ಸಾಲಿಗ್ರಾಮ ( ಸೆ.19): ರಾ ಫಿಟ್ನೆಸ್ ಸಂಸ್ಥೆ ಸಾಲಿಗ್ರಾಮ ಇವರು ಸೆಪ್ಟೆಂಬರ್ 14 ರಂದು ನೆಡೆಸಿದ ಕರ್ನಾಟಕ ರಾಜ್ಯ ಬೆಂಚ್ ಪ್ರೆಸ್ ( ಪವರ್ ಲಿಫ್ಟಿಂಗ್ )ಸ್ಪರ್ಧೆಯಲ್ಲಿ ಮೂಡ್ಲಕಟ್ಟೆ ಐಎಂಜೆ ವಿಜ್ಞಾನ ಮತ್ತು ವಾಣಿಜ್ಯ ಸಂಸ್ಥೆಯ ದ್ವಿತೀಯ ವರ್ಷದ ಬಿಸಿಎ ವಿದ್ಯಾರ್ಥಿ ಶ್ರೀ ಹರ್ಷ ಹೆಗ್ಡೆ ಯವರು ಸಬ್ ಜೂನಿಯರ್ 74 ಕೆಜಿ ವಿಭಾಗದಲ್ಲಿ ಭಾಗವಹಿಸಿ ಬೆಳ್ಳಿ ಪದಕ ವಿಜೇತರಾಗಿ ರಾಷ್ಟ್ರ ಮಟ್ಟಕ್ಕೆ ಆಯ್ಕೆ ಆಯ್ಕೆ ಆಗಿದ್ದಾರೆ. ಇವರು ಅಕ್ಟೋಬರ್ […]
Author: KundaVahini Editor
ಬಿ. ಬಿ. ಹೆಗ್ಡೆ ಕಾಲೇಜು : ಫ್ರೆಶರ್ಸ್ ಡೇ
ಕುಂದಾಪುರ (ಸೆ.18): ಪದವಿ ಶಿಕ್ಷಣವು ವಿದ್ಯಾರ್ಥಿಗಳ ಬದುಕಿನ ಸರ್ವತೋಮುಖ ಬೆಳವಣಿಗೆಗೆ ಪೂರಕ ವಾತಾವರಣವನ್ನು ಸೃಷ್ಟಿಸಿಕೊಡಬೇಕು. ಆ ಮೂಲಕ ಪ್ರಜ್ಞಾವಂತ ನಾಗರಿಕರಾಗಿ ಸಮಾಜಮುಖಿಯಾಗಿ ಬದುಕು ರೂಪಿಸಿಕೊಳ್ಳಲು ಈ ಪದವಿಯೊಂದಿಗೆ ಪಡೆಯುವ ಇತರ ಚಟುವಟಿಕೆಗಳು ಪೂರಕ. ಹೀಗಾಗಿ ಪಠ್ಯಪೂರಕವಾದ ಅಂಶಗಳನ್ನು ಸದ್ಬಳಕೆ ಮಾಡಿಕೊಂಡು ಉತ್ತಮ ಬದುಕು ರೂಪಿಸಿಕೊಳ್ಳಿ ಎಂದು ಕುಂದಾಪುರದ ಎಲೆಕ್ಟ್ರಿಕಲ್ ಗುತ್ತಿಗೆದಾರರಾದ ಶ್ರೀ ಕೆ.ಆರ್. ನಾಯ್ಕ್ ಹೇಳಿದರು. ಅವರು ಇಲ್ಲಿನ ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ನೂತನ […]
ಪ್ರತಿಭಾ ಕಾರಂಜಿಯಲ್ಲಿ ಮಿಂಚಿದ ಎಚ್ ಎಮ್ ಎಮ್ ಶಾಲೆಯ ಪ್ರತಿಭೆಗಳು
ಕುಂದಾಪುರ ( ಸೆ 18) : ಶ್ರೀ ಬಿ.ಎಮ್ ಸುಕುಮಾರ ಶೆಟ್ಟಿಯವರ ನೇತೃತ್ವದ ಕುಂದಾಪುರದ ಪ್ರತಿಷ್ಠಿತ ಶಿಕ್ಷಣ ಸಂಸ್ಥೆ. ಕುಂದಾಪುರ ಎಜುಕೇಶನ್ ಸೊಸೈಟಿ ಪ್ರವರ್ತಿತ ಹಲ್ಸನಾಡು ಮಾದಪ್ಪಯ್ಯ ಸ್ಮಾರಕ ಆಂಗ್ಲ ಮಾಧ್ಯಮ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳು, ಕರ್ನಾಟಕ ಸರ್ಕಾರ ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಮತ್ತು ಕ್ಷೇತ್ರ ಸಂಪನ್ಮೂಲ ಕೇಂದ್ರ, ಕುಂದಾಪುರ ಇದರ ವತಿಯಿಂದ ಆಯೋಜಿಸಲ್ಪಟ್ಟ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ 2024-25 ರಲ್ಲಿ ಭಾಗವಹಿಸಿ ಅನೇಕ […]
ರಾಜ್ಯ ಮಟ್ಟದ ಪವರ್ ಲಿಫ್ಟಿಂಗ್ ಸ್ಪರ್ಧೆ: ವೈಷ್ಣವಿ ಖಾರ್ವಿಗೆ ಎರಡು ಬೆಳ್ಳಿ ಪದಕ
ಗಂಗೊಳ್ಳಿ (ಸೆ.19): ರಾ .ಫಿಟ್ನೆಸ್ ಸಾಲಿಗ್ರಾಮ ಇವರ ವತಿಯಿಂದ ಸಾಲಿಗ್ರಾಮದ ಮೊಗವೀರ ಭವನದಲ್ಲಿ ನಡೆದ ರಾಜ್ಯ ಮಟ್ಟದ ಪವರ್ ಲಿಫ್ಟಿಂಗ್ ಬೆಂಚ್ ಪ್ರೆಸ್ ಸ್ಪರ್ಧೆಯ ಕ್ಲಾಸಿಕ್ ಮತ್ತು ಇಕ್ಯುಪ್ಡ್ 69 ಕೆಜಿ ಸಬ್ ಜೂನಿಯರ್ ವಿಭಾಗದಲ್ಲಿ ಗಂಗೊಳ್ಳಿಯ ವೈಷ್ಣವಿ ಖಾರ್ವಿ ಇವರು ಎರಡೂ ವಿಭಾಗಗಳಲ್ಲಿ ದ್ವಿತೀಯ ಸ್ಥಾನವನ್ನು ಗಳಿಸುವುದರ ಮೂಲಕ ಬೆಳ್ಳಿಯ ಪದಕಗಳನ್ನು ಗಳಿಸಿರುತ್ತಾರೆ. ಈಕೆ ಕುಂದಾಪುರದ ನ್ಯೂ ಹರ್ಕ್ಯುಲೆಸ್ ಜಿಮ್ (ರಿ )ಹಾಗೂ ಕಿಂಗ್ ಫಿಷರ್ ಸ್ಪೋರ್ಟ್ಸ್ ಕ್ಲಬ್( ರಿ […]
ಸರಸ್ವತಿ ವಿದ್ಯಾಲಯದ ಮಧುರ ಕರಾಟೆಯಲ್ಲಿ ರಾಜ್ಯ ಮಟ್ಟಕ್ಕೆ ಆಯ್ಕೆ
ಗಂಗೊಳ್ಳಿ ( ಸೆ.19): ಶಾಲಾ ಶಿಕ್ಷಣ ಇಲಾಖೆ ಪದವಿ ಪೂರ್ವ ಮತ್ತು ಎಸ್.ಎನ್.ವಿ. ಪದವಿಪೂರ್ವ ಕಾಲೇಜು, ಕಾರ್ಕಳ ಇವರ ಜಂಟಿ ಆಶ್ರಯದಲ್ಲಿ ಕಾರ್ಕಳದಲ್ಲಿ ನಡೆದ ಉಡುಪಿ ಜಿಲ್ಲಾ ಮಟ್ಟದ ಬಾಲಕ ಬಾಲಕಿಯರ ಪದವಿ ಪೂರ್ವ ಕಾಲೇಜು ವಿದ್ಯಾರ್ಥಿಗಳ ಕರಾಟೆ ಪಂದ್ಯಾಟದ 52 ಕೆಜಿ ವಿಭಾಗದಲ್ಲಿ ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿ ಮಧುರ ಪ್ರಥಮ ಸ್ಥಾನವನ್ನು ಗಳಿಸಿ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿರುತ್ತಾಳೆ.\ ಈಕೆ ಸುರೇಶ್ ಎಂ ತಾಂಡೇಲ […]
ಹೆಮ್ಮಾಡಿಯ ಜನತಾ ಪಿ.ಯು ಕಾಲೇಜಿನ ಶ್ರುತಿಕಾ ಶೆಟ್ಟಿ ರಾಜ್ಯ ಮಟ್ಟಕ್ಕೆ ಆಯ್ಕೆ
ಹೆಮ್ಮಾಡಿ(ಸೆ.19): ಕರ್ನಾಟಕ ರಾಜ್ಯ ಸಹಕಾರ ಮಹಾ ಮಂಡಳಿ ನಿ. ಬೆಂಗಳೂರು ಹಾಗೂ ಉಡುಪಿ ಜಿಲ್ಲಾ ಸಹಕಾರಿ ಯೂನಿಯನ್ ನಿ. ಉಡುಪಿ ಇವರ ಸಂಯುಕ್ತ ಆಶ್ರಯದಲ್ಲಿ ಪದವಿಪೂರ್ವ ವಿದ್ಯಾರ್ಥಿಗಳಿಗೆ ಆಯೋಜಿಸಿದ ಜಿಲ್ಲಾ ಮಟ್ಟದ ಕನ್ನಡ ಚರ್ಚಾ ಸ್ಪರ್ಧೆಯಲ್ಲಿ ಜನತಾ ಪದವಿಪೂರ್ವ ಕಾಲೇಜಿನ ದ್ವಿತೀಯ ಪಿ.ಯು.ಸಿ.ವಿಜ್ಞಾನ ವಿಭಾಗದ ವಿದ್ಯಾರ್ಥಿನಿ ಶ್ರುತಿಕಾ ಶೆಟ್ಟಿ ಭಾಗವಹಿಸಿ,ಜಿಲ್ಲೆಗೆ ಪ್ರಥಮ ಸ್ಥಾನ ಪಡೆದು ರಾಜ್ಯ ಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿರುತ್ತಾಳೆ. ವಿದ್ಯಾರ್ಥಿನಿಯ ಈ ಸಾಧನೆಗೆ ಕಾಲೇಜಿನ ಆಡಳಿತ ಮಂಡಳಿ,ಪ್ರಾಂಶುಪಾಲರು, ಬೋಧಕ/ಬೋಧಕೇತರ […]
ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿಯಲ್ಲಿ 31 ಪ್ರಶಸ್ತಿಗಳನ್ನು ಪಡೆದ ಜನತಾ ನ್ಯೂ ಇಂಗ್ಲೀಷ್ ಮೀಡಿಯಂ ಸ್ಕೂಲ್ ನ ವಿದ್ಯಾರ್ಥಿಗಳು
ಕಿರಿಮಂಜೇಶ್ವರ( ಸೆ,18): ಕರ್ನಾಟಕ ಸರ್ಕಾರ ,ಶಾಲಾ ಶಿಕ್ಷಣ ಇಲಾಖೆ ಕೇಂದ್ರ ಶಿಕ್ಷಣಾಧಿಕಾರಿಗಳ ಕಚೇರಿ ಮತ್ತು ಕ್ಷೇತ್ರ ಸಂಪನ್ಮೂಲ ಕೇಂದ್ರ ಬೈಂದೂರು ,ಇವರ ಸಹಭಾಗಿತ್ವದಲ್ಲಿ ಜನತಾ ನ್ಯೂ ಇಂಗ್ಲೀಷ್ ಮೀಡಿಯಂ ಸ್ಕೂಲ್ ನಲ್ಲಿ ನಡೆದ ,ಕಿರಿಮoಜೇಶ್ವರ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿಯಲ್ಲಿ ಜನತಾ ನ್ಯೂ ಇಂಗ್ಲೀಷ ಮೀಡಿಯಂ ಸ್ಕೂಲ್ ನ ವಿದ್ಯಾರ್ಥಿಗಳು ವೈಯಕ್ತಿಕ ಹಾಗೂ ಸಾಮೂಹಿಕ ಸ್ಪರ್ಧೆಗಳಲ್ಲಿ ಒಟ್ಟು 31 ಪ್ರಶಸ್ತಿಗಳನ್ನು ಪಡೆದುಕೊಂಡಿರುತ್ತಾರೆ. ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿಯಲ್ಲಿ ನಮ್ಮ ವಿದ್ಯಾರ್ಥಿಗಳು […]
ಕಾರ್ಕಳ ಜ್ಞಾನಸುಧಾ ಸಂಸ್ಥೆಯ ವಿದ್ಯಾರ್ಥಿಗಳು ರಾಜ್ಯಮಟ್ಟಕ್ಕೆ ಆಯ್ಕೆ
ಉಡುಪಿ( ಸೆ.18): ಶಾಲಾ ಶಿಕ್ಷಣ ಇಲಾಖೆ ಮತ್ತು ಉಡುಪಿಯ ಎಂ.ಜಿ.ಎಂ ಕಾಲೇಜಿನಸಂಯುಕ್ತ ಆಶ್ರಯದಲ್ಲಿ ನಡೆದ ಉಡುಪಿ ಜಿಲ್ಲಾ ಮಟ್ಟದ ಬ್ಯಾಡ್ಮಿಂಟನ್ ಸ್ಪರ್ಧೆಯಲ್ಲಿ ಕಾರ್ಕಳ ಜ್ಞಾನಸುಧಾ ಪದವಿ ಪೂರ್ವ ಕಾಲೇಜಿನ ದ್ವಿತೀಯ ಪಿ.ಯು.ಸಿ ವಿಜ್ಞಾನ ವಿಭಾಗದ ವಿಶ್ವ ವಿನಾಯಕ ಹಾಗೂ ಅನನ್ಯ ವಿ. ಶೆಟ್ಟಿ ರಾಜ್ಯಮಟ್ಟಕ್ಕೆ ಆಯ್ಕೆಗೊಂಡಿದ್ದಾರೆ. ಇವರ ಸಾಧನೆಗೆ ಜ್ಞಾನಸುಧಾ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಡಾ.ಸುಧಾಕರ್ ಶೆಟ್ಟಿಯವರು, ಸಿ.ಇ.ಒ ಮತ್ತು ಪ್ರಾಂಶುಪಾಲ ದಿನೇಶ್ ಎಂ. ಕೊಡವೂರುರವರು ಅಭಿನಂದಿಸಿ ಶುಭ ಹಾರೈಸಿದ್ದಾರೆ.
ಹೆಮ್ಮಾಡಿಯ ಜನತಾ ಪಿ ಯು ಕಾಲೇಜಿನ ಬಾಲಕರ ವಾಲಿಬಾಲ್ ತಂಡ ಜಿಲ್ಲಾ ಮಟ್ಟಕ್ಕೆ ಆಯ್ಕೆ
ಹೆಮ್ಮಾಡಿ(ಸೆ.17): ಪದವಿಪೂರ್ವ ಶಿಕ್ಷಣ ಇಲಾಖೆ ಮತ್ತು ಶ್ರೀ ವೆಂಕಟರಮಣ ಪದವಿಪೂರ್ವ ಕಾಲೇಜು ಕುಂದಾಪುರ ಇವರ ಸಂಯುಕ್ತ ಆಶ್ರಯದಲ್ಲಿ ನಡೆದ ಕುಂದಾಪುರ ತಾಲೂಕು ಪದವಿಪೂರ್ವ ಬಾಲಕ/ಬಾಲಕಿಯರ ವಾಲಿಬಾಲ್ ಪಂದ್ಯಾಟದಲ್ಲಿ ಜನತಾ ಪದವಿಪೂರ್ವ ಕಾಲೇಜಿನ ಬಾಲಕರ ವಾಲಿಬಾಲ್ ತಂಡ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟದ ಪಂದ್ಯಾಟಕ್ಕೆ ಆಯ್ಕೆಯಾಗಿದ್ದಾರೆ. ಸಾಧಕ ವಿದ್ಯಾರ್ಥಿಗಳಿಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಬೋಧಕ/ಬೋಧಕೇತರ ವೃಂದದವರು ಅಭಿನಂದನೆ ಸಲ್ಲಿಸಿದ್ದಾರೆ.
ನಾರಾಯಣ ಗುರುಗಳ ಚಿತ್ರ ಬಿಡಿಸುವ ಸ್ಪರ್ಧೆಯಲ್ಲಿ ಸಂಜಿತ್ ಎಂ ದೇವಾಡಿಗ ಪ್ರಥಮ
ಬೈಂದೂರು(ಸೆ,17): ಭಾರತೀಯ ಜನತಾ ಪಾರ್ಟಿ ಬೈಂದೂರು ಮಂಡಲ ಹಿಂದುಳಿದ ವರ್ಗಗಳ ಮೋರ್ಚ ನಾರಾಯಣ ಗುರುಗಳ 170ನೇ ಜನ್ಮದಿನಾಚರಣೆ ಅಂಗವಾಗಿ ನಾಗೂರಿನಲ್ಲಿ ಏರ್ಪಡಿಸಿದ್ದ ನಾರಾಯಣ ಗುರುಗಳ ಚಿತ್ರ ಬಿಡಿಸುವ ಸ್ಪರ್ಧೆಯ ಆರು ಮತ್ತು ಏಳನೇ ತರಗತಿಯ ವಿಭಾಗದಲ್ಲಿ ಗಂಗೊಳ್ಳಿಯ ಕೊಂಚಾಡಿ ರಾಧಾ ಶೆಣೈ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ 6ನೇ ತರಗತಿಯ ವಿದ್ಯಾರ್ಥಿ ಸಂಜಿತ್ ಎಮ್ ದೇವಾಡಿಗ ಪ್ರಥಮ ಸ್ಥಾನ ಗಳಿಸಿದ್ದಾರೆ. ಇವರು ಸ್ಯಾಕ್ಸೋಫೋನ್ ಕಲಾವಿದ ಮಾದವ ದೇವಾಡಿಗ ಮತ್ತು ಉಪನ್ಯಾಸಕಿ […]










