ಉಡುಪಿ (ಆ,17): ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಪೇರ್ವಾಜೆ ಕಾರ್ಕಳದಲ್ಲಿ ಇತ್ತೀಚೆಗೆ ನಡೆದ ಅಂಡರ್ 14 ವಯೋಮಾನದ ಪ್ರಾಥಮಿಕ ಶಾಲಾ ಬಾಲಕರ ಜಿಲ್ಲಾ ಮಟ್ಟದ ಟೇಬಲ್ ಟೆನಿಸ್ ಪಂದ್ಯಾಟದಲ್ಲಿ ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ಆರ್ಯನ್ ವಿ ಕೆ ದ್ವಿತೀಯ ಸ್ಥಾನವನ್ನು ಗಳಿಸುವ ಮೂಲಕ ಬೀದರ್ ನಲ್ಲಿ ನಡೆಯಲಿರುವ ರಾಜ್ಯಮಟ್ಟದ ಟೇಬಲ್ ಟೆನ್ನಿಸ್ ಪಂದ್ಯಾಟಕ್ಕೆ ಆಯ್ಕೆಯಾಗಿರುತ್ತಾನೆ. ಇವನು ಉಪನ್ಯಾಸಕಿ ಸುಗುಣ ಆರ್ ಕೆ ಮತ್ತು ಪಶು […]
Author: KundaVahini Editor
ಬಿ. ಬಿ. ಹೆಗ್ಡೆ ಕಾಲೇಜು : 78ನೇ ಸ್ವಾತಂತ್ರ್ಯೋತ್ಸವ ದಿನಾಚರಣೆ ಪ್ರಯುಕ್ತ ಗಿಡ ನೆಡುವ ಕಾರ್ಯಕ್ರಮ
ಕುಂದಾಪುರ (ಆ, 15): ಇಲ್ಲಿನ ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಎನ್.ಸಿ.ಸಿ. ಹಾಗೂ ನೇಚರ್ ಕ್ಲಬ್ ಘಟಕದ ಆಶ್ರಯದಲ್ಲಿ 78ನೇ ಸ್ವಾತಂತ್ರ್ಯೋತ್ಸವದ ಪ್ರಯುಕ್ತ ಗಿಡ ನೆಡುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ಈ ಸಂದರ್ಭದಲ್ಲಿ ಶ್ರೀ ಬಿ. ಎನ್. ಶೆಟ್ಟಿ, ನಿವೃತ್ತ ಹೆಚ್ಚುವರಿ ಕಾರ್ಯದರ್ಶಿಗಳು, ಕರ್ನಾಟಕ ಸರ್ಕಾರ, ಕಾಲೇಜಿನ ಗವರ್ನಿಗ್ ಕೌನ್ಸಿಲ್ ಸದಸ್ಯರಾದ ಶ್ರೀ ಎನ್. ನಾರಾಯಣ್ ನಾಯಕ್, ಪ್ರಾಂಶುಪಾಲರಾದ ಪ್ರೊ| ಕೆ. ಉಮೇಶ್ ಶೆಟ್ಟಿ, ಉಪ […]
ಕುಂದಾಪುರದ ಎಚ್.ಎಮ್.ಎಮ್. ಮತ್ತು ವಿ.ಕೆ.ಆರ್. ಶಾಲೆಗಳಲ್ಲಿ 78ನೇ ಸ್ವಾತಂತ್ರ್ಯೋತ್ಸವ ಆಚರಣೆ
ಕುಂದಾಪುರ (ಆ,15:) ದೇಶದ ಅಭಿವೃದ್ಧಿ ಕೇವಲ ಒಬ್ಬ ಪ್ರಧಾನಿ ಅಥವಾ ಸೇನೆಯಿಂದ ಮಾತ್ರ ಸಾಧ್ಯವಿಲ್ಲ. ಪ್ರತಿಯೊಬ್ಬ ಪ್ರಜೆ ಹಾಗೂ ವಿದ್ಯಾರ್ಥಿಗಳು ದೇಶದ ಪ್ರಗತಿಯ ಕಡೆಗೆ ಚಿಂತನೆ ಮಾಡಬೇಕು ಎಂದು ಮುಖ್ಯ ಅತಿಥಿಯಾಗಿ ಆಗಮಿಸಿದ ವಕೀಲರಾದ ಶ್ರೀ ಮಂಜುನಾಥ್ ಹೇಳಿದರು. ಅವರು ಎಚ್. ಎಮ್. ಎಮ್. ಆಂಗ್ಲ ಮಾಧ್ಯಮ ಪ್ರಾಥಮಿಕ ಮತ್ತು ವಿ. ಕೆ. ಆರ್. ಆಚಾರ್ಯ ಸ್ಮಾರಕ ಪ್ರೌಢ ಶಾಲೆಗಳಲ್ಲಿ ನಡೆದ 78ನೇ ಸ್ವಾತಂತ್ರ್ಯೋತ್ಸವದಂದು ಧ್ವಜಾರೋಹಣಗೈದು ಮಾತನಾಡಿದರು. ಇನೋರ್ವ ಮುಖ್ಯ […]
ಸರಕಾರಿ ಪದವಿ ಪೂರ್ವ ಕಾಲೇಜು ನಾವುಂದ: ರೋವರ್ಸ್ & ರೇಂಜರ್ಸ್ ಘಟಕ ಉದ್ಘಾಟನೆ
ನಾವುಂದ (ಆ,19): ಇಲ್ಲಿನ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಆಗಸ್ಟ್ 15 ರಂದು ರೇಂಜರ್ಸ್ ರೋವರ್ಸ್ ಘಟಕವನ್ನು ಸ್ಕೌಟ್ ಗೈಡ್ಸ್ ಜಿಲ್ಲಾ ಸಂಸ್ಥೆಯ ಕಾರ್ಯದರ್ಶಿಯಾಗಿರುವ ಆನಂದ್ ಅಡಿಗ ಉದ್ಘಾಟಿಸಿದರು. ಸ್ಕೌಟ್ ಗೈಡ್ಸ್ ಬೈಂದೂರು ಸ್ಥಳೀಯ ಸಂಸ್ಥೆಯ ಅಧ್ಯಕ್ಷರಾದ ನರಸಿಂಹ ದೇವಾಡಿಗ ಇವರು ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದರು. ಕಾಲೇಜು ಅಭಿವೃದ್ಧಿ ಸಮಿತಿಯ ಕಾರ್ಯಧ್ಯಕ್ಷರಾದ ಪ್ರವೀಣ್ ಪೂಜಾರಿ ಇವರು ಮುಖ್ಯ ಅತಿಥಿಗಳಾಗಿದ್ದರು. ಕಾಲೇಜಿನ ಪ್ರಾಂಶುಪಾಲರಾದ ಗಣೇಶ್ ಎಂ ಮತ್ತು ಉಪ ಪ್ರಾಂಶುಪಾಲೆ ಶಶಿಕಲಾ […]
ಫಸ್ಟ್ ಸ್ಟೆ ಪ್ಲೇ ಹೋಮ್ ಮತ್ತು ನರ್ಸರಿ ಸ್ಕೂಲ್ ಮೂಡುಗೋಪಾಡಿ: ಸ್ವಾತಂತ್ಯ ಸಂಭ್ರಮ
ಕೋಟೇಶ್ವರ( ಆ,19): ಇಲ್ಲಿನ ಮೂಡುಗೋಪಾಡಿ ಫಸ್ಟ್ ಸ್ಟೆ ಪ್ಲೇ ಹೋಮ್ ಮತ್ತು ನರ್ಸರಿ ಸ್ಕೂಲ್ ನಲ್ಲಿ ಸ್ವಾತಂತ್ಯ ದಿನಾಚರಣೆಯನ್ನು ಸಂಭ್ರಮದಿಂದ ಆಚರಿಸಲಾಯಿತು. ಕಾರ್ಯಕ್ರಮದ ಧ್ವಜಾರೋಹವನ್ನು ಶ್ರೀಕಿರಣ್ ಕುಮಾರ್ ಕೆ ನೆರವೇರಿಸಿದರು. ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಉಡುಪಿ ಜಿಲ್ಲಾ ಪಂಚಾಯತ್ ಮಾಜಿ ಉಪಾಧ್ಯಕ್ಷೆ ಶ್ರೀಮತಿ ಸುಜಾತ ವಾಸುದೇವ, ಶ್ರೀಮತಿ ಇಂದಿರಾ ಜಿ ಮೂಡುಗೋಪಾಡಿ, ಮತ್ತಿತರು ಭಾಗವಹಿಸಿದರು.ಹಾಗೆಯೇ ಶಾಲಾ ಮಕ್ಕಳ ಚದ್ಮವೇಷ ಸ್ವರ್ಧೆಯ ವಿಜೇತರಿಗೆ ಬಹುಮಾನ ವಿತರಿಸಲಾಯಿತು. ಈ ಸಂದರ್ಭದಲ್ಲಿ ರವಿಚಂದ್ರ ನಡುಮನೆ, […]
ರಾಷ್ಟ್ರಮಟ್ಟದ ಆಹ್ವಾನಿತ ತಂಡಗಳ ಕರಾಟೆ ಚಾಂಪಿಯನ್ಶಿಪ್ : ಮಾಸ್ಟರ್ ಶ್ರೀಶ ಗುಡ್ರಿ ಇವರಿಗೆ ಚಿನ್ನದ ಪದಕ
ಕುಂದಾಪುರ(ಆ,19): ಕೆನ್-ಈ-ಮಾಬುನಿ ಶಿಟೋ-ರಿಯೋ ಕರಾಟೆ ಸ್ಕೂಲ್ ಆಫ್ ಇಂಡಿಯಾ ಉಡುಪಿ ಜಿಲ್ಲೆ ಇವರ ವತಿಯಿಂದ ಆಗಸ್ಟ್ 18 ರ ರವಿವಾರದಂದು ಥಂಡರ್ಸ್ ಗ್ರ್ಯಾಂಡ್ ಬೇ, ಸುಭಾಸ್ನಗರ, ಕುರ್ಕಾಲು ಇಲ್ಲಿ ನಡೆದ ದ್ವಿತೀಯ ರಾಷ್ಟ್ರಮಟ್ಟದ ಆಹ್ವಾನಿತ ತಂಡಗಳ ಕರಾಟೆ ಚಾಂಪಿಯನ್ಶಿಪ್ ನಲ್ಲಿ ನಮ್ಮೂರ ಪ್ರತಿಭೆಯಾದ ಮಾಸ್ಟರ್ ಶ್ರೀಶ ಗುಡ್ರಿ ಇವರು ಭಾಗವಹಿಸಿ ಕಟಾ ಮತ್ತು ಕುಮಿಟಿ ಈ ಎರಡೂ ವಿಭಾಗದಲ್ಲಿ ಪ್ರಥಮ ಸ್ಥಾನ ಪಡೆಯುವ ಮೂಲಕ ಚಿನ್ನದ ಪದಕ ಗೆದ್ದು ಹುಟ್ಟೂರಿಗೆ […]
ಎಮಾ೯ಳ್ ರಾಮಪ್ಪ ಜಿ ಸಾಲ್ಯಾನ್ ರವರ ಮನೆಗೆ “ಸ್ವಾತಂತ್ರ್ಯ ಹೋರಾಟಗಾರರ ಮನೆ” ನಾಮ ಫಲಕ ಅನಾವರಣ
ಉಡುಪಿ( ಆ.16): ”ಸ್ವರಾಜ್ಯ 75” ತಂಡದ 31ನೇ ಸ್ವಾತಂತ್ರ್ಯ ಹೋರಾಟಗಾರರ ಮನೆ ನಾಮಫಲಕ ಅನಾವರಣ ಕಾಯ೯ಕ್ರಮ ಉಡುಪಿ ಜಿಲ್ಲೆಯ ಕಾಪು ತಾಲೂಕಿನ ಎಮಾ೯ಳ್ ಬಡಾ ಗ್ರಾಮ ಪಂಚಾಯತ್ ವ್ಯಾಪ್ತಿಯ ಎಮಾ೯ಳ್ ರಾಮಪ್ಪ ಜಿ ಸಾಲ್ಯಾನ್ ಮನೆಯಲ್ಲಿ ಆಗಸ್ಟ್ 15 ರಂದು ನಡೆಯಿತು. ಕಾಯ೯ಕ್ರಮದ ಮೊದಲಿಗೆ ರಾಷ್ಟ್ರ ಧ್ವಜಕ್ಕೆ ಪುಷ್ಪಾಚ೯ನೆಯನ್ನು ಮಾಡಲಾಯಿತು. ಶ್ರೀ ಚೇತನ್ ಶೆಟ್ಟಿ ಇವರು ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಆಯ೯ವೇದ ವೈದ್ಯರಾದ ಡಾ.ವೈ .ಎನ್ .ಶೆಟ್ಟಿ ನಾಮಫಲಕ ಅನಾವರಣ […]
ಮೊಳಹಳ್ಳಿ ದಿನೇಶ್ ಹೆಗ್ಡೆ ಜಯರತ್ನ ಟ್ರಸ್ಟ್ (ರಿ.) ಮೊಳಹಳ್ಳಿ : ಉಚಿತ ನೇತ್ರ ತಪಾಸಣೆ ಹಾಗೂ ಪೊರೆ ಶಸ್ತ್ರ ಚಿಕಿತ್ಸೆ ಶಿಬಿರ
ಕೋಟೇಶ್ವರ ( ಆ .19): ಮೊಳಹಳ್ಳಿ ದಿನೇಶ್ ಹೆಗ್ಡೆ ಜಯ ರತ್ನ ಟ್ರಸ್ಟ್ (ರಿ.) ಸಮಾಜಮುಖಿ ಕೆಲಸಗಳನ್ನು ಮಾಡುತ್ತಿದ್ದು, ಶಿಕ್ಷಣ ಮತ್ತು ಆರೋಗ್ಯ ಕ್ಷೇತ್ರಕ್ಕೆ ಹೆಚ್ಚಿನ ಒತ್ತು ನೀಡುತ್ತಿದ್ದು, ಟ್ರಸ್ಟಿನ ಕಾರ್ಯವೈಖರಿ ಸರ್ವರಿಗೂ ಮಾದರಿಯಾದದ್ದು ಹಾಗೂ ಇದನ್ನುಫಲಾನುಭವಿಗಳು ಸರಿಯಾಗಿ ಸದುಪಯೋಗಪಡಿಸಿಕೊಳ್ಳಬೇಕು ಎಂದು ಮೊಳಹಳ್ಳಿ ಆರೋಗ್ಯ ಕೇಂದ್ರದ ಆಡಳಿತ ವೈದ್ಯಾಧಿಕಾರಿ ಡಾ. ಸುರೇಂದ್ರ ಶೆಟ್ಟಿ ಹೇಳಿದರು. ಅವರು ಮೊಳಹಳ್ಳಿ ದಿನೇಶ್ ಹೆಗ್ಡೆ ಜಯರತ್ನ ಟ್ರಸ್ಟ್ (ರಿ.)ಮೊಳಹಳ್ಳಿ, ನೇತ್ರ ಜ್ಯೋತಿ ಚಾರಿಟೇಬಲ್ ಟ್ರಸ್ಟ್( […]
ಎಐಸಿಎಸ್ ,ಸಿ ಬಿ ಎಸ್ ಸಿ ಕ್ರಾಸ್ ಕಂಟ್ರಿ ಮ್ಯಾರಥಾನ್ ಉಡುಪಿ ಜಿಲ್ಲಾ ಚಾಂಪಿಯನ್ ಶಿಪ್ 2024 :ಕುಂದಾಪುರ ಟ್ರ್ಯಾಕ್ & ಫೀಲ್ಡ್ ಕ್ರೀಡಾ ಸಂಸ್ಥೆಯ ವಿದ್ಯಾರ್ಥಿಗಳ ಸಾಧನೆ
ಕಾರ್ಕಳ (ಆ. 17): ಇಲ್ಲಿನ ಭುವನೇಂದ್ರ ವಸತಿ ಶಾಲೆಯಲ್ಲಿ ಆಗಸ್ಟ್ 17 ರಂದು ಆಯೋಜಿಸಿದ ಎಐಸಿಎಸ್ ಸಿ ಬಿ ಎಸ್ ಸಿ ಕ್ರಾಸ್ ಕಂಟ್ರಿ ಮ್ಯಾರಥಾನ್ ಉಡುಪಿ ಜಿಲ್ಲಾ ಚಾಂಪಿಯನ್ ಶಿಪ್ 2024 ನಲ್ಲಿ ಕುಂದಾಪುರದ ಟ್ರ್ಯಾಕ್ & ಫೀಲ್ಡ್ ಕ್ರೀಡಾ ಸಂಸ್ಥೆಯ ವಿದ್ಯಾರ್ಥಿಗಳು ಸಾಧನೆಗೈದಿದ್ದಾರೆ. 14 ವರ್ಷ ಒಳಗಿನ ಹುಡುಗರ ವಿಭಾಗದಲ್ಲಿ ಶ್ರೀ ಸಿದ್ಧಿ ವಿನಾಯಕ ವಸತಿ ಶಾಲೆ ಹಟ್ಟಿಯಂಗಡಿ ವಿದ್ಯಾರ್ಥಿ ಸಿದ್ದಲಿಂಗ ಪ್ರಥಮ ಸ್ಥಾನ ಹಾಗೆಯೇ 14 […]
ಬಗ್ವಾಡಿ ಮಹಿಷಾಸುರಮರ್ದಿನಿ ದೇವಸ್ಥಾನ: ವರಮಹಾಲಕ್ಷ್ಮೀ ಪೂಜೆ ಪ್ರಯುಕ್ತ ಹರಿದು ಬಂದ ಭಕ್ತ ಸಾಗರ
ಬಗ್ವಾಡಿ (ಆ,16): ಇಲ್ಲಿನ ಶ್ರೀ ಮಹಿಷಾಸುರಮರ್ದಿನಿ ದೇವಸ್ಥಾನದಲ್ಲಿ ಸಾಮೂಹಿಕ ಶ್ರೀ ವರಮಹಾಲಕ್ಷ್ಮೀ ಪೂಜೆ ಶುಕ್ರವಾರ ಸಂಭ್ರಮದಿಂದ ನಡೆಯಿತು. ಸಹಸ್ರಾರು ಸಂಖ್ಯೆಯಲ್ಲಿ ಭಕ್ತಾದಿಗಳು ದೇವಸ್ಥಾನಕ್ಕೆ ಆಗಮಿಸಿ ಶ್ರೀ ವರಮಹಾಲಕ್ಷ್ಮೀ, ಶೀ ಮಹಿಷಾಸುರಮರ್ದಿನಿಗೆ ಪೂಜೆ ಸಲ್ಲಿಸಿದರು. ಬೆಳಿಗ್ಗೆಯಿಂದ ಹೋಮ, ಹವನಾಧಿಗಳು ಶ್ರೀ ಕ್ಷೇತ್ರದಲ್ಲಿ ನಡೆಯಿತು. ಮಹಿಳೆಯರು ಸಾಮೂಹಿಕ ವರಮಹಾಲಕ್ಷ್ಮೀ ವ್ರತದಲ್ಲಿ ಪಾಲ್ಗೊಂಡರು. 108 ಬಾರಿ ವರಮಹಾಲಕ್ಷ್ಮೀಯ ನಾಮಾವಳಿ ಪಠಿಸಿ ಕುಂಕುಮಾರ್ಚನೆ ಮಾಡಲಾಯಿತು. ಬಳಿಕ ಮಹಾ ಮಂಗಳಾರತಿ ನಡೆಯಿತು. ನಂತರ ವರವಮಹಾಲಕ್ಷ್ಮೀವೃತ ಮಹಾತ್ಮೆಯನ್ನು ತಂತ್ರಿಗಳು […]










