ಬ್ರಹ್ಮಾವರ (ಎ. 19): ಇಲ್ಲಿನ ಕ್ರಾಸ್ ಲ್ಯಾಂಡ್ ಪದವಿ ಕಾಲೇಜಿನ ಮಾನವ ಹಕ್ಕು ಘಟಕದ ಆಶ್ರಯದಲ್ಲಿ ಮಾನವ ಹಕ್ಕುಗಳ ಕುರಿತು ಅರಿವು ಎನ್ನುವ ವಿಶೇಷ ಉಪನ್ಯಾಸ ಕಾರ್ಯಕ್ರಮವನ್ನು ಏಪ್ರಿಲ್,19 ರಂದು ಕಾಲೇಜಿನಲ್ಲಿ ಹಮ್ಮಿಕೊಳ್ಳಲಾಯಿತು. ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ ಕುಂದಾಪುರದ ಡಾ. ಬಿ ಬಿ ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ವ್ಯವಹಾರ ಆಡಳಿತ ವಿಭಾಗದ ಸಹಾಯಕ ಪ್ರಾಧ್ಯಾಪಕರಾದ ಶ್ರೀ ಪ್ರವೀಣ್ ಮೊಗವೀರ ಗಂಗೊಳ್ಳಿ ಮಾತನಾಡಿ ಮಾನವ ಹಕ್ಕುಗಳ ಅರಿವು ಎಲ್ಲರಿಗೂ ಅಗತ್ಯ […]
Author: KundaVahini Editor
ರಥೋತ್ಸವದ ಸಾಂಸ್ಕೃತಿಕ ಮೆರುಗನ್ನು ಹೆಚ್ಚಿಸುವ ಕಾರ್ಯ ಶ್ಲಾಘನೀಯ – ಆನಂದ್ ಸಿ. ಕುಂದರ್
ಬಗ್ವಾಡಿ(ಎ. 14): ಬಗ್ವಾಡಿ ಶ್ರೀ ಮಹಿಷಾಸುರ ಮರ್ದಿನಿ ದೇಗುಲದ ಬ್ರಹ್ಮರಥೋತ್ಸವದ ಪ್ರಯುಕ್ತ ಬಗ್ವಾಡಿ ಉತ್ಸವ”ದ ಶೀರ್ಷಿಕೆಯಡಿಯಲ್ಲಿ ರಾಜ್ಯಮಟ್ಟದ ನೃತ್ಯ ಸ್ಪರ್ಧೆ ಹಾಗೂ ಸಾಂಸ್ಕೃತಿಕ ವೈಭವ ಹಮ್ಮಿಕೊಂಡಿರುವುದು ಶ್ಲಾಘನೀಯ. ಇದು ರಥೋತ್ಸವದ ಸಾಂಸ್ಕೃತಿಕ ಮೆರುಗನ್ನು ಹೆಚ್ಚಿಸುತ್ತದೆ. ಮುಂದಿನ ದಿನಗಳಲ್ಲಿಯೂ ಸಹ ಇದೇ ರೀತಿಯ ಉತ್ತಮ ಕಾರ್ಯಗಳು ನಿಮ್ಮಿಂದಾಗಲಿ ಎಂದು ಗೀತಾನಂದ ಫೌಂಡೇಶನ್ ಇದರ ಪ್ರವರ್ತಕರಾದ ಶ್ರೀ ಆನಂದ ಸಿ ಕುಂದರ್ ಹೇಳಿದರು. ಅವರು ಶ್ರೀ ಮಹಿಷಾಸುರ ಮರ್ದಿನಿ ಸಾಂಸ್ಕೃತಿಕ ಬಳಗ ಇವರ […]
ಕಲರ್ಸ್ ಕನ್ನಡದಲ್ಲಿ ಹೊಸ ಕೌಟುಂಬಿಕ ಧಾರಾವಾಹಿ ‘ಮುದ್ದು ಸೊಸೆ’
ಮಂಗಳೂರು (ಎ. 15 ): ‘ಮುದ್ದು ಸೊಸೆ’ ಕಲರ್ಸ್ ಕನ್ನಡದಲ್ಲಿ ವಿದ್ಯಾಗೆ ವಿದ್ಯೆ ಬೇಕು, ಮನೆಯವರಿಗೆ ಮದುವೆ ಸ್ಕೂಲ್ ಬೆಂಚಿಂದ ಹಸೆಮಣೆ ಏರುವ ವಿದ್ಯಾಳ ಬದುಕಿನ ಕತೆ ಕಲರ್ಸ್ ಕನ್ನಡ ವಾಹಿನಿ ಸದಾ ಪ್ರೇಕ್ಷಕರ ಹೃದಯವನ್ನು ಮುಟ್ಟುವ, ಮನಮಿಡಿಯುವ ಧಾರಾವಾಹಿಗಳನ್ನು ನೀಡುವ ಮೂಲಕ ಜನಪ್ರಿಯವಾಗಿದೆ. ಇದೀಗ, ಮತ್ತೊಂದು ಹೃದಯಸ್ಪರ್ಶಿ ಕತೆ ‘ಮುದ್ದು ಸೊಸೆ’ಯನ್ನು ಪ್ರೇಕ್ಷಕರಿಗೆ ತಲುಪಿಸುತ್ತಿದೆ. ತ್ರಿವಿಕ್ರಮ್ ನಾಯಕರಾಗಿ ಪ್ರತಿಮಾ ಠಾಕುರ್ ನಾಯಕಿಯಾಗಿರುವ, ಮುನಿ ಮತ್ತು ಹರಿಣಿ ಶ್ರೀಕಾಂತ್ ತಾರಾಗಣದ […]
ಎಚ್.ಎಮ್.ಎಮ್ & ವಿ.ಕೆ.ಆರ್ ಸ್ಮಾರಕ ಆಂಗ್ಲ ಮಾಧ್ಯಮ ಪ್ರೌಢಶಾಲೆ : ಪ್ಯಾಟಿ ಮಕ್ಕಳ್ ಹಳ್ಳಿ ಟೂರ್ ಸೀಸನ್ 3 – ದಿನ 6
ಕುಂದಾಪುರ (ಎ. 13 ) : ಕುಂದಾಪುರ ಎಜ್ಯುಕೇಶನ್ ಸೊಸೈಟಿ ಪ್ರವರ್ತಿತ ಎಚ್.ಎಮ್.ಎಮ್ ಆಂಗ್ಲ ಮಾಧ್ಯಮ ಪ್ರಾಥಮಿಕ ಮತ್ತು ವಿ.ಕೆ.ಆರ್ ಸ್ಮಾರಕ ಆಂಗ್ಲ ಮಾಧ್ಯಮ ಪ್ರೌಢಶಾಲೆಗಳಲ್ಲಿ ಆಯೋಜಿಸಿದ ಪ್ಯಾಟಿ ಮಕ್ಕಳ್ ಹಳ್ಳಿ ಟೂರ್ 2025 ಸೀಸನ್ 3 ಸಮ್ಮರ ಕ್ಯಾಂಪ್ನ 6ನೇ ದಿನದಂದು ಮಕ್ಕಳ ಸಂತೆ ನಡೆಯಿತು. ಪ್ರಗತಿಪರ ಕೃಷಿಕರಾದ ಗುಂಡು ಪೂಜಾರಿ ಹರವರಿ ಮಖ್ಯ ಅತಿಥಿಗಳಾಗಿ ಆಗಮಿಸಿದ್ದರು. ಮಕ್ಕಳು ಹಾಗೂ ಪೋಷಕರನ್ನು ಉದ್ದೇಶಿಸಿ ಕೃಷಿ ದೇಶದ ಬೆನ್ನೆಲುಬು, ಪ್ರತಿಯೊಬ್ಬರು […]
ಉಡುಪಿ ಜಿಲ್ಲಾ ಅತ್ಲೇಟಿಕ್ಸ್ ಕ್ರೀಡಾಕೂಟ -2025: ಕುಂದಾಪುರ ಟ್ರ್ಯಾಕ್ &ಫೀಲ್ಡ್ ಅತ್ಲೇಟಿಕ್ಸ್ ಅಕಾಡೆಮಿಯ ಕ್ರೀಡಾಪಟುಗಳಿಗೆ ಪದಕ
ಉಡುಪಿ(ಏ,14): ಚೇತನ ಸ್ಪ್ರಿಂಟರ್ಸ್ ಮತ್ತು ರನ್ನರ್ಸ್ ಇವರ ಸಹಯೋಗದೊಂದಿಗೆ ಕಿಡ್ಸ್ ಸ್ಪೋರ್ಟ್ಸ್ ಸಹಕಾರದೊಂದಿಗೆ ಉಡುಪಿ ಜಿಲ್ಲಾ ಅತ್ಲೇಟಿಕ್ಸ್ ಕ್ರೀಡಾಕೂಟ 2025 ರಲ್ಲಿ ಕುಂದಾಪುರ ಟ್ರ್ಯಾಕ್ ಅಂಡ್ ಫೀಲ್ಡ್ ಅತ್ಲೇಟಿಕ್ಸ್ ಅಕಾಡೆಮಿಯ 26 ಕ್ರೀಡಾಪಟುಗಳು ಪದಕ ಪಡೆದು ಸಾಧನೆಗೈದಿದ್ದಾರೆ. 8 ವರ್ಷ ವಯೋಮಾನದ ಹುಡುಗರ ವಿಭಾಗ :ಪ್ರತ್ಯುಶ್ ಜಿ ಶೆಟ್ಟಿ – 50 ಮೀಟರ್ ( ದ್ವಿತೀಯ ), ಬಾಲ್ ಥ್ರೋ (ತೃತೀಯ ), 4×100ಮೀಟರ್ ರಿಲೇ (ದ್ವಿತೀಯ ).ಆರಾಧನ್ ಪಿ […]
ಜನತಾ ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷರಾದ ಶ್ರೀ ಗಣೇಶ ಮೊಗವೀರರವರಿಗೆ ರಾಷ್ಟ್ರೀಯ ಮಟ್ಟದ ಸರ್ದಾರ್ ಪಟೇಲ್ ಯುನಿಟಿ ಪ್ರಶಸ್ತಿ ಪ್ರದಾನ
ಹೆಮ್ಮಾಡಿ( ಏ .14): ಏಪ್ರಿಲ್ 11ರಂದು ಗೋವಾದಲ್ಲಿ ನಡೆದ ಪ್ರತಿಷ್ಠಿತ ಟೊಪ್ನೆಟೆಕ್ ಪೌಂಡೇಶನ್ ನವರು ಕೊಡಮಾಡುವ ರಾಷ್ಟ್ರೀಯ ಮಟ್ಟದ ಪ್ರಶಸ್ತಿ ಸರ್ದಾರ್ ಪಟೇಲ್ ಯುನಿಟಿ ಅವಾರ್ಡ್ಸ್ 2025-“ಶಿಕ್ಷಣ ಮತ್ತು ರಾಷ್ಟ್ರ ನಿರ್ಮಾಣದಲ್ಲಿ ಅತ್ಯಂತ ಸ್ಪೂರ್ತಿದಾಯಕ ವ್ಯಕ್ತಿತ್ವ” ಪ್ರಶಸ್ತಿಯನ್ನು ಜನತಾ ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷರು ಹಾಗೂ ಜನತಾ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಶ್ರೀ ಗಣೇಶ ಮೊಗವೀರರಿಗೆ ಪ್ರದಾನ ಮಾಡಲಾಯಿತು. ಶ್ರೀಯುತರು ಇದುವರೆಗೆ ಶಿಕ್ಷಣ ಕ್ಷೇತ್ರಕ್ಕೆ ನೀಡಿದ ಕೊಡುಗೆ ಹಾಗೂ ಸೇವೆಯನ್ನು […]
ಕ್ರಿಯೇಟಿವ್ ಸಂಸ್ಥೆಯ ಉಚಿತ ಶಿಕ್ಷಣದ ‘ಹೊಂಗಿರಣ’ಯೋಜನೆಗೆ ಅರ್ಜಿ ಆಹ್ವಾನ
ಈ ಯೋಜನೆಯಡಿಯಲ್ಲಿ 100 ಅರ್ಹ ವಿದ್ಯಾರ್ಥಿಗಳು ಕ್ರಿಯೇಟಿವ್ ಸಂಸ್ಥೆಯ ಉಡುಪಿ ಶಾಖೆಯಲ್ಲಿ ಸಂಪೂರ್ಣ ಉಚಿತ ಶಿಕ್ಷಣ ಅಥವಾ ಪ್ರೋತ್ಸಾಹ ಧನದೊಂದಿಗೆ ಪಿ. ಯು ಶಿಕ್ಷಣ ಪಡೆಯುವ ಅವಕಾಶವಿರುತ್ತದೆ. ಈ ಯೋಜನೆಗೆ ವಿಜ್ಞಾನ ವಿಭಾಗ ಸೇರಲಿಚ್ಛಿಸುವ ಯಾವುದೇ ವಿದ್ಯಾರ್ಥಿ www.creativeedu.in ಮುಖಾಂತರ ಅರ್ಜಿ ಸಲ್ಲಿಸಬಹುದು. ವಿದ್ಯಾರ್ಥಿಗಳ ಸಾಧಿಸುವ ಛಲಕ್ಕೆ ಬೆನ್ನೆಲುಬಾಗಿ ನಿಂತಿರುವ ಕ್ರಿಯೇಟಿವ್ ಶಿಕ್ಷಣ ಪ್ರತಿಷ್ಠಾನ ಸಾಧನೆ ಮಾಡುವ ಹಂಬಲ ಇರುವ ವಿದ್ಯಾರ್ಥಿಗಳಿಗೆ ಸದಾ ಮಾರ್ಗದರ್ಶನ ನೀಡುತ್ತಿದೆ. ಪೋಷಕರ ಹಾಗೂ ಪಾಲಕರ […]
ಜ್ಞಾನಸುಧಾ ಶಿಕ್ಷಣ ಸಂಸ್ಥೆಗಳು : ಸಾಧಕ ವಿದ್ಯಾರ್ಥಿಗಳಿಗೆ ಸನ್ಮಾನ
ಕಾರ್ಕಳ/ಉಡುಪಿ(ಏ,10): ಅಜೆಕಾರ್ ಪದ್ಮಗೋಪಾಲ್ ಎಜ್ಯುಕೇಶನ್ ಟ್ರಸ್ಟ್ ನಡೆಸುತ್ತಿರುವ ಕಾರ್ಕಳ ಜ್ಞಾನಸುಧಾ ಹಾಗೂ ಉಡುಪಿ ಜ್ಞಾನಸುಧಾ ಪದವಿ ಪೂರ್ವ ಕಾಲೇಜುಗಳ 2024-25ನೇ ಸಾಲಿನ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ಉನ್ನತ ಸಾಧನೆ ಮಾಡಿದ ಸಾಧಕರನ್ನು ಸನ್ಮಾನಿಸಲಾಯಿತು. ರಾಜ್ಯಮಟ್ಟದಲ್ಲಿ 10ರೊಳಗಿನ ರ್ಯಾಂಕ್ ಗಳಿಸಿದ ಸಂಸ್ಥೆಯ ಒಟ್ಟು 29 ವಿದ್ಯಾರ್ಥಿಗಳನ್ನು ಗುರುತಿಸಿ ಗೌರವಿಸಲಾಯಿತು. ವಿಜ್ಞಾನ ವಿಭಾಗದಲ್ಲಿ 596 ಅಂಕ ಗಳಿಸಿ ರಾಜ್ಯಕ್ಕೆ 4ನೇ ಹಾಗೂ ಉಡುಪಿ ಜಿಲ್ಲೆಗೆ ಪ್ರಥಮ ಸ್ಥಾನಿಯಾದ ಕಾರ್ಕಳ ಜ್ಞಾನಸುಧಾದ ಆಸ್ತಿ […]
ಉಡುಪಿ ಜಿಲ್ಲಾ ಸಾಧಕರಿಗೆ ಪ್ರಾಂಶುಪಾಲರ ಸಂಘದ ಅಭಿನಂದನೆ
ಉಡುಪಿ(ಏ,10) : 2024-25ನೇ ಸಾಲಿನ ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ ಉಡುಪಿ ಜಿಲ್ಲೆಯು ಶೇ.93.90ರ ಫಲಿತಾಂಶದೊAದಿಗೆ ರಾಜ್ಯಕ್ಕೆ ಪ್ರಥಮ ಸ್ಥಾನಿಯಾಗಿದೆ. ಈ ಸಾಧನೆಗೆ ಜಿಲ್ಲಾಡಳಿತದ ಮಾರ್ಗದರ್ಶನ, ಉಪನಿರ್ದೇಶಕರ ನಿರ್ದೇಶನ, ಕಾಲೇಜು ಆಡಳಿತ ಮಂಡಳಿಗಳ ಹಾಗೂ ಪೋಷಕರ ಸಹಕಾರ ಮತ್ತು ಪ್ರಾಂಶುಪಾಲರ ಸಂಘದ ಕಾರ್ಯವೈಖರಿಯು ಕಾರಣೀಭೂತವಾಗಿದೆ. ವಿಜ್ಞಾನ ವಿಭಾಗದಲ್ಲಿ ಕಾರ್ಕಳ ಜ್ಞಾನಸುಧಾದ ಆಸ್ತಿ ಎಸ್ ಶೆಟ್ಟಿ (596), ವಾಣಿಜ್ಯ ವಿಭಾಗದಲ್ಲಿ ಕ್ರೈಸ್ತ ಕಿಂಗ್ ಕಾಲೇಜಿನ ಸುಧೀಕ್ಷಾ ಶೆಟ್ಟಿ ಮತ್ತು ವಿದ್ಯೋದಯ ಕಾಲೇಜಿನ ಪ್ರಣವಿ […]
ಗಂಗೊಳ್ಳಿ : ಶಿರಸಿ ಶ್ರೀ ಅಮ್ಮನವರಿಗೆ ರಜತ ಕಿರೀಟ ಮತ್ತು ರಜತ ಪ್ರಭಾವಳಿ ಸಮರ್ಪಣೆ
ಗಂಗೊಳ್ಳಿ(ಏ,07): ಇಲ್ಲಿನ ಬೈಲು ಮನೆಯಲ್ಲಿರುವ ಶಿರಸಿ ಶ್ರೀ ಅಮ್ಮನವರ ಮತ್ತು ಸಪರಿವಾರ ದೇವರುಗಳ ಸನ್ನಿಧಿಯಲ್ಲಿ ಇತ್ತೀಚೆಗೆ ಶಿರಸಿ ಶ್ರೀ ಅಮ್ಮನವರಿಗೆ ರಜತ ಕಿರೀಟ ಮತ್ತು ರಜತ ಪ್ರಭಾವಳಿ ಸಮರ್ಪಣಾ ಕಾರ್ಯಕ್ರಮವು ನೆರವೇರಿತು. ಶ್ರೀ ವೀರೇಶ್ವರ ದೇವಸ್ಥಾನದಿಂದ ಸನ್ನಿಧಾನದವರಿಗೆ ಮೆರವಣಿಗೆಯಲ್ಲಿ ಪೂರ್ಣ ಕುಂಭ ಸ್ವಾಗತದೊಂದಿಗೆ ರಜದ ಕಿರೀಟ ಮತ್ತು ರಜದ ಪ್ರಭಾವಳಿಯನ್ನು ತರಲಾಯಿತು. ಅರ್ಚಕರಾದ ರವೀಶ ಮತ್ತು ಬಳಗ ಧಾರ್ಮಿಕ ವಿಧಿ ವಿಧಾನಗಳನ್ನು ನೆರವೇರಿಸಿದರು. ಸನ್ನಿಧಾನದ ಅರ್ಚಕರಾದ ಆನಂದ ಬಿಲ್ಲವ ಅವರು […]










