ಕುಂದಾಪುರ (ಮಾರ್ಚ್ 7): ಇಲ್ಲಿನ ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಕನ್ನಡ ವಿಭಾಗದ ಆಶ್ರಯದಲ್ಲಿ ವಿಸ್ತರಣಾ ಚಟುವಟಿಕೆಯ ಭಾಗವಾಗಿ ಅಧ್ಯಯನಕ್ಕಾಗಿ ವಿದ್ಯಾರ್ಥಿಗಳು ಕೋಟದಲ್ಲಿರುವ ಶಿವರಾಮ ಕಾರಂತ ಥೀಮ್ ಪಾರ್ಕ್ ಗೆ ಭೇಟಿ ನೀಡಿದರು. ವಿದ್ಯಾರ್ಥಿಗಳು ಥೀಮ್ ಪಾರ್ಕ್ ನಲ್ಲಿರುವ ಗ್ರಂಥಾಲಯಕ್ಕೆ ಭೇಟಿ ನೀಡಿ ಪುಸ್ತಕಗಳ ಕುರಿತು ಮಾಹಿತಿ ಪಡೆದರು. ಕಾರಂತರ ಸಾಹಿತ್ಯ ಕೃಷಿಯ ಕುರಿತು ಉಪನ್ಯಾಸಕರ ಜೊತೆ ಸಂವಾದ ನಡೆಸಿದರು. ಈ ಸಂದರ್ಭ ಸಂಸ್ಥೆಯ ಉಪ-ಪ್ರಾಂಶುಪಾಲ […]
Author: KundaVahini Editor
ಬಿ. ಬಿ. ಹೆಗ್ಡೆ ಕಾಲೇಜು: ಮಾರ್ಚ್ 14 ರಿಂದ ‘ವಿ-ಗ್ರೋ’ಬ್ಯುಸಿನೆಸ್ ಡೇ
ಕುಂದಾಪುರ (ಮಾರ್ಚ್ 09): ಇಲ್ಲಿನ ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ವಾಣಿಜ್ಯ ವಿಭಾಗದ ವತಿಯಿಂದ ವಿ-ಗ್ರೋ ಬ್ಯುಸಿನೆಸ್ ಡೇ ಕಾರ್ಯಕ್ರಮ ಮಾರ್ಚ್ 14, 17 ಮತ್ತು 20 ರಂದು ಮೂರು ಹಂತದಲ್ಲಿ ನಡೆಯಲಿದೆ. ವಿದ್ಯಾರ್ಥಿಗಳು ಗುಣಮಟ್ಟದ ಶಿಕ್ಷಣದ ಜೊತೆಗೆ, ಉದ್ಯಮಶೀಲತಾ ಕೌಶಲ್ಯಗಳನ್ನು ಬೆಳೆಸಿಕೊಂಡು ಜಾಗತಿಕ ಮಾರುಕಟ್ಟೆಯ ಪ್ರಾಯೋಗಿಕ ಜ್ಞಾನವನ್ನು ಪಡೆದರೆ ಭವಿಷ್ಯದಲ್ಲಿ ದೊಡ್ಡ ಉದ್ಯಮಿಗಳಾಗಬಹುದು ಎಂಬ ನಿಟ್ಟಿನಲ್ಲಿ ಈ ಕಾರ್ಯಕ್ರಮ ಆಯೋಜಿಸಲಾಗುತ್ತಿದೆ. ಮೊದಲನೇ ಹಂತ ವ್ಯವಹಾರ […]
ರಾಷ್ಟ್ರ ಮಟ್ಟದ UCEED ಪರೀಕ್ಷೆ-ಹೆಮ್ಮಾಡಿ ಜನತಾ ಪದವಿಪೂರ್ವ ಕಾಲೇಜಿಗೆ 179 ರ್ಯಾoಕ್
ಹೆಮ್ಮಾಡಿ(ಮಾ.10) : ದೇಶದ ಪ್ರತಿಷ್ಠಿತ ತಾಂತ್ರಿಕ ಶಿಕ್ಷಣ ಸಂಸ್ಥೆಯಾದ ಐಐಟಿ ಬಾಂಬೆ ನಡೆಸುವ ಬ್ಯಾಚುಲರ್ ಆಫ್ ಡಿಸೈನ್ (B.Des) ಕೋರ್ಸ್ ಪ್ರವೇಶ ಪಡೆಯಲು ನಡೆಯುವ ಯುಸೀಡ್ (UCEED) 2026 ಪ್ರವೇಶ ಪರೀಕ್ಷೆಯಲ್ಲಿ ಹೆಮ್ಮಾಡಿ ಜನತಾ ಪಿಯು ಕಾಲೇಜಿನ ವಿದ್ಯಾರ್ಥಿ ಸುಜಲ್ ತೋಳಾರ್ ಅಮೋಘ ಸಾಧನೆ ಮಾಡಿದ್ದಾರೆ. ಜನವರಿ 2026 ರಲ್ಲಿ ನಡೆದ ಈ ರಾಷ್ಟ್ರಮಟ್ಟದ ಪರೀಕ್ಷೆಯಲ್ಲಿ ಸುಜಲ್ ತೋಳಾರ್ ಪ್ರಥಮ ಪ್ರಯತ್ನದಲ್ಲೇ ರಾಷ್ಟ್ರಮಟ್ಟದಲ್ಲಿ ಕೆಟಗರಿ ವಿಭಾಗದಲ್ಲಿ 179ನೇ Rank ಪಡೆದು […]
ಪದವಿ ಫಲಿತಾಂಶ : ಬಿ. ಬಿ. ಹೆಗ್ಡೆ ಕಾಲೇಜಿಗೆ 4 ರ್ಯಾಂಕ್ ಗಳು
ಕುಂದಾಪುರ (ಮಾ.03): ಮಂಗಳೂರು ವಿಶ್ವವಿದ್ಯಾನಿಲಯ ನಡೆಸಿದ ಅಂತಿಮ ಪದವಿ ಪರೀಕ್ಷೆಯಲ್ಲಿ ಕುಂದಾಪುರದ ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿಗಳು ಬಿ.ಕಾಂ., ಬಿ.ಬಿ.ಎ. ಮತ್ತು ಬಿ.ಸಿ.ಎ. ಪದವಿಯಲ್ಲಿ ಒಟ್ಟು 4 ರ್ಯಾಂಕ್ಗಳನ್ನು ಗಳಿಸುವ ಮೂಲಕ ಉತ್ಕೃಷ್ಟ ಸಾಧನೆಗೈದಿದ್ದಾರೆ. ಕೊಲ್ಲೂರು ಸಮೀಪದ ಮುದೂರಿನ ಶ್ರೀ ಶೀನ ಪೂಜಾರಿ ಹಾಗೂ ಶ್ರೀಮತಿ ವಿಶಾಲು ದಂಪತಿಗಳ ಪುತ್ರಿ ಶ್ರೇಯಾ ಬಿ.ಕಾಂ. ಪದವಿಯಲ್ಲಿ 2ನೇ ರ್ಯಾಂಕ್, ಕೋಣಿಯ ಶ್ರೀ ಶಂಕರ್ ಮೊಗವೀರ ಹಾಗೂ […]
ಸಿಎ ಅಂತಿಮ ಪರೀಕ್ಷೆಯಲ್ಲಿ ಅಕ್ಷಯ ಶೆಟ್ಟಿ ಉತ್ತೀರ್ಣ
ಕುಂದಾಪುರ ( ಮಾ .02): ದ ಇನ್ಸ್ಟಿಟ್ಯೂಟ್ ಆಫ್ ಚಾರ್ಟೆಡ್ ಅಕೌಂಟೆನ್ಸ್ ಆಫ್ ಇಂಡಿಯಾ ನೆಡೆಸಿದ 2026 ರ ಸಿಎ ಅಂತಿಮ ಪರೀಕ್ಷೆಯಲ್ಲಿ ಹುಂಚನಿ ಹೆಮ್ಮಕ್ಕಿ ವಸಂತಿ ಶೆಟ್ಟಿ ಮತ್ತು ಉಳ್ಳೂರು 74 ರ ಕರುಣಾಕರ ಶೆಟ್ಟಿಯವರ ಪುತ್ರ ಅಕ್ಷಯ ಶೆಟ್ಟಿ ಯವರು ಉತ್ತೀರ್ಣರಾಗಿರುತ್ತಾರೆ. ಇವರು ಶ್ರೀ ಮೂಕಾಂಬಿಕಾ ದೇವಳದ ಸ್ವತಂತ್ರ ಪದವಿಪೂರ್ವ ಕಾಲೇಜಿನ ಹಿಂದಿನ ವಿದ್ಯಾರ್ಥಿ
ಸರಕಾರಿ ಪದವಿ ಪೂರ್ವ ಕಾಲೇಜು ಹೊಸಂಗಡಿ : ಅತ್ಯಾಧುನಿಕ ಸೌಕರ್ಯಗಳ ಉದ್ಘಾಟನಾ ಕಾರ್ಯಕ್ರಮ
ಹೊಸಂಗಡಿ ( ಮಾ .01): EFFULGENCE ಎಂಬ ಶೀರ್ಷಿಕೆಯಡಿ , “ಪ್ರತಿಭೆಗಳಿಗೊಂದು ಕನ್ನಡಿ, ಹೊಸತನಕ್ಕೊಂದು ಮುನ್ನುಡಿ” ಧ್ಯೇಯ ವಾಕ್ಯದೊಂದಿಗೆ ಅತ್ಯಾಧುನಿಕ ಹಾಗೂ ಮಾದರಿ ಸೌಕರ್ಯಗಳನ್ನೊಳಗೊಂಡ ಮೊದಲ ಕಾಲೇಜು ಎಂಬ ಹೆಗ್ಗಳಿಕೆಯನ್ನು ಸಂಪಾದಿಸಿಕೊಂಡಿರುವ ಸರಕಾರಿ ಪದವಿ ಪೂರ್ವ ಕಾಲೇಜು ಹೊಸಂಗಡಿಯಲ್ಲಿ ವಿವಿಧ ಸೌಲಭ್ಯಗಳ ಉದ್ಘಾಟನಾ ಸಮಾರಂಭ ಇತ್ತೀಚೆಗೆ ನಡೆಯಿತು. CAN FINS HOMES LIMITED ಪ್ರಾಯೋಜಿತ ಸೋಲಾರ್ ಉತ್ಪಾದನಾ ಘಟಕ ಉದ್ಘಾಟನೆ , CSR ನಿಧಿಯಡಿಯಲ್ಲಿ ಇಡೀ ಕಾಲೇಜಿಗೆ ಸೋಲಾರ್ ಉತ್ಪಾದಿತ […]
ಜೆಇಇ ಮೈನ್ಸ್ ಬಿ.ಆರ್ಚ್ ಪರೀಕ್ಷೆ: ಹೆಮ್ಮಾಡಿಯ ಜನತಾ ಪಿಯು ಕಾಲೇಜಿನ ವಿದ್ಯಾರ್ಥಿ ಸುಜಲ್ ಎಸ್ ತೋಳಾರ್ 98.17 ಪರ್ಸoಟೈಲ್
ಹೆಮ್ಮಾಡಿ( ಮಾ .01): ಕೇಂದ್ರ ಸರಕಾರದ ಎನ್ ಟಿ ಎ ಪ್ರಾಧಿಕಾರವು ನಡೆಸುವ ರಾಷ್ಟ್ರ ಮಟ್ಟದ ಜೆಇಇ ಮೈನ್ಸ್ 2026ರ ಪ್ರಥಮ ಹಂತದ ಪರೀಕ್ಷೆಯಲ್ಲಿ ಹೆಮ್ಮಾಡಿಯ ಜನತಾ ಪಿಯು ಕಾಲೇಜಿನ ವಿದ್ಯಾರ್ಥಿ ಸುಜನ್ ಎಸ್ ತೋಳಾರ್ 98.17ಪರ್ಸoಟೈಲ್ ಅಂಕ ಪಡೆದು ಅತ್ಯುತ್ತಮ ಸಾಧನೆ ಮಾಡಿದ್ದಾರೆ. ವಿದ್ಯಾರ್ಥಿಯ ಈ ಸಾಧನೆಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಬೋಧಕ,ಬೋಧಕೇತರ ವೃಂದದವರು ಅಭಿನಂದನೆ ಸಲ್ಲಿಸಿದ್ದಾರೆ.
ಮೌಲ್ಯವೇ ಜೀವನ
ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ವಿದ್ಯಾರ್ಥಿಗಳು ಉನ್ನತ ವಿದ್ಯಾಭ್ಯಾಸ, ಉತ್ತಮ ಅಂಕಗಳು ಮತ್ತು ಉನ್ನತ ಹುದ್ದೆಗಳತ್ತ ದೌಡಾಯಿಸುತ್ತಿದ್ದಾರೆ. ಆದರೆ ಮಾನವೀಯ ಮೌಲ್ಯಗಳಿಲ್ಲದ ಶಿಕ್ಷಣವು ಸಮಾಜಕ್ಕೆ ಅಪೂರ್ಣವಾದ ಕೊಡುಗೆಯಷ್ಟೇ. ಈ ಹಿನ್ನೆಲೆಯಲ್ಲಿಯೇ ಡಾ. ಬಿ. ಬಿ ಹೆಗ್ಡೆ ಕಾಲೇಜು ಕುಂದಾಪುರವು ನಿಜವಾದ ಅರ್ಥದಲ್ಲಿ ಮಾದರಿ ಶಿಕ್ಷಣ ಸಂಸ್ಥೆಯಾಗಿ ಹೊರಹೊಮ್ಮಿದೆ. ಈ ಕಾಲೇಜಿನಲ್ಲಿ ಕಳೆದ ಮೂರು ವರ್ಷಗಳಿಂದ ಪದವಿ ವಿದ್ಯಾರ್ಥಿಗಳಿಗೆ ನೈತಿಕ ಶಿಕ್ಷಣವನ್ನು ವಿಶೇಷವಾಗಿ ಕಲಿಸಲಾಗುತ್ತಿದೆ. ಪ್ರತಿ ತರಗತಿಗೂ “ಮೌಲ್ಯ ಶಿಕ್ಷಣ” ಪೀರಿಯಡ್ ಅನ್ನು […]
ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ಮಿನಿ ರಿಸರ್ಚ್ ಪ್ರಾಜೆಕ್ಟ್ ಕಾರ್ಯಾಗಾರ
ಕುಂದಾಪುರ (ಫೆ.19): ಕಾಲೇಜಿನ ವಾಣಿಜ್ಯ ವಿಭಾಗ ಹಾಗೂ ಪ್ರಾಕ್ತನ ಸಂಘದ ಜಂಟಿ ಆಶ್ರಯದಲ್ಲಿ 2025-26ನೇ ಶೈಕ್ಷಣಿಕ ಸಾಲಿನ ಅಂತಿಮ ಬಿ.ಕಾಂ. ವಿದ್ಯಾರ್ಥಿಗಳಿಗೆ ಎನ್.ಇ.ಪಿ. ಪಠ್ಯಕ್ರಮದ ಅಡಿಯಲ್ಲಿ ಮಿನಿ ರಿಸರ್ಚ್ ಪ್ರಾಜೆಕ್ಟ್ನ ಬಗ್ಗೆ ರಿಸರ್ಚ್ ಕಾರ್ಯಾಗಾರ ಪ್ರಾಕ್ತನ ಯಾನ ಶೀರ್ಷಿಕೆಯಡಿ ಕಾಲೇಜಿನ ಸಭಾಂಗಣದಲ್ಲಿ ಜರುಗಿತು. ಕಾಲೇಜಿನ 2023–24ನೇ ಸಾಲಿನ ಮಂಗಳೂರು ವಿಶ್ವವಿದ್ಯಾಲಯದಲ್ಲಿ 6ನೇ ರ್ಯಾಂಕ್ ಪಡೆದ ಪ್ರಾಕ್ತನ ವಿದ್ಯಾರ್ಥಿನಿ ಕುಮಾರಿ ರಶ್ಮಿ ಉಡುಪ ಮೊಳಹಳ್ಳಿ ವಿದ್ಯಾರ್ಥಿಗಳನ್ನು ಉದ್ದೇಶಿಸಿ ರಿಸರ್ಚ್ ಪ್ರಾಜೆಕ್ಟ್ಗಳು ಹೇಗೆ […]
ಎನ್ನೆಸ್ಸೆಸ್ ಶಿಬಿರ :‘ಸ್ಮರಣಶಕ್ತಿಯ ತಂತ್ರಗಳು ’-ಉಪನ್ಯಾಸ
ಕುಂದಾಪುರ (ಫೆ.7): ಇಲ್ಲಿನ ಯಡಾಡಿ-ಮತ್ಯಾಡಿಯಲ್ಲಿ ನಡೆದ ಕುಂದಾಪುರದ ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಎನ್.ಎಸ್.ಎಸ್. ವಾರ್ಷಿಕ ವಿಶೇಷ ಶಿಬಿರದಲ್ಲಿ ‘ಸ್ಮರಣ ಶಕ್ತಿಯ ತಂತ್ರಗಳು’ಎನ್ನುವ ವಿಷಯದ ಕುರಿತು ಉಪನ್ಯಾಸ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ಈ ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಜೆ.ಸಿ.ಐ. ತರಬೇತುದಾರರು ಹಾಗೂ ಶಿಕ್ಷಕರಾದ ಶ್ರೀ ಅಶೋಕ್ ತೆಕ್ಕಟ್ಟೆ ಅವರು ಎನ್.ಎಸ್.ಎಸ್. ಶಿಬಿರಾರ್ಥಿಗಳಿಗೆ ಸ್ಮರಣ ಶಕ್ತಿಯ ವಿವಿಧ ತಂತ್ರಗಳನ್ನು ಮನವರಿಕೆ ಮಾಡಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕರ್ನಾಟಕ ಪಬ್ಲಿಕ್ ಸ್ಕೂಲ್, […]










