ಹೊಸಂಗಡಿ(ಆ,13): ಇಲ್ಲಿನ ಸರಕಾರಿ ಪದವಿಪೂರ್ವ ಕಾಲೇನಲ್ಲಿ ರಾಷ್ಟ್ರೀಯ ಸೇವಾ ಯೋಜನಾ ಘಟಕದ ವತಿಯಿಂದ ವಿಶೇಷ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು. ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ ಶ್ರೀ ಪ್ರವೀಣ್ ಕುಮಾರ್ ಶೆಟ್ಟಿ ಶಾನ್ಕಟ್ಟು ವಿದ್ಯಾರ್ಥಿಗಳಿಗೆ ಕೌಶಲ್ಯಾಭಿವೃದ್ಧಿ ಹಾಗೂ ಕೌಶಲ್ಯಗಳ ಸಮರ್ಪಕ ಬಳಕೆಯ ಬಗ್ಗೆ ತರಬೇತಿ ಕಾರ್ಯಕ್ರಮವನ್ನು ನೀಡಿದರು. ವಿದ್ಯಾರ್ಥಿಗಳಲ್ಲಿ ಸಾಮಾನ್ಯವಾಗಿ ಇರಬೇಕಾದ ಕೌಶಲ್ಯಗಳು ಹಾಗೂ ಪ್ರಸಕ್ತ ಸಮಯದಲ್ಲಿ ಅದರ ಅಗತ್ಯತೆ ಬಗ್ಗೆ ಉದಾಹರಣೆಗಳ ಮೂಲಕ ತಿಳಿಸಿದರು. ವಿದ್ಯಾರ್ಥಿಗಳಿಗೆ ಪೂರಕ ಪ್ರಶ್ನೆಗಳ ಮೂಲಕ ಸಂವಹನ ನಡೆಸಿ […]
Author: KundaVahini Editor
ಸರಕಾರಿ ಪದವಿ ಪೂರ್ವ ಕಾಲೇಜು ನಾವುಂದ:ಅಗ್ರಸ್ಥಾನಿಗೆ ನಗದು ಬಹುಮಾನ
ನಾವುಂದ(ಆ,13): ಇಲ್ಲಿನ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ 2023-24ನೇ ಸಾಲಿನ ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ ಕಾಲೇಜಿಗೆ ವಿಜ್ಞಾನ ವಿಭಾಗದಲ್ಲಿ ಪ್ರಥಮ ಸ್ಥಾನವನ್ನು ಪಡೆದ ವಿದ್ಯಾರ್ಥಿನಿ ಕ್ಷಮಿತಾ ಜಿ ದೇವಾಡಿಗ ಅವರಿಗೆ 1995 -96ನೇ ಸಾಲಿನ ಕಾಲೇಜಿನ ವಿಜ್ಞಾನ ವಿಭಾಗದ ಹಳೆಯ ವಿದ್ಯಾರ್ಥಿಗಳು ನೀಡಿದ 15000 ರೂಪಾಯಿ ಪ್ರೋತ್ಸಾಹ ಧನವನ್ನು ಕಾಲೇಜಿನಲ್ಲಿ ವಿತರಿಸಲಾಯಿತು. ಹಳೆ ವಿದ್ಯಾರ್ಥಿಗಳ ಪರವಾಗಿ ಮಣಿಪಾಲದ ನವಿತಾಸ್ ಲೈಫ್ ಸೈನ್ಸ್ ನಲ್ಲಿ ಉಪಾಧ್ಯಕ್ಷರಾಗಿ ಕಾರ್ಯನಿರ್ವಹಿಸುತ್ತಿರುವ ಸಂಸ್ಥೆಯ ಹಳೆ ವಿದ್ಯಾರ್ಥಿ […]
ಐಎಂಜೆ ವಿಜ್ಞಾನ ಮತ್ತು ವಾಣಿಜ್ಯ ಸಂಸ್ಥೆ: ವೃತ್ತಿ ಕಾರ್ಯಗಾರ ಸಂಪನ್ನ
ಕುಂದಾಪುರ (ಆ .09): ಐಎಂಜೆ ವಿಜ್ಞಾನ ಮತ್ತು ವಾಣಿಜ್ಯ ಸಂಸ್ಥೆಯಲ್ಲಿ ಶಿಕ್ಷಕರ ಕಾರ್ಯಕ್ಷಮತೆಯನ್ನು ಉನ್ನತಿ ಗೊಳಿಸುವುದಕ್ಕೆ ಶಿಕ್ಷಕರಾಗಿ ನಮ್ಮ ಸಾಮರ್ಥ್ಯವನ್ನು ಗುರುತಿಸುವುದು ಮತ್ತು ಪೋಷಿಸುವುದು ಎಂಬ ವಿಷಯದ ಕುರಿತು ಒಂದು ದಿನದ ಕಾರ್ಯಾಗಾರ ಆಗಸ್ಟ್ 09 ರಂದು ಸಂಪನ್ನಗೊಂಡಿತು . ಐ ಎಂ ಜೆ ಸಂಸ್ಥೆಯ ಬ್ರಾಂಡ್ ಬಿಲ್ಡಿಂಗ್ ನಿರ್ದೇಶಕರಾದ ಡಾ. ರಾಮಕೃಷ್ಣ ಹೆಗಡೆಯವರು ದೀಪ ಬೆಳಗಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಉಪನ್ಯಾಸಕರನ್ನು ಉದ್ದೇಶಿಸಿ ಮಾತನಾಡಿದ ಅವರು “ಶಿಕ್ಷಕರು ನಿಷ್ಠೆ […]
ಆರ್.ಎನ್.ಶೆಟ್ಟಿ ಪಿಯು ಕಾಲೇಜು ಕುಂದಾಪುರ : ಕರಾಟೆಯಲ್ಲಿ ಅಂತರಾಷ್ಟ್ರೀಯ ಮಟ್ಟದ ಸಾಧನೆ
ಆಗಸ್ಟ್(ಆ,9): ಶಿವಮೊಗ್ಗದಲ್ಲಿ ಇತ್ತೀಚೆಗೆ ನಡೆದ ಓಪನ್ ಅಂತಾರಾಷ್ಟ್ರೀಯ ಕರಾಟೆ ಚಾಂಪಿಯನ್ ಶಿಪ್ – 2024ರಲ್ಲಿ ಕುಂದಾಪುರದ ಆರ್.ಎನ್.ಶೆಟ್ಟಿ ಪಿಯು ಕಾಲೇಜಿನ ಪ್ರಥಮ ಪಿಯುಸಿ ವಾಣಿಜ್ಯ ವಿಭಾಗದ ವಿದ್ಯಾರ್ಥಿ ಮಿಥುನ್. ಆರ್ 16 ರಿಂದ 17 ವರ್ಷದ ವಯೋಮಾನದ ಕಟಾ ವಿಭಾಗದಲ್ಲಿ ಪ್ರಥಮ ಸ್ಥಾನ ಗಳಿಸಿದ್ದಾರೆ. ಸಾಧಕ ಕರಾಟೆ ಪಟು ಮಿಥುನ್ ಆರ್. ಗೆ ಕಾಲೇಜಿನ ಸಂಚಾಲಕರಾದ ಶ್ರೀ ಸುಕುಮಾರ್ ಶೆಟ್ಟಿ, ಆಡಳಿತ ಮಂಡಳಿ ಸದಸ್ಯರು, ಪ್ರಾಂಶುಪಾಲರು ಹಾಗೂ ಕಾಲೇಜಿನ ಬೋಧಕ- […]
ಬಿ. ಬಿ. ಹೆಗ್ಡೆ ಕಾಲೇಜು: ಸಾಫ್ಟ್ ಸ್ಕಿಲ್ ತರಬೇತಿ ಕಾರ್ಯಾಗಾರ
ಕುಂದಾಪುರ (ಆಗಸ್ಟ್ 07) : ಇಲ್ಲಿನ ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ವೃತ್ತಿ ಮಾರ್ಗದರ್ಶನ ಘಟಕವು ಮ್ಯಾಜಿಕ್ ಬಸ್ ಇಂಡಿಯಾ ಫೌಂಡೇಶನ್ ಸಹಯೋಗದೊಂದಿಗೆ ‘3 ದಿನದ ಸಾಫ್ಟ್ ಸ್ಕಿಲ್ ತರಬೇತಿ’ಯನ್ನು ಹಮ್ಮಿಕೊಳ್ಳಲಾಯಿತು. ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಮೋಟಿವೇಶನ್ ಸ್ಪೀಕರ್ ಡಾ| ಶರಣ್ ಕುಮಾರ್ ಶೆಟ್ಟಿಯವರು ಉದ್ಯೋಗ ಪಡೆಯುವಲ್ಲಿ ಅಂಕಗಳಷ್ಟೆ ಅಗತ್ಯವಿರುವ ಕೌಶಲ್ಯಗಳ ಬಗ್ಗೆ ವಿವರಿಸಿದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಂಶುಪಾಲರಾದ ಪ್ರೊ| ಕೆ. ಉಮೇಶ್ […]
ಚೆಸ್ ಸ್ಪರ್ಧೆ : ಎಚ್. ಎಮ್. ಎಮ್. & ವಿ. ಕೆ. ಆರ್. ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ
ಕುಂದಾಪುರ (ಆ .05) : ಶ್ರೀ ಬಿ. ಎಂ. ಸುಕುಮಾರ ಶೆಟ್ಟಿಯವರ ಅಧ್ಯಕ್ಷತೆಯ ಕುಂದಾಪುರ ಎಜ್ಯುಕೇಶನ್ ಸೊಸೈಟಿ ಪ್ರವರ್ತಿತ ಎಚ್. ಎಮ್. ಎಮ್. ಆಂಗ್ಲ ಮಾಧ್ಯಮ ಪ್ರಾಥಮಿಕ ಮತ್ತು ವಿ. ಕೆ. ಆರ್. ಆಚಾರ್ಯ ಸ್ಮಾರಕ ಪ್ರೌಢ ಶಾಲೆಗಳ ವಿದ್ಯಾರ್ಥಿಗಳು ತಾಲೂಕು ಮಟ್ಟದ ಚೆಸ್ ಸ್ಪರ್ಧೆಯಲ್ಲಿ ಭಾಗವಹಿಸಿ ವಿಜೇತರಾಗಿ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಎಚ್. ಎಮ್. ಎಮ್. ಆಂಗ್ಲ ಪ್ರಾಥಮಿಕ ಶಾಲೆಯ 7ನೇ ತರಗತಿಯ ಶ್ರೀಲತಾ, ವಿ.ಕೆ.ಆರ್. ಪ್ರೌಢ ಶಾಲೆಯ […]
ಅಂಪಾರು ಗ್ರಾಮ ಪಂಚಾಯತ್ : ಅರಿವು ಕೇಂದ್ರದ ನಾಮ ಫಲಕ ಅನಾವರಣ
ಅಂಪಾರು(ಆ,09): ಇಲ್ಲಿನ ಗ್ರಾಮ ಪಂಚಾಯತ್ ಗ್ರಂಥಾಲಯದಲ್ಲಿ ಅರಿವು ಕೇಂದ್ರದ ನಾಮ ಫಲಕವನ್ನು ಗ್ರಾಮ ಪಂಚಾಯತ್ ನ ಅಧ್ಯಕ್ಷರಾದ ಶ್ರೀಯುತ ಕೆ. ಗೋಪಾಲಕೃಷ್ಣ ಕಿಣಿ ಇವರು ಅನಾವರಣಗೈದರು. ಈ ಸಂದರ್ಭದಲ್ಲಿ ಪಂಚಾಯತ್ ಸದ್ಯಸರಾದ ನವೀನ ಶೆಟ್ಟಿ ಮತ್ತು ಭಾರತಿ ಶೇಟ್ ,.ಅಭಿವೃದ್ದಿ ಅಧಿಕಾರಿ ಮಧುಸೂಧನ್ ಪ್ರಸಾದ್ ಹಾಗೂ ಪಂಚಾಯತ್ ಸಿಬ್ಬಂದಿಯವರು ಹಾಜರಿದ್ದರು.
ನಿವೃತ್ತ ಉಪನ್ಯಾಸಕಿ ನಳಿನಾದೇವಿ ಎಂ.ಆರ್ ಅವರಿಗೆ ಸನ್ಮಾನ
ಕುಂದಾಪುರ (ಆ.09): ಪದವಿ ಪೂರ್ವ ಕಾಲೇಜು ಕನ್ನಡ ಉಪನ್ಯಾಸಕರ ಸಂಘ ಉಡುಪಿ ಜಿಲ್ಲೆ ಇದರ ವತಿಯಿಂದ ಉಪನ್ಯಾಸಕ ವ್ರತ್ತಿಯಿಂದ ನಿವೃತ್ತಿ ಹೊಂದಿದ ನಳಿನಾದೇವಿ ಎಂ.ಆರ್ ಅವರಿಗೆ ಸರಕಾರಿ ಪದವಿ ಪೂರ್ವ ಕಾಲೇಜು ಕುಂದಾಪುರ ಇಲ್ಲಿ ಇತ್ತೀಚೆಗೆ ನಡೆದ ಕನ್ನಡ ಕಾರ್ಯಗಾರದಲ್ಲಿ ಸನ್ಮಾನಿಸಲಾಯಿತು. ಸಭೆಯ ಅಧ್ಯಕ್ಷತೆಯನ್ನು ಉಡುಪಿ ಜಿಲ್ಲಾ ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕರಾದ ಶ್ರೀ ಮಾರುತಿ ವಹಿಸಿದ್ದರು. ಕರ್ನಾಟಕ ಬ್ಯಾಂಕ್ ಪ್ರಾದೇಶಿಕ ಕಛೇರಿ ಉಡುಪಿ ಇಲ್ಲಿನ ಸಹಾಯಕ ಮಹಾ […]
ಸರಕಾರಿ ಪದವಿ ಪೂರ್ವ ಕಾಲೇಜು ಹೊಸಂಗಡಿ: ವಿವಿಧ ಸಂಘಟನೆಗಳ ಉದ್ಘಾಟನೆ
ಹೊಸಂಗಡಿ(ಆ,09): ಸರಕಾರಿ ಪದವಿ ಪೂರ್ವ ಕಾಲೇಜು ಹೊಸಂಗಡಿ ಇಲ್ಲಿನ ಎನ್ಎಸ್ಎಸ್, ರೇಂಜರ್ಸ್ ಮತ್ತು ರೋವರ್ಸ್, ಚುನಾವಣಾ ಸಾಕ್ಷರತಾ ಸಮಿತಿ, ಭಾರತೀಯ ಸೇವಾದಳ, ಸಾಂಸ್ಕ್ರತಿಕ ಹಾಗೂ ಕ್ರೀಡಾ ಸಂಘ, ಇಕೋ ಕ್ಲಬ್, ರೆಡ್ ರಿಬ್ಬನ್ ಕ್ಲಬ್ ವಿಜ್ಞಾನ ಸಂಘ ಹಾಗೂ ಇತರ ಸಂಘಟನೆಗಳ ಉದ್ಘಾಟನೆ ಸಮಾರಂಭ ಇತ್ತೀಚೆಗೆ ನಡೆಯಿತು. ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಗ್ರಾಮ ಪಂಚಾಯತ್ ಉಪಾಧ್ಯಕ್ಷರಾಗಿರುವಂತ ಶ್ರೀಮತಿ ಶಾರದಗೊಲ್ಲ ಇವರು ವಹಿಸಿಕೊಂಡು ಗ್ರಾಮೀಣ ಪ್ರದೇಶದಲ್ಲಿ ಅತ್ಯಾಧುನಿಕ ಸೌಲಭ್ಯಗಳು ಹಾಗೂ ಉತ್ತಮ […]










