ಶ್ರೀ ಶಾರದ ಕಾಲೇಜು ಬಸ್ರೂರು ಇದರ ಐಕ್ಯೂಎಸಿ, ಸ್ವೀಪ್ ಕಮಿಟಿ ಹಾಗೂ ರಾಷ್ಟ್ರೀಯ ಸೇವಾ ಯೋಜನೆ ಘಟಕದ ಸಂಯುಕ್ತ ಆಶ್ರಯದಲ್ಲಿ ರಾಷ್ಟ್ರೀಯ ಮತದಾರರ ದಿನಾಚರಣೆಯನ್ನು ಜನವರಿ 25ರಂದು ಆಚರಿಸಲಾಯಿತು
Author: KundaVahini Editor
ಬ್ಯಾರಿಸ್ ಪ್ರಥಮ ದರ್ಜೆ ಕಾಲೇಜು ಕೋಡಿ, ಕುಂದಾಪುರ: ಎನ್.ಎಸ್.ಎಸ್. ಘಟಕ ಉದ್ಘಾಟನೆ
ಬ್ಯಾರೀಸ್ ಪ್ರಥಮ ದರ್ಜೆ ಕಾಲೇಜು ಕೋಡಿ ಕುಂದಾಪುರ ಇದರ 2020 -21 ಸಾಲಿನ ರಾಷ್ಟ್ರೀಯ ಸೇವಾ ಯೋಜನಾ ಘಟಕವನ್ನು ಬಿದ್ಕಲ್ ಕಟ್ಟೆ ಸರಕಾರಿ ಪದವಿ ಪೂರ್ವ ಕಾಲೇಜಿನ ರಾಜ್ಯಶಾಸ್ತ್ರ ಉಪನ್ಯಾಸಕ ಶ್ರೀ ರಾಘವೇಂದ್ರ ಕಿಣಿ ಉದ್ಘಾಟಿಸಿ ಎನ್.ಎಸ್.ಎಸ್. ಯೋಜನೆಯ ಉದ್ದೇಶ ಮತ್ತು ಪ್ರಯೋಜನಗಳ ಕುರಿತು ವಿದ್ಯಾರ್ಥಿಗಳಿಗೆ ತಿಳಿಸಿದರು.
ಶಿಕ್ಷ ಪ್ರಭಾ ಅಕಾಡೆಮಿ ಕುಂದಾಪುರ: ಮಾಹಿತಿ ಹಕ್ಕು ಕಾಯ್ದೆ ವಿಚಾರ ಸಂಕಿರಣ
ಮಾಹಿತಿ ಹಕ್ಕು ಕಾಯ್ದೆಯು ಭಾರತೀಯ ನಾಗರಿಕರಿಗಿರುವ ಒಂದು ಪ್ರಬಲ ಅಸ್ತ್ರವಾಗಿದ್ದು, ನಮ್ಮ ಆಡಳಿತ ವ್ಯವಸ್ಥೆಯ ಲೋಪದೋಷಗಳನ್ನು ಬಯಲಿಗೆಳೆಯಲು ಇರುವಂತಹ ಪ್ರಮುಖ ಮಾರ್ಗವಾಗಿದೆ ಎಂದು ಮುಖ್ಯಮಂತ್ರಿಗಳ ಮಾಜಿ ಕಾನೂನು ಸಲಹೆಗಾರರಾಗಿರುವ ಕೆ .ದಿವಾಕರ್ ಹೇಳಿದರು ಅವರು ಕುಂದಾಪುರದ ಕುಂದೇಶ್ವರ ರಸ್ತೆಯ ಶಿಕ್ಷ ಪ್ರಭಾ ಅಕಾಡೆಮಿ ಆಫ್ ಕಾಮರ್ಸ್ ಎಜುಕೇಶನ್ ಸಿ.ಎ , ಸಿ.ಎಸ್. ಮತ್ತು ಬ್ಯಾಂಕಿಂಗ್ ತರಬೇತಿ ಸಂಸ್ಥೆಯ ವಿದ್ಯಾರ್ಥಿಗಳಿಗೆ ಆಯೋಜಿಸಿದ ವಿಚಾರ ಸಂಕಿರಣವನ್ನು ಉದ್ಘಾಟಿಸಿ ಮಾಹಿತಿ ಹಕ್ಕು ಕಾಯ್ದೆ ಕುರಿತು […]
ಸಣ್ಣ ಕಥೆಗಳ ಸ್ಪರ್ಧೆ : ನರೇಂದ್ರ ಎಸ್ ಗಂಗೊಳ್ಳಿ ರವರ ಒಂದು ಚಪ್ಪಲಿಯ ಕಥೆ ಆಯ್ಕೆ
ಮೈಸೂರು ಅಸೋಸಿಯೇಷನ್ ಮುಂಬೈ ಸಂಸ್ಥೆ ಏರ್ಪಡಿಸಿದ್ದ ನೇಸರು ಜಾಗತಿಕ ಮಾಸ್ತಿ ಸ್ಮರಣಾರ್ಥ ಕನ್ನಡ ಸಣ್ಣ ಕಥೆಗಳ ಸ್ಪರ್ಧೆಯಲ್ಲಿ ಯುವ ಬರಹಗಾರ ನರೇಂದ್ರ ಎಸ್ ಗಂಗೊಳ್ಳಿ ಪ್ರೋತ್ಸಾಹಕ ಬಹುಮಾನದೊಂದಿಗೆ ನಗದನ್ನು ಪಡೆದಿದ್ದಾರೆ. ಸ್ಪರ್ಧೆಗೆ 130ಕ್ಕೂ ಅಧಿಕ ಕಥೆಗಳು ಬಂದಿದ್ದು ಇವರ ‘ಒಂದು ಚಪ್ಪಲಿಯ ಕಥೆ’ ಪ್ರೋತ್ಸಾಹಕ ಬಹುಮಾನಕ್ಕೆ ಪಾತ್ರವಾಗಿದೆ. ಇವರು ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಪದವಿಪೂರ್ವ ಕಾಲೇಜಿನಲ್ಲಿ ವಾಣಿಜ್ಯಶಾಸ್ತ್ರ ಉಪನ್ಯಾಸಕರಾಗಿ ಕಾರ್ಯವನ್ನು ನಿರ್ವಹಿಸುತ್ತಿದ್ದಾರೆ.
ರೋಟರಿ ಕ್ಲಬ್ ಗಂಗೊಳ್ಳಿ : ಸ್ವಾಮಿ ವಿವೇಕಾನಂದರ ಜನ್ಮದಿನಾಚರಣೆ
ಭಾರತದ ನೈಜ ಇತಿಹಾಸವನ್ನು ಅರಿತುಕೊಳ್ಳುವಲ್ಲಿ ನಾವು ಸ್ವಯಂಸ್ಪೂರ್ತಿಯಿಂದ ಕಾರ್ಯಪ್ರವೃತ್ತರಾಗಬೇಕಿದೆ ಆ ಮೂಲಕ ಭಾರತೀಯ ಸಂಸ್ಕೃತಿಯ ಅಪೂರ್ವ ಮೌಲ್ಯಗಳನ್ನು ಕಾಪಿಟ್ಟು ಈ ಜಗತ್ತಿಗೆ ಸಾರಿ ಹೇಳುವ ಕೆಲಸವಾಗಬೇಕಿದೆ ಎಂದು ಗಂಗೊಳ್ಳಿಯ ಸರಸ್ವತಿ ವಿದ್ಯಾಲಯದ ವಾಣಿಜ್ಯಶಾಸ್ತ್ರ ಉಪನ್ಯಾಸಕ, ಯುವ ಬರಹಗಾರ ನರೇಂದ್ರ ಎಸ್ ಗಂಗೊಳ್ಳಿ ಅಭಿಪ್ರಾಯಪಟ್ಟರು. ಅವರು ಇತ್ತೀಚೆಗೆ ಗಂಗೊಳ್ಳಿಯ ರೋಟರಿ ಕ್ಲಬ್ ಆಶ್ರಯದಲ್ಲಿ ನಡೆದ ಸ್ವಾಮಿ ವಿವೇಕಾನಂದರ ಜನ್ಮದಿನಾಚರಣೆಯ ಸಂದರ್ಭದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಮಾತನಾಡಿದರು. ಏಳಿ ಎದ್ದೇಳಿ ಎಚ್ಚರಗೊಳ್ಳಿ ಎನ್ನುವ ವಿವೇಕಾನಂದರ […]
ಶ್ರೀ ಚಿಕ್ಕಮ್ಮದೇವಿ ದೇವಸ್ಥಾನ ಕುಂದಾಪುರ : ಜನವರಿ 27 ಮತ್ತು 28 ರಂದು ವಾರ್ಷಿಕ ಗೆಂಡ ಮಹೋತ್ಸವ ಮತ್ತು ಪ್ರತಿಷ್ಟಾ ವರ್ಧಂತೋತ್ಸವ
ಶ್ರೀ ಚಿಕ್ಕಮ್ಮದೇವಿ ದೇವಸ್ಥಾನ ಶ್ರೀ ಕ್ಷೇತ್ರ ಕಳಿನಕಟ್ಟೆ ಚಿಕ್ಕಮ್ಮನ ಸಾಲು ರಸ್ತೆ ಕುಂದಾಪುರದ ಶ್ರೀ ಚಿಕ್ಕಮ್ಮ ದೇವಿ ಹಾಗೂ ಪರಿವಾರ ದೈವಗಳ ವಾರ್ಷಿಕ ಗೆಂಡ ಮಹೋತ್ಸವ, ಚಂಡಿಕಾ ಹೋಮ ಮತ್ತು ಧಾರ್ಮಿಕ ಹಾಗೂ ಪ್ರತಿಷ್ಟಾ ವರ್ಧಂತೋತ್ಸವ ಇದೇ ಜನವರಿ 27 ಮತ್ತು 28 ರಂದು ನಡೆಯಲಿದೆ. ವೇದ ಮೂರ್ತಿ ಕೇಂಜಿ ಶ್ರೀಧರ ತಂತ್ರಿಗಳು ಮತ್ತು ದೇವಾಲಯ ಅರ್ಚಕರಾದ ಕ್ರಷ್ಣಮೂರ್ತಿ ಅಡಿಗರ ನೇತ್ರತ್ವದಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನಡೆಯಲಿದ್ದು ಹೆಚ್ಚಿನ ಸಂಖ್ಯೆಯಲ್ಲಿ […]
ಡಾ. ಬಿ ಬಿ ಹೆಗ್ಡೆ ಕಾಲೇಜು: ನಿವೃತ್ತ ಯೋಧ ಗಣಪತಿ ಖಾರ್ವಿಯವರಿಗೆ ಸನ್ಮಾನ
ಕಾಲೇಜಿನ 72ನೇ ಗಣರಾಜ್ಯೋತ್ಸವ ಸಂಭ್ರಮ ಹಾಗೂ ಎನ್. ಸಿ.ಸಿ. ಘಟಕದ ಉದ್ಘಾಟನಾ ಕಾರ್ಯಕ್ರಮದಲ್ಲಿ ಕಾರ್ಗಿಲ್ ವೀರ, ಗಡಿ ಭಧ್ರತಾ ಪಡೆಯ ನಿವೃತ್ತ ಯೋಧ ಶ್ರೀ ಗಣಪತಿ ಖಾರ್ವಿ ಬಸ್ರೂರು ಇವರನ್ನು ಕಾಲೇಜು ವತಿಯಿಂದ ಸನ್ಮಾನಿಸಲಾಯಿತು.
ವಿದ್ಯಾರ್ಥಿಗಳಲ್ಲಿ ಶಿಸ್ತು ಮತ್ತು ದೇಶಭಕ್ತಿ ಬೆಳೆಸುವಲ್ಲಿ ಎನ್.ಸಿ.ಸಿ. ಯ ಪಾತ್ರ ಮಹತ್ವದ್ದಾಗಿದೆ – ಶ್ರೀ ಬಿ.ಎಂ. ಸುಕುಮಾರ್ ಶೆಟ್ಟಿ
ಯುವಜನತೆಯಲ್ಲಿ ಶಿಸ್ತು ಮತ್ತು ರಾಷ್ಟ್ರಭಕ್ತಿಯನ್ನು ಹೆಚ್ಚಿಸುವಲ್ಲಿ ಎನ್.ಸಿ.ಸಿ. ಯ ಪಾತ್ರ ಬಹುಮುಖ್ಯವಾದದ್ದು, ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಎನ್.ಸಿ.ಸಿ. ಗೆ ಸೇರ್ಪಡೆಗೊಂಡು ದೇಶದ ಸೈನ್ಯದಲ್ಲಿ ಗುರುತಿಸಿಕೊಳ್ಳಬೇಕು ಹಾಗೂ ದೇಶಸೇವೆಗೆ ಸದಾ ಸಿದ್ದರಾಗಬೇಕು ಎಂದು ಬೈಂದೂರಿನ ಶಾಸಕರು ಹಾಗೂ ಡಾ. ಬಿ.ಬಿ. ಹೆಗ್ಡೆ ಕಾಲೇಜಿನ ಅಧ್ಯಕ್ಷರಾಗಿರುವ ಶ್ರೀ ಬಿ.ಎಂ. ಸುಕುಮಾರ್ ಶೆಟ್ಟಿ ಹೇಳಿದರು.
ಡಾ. ಬಿ ಬಿ ಹೆಗ್ಡೆ ಕಾಲೇಜು: ರಾಷ್ಟ್ರೀಯ ಮತದಾರರ ದಿನಾಚರಣೆ
ಭಾರತ ಜಗತ್ತಿನ ಅತಿದೊಡ್ಡ ಪ್ರಜಾಪ್ರಭುತ್ವ ರಾಷ್ಟ್ರವಾಗಿದೆ. ಈ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಜನರ ಭಾಗವಹಿಸುವಿಕೆ ಪ್ರಮುಖವಾದದ್ದು, ಆ ನಿಟ್ಟಿನಲ್ಲಿ ದೇಶದ ಸಂವಿಧಾನ ಜನತೆಗೆ ನೀಡಿರುವ ಮತದಾನದ ಹಕ್ಕನ್ನು ಪ್ರತಿಯೊಬ್ಬ ಪ್ರಜೆಯೂ ಪ್ರಜ್ಞಾವಂತರಾಗಿ ಚಲಾಯಿಸಿದಾಗ ಮಾತ್ರ ಸದೃಢ ಭಾರತವನ್ನು ನಿರ್ಮಿಸಲು ಸಾಧ್ಯ ಎಂದು ಕಾಲೇಜಿನ ರಾಜ್ಯಶಾಸ್ತ್ರ ವಿಭಾಗದ ಮುಖ್ಯಸ್ಥ ಹಾಗೂ ಚುನಾವಣಾ ಸಾಕ್ಷರತಾ ಸಂಘದ ಸಂಯೋಜಕರಾದ ಶ್ರೀ ಪ್ರವೀಣ್ ಮೊಗವೀರ ಗಂಗೊಳ್ಳಿ ಹೇಳಿದರು. ಅವರು ಕಾಲೇಜಿನಲ್ಲಿ ಆಯೋಜಿಸಿದ್ದ ರಾಷ್ಟ್ರೀಯ ಮತದಾರರ ದಿನಾಚರಣೆ ಮಹತ್ವದ […]
ಡಾ ಬಿ.ಬಿ ಹೆಗ್ಡೆ ಕಾಲೇಜು: 72 ನೇ ಗಣರಾಜ್ಯೋತ್ಸವ
ಡಾ. ಬಿ.ಬಿ. ಹೆಗ್ಡೆ ಕಾಲೇಜಿನ 72ನೇ ಗಣರಾಜ್ಯೋತ್ಸವದ ಧ್ವಜಾರೋಹಣವನ್ನು ಬೈಂದೂರಿನ ಶಾಸಕರು ಹಾಗೂ ಕಾಲೇಜಿನ ಅಧ್ಯಕ್ಷರಾದ ಶ್ರೀ ಬಿ.ಎಮ್. ಸುಕುಮಾರ್ ಶೆಟ್ಟಿ ನೆರವೇರಿಸಿದರು.










