ಅವರು ಇಂದು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಮೊಳಹಳ್ಳಿಯಲ್ಲಿ ಹಾಲಾಡಿ ವೃತ್ತ ಮಟ್ಟದ ಪ್ರಾಥಮಿಕ ಶಾಲಾ ಬಾಲಕ ಮತ್ತು ಬಾಲಕಿಯರ ತ್ರೋಬಾಲ್ ಪಂದ್ಯಾಟದ ಉದ್ಘಾಟನೆಯನ್ನು ನೆರವೇರಿಸಿ ಮಾತನಾಡಿದರು. ಸಮಾರಂಭದ ಅಧ್ಯಕ್ಷತೆಯನ್ನು ಶಾಲಾ ಎಸ್ ಡಿ ಎಂ ಸಿ ಅಧ್ಯಕ್ಷರಾದ ಶ್ರೀಮತಿ ವಿಶಾಲಾಕ್ಷಿ ಶೆಟ್ಟಿ ವಹಿಸಿಕೊಂಡಿದ್ದರು. ಮುಖ್ಯ ಅತಿಥಿಗಳಾಗಿ ಗ್ರಾಮ ಪಂಚಾಯತ್ ಸದಸ್ಯರಾದ ಶ್ರೀಮತಿ ಜಯಂತಿ ಎಂ ಶೆಟ್ಟಿ, ಗ್ರಾಮ ಪಂಚಾಯತ್ ಮಾಜಿ ಉಪಾಧ್ಯಕ್ಷರಾದ ಶ್ರೀಮತಿ ವಾಣಿ ಆರ್ ಶೆಟ್ಟಿ, ಹಾಲಾಡಿ […]
Author: KundaVahini Editor
ಬ್ಯಾರಿಸ್ ಪ್ರಥಮ ದರ್ಜೆ ಕಾಲೇಜು ಕೋಡಿ: ವಿವಿಧ ಸಂಘಗಳ ಉದ್ಘಾಟನೆ
ಕುಂದಾಪುರ (ಆ, 23): ಕೋಡಿ ಬ್ಯಾರಿಸ್ ಪ್ರಥಮ ದರ್ಜೆ ಕಾಲೇಜಿನ ವಿವಿಧ ಸಂಘದ ವಾರ್ಷಿಕ ಚಟುವಟಿಕೆಗಳ ಉದ್ಘಾಟನೆಯನ್ನು ಸರಕಾರಿ ಪದವಿ ಪೂರ್ವ ಕಾಲೇಜು ಬಿದ್ಕಲ್ ಕಟ್ಟೆ ಇದರ ರಾಜ್ಯಶಾಸ್ತ್ರ ಉಪನ್ಯಾಸಕರಾದ ಶ್ರೀ ರಾಘವೇಂದ್ರ ಕಿಣಿಯವರು ಆಗಸ್ಟ್ 23 ರಂದು ನೆರವೇರಿಸಿದರು. ವಿದ್ಯಾರ್ಥಿಗಳನ್ನು ಸಮಾಜದ ಮುಖ್ಯ ವಾಹಿನಿಗೆ ಪರಿಚಯಿಸುವುದರ ಜೊತೆಗೆ ಪಠ್ಯಕ್ರಮವನ್ನು ಹೇಗೆ ಅಳವಡಿಸಿಕೊಳ್ಳಬೇಕು ಹಾಗೂ ಶೈಕ್ಷಣಿಕವಾಗಿ ಹೇಗೆ ಸಿದ್ಧರಾಗಬೇಕೆಂಬುದನ್ನು ಶಿಕ್ಷಕರು ವಿದ್ಯಾರ್ಥಿಗಳಿಗೆ ತಿಳಿಸಬೇಕು. ಕಲಿಕೆಗೆ ಪೂರಕವಾದ ಸ್ವಾತಂತ್ರ್ಯ ಹಾಗೂ ಪರಿಸರ […]
ಮೂಡ್ಲಕಟ್ಟೆ ಐಎಂಜೆ ವಿಜ್ಞಾನ ಮತ್ತು ವಾಣಿಜ್ಯ ಸಂಸ್ಥೆ: ವಿವಿಧ ಸಂಘಗಳ ಉದ್ಘಾಟನಾ ಸಮಾರಂಭ
ಮೂಡ್ಲಕಟ್ಟೆ( ಆ,23): ಇಲ್ಲಿನ ಐಎಂಜೆ ವಿಜ್ಞಾನ ಮತ್ತು ವಾಣಿಜ್ಯ ಸಂಸ್ಥೆಯಲ್ಲಿ 9ನೇ ದಿನದ ದೀಕ್ಷಾರಂಭ ಕಾರ್ಯಕ್ರಮದ ಅಡಿಯಲ್ಲಿ “ಚೈತನ್ಯ ಚಿಲುಮೆ” ವಿವಿಧ ಸಂಘಗಳ ಉದ್ಘಾಟನಾ ಸಮಾರಂಭ ಆಗಸ್ಟ್ 22 ರಂದು ಯಶಸ್ವಿಯಾಗಿ ನೆರವೇರಿತು. ಸಂಸ್ಥೆಯ ಸ್ಥಾಪಕರಾದ ಐ.ಎಂ ಜಯರಾಮ್ ಶೆಟ್ಟರ ಕ್ರಿಯಾಶೀಲವಾದ ಚಟುವಟಿಕೆ ಮತ್ತು ಚೈತನ್ಯ ಶೀಲತೆಯನ್ನು ಸಂಸ್ಥೆಯು ಅನುಸರಿಸುತ್ತಿರುವುದು ಶ್ಲಾಘನೀಯವಾದದ್ದು, ಕೇವಲ ಶಿಕ್ಷಣದಿಂದ ವ್ಯಕ್ತಿತ್ವ ಬೆಳೆಯುವುದಿಲ್ಲ ಅದಕ್ಕೆ ಸಾಂಸ್ಕೃತಿಕ ಮತ್ತು ನೈಸರ್ಗಿಕ ಹಿನ್ನೆಲೆ ಬೇಕು, ಮಾನವೀಯತೆಯ ಭಾವನೆ ಬೇಕು […]
ಶಿಕ್ಷಕ ನಾಗರಾಜ ಖಾರ್ವಿ ರಾಷ್ಟ್ರಮಟ್ಟಕ್ಕೆ ಆಯ್ಕೆ
ಕುಂದಾಪುರ(ಆ ,23): ರಾಜ್ಯ ಸರ್ಕಾರಿ ನೌಕರರ ಸಂಘ ಬೆಂಗಳೂರು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯು ಬೆಂಗಳೂರಿನಲ್ಲಿ ನಡೆಸಿದ ರಾಜ್ಯಮಟ್ಟದ ಕ್ರೀಡಾಕೂಟದಲ್ಲಿ ಗುಜ್ಜಾಡಿ ಗ್ರಾಮದ ಕಂಚುಗೋಡು ನಿವಾಸಿ, ಮುಲ್ಲಕಾಡು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಪದವೀಧರ ಪ್ರಾಥಮಿಕ ಶಿಕ್ಷಕ ನಾಗರಾಜ ಖಾರ್ವಿ ಮೂರು ಚಿನ್ನದ ಪದಕ ಮತ್ತು ಒಂದು ಬೆಳ್ಳಿ ಪದಕ ಪಡೆದು ಸತತ ಆರನೆಯ ಬಾರಿ ಅಖಿಲ ಭಾರತ ನಾಗರಿಕ ಸೇವಾ ಕ್ರೀಡಾಕೂಟಕ್ಕೆ ಆಯ್ಕೆಯಾಗಿದ್ದಾರೆ. ಈ ಕ್ರೀಡಾಕೂಟದ ಈಜು […]
ರಾಜ್ಯಮಟ್ಟದ ಕ್ರೀಡಾಕೂಟ: ಶಿಕ್ಷಕಿ ಕೃಪಾ ಖಾರ್ವಿಯವರಿಗೆ ಬೆಳ್ಳಿ ಪದಕ
ಕುಂದಾಪುರ (ಆ,22): ರಾಜ್ಯ ಸರ್ಕಾರಿ ನೌಕರರ ಸಂಘ ಬೆಂಗಳೂರು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯು ಬೆಂಗಳೂರಿನಲ್ಲಿ ಇತ್ತೀಚೆಗೆ ನಡೆಸಿದ ರಾಜ್ಯಮಟ್ಟದ ಕ್ರೀಡಾಕೂಟದಲ್ಲಿ, ಗುಜ್ಜಾಡಿ ಗ್ರಾಮದ ಕಂಚುಗೋಡಿನ ನಿವಾಸಿ, ಮುಲ್ಲಕಾಡು ಸರಕಾರಿ ಪ್ರೌಢಶಾಲೆಯ ಸಹಶಿಕ್ಷಕಿ ಕೃಪಾ ಖಾರ್ವಿ ಇವರು 50 ಮೀ. ಬಟರ್ ಫ್ಲೈ ಈಜಿನಲ್ಲಿ ಬೆಳ್ಳಿ ಪದಕ, 100 ಮೀ. ಬ್ರೆಸ್ಟ್ ಸ್ಟ್ರೋಕ್ ಈಜಿನಲ್ಲಿ ಕಂಚಿನ ಪದಕ ಪಡೆದಿದ್ದಾರೆ. ಇವರಿಗೆ ರೇಷ್ಮೆ ಇಲಾಖೆಯ ನಿವೃತ್ತ ಇನ್ಸ್ಪೆಕ್ಟರ್ ಬಿ.ಕೆ.ನಾಯ್ಕ್ ಈಜು […]
ಬಿ. ಬಿ. ಹೆಗ್ಡೆ ಕಾಲೇಜು : ರಾಷ್ಟ್ರೀಯ ಗ್ರಂಥಪಾಲಕರ ದಿನಾಚರಣೆ
ಕುಂದಾಪುರ (ಆ,.12) : ಇಲ್ಲಿನ ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಗ್ರಂಥಾಲಯದಲ್ಲಿ ‘ರಾಷ್ಟ್ರೀಯ ಗ್ರಂಥಪಾಲಕರ ದಿನಾಚರಣೆ’ ಆಚರಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಂಶುಪಾಲರಾದ ಪ್ರೊ| ಕೆ. ಉಮೇಶ್ ಶೆಟ್ಟಿಯವರು ಗ್ರಂಥಾಲಯ ವಿಜ್ಞಾನದ ಪಿತಾಮಹ ಪದ್ಮಶ್ರೀ ಪುರಸ್ಕೃತ ಡಾ| ಎಸ್.ಆರ್. ರಂಗನಾಥನ್ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ, ಗ್ರಂಥಾಲಯವು ಜ್ಞಾನಾರ್ಜನೆಯೊಂದಿಗೆ ಶಿಸ್ತುಬದ್ಧ ಜೀವನ ಕೌಶಲ್ಯವನ್ನು ಬೆಳೆಸುವ ಸ್ಥಳ, ಹೀಗಾಗಿ ಇದರ ಸದುಪಯೋಗ ಮಾಡಿಕೊಳ್ಳಬೇಕು ಎಂದರು. ಈ […]
ಚೆಸ್ – ಎಚ್. ಎಮ್. ಎಮ್. ಮತ್ತು ವಿ. ಕೆ. ಆರ್. ವಿದ್ಯಾರ್ಥಿಗಳು ರಾಜ್ಯ ಮಟ್ಟಕ್ಕೆ
ಕುಂದಾಪುರ (ಆ,20) : ಶ್ರೀ ಬಿ. ಎಂ. ಸುಕುಮಾರ ಶೆಟ್ಟಿಯವರ ಅಧ್ಯಕ್ಷತೆಯ ಕುಂದಾಪುರ ಎಜ್ಯುಕೇಶನ್ ಸೊಸೈಟಿ ಪ್ರವರ್ತಿತ ಎಚ್. ಎಮ್. ಎಮ್. ಆಂಗ್ಲ ಮಾಧ್ಯಮ ಪ್ರಾಥಮಿಕ ಮತ್ತು ವಿ. ಕೆ. ಆರ್. ಆಚಾರ್ಯ ಸ್ಮಾರಕ ಪ್ರೌಢ ಶಾಲೆಗಳ ವಿದ್ಯಾರ್ಥಿಗಳು ಜಿಲ್ಲಾ ಮಟ್ಟದ ಚೆಸ್ ಸ್ಪರ್ಧೆಯಲ್ಲಿ ಭಾಗವಹಿಸಿ ವಿಜೇತರಾಗಿ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಎಚ್. ಎಮ್. ಎಮ್. ಆಂಗ್ಲ ಪ್ರಾಥಮಿಕ ಶಾಲೆಯ 7ನೇ ತರಗತಿಯ ಶ್ರೀಲತಾ, ವಿ.ಕೆ.ಆರ್. ಪ್ರೌಢ ಶಾಲೆಯ 9ನೇ […]
ರೆಡ್ ಕ್ರಾಸ್ ಸಂಸ್ಥೆ ಕುಂದಾಪುರ: ಸ್ಯಾನಿಟರಿ ಪ್ಯಾಡ್ ವಿತರಣೆ
ಕುಂದಾಪುರ(ಆ,22): ಇಲ್ಲಿನ ಭಾರತೀಯ ರೆಡ್ ಕ್ರಾಸ್ ಸಂಸ್ಥೆ ವತಿಯಿಂದ ಜಿಲ್ಲೆಯಲ್ಲಿ ಅತೀ ಹೆಚ್ಚು ಹೆಣ್ಣು ಮಕ್ಕಳಿರುವ ಕುಂದಾಪುರ ಸರಕಾರಿ ಪದವಿ ಪೂರ್ವ ಕಾಲೇಜಿನ 900 ವಿದ್ಯಾರ್ಥಿನಿಯರಿಗೆ ಸ್ಯಾನಿಟರಿ ಪ್ಯಾಡ್ನ್ನು ರೆಡ್ ಕ್ರಾಸ್ ಸಂಸ್ಥೆ ಅಧ್ಯಕ್ಷರಾದ ಶ್ರೀ ಜಯಕರ ಶೆಟ್ಟಿ, ಕಾಲೇಜಿನ ಪ್ರಾಂಶುಪಾಲರಾದ ಶ್ರೀ ರಾಮಕೃಷ್ಣ ಬಿ.ಜಿಯವರಿಗೆ ಹಸ್ತಾಂತರಿಸಿದರು. ಈ ಸಂದರ್ಭದಲ್ಲಿ ರೆಡ್ ಕ್ರಾಸ್ ಸಂಸ್ಥೆಯ ಕಾರ್ಯದರ್ಶಿ ಶ್ರೀ ಸೀತಾರಾಮ ಶೆಟ್ಟಿ,ಸದಸ್ಯರಾದ ಶ್ರೀ ಗಣೇಶ ಆಚಾರ್ಯ, ಶ್ರೀ ಸದಾನಂದ ಶೆಟ್ಟಿ, ಶ್ರೀ […]
ಹೆಮ್ಮಾಡಿ ಮೀನುಗಾರರ ಪ್ರಾಥಮಿಕ ಸಹಕಾರಿ ಸಂಘ ನಿ.ಹೆಮ್ಮಾಡಿ: ಮೀನುಗಾರರ ಕಲ್ಯಾಣ ಯೋಜನೆ ಉಳಿತಾಯ ಮತ್ತು ಪರಿಹಾರ ಯೋಜನೆಗೆ ನೋಂದಾವಣೆ
ಹೆಮ್ಮಾಡಿ( ಆ,21): ಇಲ್ಲಿನ ಮೀನುಗಾರರ ಪ್ರಾಥಮಿಕ ಸಹಕಾರಿ ಸಂಘ ನಿ.ಹೆಮ್ಮಾಡಿಯಲ್ಲಿ ಪ್ರಧಾನ ಮಂತ್ರಿ ಮತ್ಸ್ಯ ಸಂಪದ ಯೋಜನೆಯಡಿ ಮೀನುಗಾರರ ಕಲ್ಯಾಣ ಯೋಜನೆ ಉಳಿತಾಯ ಮತ್ತು ಪರಿಹಾರ ಯೋಜನೆಯ 2024-25 ನೇ ಸಾಲಿನ ನೋಂದಾವಣೆ ಪ್ರಾರಂಭಗೊಂಡಿದೆ. ಅರ್ಜಿ ಸಲ್ಲಿಸ ಬಯಸುವವರು ಕೆಳಗೆ ತಿಳುಹಿಸಿದ ಅರ್ಹತೆಯನ್ನು ಹೊಂದಿರಬೇಕು ಎಂದು ತಿಳಿಸಲಾಗಿದೆ. ಅರ್ಹತೆಗಳು1 ಫಲಾನುಭವಿಯು ಮೀನುಗಾರರ ಸಹಕಾರ ಸಂಘದ ಮೀನುಗಾರಿಕಾ ಸದಸ್ಯರಾಗಿರಬೇಕು2 ಬಿ.ಪಿ.ಎಲ್ ಕಾರ್ಡ್ ದಾರರಾಗಿರಬೇಕು3 18 ರಿಂದ 60 ವರ್ಷದೊಳಗಿನವರಾಗಿರಬೇಕುಬೇಕಾಗುವ ದಾಖಲೆಗಳು1 ಪೋಟೋ2 […]
ಯೋಗಾಸನ ಸ್ಪರ್ಧೆ : ಲಾಸ್ಯ ಮಧ್ಯಸ್ಥ ಪ್ರಥಮ
ಕುಂದಾಪುರ( ಆ,19): ಇಲ್ಲಿನ ಹೋಲಿ ರೋಜರಿ ಆಂಗ್ಲ ಮಾಧ್ಯಮ ಶಾಲೆಯ ಎಂಟನೇ ತರಗತಿಯ ವಿದ್ಯಾರ್ಥಿನಿ ಕುಮಾರಿ ಲಾಸ್ಯ ಮಧ್ಯಸ್ಥ ಇವರು ವಿಜಯ ಮಕ್ಕಳ ಕೂಟ ಆಂಗ್ಲ ಮಾಧ್ಯಮ ಶಾಲೆ ಆತ್ರಾಡಿ ವಂಡ್ಸೆಯಲ್ಲಿ ಆಗಸ್ಟ್ 19ರಂದು ನಡೆದ ಯೋಗಾಸನ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನವನ್ನು ಗಳಿಸಿ ಸತತ 5ನೇ ಬಾರಿ ” ಯೋಗಕುಮಾರಿ ” ಪ್ರಶಸ್ತಿಯನ್ನು ಪಡೆದಿರುತ್ತಾರೆ. ಈಕೆಗೆ ಶಾಲೆಯ ಭೋದಕ -ಭೋದಕೇತರ ವೃಂದ ಅಭಿನಂದನೆ ಸಲ್ಲಿಸಿದ್ದಾರೆ.










