ಕುಂದಾಪುರ (ನ. 04) : ಬಿ. ಎಂ ಸುಕುಮಾರ ಶೆಟ್ಟಿಯವರ ನೇತೃತ್ವದ ಕುಂದಾಪುರದ ಪ್ರತಿಷ್ಠಿತ ಶಿಕ್ಷಣ ಸಂಸ್ಥೆ ಕುಂದಾಪುರ ಎಜುಕೇಶನ್ ಸೊಸೈಟಿ ಪ್ರವರ್ತಿತ ಹಲ್ಸನಾಡು ಮಾದಪ್ಪಯ್ಯ ಸ್ಮಾರಕ ಆಂಗ್ಲ ಮಾಧ್ಯಮ ಪ್ರಾಥಮಿಕ ಶಾಲೆಯ 3ನೇ ತರಗತಿಯ ವಿದ್ಯಾರ್ಥಿನಿ ಛಾಯಾ ವಿಶ್ವನಾಥ್ ರಾಜ್ಯಮಟ್ಟದ ಅಬಾಕಸ್ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನವನ್ನು ಪಡೆದಿರುತ್ತಾಳೆ. ಐಡಿಯಲ್ ಪ್ಲೇ ಅಬಾಕಸ್ ಇಂಡಿಯಾ ಪ್ರೈವೇಟ್ ಲಿಮಿಟೆಡ್ ವತಿಯಿಂದ ಶ್ರೀ ಜಗದ್ಗುರು ಮುರುಘರಾಜೇಂದ್ರ ಬೃಹನಮಠ ಚಿತ್ರದುರ್ಗದಲ್ಲಿ ನಡೆದ 19ನೇ ಕರ್ನಾಟಕ […]
Author: KundaVahini Editor
ಬಿ. ಬಿ. ಹೆಗ್ಡೆ ಕಾಲೇಜು :ಮಾನವ ಜೀವನದಲ್ಲಿ ನೈತಿಕತೆ–ಮಾಹಿತಿ ಕಾರ್ಯಾಗಾರ
ಕುಂದಾಪುರ (ಅ.30): ಮನುಷ್ಯನ ಮನಸ್ಸಿನಲ್ಲಿ ಅಹಂಕಾರವು ತುಂಬಿರಬಾರದು. ಅಹಂಕಾರ ತುಂಬಿದ ಮನುಷ್ಯನ ಜೀವನವು ಅವನನ್ನು ಅಧೋಗತಿಯತ್ತ ಕೊಂಡೊಯ್ಯುವುದು. ಹಿರಿಯರು ಹಾಕಿಕೊಟ್ಟಂತಹ ನೀತಿ-ನಿಯಮಗಳನ್ನು ಗೌರವಿಸಿ ಪಾಲಿಸಿಕೊಂಡು ಬಂದಲ್ಲಿ ಮನುಷ್ಯ ಜೀವನ ಸಾಫಲ್ಯತೆಯನ್ನು ಸಾಧಿಸುತ್ತದೆ ಎಂದು ಸರಕಾರಿ ಪ್ರೌಢಶಾಲೆ ಸುಣ್ಣಾರಿಯ ನಿವೃತ್ತ ದೈಹಿಕ ಶಿಕ್ಷಕ ಶ್ರೀ ಕಿರಣ್ ಕುಮಾರ್ ಬಿ. ಹೇಳಿದರು. ಅವರು ಇಲ್ಲಿನ ಡಾ| ಬಿ.ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಮಾನವೀಯ ಮೌಲ್ಯಗಳು ಮತ್ತು ವೃತ್ತಿಪರ ನೀತಿ ಸಂಘ ಆಯೋಜಿಸಿದ […]
ಕೋಡಿ ಬ್ಯಾರೀಸ್ ನಲ್ಲಿ ದೀಪಾವಳಿ ಸಂಭ್ರಮಾಚರಣೆ
ಕುಂದಾಪುರ ( ನ .05): ಬ್ಯಾರೀಸ್ ಸಮೂಹ ಶಿಕ್ಷಣ ಸಂಸ್ಥೆಗಳು ಕೋಡಿ ಇದರ ಆಶ್ರಯದಲ್ಲಿ”ದೀಪಾವಳಿ ಆಚರಣೆ” ವಿಶೇಷವಾಗಿ ಜರುಗಿತು. ಬ್ಯಾರೀಸ್ ಸಮೂಹ ಶಿಕ್ಷಣ ಸಂಸ್ಥೆಗಳ ವಿಶ್ವಸ್ಥ ಮಂಡಳಿ ಸದಸ್ಯರಾದ ಸಿದ್ದೀಕ್ ಬ್ಯಾರಿ ಇವರು ಕಾರ್ಯಕ್ರಮವನ್ನುದ್ದೇಶಿಸಿ “ಹಬ್ಬಗಳು ಸೌಹಾರ್ದತೆಯ ಮೂಲ ಸಂಕೇತಗಳು, ನಮ್ಮ ಮನದಲ್ಲಿಯ ಅಜ್ಞಾನ ಹಾಗೂ ಅಂಧಕಾರಗಳು ದೂರವಾಗಿ ವಿಶ್ವಕುಟುಂಬಿಯಾಗಬೇಕು. ಇದರ ಮೂಲಕ ನಾವು ವಿಶ್ವಶಾಂತಿಯನ್ನು ಕಾಣುವಂತಾಗಬೇಕು ಎಂದು ನುಡಿದರು”. ಬ್ಯಾರೀಸ್ ವಿಶ್ವಸ್ಥ ಮಂಡಳಿ ಸದಸ್ಯರಾದ ಡಾ. ಆಸೀಫ್ ಬ್ಯಾರಿ […]
ಬಿ.ಬಿ. ಹೆಗ್ಡೆ ಕಾಲೇಜು: ದೀಪಾವಳಿ ಸಂಭ್ರಮಾಚರಣೆ
ಕುಂದಾಪುರ (ನ, 01): ಇಲ್ಲಿನ ಡಾ| ಬಿ.ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಕನ್ನಡ ವಿಭಾಗ ಹಾಗೂ ಕುಂದಗನ್ನಡ ಸಂಘದ ಜಂಟಿ ಆಶ್ರಯದಲ್ಲಿ ದೀಪಾವಳಿ ಸಂಭ್ರಮಾಚರಣೆ ನಡೆಯಿತು. ಮುಖ್ಯ ಅತಿಥಿಗಳಾಗಿ ಆಗಮಿಸಿದ ಕನ್ನಡ ಸಾಹಿತ್ಯ ಪರಿಷತ್ತು ಉಡುಪಿ ಜಿಲ್ಲೆಯ ಸಂಘಟನಾ ಕಾರ್ಯದರ್ಶಿ ಹಾಗೂ ಶಿಕ್ಷಕ ಸತೀಶ್ ವಡ್ಡರ್ಸೆ ಕುಂದಾಪುರದಲ್ಲಿ ಭೂಮಿಯೊಂದಿಗೆ ಬೆಸೆದುಕೊಂಡ ಈ ದೀಪಾವಳಿ ಕೃಷಿ ಸಂಬoಧಿಯಾಗಿ ಬೆಳೆದು ಬಂದಿದ್ದು. ಹೀಗಾಗಿ ನರಕ ಚತುರ್ದಶಿ, ಬಲಿ ಪೂಜೆ ಮತ್ತು ಗೋಪೂಜೆಗಳು […]
ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ಕನ್ನಡ ರಾಜ್ಯೋತ್ಸವ- ಶತಕಂಠ ಗಾಯನ
ಕುಂದಾಪುರ (ನ, 01): ಇಲ್ಲಿನ ಡಾ| ಬಿ. ಬಿ ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಕನ್ನಡ ವಿಭಾಗ ಹಾಗೂ ಕನ್ನಡ ಸಂಘದ ಜಂಟಿ ಆಶ್ರಯದಲ್ಲಿ ಕನ್ನಡ ರಾಜ್ಯೋತ್ಸವ ಪ್ರಯುಕ್ತ ವಿಶೇಷ ಉಪನ್ಯಾಸ, ಕನ್ನಡ ಗೀತ ಗಾಯನ ಹಾಗೂ ವಿದ್ಯಾರ್ಥಿಗಳಿಂದ ಶತಕಂಠ ಗಾಯನ ನಡೆಯಿತು. ಮುಖ್ಯ ಅತಿಥಿ ಮೂಡುಬಿದರೆ ಆಳ್ವಾಸ್ ಕಾಲೇಜಿನ ಕನ್ನಡ ಪ್ರಾಧ್ಯಾಪಕ ಡಾ| ಕೃಷ್ಣರಾಜ ಕರಬ ಅವರು ಮಾತನಾಡಿ, ಅನೇಕ ಪ್ರಾದೇಶಿಕ ಭಾಷೆಗಳಿಂದ ಕೂಡಿದ ಕನ್ನಡ ಜಗತ್ತಿನ ಶ್ರೀಮಂತ […]
ಜಿಲ್ಲಾ ಮಟ್ಟದ ಗುಡ್ಡಗಾಡು ಓಟ ಸ್ಫರ್ಧೆ :ಶ್ರೀ ಮೂಕಾಂಬಿಕಾ ದೇವಳದ ಸ್ವತಂತ್ರ ಪಿ ಯು ಕಾಲೇಜಿನ ವಿದ್ಯಾರ್ಥಿಗಳ ಸಾಧನೆ
ಕೊಲ್ಲೂರು ( ನ .04): ಶಾಲಾ ಶಿಕ್ಷಣ ಇಲಾಖೆ( ಪದವಿಪೂರ್ವ) ಉಡುಪಿ ಜಿಲ್ಲಾ ಮಟ್ಟದ ಗುಡ್ಡಗಾಡು ಓಟ ಸ್ಫರ್ಧೆಯಲ್ಲಿ ಶ್ರೀ ಮೂಕಾಂಬಿಕಾ ದೇವಳದ ಸ್ವತಂತ್ರ ಪದವಿಪೂರ್ವ ಕಾಲೇಜಿನ ದ್ವಿತೀಯ ವಾಣಿಜ್ಯ ವಿಭಾಗದ ನಾಗಮಣಿ ವೈ ಎಂ ಹಾಗೂ ಪ್ರಥಮ ವಾಣಿಜ್ಯ ವಿಭಾಗದ ಅಶ್ವಿನಿ ಪ್ರಶಸ್ತಿಯನ್ನು ಪಡೆದು ತುಮಕೂರಿನಲ್ಲಿ ನೆಡೆಯುವ ರಾಜ್ಯ ಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ. ವಿಜೇತ ಕ್ರೀಡಾಪಟುಗಳಿಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಹಾಗೂ ಸಿಬ್ಬಂದಿ ವರ್ಗದವರು ಅಭಿನಂದನೆ ಕೋರಿದ್ದಾರೆ.
ಅಬಾಕಸ್ : ರಾಷ್ಟ್ರಮಟ್ಟಕ್ಕೆ ಆಯ್ಕೆಯಾದ ಜನತಾ ನ್ಯೂ ಇಂಗ್ಲೀಷ್ ಮೀಡಿಯಂ ಸ್ಕೂಲ್ ನ ಆದ್ಯಾ ಕಾಂಚನ್
ಕಿರಿಮಂಜೇಶ್ವರ( ನ .04): ಐಡಿಯಲ್ ಪ್ಲೇ ಅಬಾಕಸ್ ಇಂಡಿಯಾ ಪ್ರೈವೇಟ್ ಲಿಮಿಟೆಡ್ ಆಯೋಜಿಸಿದ 19ನೆಯ ಕರ್ನಾಟಕ ರಾಜ್ಯ ಮಟ್ಟದ ಅಬಾಕಸ್ ಮತ್ತು ಮೆಂಟಲ್ ಅರಿತಮೇಟಿಕ್ ಸ್ಪರ್ಧೆಯಲ್ಲಿ ಜನತಾ ನ್ಯೂ ಇಂಗ್ಲೀಷ್ ಮೀಡಿಯಂ ಸ್ಕೂಲ್ ನ ವಿದ್ಯಾರ್ಥಿನಿ ಆದ್ಯಾ ಕಾಂಚನ್(4ನೇ ತರಗತಿ) ಭಾಗವಹಿಸಿ ಪ್ರಥಮ ಸ್ಥಾನ ಪಡೆದು ರಾಷ್ಟ್ರ ಮಟ್ಟಕ್ಕೆ ಆಯ್ಕೆ ಆಗಿರುತ್ತಾರೆ. ವಿದ್ಯಾರ್ಥಿಯ ಈ ಸಾಧನೆಗೆ ಆಡಳಿತ ಮಂಡಳಿ, ಮುಖ್ಯ ಶಿಕ್ಷಕಿ, ಬೋಧಕ ಮತ್ತು ಬೋಧಕೇತರ ವೃಂದದವರು ಅಭಿನಂದನೆಯನ್ನು ಸಲ್ಲಿಸಿದ್ದಾರೆ.
ಹೆಮ್ಮಾಡಿ :ಜನತಾ ಪಿ ಯು ಕಾಲೇಜು ಹಾಗೂ ಜನತಾ ಪ್ರೌಢಶಾಲೆಯಲ್ಲಿ ಕನ್ನಡ ರಾಜ್ಯೋತ್ಸವ
ಹೆಮ್ಮಾಡಿ( ನ .04):ಜನತಾ ಪದವಿಪೂರ್ವ ಕಾಲೇಜು ಹಾಗೂ ಜನತಾ ಪ್ರೌಢಶಾಲೆ ಹೆಮ್ಮಾಡಿ ಸಂಯುಕ್ತ ಆಶ್ರಯದಲ್ಲಿ 69ನೇ ಕನ್ನಡ ರಾಜ್ಯೋತ್ಸವ ಸಮಾರಂಭ ಅದ್ದೂರಿಯಾಗಿ ನೆರವೇರಿತು. ಜನತಾ ಪ್ರೌಢಶಾಲೆಯ ಮುಖ್ಯ ಶಿಕ್ಷಕರಾದ ಶ್ರೀ ಮಂಜು ಕಾಳಾವರರವರು ಅಧ್ಯಕ್ಷತೆ ವಹಿಸಿ ಕನ್ನಡದ ಮನಸ್ಸುಗಳೆಲ್ಲವೂ ಒಂದಾಗಿ ಕನ್ನಡದ ಹಿರಿಮೆಯನ್ನು ಜಗದಗಲ ಪಸರಿಸಬೇಕೆಂದರು.ಕಾಲೇಜಿನ ಉಪ-ಪ್ರಾಂಶುಪಾಲರಾದ ಶ್ರೀ ರಮೇಶ ಪೂಜಾರಿಯವರು ಕಾರ್ಯಕ್ರಮಕ್ಕೆ ಶುಭ ಹಾರೈಸಿದರು. ಕಾಲೇಜಿನ ಕನ್ನಡ ಉಪನ್ಯಾಸಕ ಶ್ರೀ ಉದಯ ನಾಯ್ಕರವರು ನಾಡು-ನುಡಿ-ಸಂಸ್ಕ್ರತಿಯ ಅನಾವರಣದ ಕುರಿತಾಗಿ ಮಾತನಾಡಿ […]
ರಾಜ್ಯ ಮಟ್ಟದ ಅಬಾಕಸ್ ಮೆಂಟಲ್ ಅರಿತ್ಮೇಟಿಕ್ ಸ್ಪರ್ಧೆ: ಲಕ್ಷ್ ರಾಜೇಶ್ ಪ್ರಥಮ
ಕುಂದಾಪುರ ( ನ .04): ಕಳೆದ ವರ್ಷ ಹಾಸನದಲ್ಲಿ ಜರುಗಿದ ಅಬಾಕಸ್ ಮತ್ತು ಮೆಂಟಲ್ ಅರಿತ್ಮೇಟಿಕ್ ರಾಜ್ಯ ಮಟ್ಟದ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ,ಕೊಯಮತ್ತೂರಿನಲ್ಲಿ ನಡೆದ ರಾಷ್ಟ್ರ ಮಟ್ಟದ ಸ್ಪರ್ಧೆಯಲ್ಲಿ ‘ಚಾಂಪಿಯನ್ ಆಫ್ ಚಾಂಪಿಯನ್’ ಹಾಗೂ ಮಹಾಬಲಿಪುರಂನಲ್ಲಿ ಜರುಗಿದ ಅಂತರಾಷ್ಟ್ರೀಯ ಮಟ್ಟದ ಸ್ಪರ್ಧೆಯಲ್ಲಿ ‘‘Gold prize winner in World City Cup-2023’ ’ ಬಹುಮಾನ ಪಡೆದ ಲಕ್ಷ್ ರಾಜೇಶ್ ಆಕ್ಟೋಬರ್ 27 ರಂದು ಚಿತ್ರದುರ್ಗದಲ್ಲಿ ನಡೆದ 19ನೇ ರಾಜ್ಯಮಟ್ಟದ […]
ಪ್ರದೀಪ ಕುಮಾರ್ ಬಸ್ರೂರು ಇವರಿಗೆ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ
ಕುಂದಾಪುರ ( ನ.01): ಉಡುಪಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿಯ ಸಮಾಜ ಸೇವಾ ವಿಭಾಗದಲ್ಲಿ ಪ್ರದೀಪ್ ಕುಮಾರ್ ಬಸ್ರೂರು ಆಯ್ಕೆಯಾಗಿದ್ದಾರೆ. ಉಡುಪಿ ಜಿಲ್ಲೆಯ ಸ್ವಾತಂತ್ರ್ಯ ಹೋರಾಟಗಾರರ ಮನೆ ಹುಡುಕಿ, ಅವರ ಫೋಟೋ, ಮಾಹಿತಿ ಸಂಗ್ರಹಿಸಿ ಕಾರ್ಯಕ್ರಮ ಆಯೋಜಿಸಿ ಅವರ ಮನೆಯವರಿಗೆ ರಾಷ್ಟ್ರಧ್ವಜ ನೀಡಿ, ಮನೆಗೆ ” ಸ್ವಾತಂತ್ರ್ಯ ಹೋರಾಟಗಾರ ರ ಮನೆ ಎನ್ನುವ ನಾಮಫಲಕ ಅಳವಡಿಸುವ ಮಹತ್ವದ ಕಾರ್ಯಕ್ರಮವನ್ನು ಇವರು ನಡೆಸಿದ್ದರು.










