ಕುಂದಾಪುರ (ಮಾ.1): ಡಾ| ಬಿ.ಬಿ. ಹೆಗ್ಡೆ ಕಾಲೇಜು ಕುಂದಾಪುರ ಇದರ ಯಕ್ಷಗಾನ ಸಂಘದ ವತಿಯಿಂದ ಫೆಬ್ರವರಿ 27ರಂದು ಸಮೀಪದ ಭಂಡಾರ್ಕಾರ್ಸ್ ಕಾಲೇಜಿನ ಯಕ್ಷಗಾನ ವಸ್ತುಸಂಗ್ರಹಾಲಯಕ್ಕೆ ಭೇಟಿ ನೀಡಿದರು. ಈ ಸಂದರ್ಭದಲ್ಲಿ ಭಂಡಾರ್ಕಾರ್ಸ್ ಕಾಲೇಜಿನ ಯಕ್ಷಗಾನ ವಸ್ತುಸಂಗ್ರಹಾಲಯದ ಸಂಯೋಜಕರು ಹಾಗೂ ಇಂಗ್ಲಿಷ್ ಉಪನ್ಯಾಸಕ ಶಶಾಂಕ ಪಟೇಲ್ ಯಕ್ಷಗಾನದ ವಿವಿಧ ಮಾದರಿ ಮತ್ತು ಪರಿಕರಗಳ ಬಗ್ಗೆ ಮಾಹಿತಿ ನೀಡಿದರು. ಬಡಗು, ಬಡಾಬಡಗು ಹಾಗೂ ತೆಂಕುತಿಟ್ಟು ಯಕ್ಷಗಾನದ ವೈಶಿಷ್ಟತೆ ಕುರಿತು ವಿದ್ಯಾರ್ಥಿಗಳಿಗೆ ತಿಳಿಸಿದರು. ಡಾ.ಬಿ.ಬಿ […]
Author: KundaVahini Editor
ಕ್ಲೀನ್ ಕುಂದಾಪುರ ಪ್ರಾಜೆಕ್ಟ್ ವತಿಯಿಂದ 85ನೇ ವಾರದ ಸ್ವಚ್ಛತಾ ಕಾರ್ಯಕ್ರಮ
ಕರಾವಳಿಯ ಪ್ರಸಿದ್ಧ ಪ್ರವಾಸಿ ತಾಣ ಕುಂದಾಪುರದ ಕೋಡಿ ಕಡಲತೀರದಲ್ಲಿ ನಿರಂತರವಾಗಿ ಸ್ವಚ್ಛತಾ ಕಾರ್ಯಕ್ರಮ ನಡೆಸಿಕೊಂಡು ಬರುತ್ತಿರುವ ಕ್ಲೀನ್ ಕುಂದಾಪುರ ಪ್ರಾಜೆಕ್ಟ್ ವತಿಯಿಂದ 85ನೇ ವಾರದ ಸ್ವಚ್ಛತಾ ಕಾರ್ಯಕ್ರಮ ಫೆಬ್ರವರಿ 28ರಂದು ಜರುಗಿತು.
ಕರುನಾಡ ರತ್ನ ರಾಜ್ಯ ಪ್ರಶಸ್ತಿ ಪಡೆದ ಗಣೇಶ್ ಗಂಗೊಳ್ಳಿ
ಕುಂದಾಪುರ (ಮಾ.1) ಮಂಡ್ಯ ಜಿಲ್ಲೆಯ ಕರುನಾಡ ಸೇವಾ ಟ್ರಸ್ಟ್ ನೀಡುವ ಕರುನಾಡ ಸೇವ ರತ್ನ ವಾರ್ಷಿಕ ರಾಜ್ಯ ಪ್ರಶಸ್ತಿಯನ್ನು ಖ್ಯಾತ ಜಾನಪದ ಹಾಡುಗಾರ ಉಡುಪಿ ಜಿಲ್ಲಾ ಕನ್ನಡ ಜಾನಪದ ಪರಿಷತ್ ಇದರ ಜಿಲ್ಲಾಧ್ಯಕ್ಷ ಶ್ರೀ ಗಣೇಶ್ ಗಂಗೊಳ್ಳಿ ಇವರಿಗೆ ಮೈಸೂರಿನ ಪ್ರಸಿದ್ದ ಸಾಹಿತಿಗಳಾದ ಶ್ರೀ ಜಯಪ್ಪ ಹೊನ್ನಾಳಿಯವರು ದಿನಾಂಕ 28/02/2021 ರಂದು ಮೈಸೂರು ಕಲಾ ಮಂದಿರದ ಮನೆಯಂಗಳ ಸಭಾಭವನದಲ್ಲಿ ನಡೆದ ಸನ್ಮಾನ ಕಾರ್ಯಕ್ರಮದಲ್ಲಿ ಪ್ರಧಾನ ಮಾಡಿದರು. ಈ ಕಾರ್ಯಕ್ರಮದಲ್ಲಿ ಹಿರಿಯ […]
ಅಂಬೇಡ್ಕರ್ ಭವನ ನಿರ್ಮಾಣಕ್ಕೆ ಶಂಕು ಸ್ಥಾಪನೆ ನೆರವೇರಿಸಿದ ಶಾಸಕ ಬಿ.ಎಂ. ಸುಕುಮಾರ ಶೆಟ್ಟಿ
ವಂಡ್ಸೆ (ಮಾ.1) ಹಟ್ಟಿಯಂಗಡಿ ಕನ್ಯಾನ ಭಾಗದಲ್ಲಿ ಅಂಬೇಡ್ಕರ್ ಭವನ ನಿರ್ಮಾಣಕ್ಕೆ ಬೈಂದೂರಿನ ಶಾಸಕ ಬಿ.ಎಂ ಸುಕುಮಾರ ಶೆಟ್ಟಿ ಯವರು ಶಂಕು ಸ್ಥಾಪನೆ ನೆರವೇರಿಸಿದರು.. ಇಪ್ಪತ್ತು ಲಕ್ಷ ರೂಪಾಯಿ ಮೌಲ್ಯದ ಕಾಮಗಾರಿ ಇದಾಗಿದ್ದು ಶೀಘ್ರವಾಗಿ ನಿರ್ಮಾಣ ಕಾರ್ಯ ಆಗಲಿದೆ ಎಂದು ಅವರು ಹೇಳಿದರು. ಈ ಸಂಧರ್ಭದಲ್ಲಿ ಬೈಂದೂರು ಮಂಡಲ ಬಿಜೆಪಿ ಅಧ್ಯಕ್ಷರಾದ ದೀಪಕ್ ಕುಮಾರ್ ಶೆಟ್ಟಿ , ಗ್ರಾಮ ಪಂಚಾಯತ್ ಅಧ್ಯಕ್ಷರಾದ ಅಮೃತಾ ಶೆಟ್ಟಿ , ಉಪಾಧ್ಯಕ್ಷರಾದ ಪ್ರತಾಪ ಶೆಟ್ಟಿ ಹಾಗೂ […]
ಪ್ರಸಿದ್ದ ಶಿಲ್ಪಿ ಕಳಿ ಚಂದ್ರಯ್ಯ ಆಚಾರ್ಯ ರಿಗೆ ಸನ್ಮಾನ
ವಂಡ್ಸೆ (ಮಾ. 1): ಉಡುಪಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಹೆಸರಾಂತ ಶಿಲ್ಪಿ , ಕರ್ನಾಟಕದ ರಾಜ್ಯ ವಿಶ್ವಕರ್ಮ ಸಮುದಾಯಗಳ ಅಭಿವೃದ್ಧಿ ನಿಗಮ ಬೆಂಗಳೂರು ಇದರ ನಿರ್ದೇಶಕರಾದ ಕಳಿ ಚಂದ್ರಯ್ಯ ಆಚಾರ್ಯ ಇವರನ್ನು ಉಪ್ರಳ್ಳಿ ಶ್ರೀಕಾಳಿಕಾಂಬ ದೇವಸ್ಥಾನದ ವೇದಿಕೆಯಲ್ಲಿ ಬೈಂದೂರಿನ ಶಾಸಕ ಬಿಎಂ ಸುಕುಮಾರ್ ಶೆಟ್ಟಿ ಸನ್ಮಾನಿಸಿದರು. ಉಪ್ರಳ್ಳಿ ಮೂಡು ಮಠ ಶ್ರೀ ಕಾಳಿಕಾಂಬ ದೇವಸ್ಥಾನದ ಮುಕ್ತೇಶರರಾಗಿ ಸೇವೆ ಸಲ್ಲಿಸುತ್ತಿರುವ ಇವರು ವಿಶ್ವಕರ್ಮ ಸಮುದಾಯದ ಮುಖಂಡರಾಗಿದ್ದು ವಿವಿಧ ದೇವಾಲಯ ಅಡಳಿತ […]
ಗುಂಡ್ಮಿ ಅಂಬಾಗಿಲು ಕಾರು – ಬೈಕ್ ಡಿಕ್ಕಿ ಬೈಕ್ ಸವಾರ ಸ್ಥಳದಲ್ಲೇ ಮ್ರತ್ಯು
ಉಡುಪಿ (ಫೆ.28) ಸಾಸ್ತಾನದ ಗುಂಡ್ಮಿ ಅಂಬಾಗಿಲು ಬಳಿ ಕಾರೊಂದು ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಇಂದು ಬೆಳಿಗ್ಗೆ ಸಂಭವಿಸಿದೆ. ಕೋಟ ಸಮೀಪದ ಬನ್ನಾಡಿಯ ಸುಭಾಷ್ ಅಮೀನ್ (45) ಮೃತ ಬೈಕ್ ಸವಾರ. ಈತ ಸಿವಿಲ್ ಕಾಂಟ್ರಾಕ್ಟ್ ರಾಗಿದ್ದು, ಕೆಲಸದ ಸಲುವಾಗಿ ಬನ್ನಾಡಿಯಿಂದ ಉಡುಪಿ ಕಡೆ ಹೋಗುತ್ತಿದ್ದ ಸಂದರ್ಭದಲ್ಲಿ ಈ ದುರ್ಘಟನೆ ನಡೆದಿದೆ ಎನ್ನಲಾಗಿದೆ. ಅಪಘಾತ ನಡೆಸಿದ ಕಾರು ಚಾಲಕ ಕುಂದಾಪುರದ ಚರ್ಚ್ […]
ಹರೇಗೋಡು ಆರ್ಥಿಕ ಸಾಕ್ಷರತಾ ಆಂದೋಲನ ವಿಚಾರ ಸಂಕಿರಣ
ಆದಷ್ಟು ನಗದುರಹಿತ ವ್ಯವಹಾರ ನಡೆಸಿ ಕೇಂದ್ರ ಮತ್ತು ರಾಜ್ಯ ಸರ್ಕಾರದ ಸಹಾಯಧನವನ್ನು ಪಡೆದು ದೇಶದ ಆರ್ಥಿಕ ಚೇತರಿಕೆಗೆ ಜನತೆ ಶ್ರಮಿಸ ಬೇಕು ಎಂದು ಹೆಮ್ಮಾಡಿ ಗ್ರಾಮೀಣ ಬ್ಯಾಂಕ್ ಪ್ರಧಾನ ವ್ಯವಸ್ಥಾಪಕರಾದ ಶ್ರೀ ಸುಬ್ರಹ್ಮಣ್ಯ ರಾವ್ ಹೇಳಿದರು.
ಬಂಧ ಮುಕ್ತ.. ಇದು ಸ್ವಾವಲಂಬಿ ಬದುಕಿನ ಹುಡುಕಾಟ
ಇದೆಂಥಾ ವಿಪರ್ಯಾಸ ನೋಡಿ. ಓದಿನ್ನು ಮುಗಿಯದೇ ಇದ್ದ ಹುಡುಗಿ, ಊರ ಊಸಾಬರಿ ಅರಿಯದೇ ತನ್ನದೇ ತರಾತುರಿಯಲ್ಲಿದ್ದವಳಿಗೆ, ಪರಿಚಯಸ್ಥರು ಮನೆಯವರ ಮೇಲೆ ಹೇರುತ್ತಿದ್ದದ್ದು ಮದುವೆ ಎಂಬ ‘ಬಂಧನ ‘. ಆಡಿಕೊಳ್ಳೊರ ಬಾಯಿ ಮುಚ್ಚಿಸೋ ಪ್ರಯತ್ನದಲಿ ಹೆತ್ತವರು ಮಗಳ ಮೇಲೆ ಹೊರಿಸುತ್ತಿರೋ ಈ ‘ ಬಂಧನ ‘ ದ ಭಾರದಲಿ ಆಕೆ ಇನ್ನೇಷ್ಟು ನೊಂದು ಬೆಂದು ಬಂಧಿಯಾರಬಹುದು ನೀವೇ ಹೇಳಿ…!?
ಬಂಟಕಲ್ ಇಂಜಿನಿಯರಿಂಗ್ ಕಾಲೇಜು : ರಾಷ್ಟ್ರೀಯ ವಿಜ್ಞಾನ ದಿನಾಚರಣೆ
ಶ್ರೀ ಮಧ್ವ ವಾದಿರಾಜ ತಾಂತ್ರಿಕ ಮಹಾವಿದ್ಯಾಲಯದ ವಿಜ್ಞಾನ ವಿಭಾಗ ಹಾಗೂ ಕಾಲೇಜಿನ ಐಎಸ್ಟಿಇ ಘಟಕದ ಸಹಯೋಗದೊಂದಿಗೆ “ನ್ಯಾನೋ ತಂತ್ರಜ್ಞಾನ ಮತ್ತು ಅದರ ಅನ್ವಯಿಕೆಗಳು” ಎಂಬ ವಿಷಯದ ಬಗ್ಗೆ ವಿಶೇಷ ಉಪನ್ಯಾಸವನ್ನು ಶ್ರೇಷ್ಠ ಭಾರತೀಯ ಭೌತವಿಜ್ಞಾನಿ ಸರ್. ಸಿ. ವಿ ರಾಮನ್ ಅವರ ನೆನಪಿಗಾಗಿ “ರಾಷ್ಟ್ರೀಯ ವಿಜ್ಞಾನ ದಿನಾಚರಣೆ”ಯ ಅಂಗವಾಗಿ 26 ಫೆಬ್ರವರಿ 2021ರಂದು ಸಂಸ್ಥೆಯಲ್ಲಿ ಆಯೋಜಿಸಲಾಗಿತ್ತು
ಪವರ್ ಲಿಪ್ಟರ್ ಸತೀಶ್ ಖಾರ್ವಿಗೆ ಚಿನ್ನದ ಪದಕ
ಇಂದು ಸಾಲಿಗ್ರಾಮ ದಲ್ಲಿ ನಡೆದ ರಾಜ್ಯಮಟ್ಟದ ಪುರುಷರ ಪವರ್ ಲಿಫ್ಟಿಂಗ್ ಸ್ಪರ್ಧೆಯಲ್ಲಿ ಕುಂದಾಪುರ ಹರ್ಕ್ಯುಲೆಸ್ ಜಿಮ್ ನ ವ್ಯವಸ್ಥಾಪಕ ಸತೀಶ್ ಖಾರ್ವಿ ಒಟ್ಟು 540 ಕೆ.ಜಿ. ಭಾರವನ್ನು ಎತ್ತಿ ಚಿನ್ನದ ಪದಕ ಪಡೆದಿದ್ದಾರೆ.










