ಕುಂದಾಪುರ (ಆ ,24): ಮೂಡ್ಲಕಟ್ಟೆ ಐಎಂಜೆ ವಿಜ್ಞಾನ ಮತ್ತು ವಾಣಿಜ್ಯ ಸಂಸ್ಥೆಯಲ್ಲಿ “ಫ್ರೆಷರ್ಸ್ ಡೇ” ಕಾರ್ಯಕ್ರಮವನ್ನು ಆಗಸ್ಟ್ 24 ರಂದು ಆಯೋಜಿಸಲಾಗಿತ್ತು. ಪ್ರಥಮ ವರ್ಷದ ವಿದ್ಯಾರ್ಥಿಗಳಿಗೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಐಎಂಜೆ ಸಂಸ್ಥೆಯ ಬ್ರ್ಯಾಂಡ್ ಬಿಲ್ಡಿಂಗ್ ನ ನಿರ್ದೇಶಕರಾದ ಡಾ. ರಾಮಕೃಷ್ಣ ಹೆಗಡೆ, ನಮ್ಮ ಸಂಸ್ಥೆಯು ವಿದ್ಯಾರ್ಥಿಗಳ ಸರ್ವಾಂಗೀಣ ಅಭಿವೃದ್ಧಿಗೆ ಸದಾ ಶ್ರಮಿಸುತ್ತಿದೆ, ಕಾಲೇಜಿನ ಪ್ರಾರ್ಥನೆಯ “ಬದುಕ ಕಲಿಯಲು ಬೇಕು ಬದುಕ ಸವಿಯಲು ಬೇಕು”ಎಂಬ ಸಾಲುಗಳನ್ನು ವಿದ್ಯಾರ್ಥಿಗಳೆಲ್ಲ ಅರ್ಥೈಸಿಕೊಂಡರೆ ಯಶಸ್ಸು […]
Author: KundaVahini Editor
ಹಿಂದಿ ಉಪನ್ಯಾಸಕರ ಸಂಘದ ಅಧ್ಯಕ್ಷರಾಗಿ ನಾರಾಯಣ ಈ ನಾಯ್ಕ್ ಆಯ್ಕೆ
ಉಡುಪಿ ( ಆ,26): ಉಡುಪಿ ಜಿಲ್ಲಾ ಪದವಿ ಪೂರ್ವ ಕಾಲೇಜುಗಳ ಹಿಂದಿ ಉಪನ್ಯಾಸಕರ ಸಂಘದ 2024 -25 ನೇ ಶೈಕ್ಷಣಿಕ ಸಾಲಿನ ಅಧ್ಯಕ್ಷರಾಗಿ ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಪದವಿ ಪೂರ್ವ ಕಾಲೇಜಿನ ಹಿಂದಿ ಉಪನ್ಯಾಸಕರಾದ ನಾರಾಯಣ .ಇ . ನಾಯ್ಕ್ ಆಯ್ಕೆ ಆಗಿರುತ್ತಾರೆ. ಕಾಲೇಜಿನ ಆಡಳಿತ ಮಂಡಳಿ ಪ್ರಾಂಶುಪಾಲರು, ಭೋದಕ ಮತ್ತು ಬೋಧಕೇತರ ವರ್ಗ ಅವರನ್ನು ಅಭಿನಂದಿಸಿದೆ.
ಬಿ.ಬಿ. ಹೆಗ್ಡೆ ಕಾಲೇಜು: ಮಧುಮೇಹ ಅರಿವು ಕಾರ್ಯಕ್ರಮ
ಕುಂದಾಪುರ (ಆಗಸ್ಟ್ 24): ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಯುವ ರೆಡ್ ಕ್ರಾಸ್ ಘಟಕದ ಆಶ್ರಯದಲ್ಲಿ, ಕರ್ನಾಟಕ ರಾಜ್ಯ ನಿವೃತ್ತ ಸರ್ಕಾರಿ ನೌಕರರ ಸಂಘ, ಕುಂದಾಪುರ ತಾಲೂಕು ಇವರ ಸಹಯೋಗದೊಂದಿಗೆ ಮಧುಮೇಹ ಅರಿವು ಕಾರ್ಯಕ್ರಮ ಜರಗಿತು. ಕಾರ್ಯಕ್ರಮದ ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ ಬಿಗ್ ಮೆಡಿಕಲ್ ಸೆಂಟರ್ ಉಡುಪಿ ಸಿಟಿ ಇಲ್ಲಿನ ವೈದ್ಯರಾದ ಡಾ| ಶ್ರುತಿ ಬಲ್ಲಾಳ್ ಕಾರ್ಯಕ್ರಮವನ್ನು ಉದ್ದೇಶಿಸಿ ಇತಿ-ಮಿತಿ ಆಹಾರ ಪದ್ಧತಿ ಹಾಗೂ ದೈನಂದಿನ […]
ಬಿ. ಬಿ. ಹೆಗ್ಡೆ ಕಾಲೇಜು: ‘ಪ್ರೇರಣಾ’ ಪೂರ್ವ ಪರಿಚಯ- “ಶಿಸ್ತು ಮತ್ತು ನಡವಳಿಕೆ”
ಕುಂದಾಪುರ (ಆ,14): ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿ ಕ್ಷೇಮಪಾಲನಾ ಸಮಿತಿ ಆಶ್ರಯದಲ್ಲಿ ನೂತನವಾಗಿ ಸೇರ್ಪಡೆಗೊಂಡ ಪ್ರಥಮ ವರ್ಷದ ಪದವಿ ವಿದ್ಯಾರ್ಥಿಗಳಿಗೆ ಆಯೋಜಸಿದ ‘ಪ್ರೇರಣಾ’ ಪೂರ್ವ ಪರಿಚಯ ಕಾರ್ಯಕ್ರಮದಲ್ಲಿ ಹೆಬ್ರಿ ಅಮೃತ ಭಾರತಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಶ್ರೀ ಅಮರೇಶ್ ಹೆಗ್ಡೆ ಅವರು “ಶಿಸ್ತು ಮತ್ತು ನಡವಳಿಕೆ” ಎಂಬ ವಿಷಯದ ಕುರಿತು ಉಪನ್ಯಾಸ ನೀಡಿದರು. ಈ ಸಂದರ್ಭ ಕಾಲೇಜಿನ ಪ್ರಾಂಶುಪಾಲರಾದ ಪ್ರೊ| ಕೆ. ಉಮೇಶ್ […]
ಕರಾಟೆ – ಕುಂದಾಪುರದ ವಿ. ಕೆ. ಆರ್. ಶಾಲೆಯ ವಿದ್ಯಾರ್ಥಿ ರಾಜ್ಯ ಮಟ್ಟಕ್ಕೆ
ಕುಂದಾಪುರ (ಆ ,20) : ಶ್ರೀ ಬಿ. ಎಂ. ಸುಕುಮಾರ ಶೆಟ್ಟಿಯವರ ಅಧ್ಯಕ್ಷತೆಯ ಕುಂದಾಪುರ ಎಜ್ಯುಕೇಶನ್ ಸೊಸೈಟಿ ಪ್ರವರ್ತಿತ ಎಚ್. ಎಮ್. ಎಮ್. ಆಂಗ್ಲ ಮಾಧ್ಯಮ ಪ್ರಾಥಮಿಕ ಮತ್ತು ವಿ. ಕೆ. ಆರ್. ಆಚಾರ್ಯ ಸ್ಮಾರಕ ಪ್ರೌಢ ಶಾಲೆಗಳ ವಿದ್ಯಾರ್ಥಿ ಜಿಲ್ಲಾ ಮಟ್ಟದ ಕರಾಟೆ ಸ್ಪರ್ಧೆಯ 40ಕೆಜಿ ವಿಭಾಗದಲ್ಲಿ ಭಾಗವಹಿಸಿ ಪ್ರಥಮ ಸ್ಥಾನ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿರುತ್ತಾನೆ. ವಿ.ಕೆ.ಆರ್. ಪ್ರೌಢ ಶಾಲೆಯ 9ನೇ ತರಗತಿಯ ಚಿರಾಗ್ ಯು. ಪೂಜಾರಿ […]
ಮಾನವೀಯತೆ ಮೆರೆದ ಗೆಳೆಯರ ಬಳಗ ಬೀಜಾಡಿ
ಕೋಟೇಶ್ವರ (ಆ, 24): ಗೆಳೆಯರ ಬಳಗ ಬೀಜಾಡಿ ಇವರ ಆಶ್ರಯದಲ್ಲಿ 78ನೇ ಸ್ವಾತಂತ್ರ್ಯೋತ್ಸವದ ಪ್ರಯುಕ್ತ ಆಯೋಜಿಸಿದ್ದ ಲಕ್ಕಿ ಡಿಪ್ ಹಾಗೂ ಕ್ರಿಕೆಟ್ ಪಂದ್ಯಾಟದಿಂದ ಸಂಗ್ರಹಿಸಿದ 1 ಲಕ್ಷ 12 ಸಾವಿರ ಮೊತ್ತವನ್ನು ಬೀಜಾಡಿ ಗ್ರಾಮದ ಬಡ ಕುಟುಂಬದ ಹುಡುಗಿಯ ವೈದ್ಯಕೀಯ ಚಿಕಿತ್ಸೆಗಾಗಿ ಹುಡುಗಿಯ ಪೋಷಕರಿಗೆ ಹಸ್ತಾಂತರಿಸಿ ಮಾನವೀಯತೆ ಮೆರೆದಿದೆ. ಈ ಸಂದರ್ಭದಲ್ಲಿ ಬೀಜಾಡಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಪ್ರಕಾಶ್ ಪೂಜಾರಿ,ಗೋಪಾಡಿ ,ಗ್ರಾಮ ಪಂಚಾಯತ್ ಅಧ್ಯಕ್ಷರಾದ ಸುರೇಶ್ ಶೆಟ್ಟಿ,ಮೀನುಗಾರಿಕಾ ಸೊಸೈಟಿಯ ಅಧ್ಯಕ್ಷರಾದ […]
ಮೊಗವೀರ ಯುವ ಸಂಘಟನೆ ಕುಂದಾಪುರ ಘಟಕ: ನೂತನ ಪದಾಧಿಕಾರಿಗಳ ಪದಪ್ರದಾನ ಹಾಗೂ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ
ಕುಂದಾಪುರ(ಆ,25): ಮೊಗವೀರ ಯುವ ಸಂಘಟನೆ (ರಿ ),ಉಡುಪಿ ಜಿಲ್ಲೆ ಇದರ ಕುಂದಾಪುರ ಘಟಕದ 2024 -26 ನೇ ಸಾಲಿನ ನೂತನ ಪದಾಧಿಕಾರಿಗಳ ಪದ ಪ್ರಧಾನ ಹಾಗೂ ಸಾಮೂಹಿಕ ಸತ್ಯನಾರಾಯಣ ಪೂಜಾ ಕಾರ್ಯಕ್ರಮ ಏಪ್ರಿಲ್ 25ರ ಆದಿತ್ಯವಾರದಂದು ಕುಂದಾಪುರದ ಚಿಕ್ಕಮ್ಮನಸಾಲು ರಸ್ತೆಯ ಮೊಗವೀರ ಭವನದಲ್ಲಿ ಜರಗಿತು. ಗೀತಾನಂದ ಫೌಂಡೇಶನ್ ಪ್ರವರ್ತಕರಾದ ಆನಂದ್ ಸಿ ಕುಂದರ್ ಕಾರ್ಯಕ್ರಮವನ್ನು ಉದ್ಘಾಟಿಸಿ ಶುಭ ಹಾರೈಸಿದರು.ಮೊಗವೀರ ಸಮುದಾಯವನ್ನು ಸಂಘಟಿಸುವುದರ ಜೊತೆಗೆ ಯುವಶಕ್ತಿಯನ್ನು ಸಕ್ರೀಯವಾಗಿ ತೊಡಗಿಸಿಕೊಂಡು ಮೊಗವೀರ ಯುವ […]
ರೋಟರಿ ಕ್ಲಬ್ ಕೋಟೇಶ್ವರ : ವಲಯ ಮಟ್ಟದ ಸದಸ್ಯತ್ವ ಅಭಿವೃದ್ಧಿ ಮತ್ತು ಪಬ್ಲಿಕ್ ಇಮೇಜ್ ವಿಚಾರ ಸಂಕಿರಣ
ಕೋಟೇಶ್ವರ( ಆ,25): ರೋಟರಿ ಸಂಸ್ಥೆಗೆ ಸಮಾಜದ ವಿವಿಧ ಸ್ತರಗಳ ವಿವಿಧ ವೃತ್ತಿಗಳ ಸಮರ್ಥವಾದ ಸದಸ್ಯರನ್ನು ಸೇರಿಸುವುದರ ಜೊತೆಗೆ ಅವರು ರೋಟರಿಯಲ್ಲಿಯೇ ಉಳಿಯುವಂತೆ ಪ್ರೋತ್ಸಾಹಿಸಿದಾಗ ರೋಟರಿ ಪಬ್ಲಿಕ್ ಇಮೇಜ್ ನಿಜವಾದ ಅರ್ಥದಲ್ಲಿ ಬೆಳೆಯುತ್ತದೆ ಎಂದು ರೋಟರಿ ಜಿಲ್ಲೆ 31 82ರ ಸದಸ್ಯತ್ವ ಅಭಿವೃದ್ಧಿಯ ಜಿಲ್ಲಾ ಚೇರ್ಮೆನ್ ರೋ ಅಶೋಕ್ ಕುಮಾರ್ ಶೆಟ್ಟಿ ಹೇಳಿದರು. ಅವರು ವಲಯ ಎರಡರ ಸದಸ್ಯತ್ವ ಅಭಿವೃದ್ಧಿ ಮತ್ತು ಪಬ್ಲಿಕ್ ಇಮೇಜ್ ವಿಚಾರ ಸಂಕಿರಣ “ಅಭಿವರ್ಧನೆ 2024” ವಿಚಾರ […]
ಬ್ಯಾರಿಸ್ ಪ್ರಥಮ ದರ್ಜೆ ಕಾಲೇಜು, ಕೋಡಿ: ಬ್ಯಾಂಕಿಂಗ್ ಮತ್ತು ಸೈಬರ್ ವಂಚನೆ ಕುರಿತು ಕಾರ್ಯಗಾರ
ಕುಂದಾಪುರ(ಆ,24): ಇಲ್ಲಿನ ಬ್ಯಾರಿಸ್ ಪ್ರಥಮ ದರ್ಜೆ ಕಾಲೇಜು ಕೋಡಿ ಮತ್ತು ಕರ್ನಾಟಕ ಬ್ಯಾಂಕ್ ಲಿಮಿಟೆಡ್ ಕುಂದಾಪುರ ಇವರ ಸಹಯೋಗದೊಂದಿಗೆ ಕಾಲೇಜಿನಲ್ಲಿ ಬ್ಯಾಂಕಿಂಗ್ ಮತ್ತು ಸೈಬರ್ ವಂಚನೆ ಕುರಿತು ಕಾರ್ಯಗಾರವನ್ನು ಆಗಸ್ಟ್ 24 ರಂದು ಹಮ್ಮಿಕೊಳ್ಳಲಾಯಿತು. ಈ ಕಾರ್ಯಕ್ರಮಕ್ಕೆ ತರಬೇತುದಾರರಾಗಿ ಕರ್ನಾಟಕ ಬ್ಯಾಂಕ್ ಲಿಮಿಟೆಡ್ ಕುಂದಾಪುರದ ಆಫೀಸರ್ ಶ್ರೀಯುತ ಉದಯ್ ಹೆಗಡ್ಡೆ ಯವರು ಆಗಮಿಸಿ ಬ್ಯಾಂಕಿಂಗ್ ನಲ್ಲಿ ಸಿಗುವ ಸೌಲಭ್ಯಗಳು, ಈಗಿನ ಹೊಸ ಹೊಸ ತಂತ್ರಾಂಶಗಳ ಕುರಿತು ತಿಳಿಸಿದರು. ಹಾಗೆ ಸೈಬರ್ […]
ಕಾರ್ಕಳದ ಕ್ರಿಯೇಟಿವ್ ಕಾಲೇಜಿನಲ್ಲಿ ಕೆಸರುಡೊಂಜಿ ದಿನ ಕಾರ್ಯಕ್ರಮ
ಕಾರ್ಕಳ( ಆ,25): ಫಲವತ್ತಾದ ಮಣ್ಣೇ ಶ್ರೇಷ್ಠ ಸಂಪತ್ತು. ಆ ಮಣ್ಣಿನೊಂದಿಗೆ ನಮಗೆ ಅವಿನಾಭಾವ ಸಂಬಂಧ ಇದ್ದಾಗ ಮಾತ್ರ ಕೆಸರೆಂಬುದು ಆಪ್ತವಾಗುತ್ತಾ ಹೋಗುತ್ತದೆ. ರೈತನೇ ದೇಶವನ್ನು ಕಟ್ಟಬಲ್ಲವನು. ರೈತಾಪಿ ವರ್ಗ ನಿಷ್ಕ್ರಿಯವಾದರೆ ಬದುಕೇ ಇಲ್ಲ. ಆದ್ದರಿಂದ ವಿದ್ಯಾರ್ಥಿಗಳು ರೈತರ ಕಷ್ಟ, ಕೃಷಿಯಿಂದ ಸಿಗುವ ಆನಂದ ಅನುಭವದ ಮೂಲಕ ಪಡೆಯಬೇಕು ಎಂದು ಹಿರ್ಗಾನ ಗ್ರಾಮ ಪಂಚಾಯತ್ ನ ಮಾಜಿ ಅಧ್ಯಕ್ಷರಾದ ಶ್ರೀ ಸಂತೋಷ ಶೆಟ್ಟಿ ರವರು ಕಾರ್ಯಕ್ರಮವನ್ನು ಉದ್ಘಾಟಿಸಿ ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು. […]










