ಉಡುಪಿ(ಮಾ.6): ಸಂತ ಮೇರಿ ಕಾಲೇಜಿನ ಕಂಪ್ಯೂಟರ್ ಸಾಯನ್ಸ್ ವಿಭಾಗದ ಆಯೋಜನೆಯಲ್ಲಿ ರಕ್ಷಕ-ಶಿಕ್ಷಕ ಸಭೆಯ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಪ್ರಾಂಶುಪಾಲ ಡಾ| ಹೆರಾಲ್ಡ್ ಐವನ್ ಮೋನಿಸ್ರವರು ವಿದ್ಯಾರ್ಥಿಗಳು ಭವಿಷ್ಯವನ್ನು ರೂಪಿಸುವಲ್ಲಿ ಹೆತ್ತವರು ಹಾಗೂ ಅಧ್ಯಾಪಕರ ಪಾತ್ರ ಬಹಳ ಪ್ರಾಮುಖ್ಯವಾಗಿದೆ. ಇಂದಿನ ಯುವ ಜನತೆಗೆ ಮಾರ್ಗದರ್ಶನ ಮಾಡುವಾಗ ಬಹಳ ಎಚ್ಚರಿಕೆಯ ಹೆಜ್ಜೆಗಳನ್ನು ಇಡಬೇಕಾದ ಅನಿವಾರ್ಯತೆ ಇದೆ, ಯುವಜನತೆಯ ಮನಸ್ಸನ್ನು ಇಂದಿನ ಜಗತ್ತು ನಾನಾ ಧುಶ್ಚಟಗಳಿಗ್ಗೆ ಸೆಳೆಯುತ್ತಿದೆ ಇದರಿಂದ ದೂರವಿರಿಸಿ […]
Author: KundaVahini Editor
ಸಂತ ಮೇರಿ ಕಾಲೇಜು ಶಿರ್ವ : ಜಲಸಂರಕ್ಷಣೆ ಮಾಹಿತಿ ಕಾರ್ಯಕ್ರಮ
ಉಡುಪಿ (ಮಾ.6): ಜಗತ್ತಿನಲ್ಲಿ ಮೂರನೇ ಯುದ್ಧ ಅಂತ ಹೆಸರಿಸುವುದಾದರೆ ಅದು ನೀರಿನ ಸಮಸ್ಯೆಯ ಯುದ್ದ. ಇಂದು ಪ್ರತಿಯೊಂದು ರಾಷ್ಟ್ರವೂ ನೀರಿನ ಅಭಾವವನ್ನು ಎದುರಿಸುತ್ತಿದೆ. ನೀರಿನ ಸಮೃದ್ಧಿಯಲ್ಲಿ ಭಾರತವು ವಿಶ್ವದಲ್ಲಿ ಎರಡನೇ ದೇಶವಾಗಿದೆ. ಆದರೆ ಅದರ ಸರಿಯಾದ ಬಳಕೆ ಮತ್ತು ಸಂರಕ್ಷಣೆ ಇಲ್ಲದೆ ನೀರಿನ ಅಭಾವವನ್ನು ನಾವಿಂದು ಎದುರಿಸಬೇಕಾಗಿದೆ. ಇದರ ನಿವಾರಣೆಯಾಗಬೇಕಾದರೆ ನಾವಿಂದು ಮಳೆ ನೀರನ್ನು ಸರಿಯಾದ ರೀತಿಯಲ್ಲಿ ಸಂರಕ್ಷಿಸಿ ಮರು ಬಳಕೆ ಮಾಡುವುದು ಅನಿವಾರ್ಯವಾಗಿದೆ ಎಂದು ರತ್ನ ಶ್ರೀ ಜೋಸೆಫ್ […]
ಮಾರ್ಚ್ 7 ರಂದು ಶ್ರೀ ಗುಹೇಶ್ವರ ದೇವಸ್ಥಾನ ಕೊಡಪಾಡಿ – ವಾರ್ಷಿಕ ಮಹೋತ್ಸವ ಕಾರ್ಯಕ್ರಮ
ಗಂಗೊಳ್ಳಿ (ಮಾ.6) ಕುಂದಾಪುರ ತಾಲೂಕಿನ ಪುರಾಣ ಪ್ರಸಿದ್ಧ ಶ್ರೀ ಗುಹೇಶ್ವರ ದೇವಸ್ಥಾನ ಕೊಡಪಾಡಿ ಶ್ರೀ ಗುಹೇಶ್ವರ ದೇವರ ಸನ್ನಿಧಿಯಲ್ಲಿ ವಾರ್ಷಿಕ ಮಹೋತ್ಸವದ ಪ್ರಯುಕ್ತ ಶ್ರೀ ಗುಹೇಶ್ವರ ದೇವರು, ಮಹಾಗಣಪತಿ, ಭದ್ರಕಾಳಿ ಮತ್ತು ನಾಗ ದೇವರಿಗೆ ಕಲಾಭಿವೃದ್ಧಿ ಕಾರ್ಯಕ್ರಮ ಇದೇ ಮಾರ್ಚ್ 07 ರ ಆದಿತ್ಯವಾರ ಬೆಳಿಗ್ಗೆ 9 ಗಂಟೆಗೆ ಜರುಗಲಿದೆ. ಮಧ್ಯಾಹ್ನ 12-30ಕ್ಕೆ ಮಹಾ ಮಂಗಳಾರತಿ ಹಾಗೂ ಪ್ರಸಾದ ವಿತರಣೆ ಮತ್ತು ಮಹಾ ಅನ್ನಸಂತರ್ಪಣೆ ನಡೆಯಲಿದೆ. ಹಾಗೆಯೇ ಮಾರ್ಚ್ 11 […]
ಶಿರ್ವ ಸಂತ ಮೇರಿ ಮಹಾವಿದ್ಯಾಲಯ – ಮಿನಿ ಪ್ರಾಜೆಕ್ಟ್ ಅಭಿವೃದ್ದಿ ಕಾರ್ಯಗಾರ
ಉಡುಪಿ (ಮಾ.6): ಇಂದು ಆಧುನಿಕ ಜಗತ್ತು ಸಂಪೂರ್ಣವಾಗಿ ಡಿಜಿಟಲೀಕರಣವಾಗುತ್ತಿದೆ. ತಂತ್ರಜ್ಞಾನದ ಅಭಿವೃದ್ದಿಯು ಹೊಸ ಆಲೋಚನೆಗಳ ಆವಿಷ್ಕಾರಗಳು, ಉತ್ತಮ ಸೌಲಭ್ಯಗಳು ಐಷಾರಾಮಿ ಜೀವನ ಶೈಲಿಗಳಿಗೆ ಕಾರಣವಾಗಿದೆ. ಇಂಟರ್ನೆಟ್ಗೆ ಸಂಪರ್ಕ ಹೊಂದಿದ ಅನೇಕ ಸಾಧನೆಗಳು ಜೀವನದ ವಿಧಾನವನ್ನು ಬದಲಾಯಿಸಿದೆ ಹಾಗು ಇಂತಹ ತಂತ್ರಜ್ಞಾನದ ಕಲಿಕೆಯು ವಿದ್ಯಾರ್ಥಿ ದೆಸೆಯಲ್ಲಿ ರೂಢಿಸಿಕೊಳುವ ಮೂಲಕ ವಿದ್ಯಾರ್ಥಿಗಳಲ್ಲಿ ಸಂಶೋಧನಾ ಮನೋಭಾವನೆ ಹೆಚ್ಚಲು ಪೂರಕ ಎಂದು ಬಂಟಕಲ್ ಕಾಲೇಜಿನ ಡಾ| ರಾಘವೇಂದ್ರ ಎಸ್. ರವರು ಹೇಳಿದರು. ಅವರು ಶಿರ್ವ ಸಂತಮೇರಿ […]
ಸೌಕೂರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ – ಸ್ವಾಗತ ಗೋಪುರ ಲೋಕಾರ್ಪಣೆ
ಕುಂದಾಪುರ (ಮಾ.4): ಕುಂದಾಪುರ ತಾಲೂಕಿನ ಪುರಾಣಪ್ರಸಿದ್ಧ ಹಾಗೂ ಕಾರಣೀಕ ಶಕ್ತಿ ಕೇಂದ್ರಗಳಲ್ಲಿ ಒಂದಾದ ಸೌಕೂರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಗೀತಾನಂದ ಫೌಂಡೇಷನ್ ಇದರ ಪ್ರವರ್ತಕರಾದ ಉದ್ಯಮಿ ಆನಂದ. ಸಿ. ಕುಂದರ್ ಹಾಗೂ ಕಾವ್ರಾಡಿ ಕಲ್ಲೋಳಿಮನೆ ಕೆ. ವಿ. ಬಾಲಚಂದ್ರ ಶೆಟ್ಟಿಯವರು ಕೊಡುಗೆ ರೂಪದಲ್ಲಿ ನಿರ್ಮಿಸಿಕೊಟ್ಟ ಸ್ವಾಗತ ಗೋಪುರದ ಲೋಕಾರ್ಪಣಾ ಕಾರ್ಯಕ್ರಮ ಮಾರ್ಚ್ 3 ರಂದು ನಡೆಯಿತು. ಈ ಕಾರ್ಯಕ್ರಮಕ್ಕೆ ಉಡುಪಿ ಪಲಿಮಾರು ಮಠದ ಶ್ರೀ ವಿದ್ಯಾಧೀಶ ಶ್ರೀಪಾದರು ಆಗಮಿಸಿ ಸ್ವಾಗತ ಗೋಪುರವನ್ನು ಲೋಕಾರ್ಪಣೆಗೊಳಿಸಿದರು. […]
ಶ್ರೀ ಮದ್ವ ವಾದಿರಾಜ ತಾಂತ್ರಿಕ ಮಹಾವಿದ್ಯಾಲಯ – ಜನೌಷಧಿ ಸಪ್ತಾಹ
ಉಡುಪಿ(ಮಾ.5): ಬಂಟಕಲ್ಲಿನ ಶ್ರೀ ಮಧ್ವ ವಾದಿರಾಜ ತಾಂತ್ರಿಕ ಮಹಾವಿದ್ಯಾಲಯದ ಮಹಿಳಾ ಸಬಲೀಕರಣ ಘಟಕ, ರೋಟರಿ ಕ್ಲಬ್ ಶಂಕರಪುರ ಮತ್ತು ಸದ್ಗುರು ಸೌಹಾರ್ದ ಸಹಕಾರಿ ಲಿಮಿಟೆಡ್, ಉಡುಪಿ ಇವರ ಸಂಯುಕ್ತ ಆಶ್ರಯದಲ್ಲಿ “ಜನೌಷಧಿ ಸಪ್ತಾಹ ದ ಅಂಗವಾಗಿ ಆರೋಗ್ಯ ಮಾಹಿತಿ ಕಾರ್ಯಗಾರವನ್ನು ಮಾರ್ಚ್3 ರಂದು ಕಾಲೇಜಿನ ಸಿಬ್ಬಂದಿಗಳಿಗೆ ಮತ್ತು ವಿಧ್ಯಾರ್ಥಿಗಳಿಗೆ ಆಯೋಜಿಸಲಾಗಿತ್ತು. ಈ ಕಾರ್ಯಗಾರವನ್ನು ಕಾಲೇಜಿನ ಪ್ರಾಂಶುಪಾಲರಾದ ಡಾ. ತಿರುಮಲೇಶ್ವರ ಭಟ್ ಉದ್ಘಾಟಿಸಿದರು.ಉಡುಪಿ ಉದ್ಯಾವರ ಎಸ್.ಡಿ.ಎಮ್. ಕಾಲೇಜಿನ ಆಯುರ್ವೇದ ಕಾಲೇಜಿನ ಸಹಾಯಕ […]
ಭಯವೆಂಬ ಕತ್ತಲಿನಿಂದ …. ಧೈರ್ಯವೆಂಬ ಬೆಳಕಿನೆಡೆಗೆ …..
ಹೆಣ್ಣನ್ನು ಪೂಜಿಸುವ ದೇಶ ನಮ್ಮದು. ಭಾರತಮಾತೆಯನ್ನು ತಾಯಿ ಎಂದು ಆರಾಧನೆ ಮಾಡುವ ನಾವು ಅನಾದಿ ಕಾಲದಿಂದಲೂ ಹೆಣ್ಣಿಗೆ ವಿಶೇಷ ಸ್ಥಾನಮಾನ ನೀಡುತ್ತಾ ಬಂದಿದ್ದೆವೆ.ಶೋಷಣೆ ,ಪುರುಷ ಪ್ರಧಾನ ಸಮಾಜದ ದಬ್ಬಾಳಿಕೆಯ ವಿರುದ್ಧ ನಿರಂತರ ಹೋರಾಟ ಮಾಡಿರುವ ಮಹಿಳೆಯರು,ಬ್ರಿಟಿಷರು ನಮ್ಮನ್ನು ಆಳುವ ಸಂದರ್ಭದಲ್ಲಿಯೂ ದೇಶಕ್ಕಾಗಿ ತಮ್ಮ ಪ್ರಾಣ ತ್ಯಾಗ ಮಾಡಿದ ಉದಾಹರಣೆಗಳು ನಮ್ಮ ಇತಿಹಾಸದಲ್ಲಿ ದಾಖಲಾಗಿದೆ. ಆದರೆ ಅಂತಹ ಹೆಮ್ಮೆಯ ಹೆಣ್ಣು ಮಕ್ಕಳ ಸ್ಥಿತಿ ಇವತ್ತಿನ ದಿನಗಳಲ್ಲಿ ಎನಾಗಿದೆ? ಸ್ವಾತಂತ್ರ್ಯ ಪೂರ್ವದಲ್ಲಿ ಮತ್ತು […]
ಡಾ| ಬಿ. ಬಿ. ಹೆಗ್ಡೆ ಕಾಲೇಜು : ಜಾಗೃತಿ ಕಾರ್ಯಕ್ರಮ
ಇಲ್ಲಿನ ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಮಾನವ ಹಕ್ಕುಗಳ ಘಟಕ, ರೋಟರಿ ದಕ್ಷಿಣ ಹಾಗೂ ಯುವ ಸ್ಪಂದನ ಉಡುಪಿ ಇವರ ಸಂಯುಕ್ತ ಆಶ್ರಯದಲ್ಲಿ ಪೋಕ್ಸೋ ಕಾಯ್ದೆ, ಮಾನವ ಹಕ್ಕುಗಳು ಮತ್ತು ರಸ್ತೆ ಸುರಕ್ಷತೆಯ ಕುರಿತು ವಿಶೇಷ ಉಪನ್ಯಾಸ ಕಾರ್ಯಕ್ರಮ ನಡೆಯಿತು.
ಇ. ಸಿ. ಆರ್ ಕಾಲೇಜು : ಉಪನ್ಯಾಸಕರ ಜೊತೆ ವಿದ್ಯಾರ್ಥಿಗಳ ಸಂವಾದ ಕಾರ್ಯಕ್ರಮ
ಇ .ಸಿ .ಆರ್ ಇನ್ಸ್ಟಿಟ್ಯೂಟ್ ಆಫ್ ಮ್ಯಾನೇಜ್ಮೆಂಟ್ ಸ್ಟಡೀಸ್ನಲ್ಲಿ ಉಪನ್ಯಾಸಕರ ಜೊತೆ ವಿದ್ಯಾರ್ಥಿಗಳ ಸಂವಾದ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.
ಡಾ|ಬಿ. ಬಿ. ಹೆಗ್ಡೆ ಕಾಲೇಜು : ಉಚಿತ ನ್ಯಾಪ್ಕಿನ್ ವಿತರಣೆ ಕಾರ್ಯಕ್ರಮ
ಇಲ್ಲಿನ ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜನ ಯುವ ರೆಡ್ಕ್ರಾಸ್ ಘಟಕ, ಮಹಿಳಾ ಘಟಕ ಹಾಗೂ ಭಾರತೀಯ ರೆಡ್ಕ್ರಾಸ್ ಕುಂದಾಪುರ ಘಟಕದ ಸಂಯುಕ್ತ ಆಶ್ರಯದಲ್ಲಿ ವಿದ್ಯಾರ್ಥಿನಿಯರಿಗೆ ಉಚಿತ ನ್ಯಾಪ್ಕಿನ್ ವಿತರಣೆ’ ಕಾರ್ಯಕ್ರಮ ಮಾರ್ಚ್ 4 ರಂದು ನಡೆಯಿತು.










