ಗಂಗೊಳ್ಳಿ ( ಆ,30) :ಗಂಗೊಳ್ಳಿಯ ಸೇವಾ ಸಂಘ (ರಿ. ),ಸಾರ್ವಜನಿಕ ಶ್ರೀ ಶಾರದೋತ್ಸವ ಸಮಿತಿಯ ಸುವರ್ಣ ಮಹೋತ್ಸವದ ಅಂಗವಾಗಿ ಬಾಲ ಪ್ರತಿಭೆ ವೃಷಾoಕ್ ವಿ ಭೋಮ್ಕರ್ ಅವರಿಂದ ಯಕ್ಷಗಾನ ನೃತ್ಯ ಸೇವೆ ಶ್ರೀ ಶಾರದಾ ಮಂಟಪದಲ್ಲಿ ನಡೆಯಿತು. ಇವನು ವಿವೇಕ್ ಭೋಮ್ಕರ್ ಮತ್ತು ಶಿವಾನಿ ದಂಪತಿ ಪುತ್ರ.
Author: KundaVahini Editor
ಕಾರ್ಕಳ ಜ್ಞಾನಸುಧಾ: ತಾಲ್ಲೂಕು ಮಟ್ಟದ ವಿಜ್ಞಾನ ವಸ್ತು ಪ್ರದರ್ಶನ ಸಂಪನ್ನ
ಕಾರ್ಕಳ( ಆ.30): ಉಡುಪಿ ಜಿಲ್ಲಾ ಪಂಚಾಯತ್ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಉಡುಪಿ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ, ಕಾರ್ಕಳ ಹಾಗೂ ಕಾರ್ಕಳ ಜ್ಞಾನಸುಧಾ ಆಂಗ್ಲ ಮಾಧ್ಯಮ ಶಾಲೆ ಹಾಗೂ ಪ್ರೌಢಶಾಲೆ, ಗಣಿತ ನಗರ ಇವರ ಸಂಯುಕ್ತ ಆಶ್ರಯದಲ್ಲಿ ತಾಲ್ಲೂಕು ಮಟ್ಟದ ವಿಜ್ಞಾನ ವಸ್ತು ಪ್ರದರ್ಶನದ ಸಮಾರೋಪ ಸಮಾರಂಭ ಕಾರ್ಕಳ ಜ್ಞಾನಸುಧಾ ಆಂಗ್ಲ ಮಾಧ್ಯಮ ಶಾಲೆ ಹಾಗೂ ಪ್ರೌಢಶಾಲೆ, ಗಣಿತ ನಗರದಲ್ಲಿ ನಡೆಯಿತು. ಈ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಜ್ಞಾನಸುಧಾ […]
ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘ: ಪ್ರೌಢಶಾಲೆಗಳ ಶಿಕ್ಷಕರ ಕ್ಷೇತ್ರದ ನಿರ್ದೇಶಕರ ಚುನಾವಣೆಯಲ್ಲಿ ಶೇಖರ ಪೂಜಾರಿಯವರಿಗೆ ಗೆಲುವು
ಕುಂದಾಪುರ ( ಆ,30): ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘ( ರಿ.), ಬೆಂಗಳೂರು, ತಾಲೂಕು ಶಾಖೆ ಕುಂದಾಪುರ ಇದರ ಪ್ರೌಢಶಾಲೆಗಳ ಶಿಕ್ಷಕರ ಕ್ಷೇತ್ರದಿಂದ ನಿರ್ದೇಶಕರ ಚುನಾವಣೆ (2024 2029 ರ ಅವಧಿ) ಅಕ್ಟೋಬರ್ 28 ರಂದು ನಡೆಯಿತು. ಈ ಚುನಾವಣೆಯಲ್ಲಿ ಸ್ಪರ್ಧಿಸಿದ ಸರಕಾರಿ ಪ್ರೌಢ ಶಾಲೆ ಬಸ್ರೂರು ಇದರ ಸಹ ಶಿಕ್ಷಕರಾದ ಶ್ರೀ ಶೇಖರ ಪೂಜಾರಿಯವರು ಅತ್ಯಧಿಕ ಮತಗಳ ಅಂತರದೊಂದಿಗೆ ಗೆಲುವು ಸಾಧಿಸಿರುತ್ತಾರೆ.
ರಕ್ತದಾನಿಗಳು ವೈದ್ಯರು ಹಾಗೂ ರೋಗಿಗಳ ನಡುವಿನ ಸೇತುವೆ: ಡಾ. ಜಿ .ಎಸ್ ಚಂದ್ರಶೇಖರ್
ಉಡುಪಿ ( ಆ,30): ಅಭಯಹಸ್ತ ಚಾರಿಟೇಬಲ್ ಟ್ರಸ್ಟ್ ರಿ. ಉಡುಪಿ, ಉಡುಪಿ ಗ್ರೂಪ್ಸ್ ಆಫ್ ಇನ್ಸ್ ಟ್ಯೂಷನ್ ಮಣಿಪಾಲ, ಮಾಹೆ ಎನ್ ಎಸ್ ಎಸ್ ಯೂನಿಟ್ 1&2 ಎಂಐಟಿ ಮಣಿಪಾಲ, ಎಚ್ ಡಿ ಎಫ್ ಸಿ ಬ್ಯಾಂಕ್ ಮಂಗಳೂರು, ರಕ್ತನಿಧಿ ವಿಭಾಗ ಕೆಎಂಸಿ ಮಣಿಪಾಲ ಇವರ ಸಹಕಾರದಲ್ಲಿ ಅಕ್ಟೋಬರ್ 27 ರಂದು ರಕ್ತನಿಧಿ ವಿಭಾಗ ಕೆಎಂಸಿ ಮಣಿಪಾಲದಲ್ಲಿ ನಡೆದ ಸ್ವಯಂಪ್ರೇರಿತ ರಕ್ತದಾನ ಶಿಬಿರವನ್ನು ಆದರ್ಶ ಆಸ್ಪತ್ರೆ ಉಡುಪಿ ಇದರ ವೈದ್ಯಕೀಯ […]
ಭ್ರಮಾ ಲೋಕದ ಮೋಡಿಗಾರ-ಅಂತರಾಷ್ಟ್ರೀಯ ಜಾದುಗಾರ ಪ್ರಕಾಶ್ ಹೆಮ್ಮಾಡಿ
ಮ್ಯಾಜಿಕ್ ಎಂದರೆ ಯಾರಿಗೆ ಇಷ್ಟ ಇಲ್ಲ ಹೇಳಿ.! ಚಿಕ್ಕ ಮಕ್ಕಳಿಂದ ಹಿಡಿದು ವಯೋ ವೃದ್ಧರೂ ಕೂಡ ಇಷ್ಟಪಡುವ ಕಲೆ ಮ್ಯಾಜಿಕ್. ಕ್ಷಣಮಾತ್ರದಲ್ಲಿ ನೋಡುಗರ ಕಣ್ಣನ್ನು ವಂಚಿಸಿ ನಿರೀಕ್ಷೆಗೂ ಮೀರಿದ ಅದ್ಭುತ ಸೃಷ್ಟಿಸುವ ಕಲೆಯೇ ಜಾದು. ಜಾದು ಎನ್ನುವ ಅದ್ಭುತ ಕಲೆ ಜಗತ್ತಿನಾದ್ಯಂತ ಹರಡಿದ್ದು ಭಾರತದಲ್ಲಿಯೂ ಸಹ ತನ್ನ ಛಾಪನ್ನು ಮೂಡಿಸಿದೆ. ಹೊರನೋಟಕ್ಕೆ ಜನಪದೀಯವಾಗಿ ಕಂಡುಬಂದರೂ ಜಾದು ಕಲೆಯನ್ನು ಇವತ್ತು ವ್ಯವಸ್ಥಿತವಾಗಿ ಅಧ್ಯಯನ ಮಾಡಲಾಗುತ್ತದೆ. ಜಾದು ಎನ್ನುವ ಅದ್ಭುತ ಕಲೆಯನ್ನು ಸಿದ್ಧಿಸಿಕೊಳ್ಳುವುದು […]
ನರೇಂದ್ರ ಎಸ್ ಗಂಗೊಳ್ಳಿ ಅವರ ಕೃತಿ ಬಿಡುಗಡೆ
ಗಂಗೊಳ್ಳಿ( ಆ,25): ನವೆಂಬರ್ 01 ರಂದು ಕನ್ನಡ ಸಂಘ ಕಾಂತಾವರ (ರಿ ) ವತಿಯಿಂದ ಕಾಂತಾವರದಲ್ಲಿ ನಡೆಯಲಿರುವ ಕಾಂತಾವರ ಉತ್ಸವ 2024ರಲ್ಲಿ ಕಾಂತಾವರ ಕನ್ನಡ ಸಂಘದ ಸ್ಥಾಪಕ ಅಧ್ಯಕ್ಷರಾದ ಡಾ ನಾ. ಮೊಗಸಾಲೆ ಅವರ ಗೌರವ ಸಂಪಾದಕತ್ವದಲ್ಲಿ ಮತ್ತು ಹಿರಿಯ ಸಾಹಿತಿ ಡಾ. ಬಿ ಜನಾರ್ದನ್ ಭಟ್ ಅವರ ಸಂಪಾದಕತ್ವದಲ್ಲಿ ಅವಿಭಜಿತ ದಕ್ಷಿಣ ಕನ್ನಡ ಮತ್ತು ಕಾಸರಗೋಡು ಜಿಲ್ಲೆಯ ವಿವಿಧ ಕ್ಷೇತ್ರಗಳ ಸಾಧಕರನ್ನು ಪರಿಚಯಿಸುವ ‘ನಾಡಿಗೆ ನಮಸ್ಕಾರ’ ಗ್ರಂಥಮಾಲೆಯಡಿ […]
ಕಾರ್ಕಳ: ಜ್ಞಾನಸುಧಾ ಆಂಗ್ಲ ಮಾಧ್ಯಮ ಶಾಲೆಯ ಪ್ರತ್ಯುಶ್ ಶೆಟ್ಟಿ ಜಿಲ್ಲಾಮಟ್ಟಕ್ಕೆ
ಕಾರ್ಕಳ ( ಆ,25): ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಕಾರ್ಕಳ ಹಾಗೂ ಸರಕಾರಿ ಪ್ರಾಥಮಿಕ ಶಾಲೆ ಶಿರ್ಲಾಲು ಸೂಡಿ ಇವರ ಜಂಟಿ ಆಶ್ರಯದಲ್ಲಿ ನಡೆದ ಕಾರ್ಕಳ ಬಾಲಕ ಮತ್ತು ಬಾಲಕಿಯರ ತಾಲೂಕು ಮಟ್ಟದ ಪ್ರಾಥಮಿಕ ಶಾಲಾ ಮಕ್ಕಳ ಅಥ್ಲೆಟಿಕ್ ಮೀಟ್ 2024 -25 ನಲ್ಲಿ ಕಾರ್ಕಳ ಜ್ಞಾನಸುಧಾ ಆಂಗ್ಲ ಮಾಧ್ಯಮ ಶಾಲೆಯ 7ನೇ ತರಗತಿಯ ವಿದ್ಯಾರ್ಥಿಯಾದ ಪ್ರತ್ಯುಶ್ ಶೆಟ್ಟಿ 200 ಮೀ. ಓಟದಲ್ಲಿ ಪ್ರಥಮ ಸ್ಥಾನದೊಂದಿಗೆ ಚಿನ್ನದ […]
ಜನತಾ ಪಿ ಯು ಕಾಲೇಜಿನ ವಿದ್ಯಾರ್ಥಿಗಳು ಐ.ಟಿ. ಕ್ವಿಜ್ ನಲ್ಲಿ ರಾಜ್ಯ ಮಟ್ಟಕ್ಕೆ ಆಯ್ಕೆ
ಹೆಮ್ಮಾಡಿ(ಆ,25): ಪದವಿಪೂರ್ವ ಶಿಕ್ಷಣ ಇಲಾಖೆಯವರು ಆಯೋಜಿಸಿದ ಗ್ರಾಮೀಣ ಐ.ಟಿ.ಕ್ವಿಜ್ ವಿಭಾಗದಲ್ಲಿ ಜನತಾ ಪದವಿಪೂರ್ವ ಕಾಲೇಜಿನ ದ್ವಿತೀಯ ಪಿ.ಯು.ಸಿ.ವಿಜ್ಞಾನ ವಿಭಾಗದ ವಿದ್ಯಾರ್ಥಿಗಳಾದ ಅಭಿದೀಪ್ ಹೆಬ್ಬಾರ್ ಹಾಗೂ ನಿದಿಲ್ ಶೆಟ್ಟಿ ಜಿಲ್ಲಾ ಮಟ್ಟದಲ್ಲಿ ಪ್ರಥಮ ಸ್ಥಾನ ಪಡೆದು ರಾಜ್ಯ ಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ. ಸಾಧಕ ವಿದ್ಯಾರ್ಥಿಗಳಿಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಬೋಧಕ/ಬೋಧಕೇತರ ವೃಂದದವರು ಅಭಿನಂದನೆ ಸಲ್ಲಿಸಿದ್ದಾರೆ.
ಕ್ರಿಯೇಟಿವ್ ಕಾಲೇಜಿನಲ್ಲಿ ಯುವ ಬರಹಗಾರರ ಸಮ್ಮೇಳನ “ಅಕ್ಷರ ಯಾನ”
ಕಾರ್ಕಳ ( ಆ .25): ಯುವ ಮತ್ತು ಪ್ರತಿಭಾವಂತ ಬರಹಗಾರರನ್ನು ಪ್ರೋತ್ಸಾಹಿಸಲು ಕ್ರಿಯೇಟಿವ್ ಪುಸ್ತಕ ಮನೆ ಹಾಗೂ ವಿಕಾಸ ಸೇವಾ ಸಂಸ್ಥೆ ಕಾರ್ಕಳ ಇದರ ಸಹಯೋಗದಲ್ಲಿ ಕಾರ್ಕಳ ಕ್ರಿಯೇಟಿವ್ ಪದವಿಪೂರ್ವ ಕಾಲೇಜಿನ ಸಪ್ತಸ್ವರ ವೇದಿಕೆಯಲ್ಲಿ ಯುವ ಬರಹಗಾರರ ಸಮ್ಮೇಳನ ‘ಅಕ್ಷರಯಾನ – ಬರವಣಿಗೆಯ ಮೆರವಣಿಗೆ’ ಕಾರ್ಯಕ್ರಮವು ಅಕ್ಟೋಬರ್ 30 ರಂದು ನಡೆಯಲಿದೆ. ಈ ಸಮಾರಂಭದ ಉದ್ಘಾಟಕರಾಗಿ ಕರ್ನಾಟಕ ಸರ್ಕಾರದ ಮಾಜಿ ಸಚಿವರು, ಕಾರ್ಕಳ ವಿಧಾನಸಭಾ ಕ್ಷೇತ್ರದ ಶಾಸಕರಾಗಿರುವ ಶ್ರೀ ವಿ. […]
ಡಾl ಬಿ.ಬಿ ಹೆಗ್ಡೆ ಕಾಲೇಜು : ನೊವೇಶನ್ ಮ್ಯಾನೇಜ್ಮೆಂಟ್ ಫೆಸ್ಟ್-2024 ಸಂಪನ್ನ
ಕುಂದಾಪುರ (ಅ. 24): ಇಲ್ಲಿನ ಡಾI ಬಿ .ಬಿ ಹೆಗ್ಡೆ ಪ್ರಥಮ ದರ್ಜೆ ಕಾಲೇಜು ಇದರ ವ್ಯವಹಾರ ಆಡಳಿತ ವಿಭಾಗದ ಆಶ್ರಯದಲ್ಲಿ ಅಕ್ಟೋಬರ್, 24 ಹಾಗೂ 25 ರಂದು ನಡೆದ ನೊವೇಶನ್ ಮ್ಯಾನೇಜ್ಮೆಂಟ್ ಫೆಸ್ಟ್ -2024 ಸಂಪನ್ನಗೊಂಡಿತು. ಮುಖ್ಯ ಅತಿಥಿಗಳಾಗಿ ಆಗಮಿಸಿದ ಇಂಡಿಯನ್ ಓವರ್ಸೀಸ್ ಬ್ಯಾಂಕ್ ಕುಂದಾಪುರ ಶಾಖೆಯ ಪ್ರಬಂಧಕರುಗಳಾದ ಶ್ರೀ ನಿಶಿತ್ ಪಾರ್ಮರ್ ಹಾಗೂ ಶ್ರೀ ರವಿ ಆಗಮಿಸಿ ಕಾರ್ಯಕ್ರಮದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು. ಕಾಲೇಜಿನ ಪ್ರಾಂಶುಪಾಲರಾದ ಪ್ರೋ. […]










