಿಸಬೇಕು ಎಂದು ಕೊಲ್ಲೂರಿನ ಶ್ರೀ ಮೂಕಾಂಬಿಕಾ ಪದವಿಪೂರ್ವ ಕಾಲೇಜಿನ ದೈಹಿಕ ಶಿಕ್ಷಣ ಉಪನ್ಯಾಸಕರಾದ ಸುಕೇಶ್ ಶೆಟ್ಟಿ ಹೇಳಿದರು. ಅವರು ಗಂಗೊಳ್ಳಿಯ ಸರಸ್ವತಿ ವಿದ್ಯಾಲಯದಲ್ಲಿ, ಪದವಿಪೂರ್ವ ಕಾಲೇಜು ಶಿಕ್ಷಣ ಇಲಾಖೆ ಉಡುಪಿ, ಸರಸ್ವತಿ ವಿದ್ಯಾಲಯ ಪದವಿಪೂರ್ವ ಕಾಲೇಜು ಗಂಗೊಳ್ಳಿ ಮತ್ತು ಶ್ರೀ ಗುರು ಜ್ಯೋತಿ ಸ್ಪೋರ್ಟ್ಸ್ […]
ಮೂಡ್ಲಕಟ್ಟೆ ಎಂ. ಐ. ಟಿ. : ಸ್ವಯಂ ರಕ್ಷಣೆ ಪ್ರಾತ್ಯಕ್ಷಿಕೆ ಕಾರ್ಯಾಗಾರ
ಮೂಡ್ಲಕಟ್ಟೆ ಕಾಲೇಜಿನಲ್ಲಿ ಫಿನಿಕ್ಸ್ ಅಕಾಡೆಮಿ ಇಂಡಿಯ ಇದರ ಆಶ್ರಯದಲ್ಲಿ ಪ್ರಥಮ ವರ್ಷದ ಎಂ.ಬಿ.ಎ. ಹಾಗು ಇಂಜಿನಿಯರಿಂಗ್ ವಿದ್ಯಾರ್ಥಿಗಳಿಗಾಗಿ ಸ್ವಯಂ ರಕ್ಷಣೆ ಪ್ರಾತ್ಯಕ್ಷಿಕೆ ಕಾರ್ಯಾಗಾರ ನಡೆಸಲಾಯಿತು.










